Homeಮುಖಪುಟದೊರೆಸ್ವಾಮಿಯವರ ನೇತೃತ್ವದಲ್ಲಿ ಸಿಎಂ ಭೇಟಿಯಾದ ಭೂಮಿ ವಸತಿ ಹೋರಾಟ ಸಮಿತಿ

ದೊರೆಸ್ವಾಮಿಯವರ ನೇತೃತ್ವದಲ್ಲಿ ಸಿಎಂ ಭೇಟಿಯಾದ ಭೂಮಿ ವಸತಿ ಹೋರಾಟ ಸಮಿತಿ

- Advertisement -
- Advertisement -

ಇಂದು ಸ್ವಾತಂತ್ರ್ಯ ಸೇನಾನಿ ಎಚ್.ಎಸ್. ದೊರೆಸ್ವಾಮಿ ಅವರ ನೇತೃತ್ವದಲ್ಲಿ ಭೂಮಿ -ವಸತಿ ಹೋರಾಟ ಸಮಿತಿಯ ಉನ್ನತ ನಿಯೋಗವು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಿದೆ.

ಈ ಸಂದರ್ಭದಲ್ಲಿ “ರಾಜ್ಯದ ಯಾವುದೇ ಕಡೆ ಸರ್ಕಾರಿ ಜಾಗದಲ್ಲಿ ಮನೆ-ಜಮೀನು ಮಾಡಿಕೊಂಡಿರುವ ಬಡಜನರ ಮೇಲೆ ಸರ್ಕಾರಿ ಜಮೀನು ಸಂರಕ್ಷಣೆಯ ಹೆಸರಿನಲ್ಲಿ ಅಧಿಕಾರಿಗಳು ದಾಳಿ ನಡೆಸಿ ಒಕ್ಕಲೆಬ್ಬಿಸುತ್ತಿರುವುದನ್ನು ಕೂಡಲೇ ನಿಲ್ಲಿಸಲು ಖಡಕ್ ಆದೇಶ ಹೊರಡಿಸಲಾಗುವುದು. ಇದನ್ನು ಮೀರಿ ಯಾವುದೇ ಅಧಿಕಾರಿಗಳು ಒಕ್ಕಲೆಬ್ಬಿಸುವ ಪ್ರಯತ್ನ ನಡೆಸಿದರೆ ನೇರವಾಗಿ ನನ್ನ ಗಮನಕ್ಕೆ ತನ್ನಿ, ನಾನು ಅಂಥವರ ಮೇಲೆ ಕ್ರಮ ಕೈಗೊಳ್ಳುತ್ತೇನೆ” ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ವಸತಿ ಹಾಗೂ ಉಳುಮೆ ಭೂಮಿಯನ್ನು ಮಂಜೂರು ಮಾಡಲು ಫಾರಂ ನಂ 50-53-57 ಹಾಗೂ 94 ಸಿ/ಸಿಸಿ ಮತ್ತು ಅರಣ್ಯ ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿರುವವರಿಗೆ ತ್ವರಿತವಾಗಿ ಹಕ್ಕುಪತ್ರ ವಿತರಿಸವುದು ಸೇರಿದಂತೆ ಈ ನಿಟ್ಟಿನ ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ತಮ್ಮ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಮಂತ್ರಿಗಳು, ಹಿರಿಯ ಅಧಿಕಾರಿಗಳು ಹಾಗೂ ಹೋರಾಟ ಸಮಿತಿಯ ನಿಯೋಗವನ್ನು ಒಳಗೊಂಡು ಒಂದು ಉನ್ನತ ಮಟ್ಟದ ಸಭೆಯನ್ನು ಕರೆಯುತ್ತೇನೆ ಎಂದು ಅವರು ಹೇಳಿದ್ದಾರೆ.

ಸರ್ಕಾರಿ ಹಾಗೂ ಖಾಸಗೀ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕು ಕಾರ್ಪೋರೇಟ್ ಕಂಪನಿಗಳಿಗೆ ಲೀಸಿಗೆ ನೀಡಬಾರದು, ಅದಕ್ಕಾಗಿ ತರಲು ಹೊರಟಿರುವ ಕಾಯ್ದೆಯನ್ನು ಕೈಬಿಡಬೇಕು ಎನ್ನುವ ನಮ್ಮ ಹಕ್ಕೊತ್ತಾಯವನ್ನು ಸಮಿತಿಯ ಪರವಾಗಿ ದೊರೆಸ್ವಾಮಿಯವರು ಮಂಡಿಸಿದರು. ಇದರ ಕುರಿತು ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ನಿಯೋಗದಲ್ಲಿ ದೊರೆಸ್ವಾಮಿಯವರೊಂದಿಗೆ ನೂರ್ ಶ್ರೀಧರ್, ಕುಮಾರ್ ಸಮತಳ, ಡಿ.ಎಚ್. ಪೂಜಾರ್, ಮರಿಯಪ್ಪ, ಸಿರಿಮನೆ ನಾಗರಾಜ್, ಪದ್ಮಾ ಕೆ ರಾಜ್, ತಾಯಮ್ಮ, ಸುಬ್ಬಮ್ಮ, ಕಂದೇಗಾಲ ಶ್ರೀನಿವಾಸ್, ಬಸವರಾಜ್, ಮೊಣ್ಣಪ್ಪ, ಮಂಜುನಾಥ್, ಮಾರೆಪ್ಪ, ವಸಂತರಾಜ ಕಹಳೆ ಮತ್ತಿತರ ಕೇಂದ್ರ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...