Homeಕರ್ನಾಟಕದೇವನಹಳ್ಳಿ ಚಲೋ! ‘ಭೂಮಿ ಸತ್ಯಾಗ್ರಹ’ ಅಹೋರಾತ್ರಿ ಧರಣಿ: ಸಂಯುಕ್ತ ಹೋರಾಟ-ಕರ್ನಾಟಕ ವತಿಯಿಂದ ಪತ್ರಿಕಾ ಹೇಳಿಕೆ

ದೇವನಹಳ್ಳಿ ಚಲೋ! ‘ಭೂಮಿ ಸತ್ಯಾಗ್ರಹ’ ಅಹೋರಾತ್ರಿ ಧರಣಿ: ಸಂಯುಕ್ತ ಹೋರಾಟ-ಕರ್ನಾಟಕ ವತಿಯಿಂದ ಪತ್ರಿಕಾ ಹೇಳಿಕೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಭಾರಿ ಸದ್ದು ಮಾಡಿರುವ ‘ದೇವನಹಳ್ಳಿ ಚಲೋ’ ಕಾರ್ಯಕ್ರಮದ ಮುಂದುವರಿದ ಭಾಗವಾಗಿ, ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರು ಮತ್ತು ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಭೂಮಿ ಸತ್ಯಾಗ್ರಹ’ ಅಹೋರಾತ್ರಿ ಧರಣಿಯನ್ನು ಆರಂಭಿಸಿದ್ದಾರೆ. ಇಂದಿನಿಂದ (ಜೂನ್ 27) ಜುಲೈ 3ರವರೆಗೆ ನಡೆಯಲಿರುವ ಈ ಧರಣಿ ಮತ್ತು ಮುಂದಿನ ಕಾರ್ಯಕ್ರಮಗಳ ವಿವರವನ್ನು ಹೋರಾಟಗಾರರು ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಬಿಡುಗಡೆ ಮಾಡಿದ್ದಾರೆ.

ಹೋರಾಟದ ಹಿನ್ನೆಲೆ ಮತ್ತು ರೈತರ ಅಸಮಾಧಾನ: ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರು ಕಳೆದ ಮೂರೂವರೆ ವರ್ಷಗಳಿಂದ (1180 ದಿನ) ‘ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ಯ ನೇತೃತ್ವದಲ್ಲಿ, ಬಲವಂತದ ಕೆಐಎಡಿಬಿ (KIADB) ಭೂಸ್ವಾಧೀನದ ವಿರುದ್ಧ ನಿರಂತರವಾಗಿ ಹೋರಾಡುತ್ತಿದ್ದಾರೆ. ಫಲವತ್ತಾದ ತಮ್ಮ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸುತ್ತಿರುವ ಈ ಹೋರಾಟಕ್ಕೆ ಹಿಂದಿನ ಬಿಜೆಪಿ ಸರ್ಕಾರ ಸ್ವಾಧೀನ ಪ್ರಕ್ರಿಯೆ ಆರಂಭಿಸಿತ್ತು. ಆದರೆ, ಪ್ರಸ್ತುತದ ಕಾಂಗ್ರೆಸ್ ಸರ್ಕಾರವು ರೈತರ ಪ್ರಬಲ ವಿರೋಧದ ನಡುವೆಯೂ 2025ರ ಏಪ್ರಿಲ್‌ನಲ್ಲಿ 10 ಹಳ್ಳಿಗಳ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಯು ರೈತರು ಮತ್ತು ಸರ್ಕಾರದ ನಡುವಿನ ಸಂಘರ್ಷವನ್ನು ತೀವ್ರಗೊಳಿಸಿದೆ.

