Homeಮುಖಪುಟಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

- Advertisement -
- Advertisement -

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ ಶಾಲಾ-ಕಮಾಲ್ ಮೌಲಾದ ಧಾರ್ಮಿಕ ಸ್ವರೂಪಕ್ಕೆ ಸಂಬಂಧಿಸಿದಂತೆ ಹಿಂದೂ-ಮುಸ್ಲಿಂ ಸಮುದಾಯಗಳ ನಡುವೆ ವಿವಾದವಿದೆ.

ಜನವರಿ 23ರಂದು ವಸಂತ ಪಂಚಮಿಯ ಪ್ರಯುಕ್ತ ದಿನವಿಡೀ ಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡುವಂತೆ ಕೋರಿ ಹಿಂದೂ ಫ್ರಂಟ್ ಫಾರ್ ಜಸ್ಟೀಸ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಪಂಚೋಲಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತು.

ಭಾರತೀಯ ಪುರಾತತ್ವ ಇಲಾಖೆಯಿಂದ ರಕ್ಷಿಸಲ್ಪಟ್ಟ 11ನೇ ಶತಮಾನದ ಸ್ಮಾರಕವಾದ ಭೋಜ ಶಾಲೆಯನ್ನು ಹಿಂದೂಗಳು ಮತ್ತು ಮುಸ್ಲಿಮರು ವಿಭಿನ್ನವಾಗಿ ನೋಡುತ್ತಾರೆ. ಹಿಂದೂಗಳು ಇದನ್ನು ವಾಗ್ದೇವಿ (ಸರಸ್ವತಿ ದೇವತೆ) ಗೆ ಸಮರ್ಪಿತವಾದ ದೇವಾಲಯವೆಂದು ಪರಿಗಣಿಸುತ್ತಾರೆ. ಮುಸ್ಲಿಮರು ಇದನ್ನು ಕಮಾಲ್ ಮೌಲಾ ಮಸೀದಿ ಎಂದು ಪರಿಗಣಿಸುತ್ತಾರೆ. 2003ರ ಒಪ್ಪಂದದ ಪ್ರಕಾರ, ಹಿಂದೂಗಳು ಮಂಗಳವಾರ ಭೋಜ ಶಾಲೆ ಸಂಕೀರ್ಣದಲ್ಲಿ ಪೂಜೆ ಸಲ್ಲಿಸುತ್ತಾರೆ, ಮುಸ್ಲಿಮರು ಶುಕ್ರವಾರ ಅಲ್ಲಿ ನಮಾಝ್ ಮಾಡುತ್ತಾರೆ.

ಅರ್ಜಿದಾರರ ಪರ ವಕೀಲ ವಿಷ್ಣು ಶಂಕರ್ ಜೈನ್ ವಾದ ಮಂಡಿಸಿ, ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಪೂಜೆಗಳು ಮತ್ತು ಹವನಗಳು ಇರುತ್ತವೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.

ಮುಸ್ಲಿಮರ ಪರವಾಗಿ ಹಿರಿಯ ವಕೀಲ ಸಲ್ಮಾನ್ ಖುರ್ಷಿದ್ ವಾದ ಮಂಡಿಸಿ, ಜುಮಾ ನಮಾಝ್ ಮಧ್ಯಾಹ್ನ 1 ರಿಂದ 3 ಗಂಟೆಯ ನಡುವೆ ನಡೆಯುತ್ತದೆ. ನಂತರ ಮುಸ್ಲಿಂ ಸಮುದಾಯದ ಸದಸ್ಯರು ಆವರಣವನ್ನು ಖಾಲಿ ಮಾಡುತ್ತಾರೆ ಹೇಳಿದ್ದರು. ಕೇಂದ್ರ ಮತ್ತು ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್‌ಐ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ಮತ್ತು ಮಧ್ಯಪ್ರದೇಶದ ಅಡ್ವೊಕೇಟ್ ಜನರಲ್ ನ್ಯಾಯಾಲಯಕ್ಕೆ ಹಾಜರಾಗಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು.

