Homeಕರ್ನಾಟಕಆರನೇ ದಿನಕ್ಕೆ ಕಾಲಿಟ್ಟ 'ಭೂಮಿ ಸತ್ಯಾಗ್ರಹ': ಫ್ರೀಡಂ ಪಾರ್ಕ್‌, ಚನ್ನರಾಯಪಟ್ಟಣದಲ್ಲಿ ನಿರಶನ

ಆರನೇ ದಿನಕ್ಕೆ ಕಾಲಿಟ್ಟ ‘ಭೂಮಿ ಸತ್ಯಾಗ್ರಹ’: ಫ್ರೀಡಂ ಪಾರ್ಕ್‌, ಚನ್ನರಾಯಪಟ್ಟಣದಲ್ಲಿ ನಿರಶನ

- Advertisement -
- Advertisement -

ದೇವನಹಳ್ಳಿ ರೈತರ ಭೂ ಸ್ವಾಧೀನ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ‘ಭೂಮಿ ಸತ್ಯಾಗ್ರಹ’ ಬುಧವಾರ (ಜು.2) ಆರನೇ ದಿನಕ್ಕೆ ಕಾಲಿಟ್ಟಿದೆ. ಫ್ರೀಡಂ ಪಾರ್ಕ್‌ ಮತ್ತು ಚನ್ನರಾಯಪಟ್ಟಣ ಎರಡೂ ಕಡೆ ರೈತರು, ಹೋರಾಟಗಾರರು ಉಪವಾಸ ಕೈಗೊಂಡಿದ್ದಾರೆ.

ಫ್ರೀಡಂ ಪಾರ್ಕ್‌ನಲ್ಲಿ ಹೋರಾಟಗಾರರಾದ ಡಿ.ಎಚ್ ಪೂಜಾರಿ, ಯಶವಂತ, ಎಸ್‌. ವರಲಕ್ಷ್ಮಿ, ದೇವಿ, ಲಕ್ಷ್ಮಣ ಮಂಡಲಗೇರಾ, ಮಲ್ಲಿಗೆ ಸಿರಿಮನೆ, ಯಾಮ್ರೋಸ್ ಮತ್ತು ಪ್ರಭಾ ಬೆಳವಂಗಲ ಉಪವಾಸ ಕುಳಿತಿದ್ದಾರೆ. ಉಳಿದವರು ಅವರಿಗೆ ಸಾಥ್ ನೀಡಿದ್ದಾರೆ.

ಚನ್ನರಾಯಪಟ್ಟಣದಲ್ಲಿ ನಾಡ ಕಚೇರಿ ಮುಂಭಾಗದ ಧರಣಿ ಸ್ಥಳದಲ್ಲಿ ನೂರಾರು ರೈತರು ಉಪವಾಸದಲ್ಲಿದ್ದಾರೆ.

ಭೂ ಸ್ವಾಧೀನ ವಿರೋಧಿಸಿ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರು ನಡೆಸುತ್ತಿದ್ದ ನಿರಂತರ ಹೋರಾಟ 2025 ಜೂನ್ 25ಕ್ಕೆ 1,180 ದಿನಗಳನ್ನು ಪೂರೈಸಿತ್ತು. ಹಾಗಾಗಿ, ಅಂದು ದೇವನಹಳ್ಳಿ ಪಟ್ಟಣದ ಸಂತೆ ಮೈದಾನದಲ್ಲಿ ದೊಡ್ಡ ಮಟ್ಟದಲ್ಲಿ ನಿರ್ಣಾಯಕ ‘ದೇವನಹಳ್ಳಿ ಚಲೋ’ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

