Homeಕರ್ನಾಟಕದೇವನಹಳ್ಳಿ ಚಲೋ! ‘ಭೂಮಿ ಸತ್ಯಾಗ್ರಹ’ ಅಹೋರಾತ್ರಿ ಧರಣಿ: ಸಂಯುಕ್ತ ಹೋರಾಟ-ಕರ್ನಾಟಕ ವತಿಯಿಂದ ಪತ್ರಿಕಾ ಹೇಳಿಕೆ

ದೇವನಹಳ್ಳಿ ಚಲೋ! ‘ಭೂಮಿ ಸತ್ಯಾಗ್ರಹ’ ಅಹೋರಾತ್ರಿ ಧರಣಿ: ಸಂಯುಕ್ತ ಹೋರಾಟ-ಕರ್ನಾಟಕ ವತಿಯಿಂದ ಪತ್ರಿಕಾ ಹೇಳಿಕೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಭಾರಿ ಸದ್ದು ಮಾಡಿರುವ ‘ದೇವನಹಳ್ಳಿ ಚಲೋ’ ಕಾರ್ಯಕ್ರಮದ ಮುಂದುವರಿದ ಭಾಗವಾಗಿ, ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರು ಮತ್ತು ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಭೂಮಿ ಸತ್ಯಾಗ್ರಹ’ ಅಹೋರಾತ್ರಿ ಧರಣಿಯನ್ನು ಆರಂಭಿಸಿದ್ದಾರೆ. ಇಂದಿನಿಂದ (ಜೂನ್ 27) ಜುಲೈ 3ರವರೆಗೆ ನಡೆಯಲಿರುವ ಈ ಧರಣಿ ಮತ್ತು ಮುಂದಿನ ಕಾರ್ಯಕ್ರಮಗಳ ವಿವರವನ್ನು ಹೋರಾಟಗಾರರು ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಬಿಡುಗಡೆ ಮಾಡಿದ್ದಾರೆ.

ಹೋರಾಟದ ಹಿನ್ನೆಲೆ ಮತ್ತು ರೈತರ ಅಸಮಾಧಾನ: ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರು ಕಳೆದ ಮೂರೂವರೆ ವರ್ಷಗಳಿಂದ (1180 ದಿನ) ‘ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ’ಯ ನೇತೃತ್ವದಲ್ಲಿ, ಬಲವಂತದ ಕೆಐಎಡಿಬಿ (KIADB) ಭೂಸ್ವಾಧೀನದ ವಿರುದ್ಧ ನಿರಂತರವಾಗಿ ಹೋರಾಡುತ್ತಿದ್ದಾರೆ. ಫಲವತ್ತಾದ ತಮ್ಮ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸುತ್ತಿರುವ ಈ ಹೋರಾಟಕ್ಕೆ ಹಿಂದಿನ ಬಿಜೆಪಿ ಸರ್ಕಾರ ಸ್ವಾಧೀನ ಪ್ರಕ್ರಿಯೆ ಆರಂಭಿಸಿತ್ತು. ಆದರೆ, ಪ್ರಸ್ತುತದ ಕಾಂಗ್ರೆಸ್ ಸರ್ಕಾರವು ರೈತರ ಪ್ರಬಲ ವಿರೋಧದ ನಡುವೆಯೂ 2025ರ ಏಪ್ರಿಲ್‌ನಲ್ಲಿ 10 ಹಳ್ಳಿಗಳ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಯು ರೈತರು ಮತ್ತು ಸರ್ಕಾರದ ನಡುವಿನ ಸಂಘರ್ಷವನ್ನು ತೀವ್ರಗೊಳಿಸಿದೆ.