ದೇವನಹಳ್ಳಿ ಚಲೋ ಮತ್ತು ಪೊಲೀಸ್ ದೌರ್ಜನ್ಯ ಖಂಡನೆ: ಚನ್ನರಾಯಪಟ್ಟಣದ ರೈತರಿಗೆ ಬೆಂಬಲವಾಗಿ ದಲಿತ, ಕಾರ್ಮಿಕ, ಮಹಿಳಾ ಮತ್ತು ರೈತ ಸಂಘಟನೆಗಳ ಐಕ್ಯ ಹೋರಾಟವಾದ ‘ಸಂಯುಕ್ತ ಹೋರಾಟ-ಕರ್ನಾಟಕ’ ವತಿಯಿಂದ ಜೂನ್ 25ರಂದು ‘ದೇವನಹಳ್ಳಿ ಚಲೋ’ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ದೇವನಹಳ್ಳಿ ಪಟ್ಟಣದ ಸಂತೆ ಮೈದಾನದಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ರೈತರ ಹೋರಾಟವನ್ನು ಸರ್ಕಾರವು ಪೊಲೀಸ್ ಬಲ ಬಳಸಿ ಹತ್ತಿಕ್ಕಲು ಪ್ರಯತ್ನಿಸಿದ್ದು, ಸಂವಿಧಾನಾತ್ಮಕವಾಗಿ ಭೂಸ್ವಾಧೀನ ವಿರೋಧಿಸುತ್ತಿದ್ದ ಹೋರಾಟಗಾರರ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ನಡೆಸಿ ಬಂಧಿಸಿದ್ದಾರೆ. ಇದಕ್ಕೆ ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವರದಿಗಳೇ ಸಾಕ್ಷಿ ಎಂದು ಹೋರಾಟ ಸಮಿತಿಯ ಹೇಳಿಕೆ ತಿಳಿಸಿದೆ.

ಈ ಪೊಲೀಸ್ ದೌರ್ಜನ್ಯಕ್ಕೆ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಜೂನ್ 26ರಂದು ರಾಜ್ಯದ ವಿವಿಧ ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಜನಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ಬಲವಂತದ ಭೂಸ್ವಾಧೀನವನ್ನು ಕೈಬಿಡಬೇಕೆಂದು ಒತ್ತಾಯಿಸಿವೆ. ರೈತರ ಮೇಲಿನ ದೌರ್ಜನ್ಯ ಮತ್ತು ಕಾಂಗ್ರೆಸ್ ಸರ್ಕಾರದ ಹಠಮಾರಿ ಧೋರಣೆಯನ್ನು ಖಂಡಿಸಿ, ಚಿತ್ರನಟ ಪ್ರಕಾಶ್‌ ರಾಜ್, ಹಿರಿಯ ಪತ್ರಕರ್ತ ಹಾಗೂ ಬರಹಗಾರರಾದ ಡಾ. ವಿಜಯಮ್ಮ, ರೈತ ಸಂಘದ ವೀರಸಂಗಯ್ಯ ಸೇರಿದಂತೆ ಹಲವು ಪ್ರಗತಿಪರ ಚಿಂತಕರು ಮರುದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕಠಿಣ ಶಬ್ದಗಳಲ್ಲಿ ಖಂಡಿಸಿ, ಕೂಡಲೇ ಬಲವಂತದ ಭೂಸ್ವಾಧೀನವನ್ನು ಕೈಬಿಡುವಂತೆ ಗಡುವು ನೀಡಿದ್ದಾರೆ ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.

 

 

 

ಮುಖ್ಯಮಂತ್ರಿ ಭರವಸೆ ಮತ್ತು ಸಂಯುಕ್ತ ಹೋರಾಟದ ಬೇಡಿಕೆಗಳು: ಮುಖ್ಯಮಂತ್ರಿಗಳ ಭೇಟಿಯ ಸಂದರ್ಭದಲ್ಲಿ, ಜುಲೈ 4ರಂದು ‘ಸಂಯುಕ್ತ ಹೋರಾಟ-ಕರ್ನಾಟಕ’ದ ಮುಖಂಡರು ಮತ್ತು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯವರೊಂದಿಗೆ ಸಮಗ್ರ ಸಭೆ ನಡೆಸಿ ತೀರ್ಮಾನಕ್ಕೆ ಬರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಜುಲೈ 3ರಂದು ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ, ಅಂದಿನ ಸಭೆಯಲ್ಲಿ ಚನ್ನರಾಯಪಟ್ಟಣ ಹೋಬಳಿಯ ಬಲವಂತದ ಭೂಸ್ವಾಧೀನವನ್ನು ಹಿಂಪಡೆಯುವ ಜೊತೆಗೆ, ಕೆಐಎಡಿಬಿ ಮೂಲಕ ರಾಜ್ಯದಲ್ಲಿ ನಡೆಯುತ್ತಿರುವ ಕೃಷಿ ಭೂಮಿ ದುರುಪಯೋಗಕ್ಕೆ ಶಾಶ್ವತ ಪರಿಹಾರ ರೂಪಿಸಬೇಕು ಎಂದು ‘ಸಂಯುಕ್ತ ಹೋರಾಟ-ಕರ್ನಾಟಕ’ ಒತ್ತಾಯಿಸಿದೆ.

ಭೂಮಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ಗಣ್ಯರು ಮತ್ತು ಮುಂದಿನ ಕಾರ್ಯಕ್ರಮಗಳು: ಇಂದು (ಜೂನ್ 27) ‘ಭೂಮಿ ಸತ್ಯಾಗ್ರಹ’ ಪ್ರತಿಭಟನೆಯನ್ನು ದಸಂಸ ಹಿರಿಯ ಮುಖಂಡರು ಹಾಗೂ ಹಿರಿಯ ಪತ್ರಕರ್ತರಾದ ಇಂದೂಧರ ಹೊನ್ನಾಪುರ ಅವರು ಉದ್ಘಾಟಿಸಿ ಮಾತನಾಡಿದರು. ವಿವಿಧ ಚಳುವಳಿಗಳ ಹಿರಿಯ ನಾಯಕರಾದ ಸಿದ್ಧನಗೌಡ ಪಾಟೀಲ್‌, ವಿ. ನಾಗರಾಜ್‌, ಡಿ.ಎಚ್. ಪೂಜಾರ್‌ ಮೊದಲಾದವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಸಂಯುಕ್ತ ಹೋರಾಟದ ನೂರ್ ಶ್ರೀಧರ್, ದಸಂಸ ಹಿರಿಯ ನಾಯಕ ವಿ. ನಾಗರಾಜ, ಇಂದೂಧರ ಹೊನ್ನಾಪುರ, ಸಿದ್ಧನಗೌಡ ಪಾಟೀಲ್, ಡಿ.ಎಚ್. ಪೂಜಾರ್, ವರಲಕ್ಷ್ಮಿ, ಬಡಗಲಪುರ ನಾಗೇಂದ್ರ, ಯಶವಂತ್, ತಾರಾ ರಾವ್, ಕುಮಾರ್‌ ಸಮತಳ, ಬಸವರಾಜ್ ಕೌತಾಳ್, ಶಿವಾನಂದ ಕುಗ್ವೆ, ಪ್ರಭಾ ಬೆಳವಂಗಲ, ಮತ್ತು ಚನ್ನರಾಯಪಟ್ಟಣದ ರೈತರಾದ ನಲ್ಲಪ್ಪನಹಳ್ಳಿ ನಂಜಪ್ಪ, ಲಕ್ಷ್ಮಮ್ಮ, ಜಯಮ್ಮ, ಮಾರೇಗೌಡ, ಚೀಮಾಚನಳ್ಳಿ ರಮೇಶ್, ನಾಗನಾಯಕನಹಳ್ಳಿ ರಘು, ನಲ್ಲೂರು ಗೋಪಿನಾಥ್, ಮುಕುಂದ್ ಚೀಮಾಚನಹಳ್ಳಿ ಸೇರಿದಂತೆ ಹಲವು ಗಣ್ಯರು ಮತ್ತು ರೈತರು ಉಪಸ್ಥಿತರಿದ್ದರು ಎಂದು ಸಂಯುಕ್ತ ಹೋರಾಟ ಸಮಿತಿಯು ತಿಳಿಸಿದೆ.

ನವದೆಹಲಿಯ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ (AIAWU)ದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ವೆಂಕಟ್ ಹಾಗೂ ಎಸ್‌ಕೆಎಂ (SKM) ರಾಷ್ಟ್ರೀಯ ನಾಯಕರು ಇಂದು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿರುವುದು ಈ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದೆ.

