Homeಕರ್ನಾಟಕದೇವನಹಳ್ಳಿ ಚಲೋ! ‘ಭೂಮಿ ಸತ್ಯಾಗ್ರಹ’ ಅಹೋರಾತ್ರಿ ಧರಣಿ: ಸಂಯುಕ್ತ ಹೋರಾಟ-ಕರ್ನಾಟಕ ವತಿಯಿಂದ ಪತ್ರಿಕಾ ಹೇಳಿಕೆ

ದೇವನಹಳ್ಳಿ ಚಲೋ! ‘ಭೂಮಿ ಸತ್ಯಾಗ್ರಹ’ ಅಹೋರಾತ್ರಿ ಧರಣಿ: ಸಂಯುಕ್ತ ಹೋರಾಟ-ಕರ್ನಾಟಕ ವತಿಯಿಂದ ಪತ್ರಿಕಾ ಹೇಳಿಕೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಭಾರಿ ಸದ್ದು ಮಾಡಿರುವ ‘ದೇವನಹಳ್ಳಿ ಚಲೋ’ ಕಾರ್ಯಕ್ರಮದ ಮುಂದುವರಿದ ಭಾಗವಾಗಿ, ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರು ಮತ್ತು ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಭೂಮಿ ಸತ್ಯಾಗ್ರಹ’ ಅಹೋರಾತ್ರಿ ಧರಣಿಯನ್ನು ಆರಂಭಿಸಿದ್ದಾರೆ. ಇಂದಿನಿಂದ (ಜೂನ್ 27) ಜುಲೈ 3ರವರೆಗೆ ನಡೆಯಲಿರುವ ಈ ಧರಣಿ ಮತ್ತು ಮುಂದಿನ ಕಾರ್ಯಕ್ರಮಗಳ ವಿವರವನ್ನು ಹೋರಾಟಗಾರರು ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಬಿಡುಗಡೆ ಮಾಡಿದ್ದಾರೆ.

ಹೋರಾಟದ ಹಿನ್ನೆಲೆ ಮತ್ತು ರೈತರ ಅಸಮಾಧಾನ: ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರು ಕಳೆದ ಮೂರೂವರೆ ವರ್ಷಗಳಿಂದ (1180 ದಿನ) ‘ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ಯ ನೇತೃತ್ವದಲ್ಲಿ, ಬಲವಂತದ ಕೆಐಎಡಿಬಿ (KIADB) ಭೂಸ್ವಾಧೀನದ ವಿರುದ್ಧ ನಿರಂತರವಾಗಿ ಹೋರಾಡುತ್ತಿದ್ದಾರೆ. ಫಲವತ್ತಾದ ತಮ್ಮ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸುತ್ತಿರುವ ಈ ಹೋರಾಟಕ್ಕೆ ಹಿಂದಿನ ಬಿಜೆಪಿ ಸರ್ಕಾರ ಸ್ವಾಧೀನ ಪ್ರಕ್ರಿಯೆ ಆರಂಭಿಸಿತ್ತು. ಆದರೆ, ಪ್ರಸ್ತುತದ ಕಾಂಗ್ರೆಸ್ ಸರ್ಕಾರವು ರೈತರ ಪ್ರಬಲ ವಿರೋಧದ ನಡುವೆಯೂ 2025ರ ಏಪ್ರಿಲ್‌ನಲ್ಲಿ 10 ಹಳ್ಳಿಗಳ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಯು ರೈತರು ಮತ್ತು ಸರ್ಕಾರದ ನಡುವಿನ ಸಂಘರ್ಷವನ್ನು ತೀವ್ರಗೊಳಿಸಿದೆ.