ದೇವನಹಳ್ಳಿ ಚಲೋ ಮತ್ತು ಪೊಲೀಸ್ ದೌರ್ಜನ್ಯ ಖಂಡನೆ: ಚನ್ನರಾಯಪಟ್ಟಣದ ರೈತರಿಗೆ ಬೆಂಬಲವಾಗಿ ದಲಿತ, ಕಾರ್ಮಿಕ, ಮಹಿಳಾ ಮತ್ತು ರೈತ ಸಂಘಟನೆಗಳ ಐಕ್ಯ ಹೋರಾಟವಾದ ‘ಸಂಯುಕ್ತ ಹೋರಾಟ-ಕರ್ನಾಟಕ’ ವತಿಯಿಂದ ಜೂನ್ 25ರಂದು ‘ದೇವನಹಳ್ಳಿ ಚಲೋ’ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ದೇವನಹಳ್ಳಿ ಪಟ್ಟಣದ ಸಂತೆ ಮೈದಾನದಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ರೈತರ ಹೋರಾಟವನ್ನು ಸರ್ಕಾರವು ಪೊಲೀಸ್ ಬಲ ಬಳಸಿ ಹತ್ತಿಕ್ಕಲು ಪ್ರಯತ್ನಿಸಿದ್ದು, ಸಂವಿಧಾನಾತ್ಮಕವಾಗಿ ಭೂಸ್ವಾಧೀನ ವಿರೋಧಿಸುತ್ತಿದ್ದ ಹೋರಾಟಗಾರರ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ನಡೆಸಿ ಬಂಧಿಸಿದ್ದಾರೆ. ಇದಕ್ಕೆ ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವರದಿಗಳೇ ಸಾಕ್ಷಿ ಎಂದು ಹೋರಾಟ ಸಮಿತಿಯ ಹೇಳಿಕೆ ತಿಳಿಸಿದೆ.

ಈ ಪೊಲೀಸ್ ದೌರ್ಜನ್ಯಕ್ಕೆ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಜೂನ್ 26ರಂದು ರಾಜ್ಯದ ವಿವಿಧ ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಜನಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ಬಲವಂತದ ಭೂಸ್ವಾಧೀನವನ್ನು ಕೈಬಿಡಬೇಕೆಂದು ಒತ್ತಾಯಿಸಿವೆ. ರೈತರ ಮೇಲಿನ ದೌರ್ಜನ್ಯ ಮತ್ತು ಕಾಂಗ್ರೆಸ್ ಸರ್ಕಾರದ ಹಠಮಾರಿ ಧೋರಣೆಯನ್ನು ಖಂಡಿಸಿ, ಚಿತ್ರನಟ ಪ್ರಕಾಶ್‌ ರಾಜ್, ಹಿರಿಯ ಪತ್ರಕರ್ತ ಹಾಗೂ ಬರಹಗಾರರಾದ ಡಾ. ವಿಜಯಮ್ಮ, ರೈತ ಸಂಘದ ವೀರಸಂಗಯ್ಯ ಸೇರಿದಂತೆ ಹಲವು ಪ್ರಗತಿಪರ ಚಿಂತಕರು ಮರುದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕಠಿಣ ಶಬ್ದಗಳಲ್ಲಿ ಖಂಡಿಸಿ, ಕೂಡಲೇ ಬಲವಂತದ ಭೂಸ್ವಾಧೀನವನ್ನು ಕೈಬಿಡುವಂತೆ ಗಡುವು ನೀಡಿದ್ದಾರೆ ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.

 

 

 

ಮುಖ್ಯಮಂತ್ರಿ ಭರವಸೆ ಮತ್ತು ಸಂಯುಕ್ತ ಹೋರಾಟದ ಬೇಡಿಕೆಗಳು: ಮುಖ್ಯಮಂತ್ರಿಗಳ ಭೇಟಿಯ ಸಂದರ್ಭದಲ್ಲಿ, ಜುಲೈ 4ರಂದು ‘ಸಂಯುಕ್ತ ಹೋರಾಟ-ಕರ್ನಾಟಕ’ದ ಮುಖಂಡರು ಮತ್ತು ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯವರೊಂದಿಗೆ ಸಮಗ್ರ ಸಭೆ ನಡೆಸಿ ತೀರ್ಮಾನಕ್ಕೆ ಬರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಜುಲೈ 3ರಂದು ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ, ಅಂದಿನ ಸಭೆಯಲ್ಲಿ ಚನ್ನರಾಯಪಟ್ಟಣ ಹೋಬಳಿಯ ಬಲವಂತದ ಭೂಸ್ವಾಧೀನವನ್ನು ಹಿಂಪಡೆಯುವ ಜೊತೆಗೆ, ಕೆಐಎಡಿಬಿ ಮೂಲಕ ರಾಜ್ಯದಲ್ಲಿ ನಡೆಯುತ್ತಿರುವ ಕೃಷಿ ಭೂಮಿ ದುರುಪಯೋಗಕ್ಕೆ ಶಾಶ್ವತ ಪರಿಹಾರ ರೂಪಿಸಬೇಕು ಎಂದು ‘ಸಂಯುಕ್ತ ಹೋರಾಟ-ಕರ್ನಾಟಕ’ ಒತ್ತಾಯಿಸಿದೆ.

ಭೂಮಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ಗಣ್ಯರು ಮತ್ತು ಮುಂದಿನ ಕಾರ್ಯಕ್ರಮಗಳು: ಇಂದು (ಜೂನ್ 27) ‘ಭೂಮಿ ಸತ್ಯಾಗ್ರಹ’ ಪ್ರತಿಭಟನೆಯನ್ನು ದಸಂಸ ಹಿರಿಯ ಮುಖಂಡರು ಹಾಗೂ ಹಿರಿಯ ಪತ್ರಕರ್ತರಾದ ಇಂದೂಧರ ಹೊನ್ನಾಪುರ ಅವರು ಉದ್ಘಾಟಿಸಿ ಮಾತನಾಡಿದರು. ವಿವಿಧ ಚಳುವಳಿಗಳ ಹಿರಿಯ ನಾಯಕರಾದ ಸಿದ್ಧನಗೌಡ ಪಾಟೀಲ್‌, ವಿ. ನಾಗರಾಜ್‌, ಡಿ.ಎಚ್. ಪೂಜಾರ್‌ ಮೊದಲಾದವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಸಂಯುಕ್ತ ಹೋರಾಟದ ನೂರ್ ಶ್ರೀಧರ್, ದಸಂಸ ಹಿರಿಯ ನಾಯಕ ವಿ. ನಾಗರಾಜ, ಇಂದೂಧರ ಹೊನ್ನಾಪುರ, ಸಿದ್ಧನಗೌಡ ಪಾಟೀಲ್, ಡಿ.ಎಚ್. ಪೂಜಾರ್, ವರಲಕ್ಷ್ಮಿ, ಬಡಗಲಪುರ ನಾಗೇಂದ್ರ, ಯಶವಂತ್, ತಾರಾ ರಾವ್, ಕುಮಾರ್‌ ಸಮತಳ, ಬಸವರಾಜ್ ಕೌತಾಳ್, ಶಿವಾನಂದ ಕುಗ್ವೆ, ಪ್ರಭಾ ಬೆಳವಂಗಲ, ಮತ್ತು ಚನ್ನರಾಯಪಟ್ಟಣದ ರೈತರಾದ ನಲ್ಲಪ್ಪನಹಳ್ಳಿ ನಂಜಪ್ಪ, ಲಕ್ಷ್ಮಮ್ಮ, ಜಯಮ್ಮ, ಮಾರೇಗೌಡ, ಚೀಮಾಚನಳ್ಳಿ ರಮೇಶ್, ನಾಗನಾಯಕನಹಳ್ಳಿ ರಘು, ನಲ್ಲೂರು ಗೋಪಿನಾಥ್, ಮುಕುಂದ್ ಚೀಮಾಚನಹಳ್ಳಿ ಸೇರಿದಂತೆ ಹಲವು ಗಣ್ಯರು ಮತ್ತು ರೈತರು ಉಪಸ್ಥಿತರಿದ್ದರು ಎಂದು ಸಂಯುಕ್ತ ಹೋರಾಟ ಸಮಿತಿಯು ತಿಳಿಸಿದೆ.

ನವದೆಹಲಿಯ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ (AIAWU)ದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ವೆಂಕಟ್ ಹಾಗೂ ಎಸ್‌ಕೆಎಂ (SKM) ರಾಷ್ಟ್ರೀಯ ನಾಯಕರು ಇಂದು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿರುವುದು ಈ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದೆ.

