Homeಕರ್ನಾಟಕಜಿಬಿಎ ಅಧಿಕಾರಿಗಳಿಂದ ಮನೆಗಳ ನೆಲಸಮ : ತೀವ್ರ ಖಂಡನೆ ವ್ಯಕ್ತಪಡಿಸಿದ ಭೂಮಿ ಮತ್ತು ವಸತಿ ಹಕ್ಕು...

ಜಿಬಿಎ ಅಧಿಕಾರಿಗಳಿಂದ ಮನೆಗಳ ನೆಲಸಮ : ತೀವ್ರ ಖಂಡನೆ ವ್ಯಕ್ತಪಡಿಸಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

ಅದೇ ಸ್ಥಳದಲ್ಲಿ ಶಾಶ್ವತ ಮನೆಗಳನ್ನು ನಿರ್ಮಿಸಿಕೊಡಲು ಆಗ್ರಹ

- Advertisement -
- Advertisement -

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಗ್ರಾಮದಲ್ಲಿ ಬಡ ಜನರ ಸುಮಾರು 150 ಮನೆಗಳನ್ನು ಏಕಾಏಕಿ ನೆಲಸಮಗೊಳಿಸಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕ್ರಮವನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿದೆ.

ಈ ಕುರಿತು ಮಂಗಳವಾರ (ಡಿ.23) ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಮಿತಿ, ಕೋಗಿಲು ಗ್ರಾಮದ ಸರ್ವೆ ನಂಬರ್ 99ರ ಸರ್ಕಾರಿ ಭೂಮಿಯಲ್ಲಿ ಸುಮಾರು 150ಕ್ಕೂ ಹೆಚ್ಚು ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವಸತಿ ರಹಿತರು ಮನೆಗಳನ್ನು ಕಟ್ಟಿಕೊಂಡು ಸುಮಾರು 25-30 ವರ್ಷಗಳಿಂದ ವಾಸವಿದ್ದರು. ಸದರಿ ಸ್ಥಳದ ಮಂಜೂರಾತಿಗಾಗಿ ಸರ್ಕಾರಕ್ಕೆ 94ಸಿಸಿ ಅರ್ಜಿಗಳನ್ನು ಸಲ್ಲಿಸಿದ್ದರು. ಸರ್ಕಾರ ತಾತ್ಕಾಲಿಕ ಹಕ್ಕುಪತ್ರಗಳನ್ನೂ ನೀಡಿತ್ತು. ಇತ್ತೀಚೆಗೆ ಯಾವುದೇ ಸುಳಿವು ನೀಡದೆ ತಾತ್ಕಾಲಿಕ ಹಕ್ಕುಪತ್ರಗಳನ್ನು ರದ್ದುಪಡಿಸಲಾಗಿದೆ. ಆ ಬಳಿಕ ಡಿಸೆಂಬರ್ 20ರಂದು ಬೆಳ್ಳಂ ಬೆಳಿಗ್ಗೆ 5 ಗಂಟೆಗೆ ಮನೆಗಳ ತೆರವು ಕಾರ್ಯ ನಡೆಸಲಾಗಿದೆ ಎಂದು ಆರೋಪಿಸಿದೆ.

ಮನೆಗಳ ಧ್ವಂಸಕ್ಕೂ ಮುನ್ನ ಮೂರು ತಿಂಗಳು ಮುಂಚಿತವಾಗಿ ನೋಟಿಸ್ ಕೊಟ್ಟಿಲ್ಲ. ಬಡ ಕುಟುಂಬಗಳು ಕೂಲಿನಾಲಿ ಮಾಡಿ ಸಂಗ್ರಹಿಸಿಟ್ಟುಕೊಂಡಿದ್ದ ಆಹಾರ ಪದಾರ್ಥಗಳು, ಬಟ್ಟೆಬರೆ, ಗೃಹ ಬಳಕೆ ವಸ್ತುಗಳನ್ನು ತೆಗೆದುಕೊಳ್ಳಲೂ ಕೂಡ ಅವಕಾಶ ಕೊಡದೆ, ಯಾವುದೇ ಮುನ್ಸೂಚನೆ ಇಲ್ಲದೆ, ಉತ್ತರಪ್ರದೇಶದ ಬುಲ್ಡೋಜರ್ ಸರ್ಕಾರದಂತೆ ಪೋಲೀಸ್ ಬಲದೊಂದಿಗೆ ಏಕಾಏಕಿ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಹೇಳಿದೆ.

ಕಂದಾಯ ಸಚಿವರ ಸ್ವಕ್ಷೇತ್ರದಲ್ಲಿಯೇ ಇಂತಹ ಘೋರ ಹಾಗೂ ಅಮಾನವೀಯ ಕೃತ್ಯ ನಡೆದಿರುವುದು ಅತ್ಯಂತ ಶೋಚನೀಯ ಎಂದು ಸಮಿತಿ ಬೇಸರ ವ್ಯಕ್ತಪಡಿಸಿದೆ. ಈ ದುಷ್ಕೃತ್ಯದಿಂದಾಗಿ ನೆಲೆ ಕಳೆದುಕೊಂಡ ಬಡ ಕುಟುಂಬಗಳು ಮಕ್ಕಳು, ಮುದುಕರಾದಿಯಾಗಿ ಚಳಿ, ಗಾಳಿ, ಬಿಸಿಲೆನ್ನದೆ ಅಲ್ಲಿಯೇ ನಿರ್ವಸಿತರಾಗಿ ಪರಿತಪಿಸುವಂತಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಈ ದುರುದ್ದೇಶಪೂರಿತ, ಪೂರ್ವಯೋಜಿತ ದುಷ್ಕೃತ್ಯವನ್ನು ಖಂಡಿಸುತ್ತೇವೆ ಎಂದಿದೆ.

ಬದುಕು ಕಳೆದುಕೊಂಡ ಎಲ್ಲಾ ನಿರ್ಗತಿಕರಿಗೆ ಸರ್ಕಾರವು ಅದೇ ಸ್ಥಳದಲ್ಲಿಯೇ ಶಾಶ್ವತ ಮನೆಗಳನ್ನು ನಿರ್ಮಿಸಿಕೊಡಬೇಕು. ಅಲ್ಲಿಯವರೆಗೆ ಬಲವಂತದ ತೆರವು ಕಾರ್ಯಾಚರಣೆಯಿಂದ ವಸತಿ ಕಳೆದುಕೊಂಡ ಎಲ್ಲಾ ಕುಟುಂಬಗಳಿಗೆ ವಾಸಯೋಗ್ಯ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಿಕೊಟ್ಟು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು. ತಿಂಗಳಿಗಾಗುವಷ್ಟು ಆಹಾರ ಸಾಮಗ್ರಿಗಳನ್ನು ಪ್ರತಿ ತಿಂಗಳೂ ಸರ್ಕಾರವೇ ಪೂರೈಸಬೇಕು ಎಂದು ಸಮಿತಿ ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...