ಭೂಮಿ ಸತ್ಯಾಗ್ರಹ ಮುಂದಿನ ವಿಚಾರಗೋಷ್ಠಿಗಳ ವೇಳಾಪಟ್ಟಿ (ಜುಲೈ 3ರವರೆಗೆ):ನಾಳೆಯಿಂದ (ಜೂನ್ 28) ನಡೆಯಲಿರುವ ಪ್ರತಿಭಟನೆಯು ಪ್ರತಿದಿನವೂ ರೈತರ ಭೂಮಿ ಮತ್ತು ಬದುಕಿಗೆ ಸಂಬಂಧಿಸಿದ ಗಹನವಾದ ವಿಷಯಗಳ ಬಗ್ಗೆ ಬೆಳಕು ಚೆಲ್ಲಲಿದೆ. ಭೂಮಿ ಕುರಿತ ಕಾಯ್ದೆಗಳು, ಅವುಗಳಿಗೆ ಬಂದಿರುವ ತಿದ್ದುಪಡಿಗಳು, ಕೆಐಎಡಿಬಿ ಮೊದಲಾದ ಸರ್ಕಾರಿ ಅಂಗಗಳ ಮೂಲಕ ನಡೆಯುವ ಭೂಕಬಳಿಕೆಯ ಹುನ್ನಾರಗಳು ಮುಂತಾದ ವಿಷಯಗಳ ಬಗ್ಗೆ ವಿಷಯ ತಜ್ಞರನ್ನು ಕರೆಸಿ ವಿಚಾರಗೋಷ್ಠಿ ನಡೆಸಲಾಗುತ್ತದೆ. ಈ ಚಿಂತನ-ಮಂಥನಗಳು ಪ್ರತಿದಿನ ಪಾಲ್ಗೊಳ್ಳುವ ರೈತರು ಮತ್ತು ಸಾಮಾಜಿಕ ಕಾರ್ಯಕರ್ತರಿಗೆ ತಮ್ಮ ಅರಿವನ್ನು ವಿಸ್ತರಿಸಿಕೊಳ್ಳಲು ವೇದಿಕೆಯಾಗಲಿವೆ ಎಂದು ಪ್ರತಿಭಟನೆಯ ಸಮನ್ವಯಕಾರರು ತಿಳಿಸಿದ್ದಾರೆ.

ಮುಂದಿನ ಭೂಮಿ ಸತ್ಯಾಗ್ರಹ ಹೋರಾಟದ ವಿವರಗಳನ್ನು ಈ ಕೆಳಗಿನಂತೆ ಇರಲಿವೆ ಎಂದು ಹೋರಾಟ ಸಮಿತಿ  ತಿಳಿಸಿದೆ.

ದಿನಾಂಕ

ವಿಚಾರ

June 28

ಬಿಜೆಪಿ ಮಾಡಿದ ಭೂ ಕಾಯ್ದೆಯ ತಿದ್ದುಪಡಿಯನ್ನು ಕಾಂಗ್ರೆಸ್‌ ಸಹ ಮುಂದುವರೆಸುತ್ತಿದೆ ಏಕೆ?

ವಿಷಯ ತಜ್ಞರು: ಬಡಗಲಪುರ ನಾಗೇಂದ್ರ, ರಾಜ್ಯಾಧ್ಯಕ್ಷರು, ವಿ.ಗಾಯತ್ರಿ, ಕೃಷಿ ತಜ್ಞರು ಮತ್ತು ಹೋರಾಟಗಾರರು.

June 29

ಸರ್ಕಾರದ ಭೂ ನೀತಿ ಕಾಯುತ್ತಿರುವುದು ಯಾರ ಹಿತ?

June 30

ಬಗರ್‌ ಹುಕುಂ ಸಮಸ್ಯೆ: ಬಗೆಹರಿಸಲಾಗದ ಸಮಸ್ಯೆಯೋ, ಬಗೆಹರಿಸಲು ಸಿದ್ಧವಿಲ್ಲದ ಸಮಸ್ಯೆಯೋ?
July 1

ವಸತಿ ಸಮಸ್ಯೆ; ಸಾವಿರಾರು ಎಕರೆ ಪ್ರತಿಯೊಬ್ಬ ರಾಜಕಾರಣಿಗೇ ಇದ್ದರೂ ಕೋಟ್ಯಾಂತರ ಜನರ ತಲೆ ಮೇಲೆ ಒಂದು ಸ್ವಂತದ ಸೂರು ಇಲ್ಲ ಏಕೆ?

July 2

ಅರಣ್ಯ ನೀತಿ; ಕಾಡಿನ ವಾಸಿಗಳು ತಬ್ಬಲಿಗಳಾಗಿರುವ ಕಥೆ,

July 3

KIADB ಎಂಬ ಕಾರ್ಪರೇಟ್‌ ಭೂ ಮಾಫಿಯಾ

ಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ: ಇಂದೂಧರ ಹೊನ್ನಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...