ಇಡೀ ದಿನ ಪೂಜೆ ನಿರಂತರವಾಗಿ ನಡೆಯುವುದರಿಂದ ಸಂಜೆ 5 ಗಂಟೆಯ ನಂತರ ನಮಾಝ್ ಮಾಡಬಹುದೇ ಎಂದು ಜೈನ್ ಕೇಳಿದ್ದರು. ಜುಮಾ ನಮಾಝ್‌ಗೆ ನಿರ್ದಿಷ್ಟ ಸಮಯವಿದ್ದು, ಅದನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಖುರ್ಷಿದ್ ಸಮಸ್ಯೆ ತಿಳಿಸಿದ್ದರು.

ಮುಸ್ಲಿಮರು ನಮಾಝ್‌ಗೆ ಹಾಜರಾಗುವ ಸಾಧ್ಯತೆ ಇರುವ ವ್ಯಕ್ತಿಗಳ ಸಂಖ್ಯೆಯನ್ನು ಜಿಲ್ಲಾಡಳಿತಕ್ಕೆ ನೀಡಬಹುದು. ಇದರಿಂದ ಅವರಿಗೆ ಆವರಣದಲ್ಲಿ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಬಹುದು. ಜಿಲ್ಲಾಡಳಿತವು ನಮಾಝ್‌ಗೆ ಬರುವ ವ್ಯಕ್ತಿಗಳಿಗೆ ಪಾಸ್‌ಗಳನ್ನು ನೀಡುತ್ತದೆ ಎಂದು ಎಎಸ್‌ಜಿ ತಿಳಿಸಿದ್ದರು. ಇದಕ್ಕೆ ಒಪ್ಪಿದ ಖುರ್ಷಿದ್, ಇಂದು ಸಂಖ್ಯೆಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ವಾದ ಆಲಿಸಿದ ನ್ಯಾಯಾಲಯವು, “ಮುಸ್ಲಿಮರು ಮಧ್ಯಾಹ್ನ 1 ಗಂಟೆಯಿಂದ 3 ಗಂಟೆಯ ನಡುವೆ ಜುಮಾ ನಮಾಝ್ ಮಾಡಲು ಕಾಂಪೌಂಡ್ ಒಳಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಬೇಕು. ಆ ಜಾಗಕ್ಕೆ ಪ್ರತ್ಯೇಕ ಆಗಮನ ಮತ್ತು ನಿರ್ಗಮನ ದ್ವಾರಗಳಿರಬೇಕು ಎಂದು ಸೂಚಿಸಿದೆ.

ಅದೇ ರೀತಿ, ವಸಂತ ಪಂಚಮಿಯ ಪ್ರಯುಕ್ತ ಹಿಂದುಗಳಿಗೆ ಸಾಂಪ್ರದಾಯಿಕ ಸಮಾರಂಭಗಳನ್ನು ನಡೆಸಲು ಪ್ರತ್ಯೇಕ ಸ್ಥಳ ಲಭ್ಯವಾಗುವಂತೆ ಮಾಡಬೇಕು ಎಂದು ನಿರ್ದೇಶಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿದ ಮುಸ್ಲಿಮರ ಪರ ವಕೀಲ ಸಲ್ಮಾನ್ ಖುರ್ಷಿದ್, ಮಧ್ಯಾಹ್ನ 1 ರಿಂದ 3 ಗಂಟೆಯವರೆಗೆ ನಮಾಝ್‌ಗೆ ಬರುವ ಮುಸ್ಲಿಂ ಸಮುದಾಯದ ವ್ಯಕ್ತಿಗಳ ಸಂಖ್ಯೆಯನ್ನು ಜಿಲ್ಲಾಡಳಿತಕ್ಕೆ ಒದಗಿಸಲಾಗುವುದು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಆಡಳಿತವು ನಮಾಝ್‌ಗೆ ಬರುವವರಿಗೆ ಪಾಸ್‌ಗಳನ್ನು ನೀಡಬಹುದು. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನೋಡಿಕೊಳ್ಳಲು ಯಾವುದೇ ಇತರ ನ್ಯಾಯಯುತ ವಿಧಾನಗಳನ್ನು ಅಳವಡಿಸಿಕೊಳ್ಳಬಹುದು ಎಂದಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಎರಡೂ ಕಡೆಯವರು ಪರಸ್ಪರ ಗೌರವವನ್ನು ಕಾಪಾಡಿಕೊಳ್ಳಬೇಕು ಮತ್ತು ರಾಜ್ಯ, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು” ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಮನವಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...