ದೇವನಹಳ್ಳಿ ಚಲೋ ಮತ್ತು ಪೊಲೀಸ್ ದೌರ್ಜನ್ಯ ಖಂಡನೆ: ಚನ್ನರಾಯಪಟ್ಟಣದ ರೈತರಿಗೆ ಬೆಂಬಲವಾಗಿ ದಲಿತ, ಕಾರ್ಮಿಕ, ಮಹಿಳಾ ಮತ್ತು ರೈತ ಸಂಘಟನೆಗಳ ಐಕ್ಯ ಹೋರಾಟವಾದ ‘ಸಂಯುಕ್ತ ಹೋರಾಟ-ಕರ್ನಾಟಕ’ ವತಿಯಿಂದ ಜೂನ್ 25ರಂದು ‘ದೇವನಹಳ್ಳಿ ಚಲೋ’ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ದೇವನಹಳ್ಳಿ ಪಟ್ಟಣದ ಸಂತೆ ಮೈದಾನದಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ರೈತರ ಹೋರಾಟವನ್ನು ಸರ್ಕಾರವು ಪೊಲೀಸ್ ಬಲ ಬಳಸಿ ಹತ್ತಿಕ್ಕಲು ಪ್ರಯತ್ನಿಸಿದ್ದು, ಸಂವಿಧಾನಾತ್ಮಕವಾಗಿ ಭೂಸ್ವಾಧೀನ ವಿರೋಧಿಸುತ್ತಿದ್ದ ಹೋರಾಟಗಾರರ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ನಡೆಸಿ ಬಂಧಿಸಿದ್ದಾರೆ. ಇದಕ್ಕೆ ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವರದಿಗಳೇ ಸಾಕ್ಷಿ ಎಂದು ಹೋರಾಟ ಸಮಿತಿಯ ಹೇಳಿಕೆ ತಿಳಿಸಿದೆ.

ಈ ಪೊಲೀಸ್ ದೌರ್ಜನ್ಯಕ್ಕೆ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಜೂನ್ 26ರಂದು ರಾಜ್ಯದ ವಿವಿಧ ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಜನಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ಬಲವಂತದ ಭೂಸ್ವಾಧೀನವನ್ನು ಕೈಬಿಡಬೇಕೆಂದು ಒತ್ತಾಯಿಸಿವೆ. ರೈತರ ಮೇಲಿನ ದೌರ್ಜನ್ಯ ಮತ್ತು ಕಾಂಗ್ರೆಸ್ ಸರ್ಕಾರದ ಹಠಮಾರಿ ಧೋರಣೆಯನ್ನು ಖಂಡಿಸಿ, ಚಿತ್ರನಟ ಪ್ರಕಾಶ್‌ ರಾಜ್, ಹಿರಿಯ ಪತ್ರಕರ್ತ ಹಾಗೂ ಬರಹಗಾರರಾದ ಡಾ. ವಿಜಯಮ್ಮ, ರೈತ ಸಂಘದ ವೀರಸಂಗಯ್ಯ ಸೇರಿದಂತೆ ಹಲವು ಪ್ರಗತಿಪರ ಚಿಂತಕರು ಮರುದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕಠಿಣ ಶಬ್ದಗಳಲ್ಲಿ ಖಂಡಿಸಿ, ಕೂಡಲೇ ಬಲವಂತದ ಭೂಸ್ವಾಧೀನವನ್ನು ಕೈಬಿಡುವಂತೆ ಗಡುವು ನೀಡಿದ್ದಾರೆ ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.

 

 

 

ಮುಖ್ಯಮಂತ್ರಿ ಭರವಸೆ ಮತ್ತು ಸಂಯುಕ್ತ ಹೋರಾಟದ ಬೇಡಿಕೆಗಳು: ಮುಖ್ಯಮಂತ್ರಿಗಳ ಭೇಟಿಯ ಸಂದರ್ಭದಲ್ಲಿ, ಜುಲೈ 4ರಂದು ‘ಸಂಯುಕ್ತ ಹೋರಾಟ-ಕರ್ನಾಟಕ’ದ ಮುಖಂಡರು ಮತ್ತು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯವರೊಂದಿಗೆ ಸಮಗ್ರ ಸಭೆ ನಡೆಸಿ ತೀರ್ಮಾನಕ್ಕೆ ಬರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಜುಲೈ 3ರಂದು ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ, ಅಂದಿನ ಸಭೆಯಲ್ಲಿ ಚನ್ನರಾಯಪಟ್ಟಣ ಹೋಬಳಿಯ ಬಲವಂತದ ಭೂಸ್ವಾಧೀನವನ್ನು ಹಿಂಪಡೆಯುವ ಜೊತೆಗೆ, ಕೆಐಎಡಿಬಿ ಮೂಲಕ ರಾಜ್ಯದಲ್ಲಿ ನಡೆಯುತ್ತಿರುವ ಕೃಷಿ ಭೂಮಿ ದುರುಪಯೋಗಕ್ಕೆ ಶಾಶ್ವತ ಪರಿಹಾರ ರೂಪಿಸಬೇಕು ಎಂದು ‘ಸಂಯುಕ್ತ ಹೋರಾಟ-ಕರ್ನಾಟಕ’ ಒತ್ತಾಯಿಸಿದೆ.

ಭೂಮಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ಗಣ್ಯರು ಮತ್ತು ಮುಂದಿನ ಕಾರ್ಯಕ್ರಮಗಳು: ಇಂದು (ಜೂನ್ 27) ‘ಭೂಮಿ ಸತ್ಯಾಗ್ರಹ’ ಪ್ರತಿಭಟನೆಯನ್ನು ದಸಂಸ ಹಿರಿಯ ಮುಖಂಡರು ಹಾಗೂ ಹಿರಿಯ ಪತ್ರಕರ್ತರಾದ ಇಂದೂಧರ ಹೊನ್ನಾಪುರ ಅವರು ಉದ್ಘಾಟಿಸಿ ಮಾತನಾಡಿದರು. ವಿವಿಧ ಚಳುವಳಿಗಳ ಹಿರಿಯ ನಾಯಕರಾದ ಸಿದ್ಧನಗೌಡ ಪಾಟೀಲ್‌, ವಿ. ನಾಗರಾಜ್‌, ಡಿ.ಎಚ್. ಪೂಜಾರ್‌ ಮೊದಲಾದವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಸಂಯುಕ್ತ ಹೋರಾಟದ ನೂರ್ ಶ್ರೀಧರ್, ದಸಂಸ ಹಿರಿಯ ನಾಯಕ ವಿ. ನಾಗರಾಜ, ಇಂದೂಧರ ಹೊನ್ನಾಪುರ, ಸಿದ್ಧನಗೌಡ ಪಾಟೀಲ್, ಡಿ.ಎಚ್. ಪೂಜಾರ್, ವರಲಕ್ಷ್ಮಿ, ಬಡಗಲಪುರ ನಾಗೇಂದ್ರ, ಯಶವಂತ್, ತಾರಾ ರಾವ್, ಕುಮಾರ್‌ ಸಮತಳ, ಬಸವರಾಜ್ ಕೌತಾಳ್, ಶಿವಾನಂದ ಕುಗ್ವೆ, ಪ್ರಭಾ ಬೆಳವಂಗಲ, ಮತ್ತು ಚನ್ನರಾಯಪಟ್ಟಣದ ರೈತರಾದ ನಲ್ಲಪ್ಪನಹಳ್ಳಿ ನಂಜಪ್ಪ, ಲಕ್ಷ್ಮಮ್ಮ, ಜಯಮ್ಮ, ಮಾರೇಗೌಡ, ಚೀಮಾಚನಳ್ಳಿ ರಮೇಶ್, ನಾಗನಾಯಕನಹಳ್ಳಿ ರಘು, ನಲ್ಲೂರು ಗೋಪಿನಾಥ್, ಮುಕುಂದ್ ಚೀಮಾಚನಹಳ್ಳಿ ಸೇರಿದಂತೆ ಹಲವು ಗಣ್ಯರು ಮತ್ತು ರೈತರು ಉಪಸ್ಥಿತರಿದ್ದರು ಎಂದು ಸಂಯುಕ್ತ ಹೋರಾಟ ಸಮಿತಿಯು ತಿಳಿಸಿದೆ.

ನವದೆಹಲಿಯ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ (AIAWU)ದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ವೆಂಕಟ್ ಹಾಗೂ ಎಸ್‌ಕೆಎಂ (SKM) ರಾಷ್ಟ್ರೀಯ ನಾಯಕರು ಇಂದು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿರುವುದು ಈ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದೆ.