ಭೂಮಿ ಸತ್ಯಾಗ್ರಹ ಮುಂದಿನ ವಿಚಾರಗೋಷ್ಠಿಗಳ ವೇಳಾಪಟ್ಟಿ (ಜುಲೈ 3ರವರೆಗೆ):ನಾಳೆಯಿಂದ (ಜೂನ್ 28) ನಡೆಯಲಿರುವ ಪ್ರತಿಭಟನೆಯು ಪ್ರತಿದಿನವೂ ರೈತರ ಭೂಮಿ ಮತ್ತು ಬದುಕಿಗೆ ಸಂಬಂಧಿಸಿದ ಗಹನವಾದ ವಿಷಯಗಳ ಬಗ್ಗೆ ಬೆಳಕು ಚೆಲ್ಲಲಿದೆ. ಭೂಮಿ ಕುರಿತ ಕಾಯ್ದೆಗಳು, ಅವುಗಳಿಗೆ ಬಂದಿರುವ ತಿದ್ದುಪಡಿಗಳು, ಕೆಐಎಡಿಬಿ ಮೊದಲಾದ ಸರ್ಕಾರಿ ಅಂಗಗಳ ಮೂಲಕ ನಡೆಯುವ ಭೂಕಬಳಿಕೆಯ ಹುನ್ನಾರಗಳು ಮುಂತಾದ ವಿಷಯಗಳ ಬಗ್ಗೆ ವಿಷಯ ತಜ್ಞರನ್ನು ಕರೆಸಿ ವಿಚಾರಗೋಷ್ಠಿ ನಡೆಸಲಾಗುತ್ತದೆ. ಈ ಚಿಂತನ-ಮಂಥನಗಳು ಪ್ರತಿದಿನ ಪಾಲ್ಗೊಳ್ಳುವ ರೈತರು ಮತ್ತು ಸಾಮಾಜಿಕ ಕಾರ್ಯಕರ್ತರಿಗೆ ತಮ್ಮ ಅರಿವನ್ನು ವಿಸ್ತರಿಸಿಕೊಳ್ಳಲು ವೇದಿಕೆಯಾಗಲಿವೆ ಎಂದು ಪ್ರತಿಭಟನೆಯ ಸಮನ್ವಯಕಾರರು ತಿಳಿಸಿದ್ದಾರೆ.

ಮುಂದಿನ ಭೂಮಿ ಸತ್ಯಾಗ್ರಹ ಹೋರಾಟದ ವಿವರಗಳನ್ನು ಈ ಕೆಳಗಿನಂತೆ ಇರಲಿವೆ ಎಂದು ಹೋರಾಟ ಸಮಿತಿ  ತಿಳಿಸಿದೆ.

ದಿನಾಂಕ

ವಿಚಾರ

June 28

ಬಿಜೆಪಿ ಮಾಡಿದ ಭೂ ಕಾಯ್ದೆಯ ತಿದ್ದುಪಡಿಯನ್ನು ಕಾಂಗ್ರೆಸ್‌ ಸಹ ಮುಂದುವರೆಸುತ್ತಿದೆ ಏಕೆ?

ವಿಷಯ ತಜ್ಞರು: ಬಡಗಲಪುರ ನಾಗೇಂದ್ರ, ರಾಜ್ಯಾಧ್ಯಕ್ಷರು, ವಿ.ಗಾಯತ್ರಿ, ಕೃಷಿ ತಜ್ಞರು ಮತ್ತು ಹೋರಾಟಗಾರರು.

June 29

ಸರ್ಕಾರದ ಭೂ ನೀತಿ ಕಾಯುತ್ತಿರುವುದು ಯಾರ ಹಿತ?

June 30

ಬಗರ್‌ ಹುಕುಂ ಸಮಸ್ಯೆ: ಬಗೆಹರಿಸಲಾಗದ ಸಮಸ್ಯೆಯೋ, ಬಗೆಹರಿಸಲು ಸಿದ್ಧವಿಲ್ಲದ ಸಮಸ್ಯೆಯೋ?
July 1

ವಸತಿ ಸಮಸ್ಯೆ; ಸಾವಿರಾರು ಎಕರೆ ಪ್ರತಿಯೊಬ್ಬ ರಾಜಕಾರಣಿಗೇ ಇದ್ದರೂ ಕೋಟ್ಯಾಂತರ ಜನರ ತಲೆ ಮೇಲೆ ಒಂದು ಸ್ವಂತದ ಸೂರು ಇಲ್ಲ ಏಕೆ?

July 2

ಅರಣ್ಯ ನೀತಿ; ಕಾಡಿನ ವಾಸಿಗಳು ತಬ್ಬಲಿಗಳಾಗಿರುವ ಕಥೆ,

July 3

KIADB ಎಂಬ ಕಾರ್ಪರೇಟ್‌ ಭೂ ಮಾಫಿಯಾ

ಚನ್ನರಾಯಪಟ್ಟಣ ರೈತ ಹೋರಾಟದಿಂದ ಹೊಸ ಅಧ್ಯಾಯ ಆರಂಭವಾಗಿದೆ: ಇಂದೂಧರ ಹೊನ್ನಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...