ಬಹುಭಾಷಾ ನಟ ಪ್ರಕಾಶ್ ರಾಜ್, ಎಎಪಿ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ರಾಜ್ಯ ರೈತ ಸಂಘದ ನಾಯಕ ಬಡಗಲಪುರ ನಾಗೇಂದ್ರ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಕರ್ನಾಟಕ ಪ್ರಾಂತ ರೈತ ಸಂಘದ ನಾಯಕ ಯಶವಂತ, ಸಿಐಟಿಯು ರಾಜ್ಯಾಧ್ಯಕ್ಷೆ ಎಸ್. ವರಲಕ್ಷ್ಮಿ, ಹೋರಾಟಗಾರರಾದ ಚುಕ್ಕಿ ನಂಜುಂಡಸ್ವಾಮಿ ಸೇರಿದಂತೆ ಪ್ರಮುಖರು ಸಮಾವೇಶದಲ್ಲಿ ಭಾಗವಹಿಸಿದ್ದರು. ಚನ್ನರಾಯಪಟ್ಟ ಹೋಬಳಿ ಮಾತ್ರವಲ್ಲದೆ ಇತರೆಡೆಗಳಿಂದಲೂ ರೈತರು ಆಗಮಿಸಿದ್ದರು.

ಆರಂಭದಲ್ಲಿ ಸಮಾವೇಶಕ್ಕೆ ಆಗಮಿಸುವವರಿಗೆ ಪೊಲೀಸರು ಕೊಂಚ ಅಡ್ಡಿಪಡಿಸಿದರೂ, ಬೆಳಿಗ್ಗೆಯಿಂದ ಸಂಜೆಯವರೆಗೆ ಪ್ರತಿಭಟನಾ ಸಮಾವೇಶ ಸುಸೂತ್ರವಾಗಿ ನಡೆದಿತ್ತು. ಆದರೆ, ಸಂಜೆ 6.30ರ ಸುಮಾರಿಗೆ ರೈತರು ಮತ್ತು ಹೋರಾಟಗಾರರನ್ನು ಪೊಲೀಸರು ಅಮಾನುಷವಾಗಿ ಬಂಧಿಸಿದ್ದರು.

ಇದರಿಂದ ಆಕ್ರೋಶಗೊಂಡ ಹೋರಾಟಗಾರರು, ಜೂನ್ 27ರಿಂದ ಫ್ರೀಡಂ ಪಾರ್ಕ್‌ನಲ್ಲಿ ಬಿಡಾರ ಹೂಡಿ ‘ಭೂಮಿ ಸತ್ಯಾಗ್ರಹ’ ಹಮ್ಮಿಕೊಂಡಿದ್ದಾರೆ.

ಸಚಿವ ಸಂಪುಟ ಮತ್ತು ಸಿಎಂ ಸಭೆ

ಜೂನ್ 26ರಂದು ನಟ ಪ್ರಕಾಶ್ ರಾಜ್ ನೇತೃತ್ವದಲ್ಲಿ ಹೋರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬಲವಂತದ ಭೂ ಸ್ವಾಧೀನ ಕೈ ಬಿಡುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಜುಲೈ4ರಂದು ಸಮಗ್ರ ಸಭೆ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

ಈ ನಡುವೆ ಜುಲೈ 2ರಂದು ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ರೈತ ಪರ ತೀರ್ಮಾನ ಕೈಗೊಳ್ಳುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಲಾಗ್ತಿದೆ. ರೈತರು ಮತ್ತು ಹೋರಾಟಗಾರರು ನಂದಿ ಬೆಟ್ಟದ ಸಂಪುಟ ಸಭೆಯಿಂದ ನಿಟ್ಟುಸಿರು ಬಿಡುವ ಸುದ್ದಿ ಬರಲು ಕಾಯುತ್ತಿದ್ದಾರೆ. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.

ದೇವನಹಳ್ಳಿ ಭೂಸ್ವಾಧೀನ ಮಾಡಿದರೆ ಸರಕಾರಕ್ಕೆ ಎಚ್ಚರಿಕೆ: ಸಂಯುಕ್ತ ಹೋರಾಟದ ನಾಯಕರೊಂದಿಗೆ ವಿಶೇಷ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...