ಭೂಮಿ ಸತ್ಯಾಗ್ರಹ ಮುಂದಿನ ವಿಚಾರಗೋಷ್ಠಿಗಳ ವೇಳಾಪಟ್ಟಿ (ಜುಲೈ 3ರವರೆಗೆ):ನಾಳೆಯಿಂದ (ಜೂನ್ 28) ನಡೆಯಲಿರುವ ಪ್ರತಿಭಟನೆಯು ಪ್ರತಿದಿನವೂ ರೈತರ ಭೂಮಿ ಮತ್ತು ಬದುಕಿಗೆ ಸಂಬಂಧಿಸಿದ ಗಹನವಾದ ವಿಷಯಗಳ ಬಗ್ಗೆ ಬೆಳಕು ಚೆಲ್ಲಲಿದೆ. ಭೂಮಿ ಕುರಿತ ಕಾಯ್ದೆಗಳು, ಅವುಗಳಿಗೆ ಬಂದಿರುವ ತಿದ್ದುಪಡಿಗಳು, ಕೆಐಎಡಿಬಿ ಮೊದಲಾದ ಸರ್ಕಾರಿ ಅಂಗಗಳ ಮೂಲಕ ನಡೆಯುವ ಭೂಕಬಳಿಕೆಯ ಹುನ್ನಾರಗಳು ಮುಂತಾದ ವಿಷಯಗಳ ಬಗ್ಗೆ ವಿಷಯ ತಜ್ಞರನ್ನು ಕರೆಸಿ ವಿಚಾರಗೋಷ್ಠಿ ನಡೆಸಲಾಗುತ್ತದೆ. ಈ ಚಿಂತನ-ಮಂಥನಗಳು ಪ್ರತಿದಿನ ಪಾಲ್ಗೊಳ್ಳುವ ರೈತರು ಮತ್ತು ಸಾಮಾಜಿಕ ಕಾರ್ಯಕರ್ತರಿಗೆ ತಮ್ಮ ಅರಿವನ್ನು ವಿಸ್ತರಿಸಿಕೊಳ್ಳಲು ವೇದಿಕೆಯಾಗಲಿವೆ ಎಂದು ಪ್ರತಿಭಟನೆಯ ಸಮನ್ವಯಕಾರರು ತಿಳಿಸಿದ್ದಾರೆ.

ಮುಂದಿನ ಭೂಮಿ ಸತ್ಯಾಗ್ರಹ ಹೋರಾಟದ ವಿವರಗಳನ್ನು ಈ ಕೆಳಗಿನಂತೆ ಇರಲಿವೆ ಎಂದು ಹೋರಾಟ ಸಮಿತಿ  ತಿಳಿಸಿದೆ.

ದಿನಾಂಕ

ವಿಚಾರ

June 28

ಬಿಜೆಪಿ ಮಾಡಿದ ಭೂ ಕಾಯ್ದೆಯ ತಿದ್ದುಪಡಿಯನ್ನು ಕಾಂಗ್ರೆಸ್‌ ಸಹ ಮುಂದುವರೆಸುತ್ತಿದೆ ಏಕೆ?

ವಿಷಯ ತಜ್ಞರು: ಬಡಗಲಪುರ ನಾಗೇಂದ್ರ, ರಾಜ್ಯಾಧ್ಯಕ್ಷರು, ವಿ.ಗಾಯತ್ರಿ, ಕೃಷಿ ತಜ್ಞರು ಮತ್ತು ಹೋರಾಟಗಾರರು.

June 29

ಸರ್ಕಾರದ ಭೂ ನೀತಿ ಕಾಯುತ್ತಿರುವುದು ಯಾರ ಹಿತ?

June 30

ಬಗರ್‌ ಹುಕುಂ ಸಮಸ್ಯೆ: ಬಗೆಹರಿಸಲಾಗದ ಸಮಸ್ಯೆಯೋ, ಬಗೆಹರಿಸಲು ಸಿದ್ಧವಿಲ್ಲದ ಸಮಸ್ಯೆಯೋ?
July 1

ವಸತಿ ಸಮಸ್ಯೆ; ಸಾವಿರಾರು ಎಕರೆ ಪ್ರತಿಯೊಬ್ಬ ರಾಜಕಾರಣಿಗೇ ಇದ್ದರೂ ಕೋಟ್ಯಾಂತರ ಜನರ ತಲೆ ಮೇಲೆ ಒಂದು ಸ್ವಂತದ ಸೂರು ಇಲ್ಲ ಏಕೆ?

July 2

ಅರಣ್ಯ ನೀತಿ; ಕಾಡಿನ ವಾಸಿಗಳು ತಬ್ಬಲಿಗಳಾಗಿರುವ ಕಥೆ,

July 3

KIADB ಎಂಬ ಕಾರ್ಪರೇಟ್‌ ಭೂ ಮಾಫಿಯಾ

ಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ: ಇಂದೂಧರ ಹೊನ್ನಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...