Homeಮುಖಪುಟಭೋಪಾಲ್‌| ಪುರಸಭೆಯ ಕಸಾಯಿಖಾನೆಯಲ್ಲಿ ಗೋಮಾಂಸ ಪತ್ತೆ; ಕಾಂಗ್ರೆಸ್‌-ಬಿಜೆಪಿ ಪ್ರತಿಭಟನೆ

ಭೋಪಾಲ್‌| ಪುರಸಭೆಯ ಕಸಾಯಿಖಾನೆಯಲ್ಲಿ ಗೋಮಾಂಸ ಪತ್ತೆ; ಕಾಂಗ್ರೆಸ್‌-ಬಿಜೆಪಿ ಪ್ರತಿಭಟನೆ

- Advertisement -
- Advertisement -

ಪುರಸಭೆಯ ಕಸಾಯಿಖಾನೆಯಲ್ಲಿ ಗೋಹತ್ಯೆ ನಡೆದಿದೆ ಎಂಬುದನ್ನು ಅಧಿಕಾರಿಗಳು ಮತ್ತೆಹಚ್ಚಿದ ನಂತರ ದೊಡ್ಡ ವಿವಾದ ಭುಗಿಲೆದ್ದಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಹಿಂದೂ ಬಲಪಂಥೀಯ ಸಂಘಟನೆಗಳು ಮತ್ತು ವಿರೋಧ ಪಕ್ಷದ ಕಾಂಗ್ರೆಸ್ ಕಾರ್ಯಕರ್ತರಿಂದ ವ್ಯಾಪಕ ಪ್ರತಿಭಟನೆ ನಡೆಸಿವೆ.

ಡಿಸೆಂಬರ್ 17, 2025 ರಂದು, ಸಂಸ್ಕೃತಿ ಬಚಾವೊ ಮಂಚ್ ಮತ್ತು ಹಿಂದೂ ಉತ್ಸವ ಸಮಿತಿ ಸೇರಿದಂತೆ ಕೇಸರಿ ಸಂಘಟನೆಗಳ ಕಾರ್ಯಕರ್ತರು ಜಹಾಂಗೀರಾಬಾದ್‌ನ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯ ಬಳಿ 25 ಟನ್‌ಗಳಿಗೂ ಹೆಚ್ಚು ಮಾಂಸವನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ತಡೆದಿದ್ದಾರೆ. ಆರಂಭದಲ್ಲಿ, ಭೋಪಾಲ್ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ವೈದ್ಯ ಬೇನಿ ಪ್ರಸಾದ್ ಗೌರ್ ಈ ಮಾಂಸವನ್ನು ಎಮ್ಮೆ ಎಂದು ಪ್ರಮಾಣೀಕರಿಸಿದರು. ಆದರೆ, ನಂತರ ಮಥುರಾದ ಪಶುವೈದ್ಯಕೀಯ ಕಾಲೇಜು ಪ್ರಯೋಗಾಲಯದಲ್ಲಿ ನಡೆದ ವಿಧಿವಿಜ್ಞಾನ ಪರೀಕ್ಷೆಯು ಇದು ಹಸು ಅಥವಾ ಸಂತತಿಯ ಮಾಂಸ ಎಂದು ದೃಢಪಡಿಸಿತು. ಮಧ್ಯಪ್ರದೇಶದಲ್ಲಿ ಗೋಹತ್ಯೆಯನ್ನು ನಿಷೇಧಿಸಲಾಗಿದ್ದು, ಕಠಿಣ ದಂಡವನ್ನು ವಿಧಿಸಲಾಗುತ್ತದೆ.

ಮಾಂಸವು ಜಿನ್ಸಿಯಲ್ಲಿರುವ ಬಿಎಂಸಿ ನಿರ್ವಹಿಸುವ ಕಸಾಯಿಖಾನೆಯಿಂದ ತರಲಾಗಿದೆ ಎಂದು ಪೊಲೀಸ್ ತನಿಖೆಯಿಂದ ಬಹಿರಂಗವಾಗಿದೆ. ಇಲ್ಲಿ ಎಮ್ಮೆಗಳನ್ನು ಮಾತ್ರ ಕತ್ತರಿಸುವ ಅನುಮತಿ ಇದೆ. ಮಾಂಸ ವಿವಾದದ ಬಳಿಕ, ಬಿಎಂಸಿಯು ಜನವರಿ 9 ರಂದು ಕಸಾಯಿಖಾನೆಯನ್ನು ಮುಚ್ಚಿತು.

ಮಂಗಳವಾರ, ಮಧ್ಯಪ್ರದೇಶ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಕೈಲಾಶ್ ವಿಜಯವರ್ಗಿಯ ಅವರು ಡಾ. ಬೇಣಿ ಪ್ರಸಾದ್ ಗೌರ್ ಅವರನ್ನು ತಕ್ಷಣ ಅಮಾನತುಗೊಳಿಸುವಂತೆ ಆದೇಶಿಸಿದರು. ನಾಗರಿಕ ಸಂಸ್ಥೆಯಿಂದ ಆಳವಾದ ತನಿಖೆಗೆ ಆದೇಶಿಸಿದರು. ಪುರಸಭೆಯ ಸಿಬ್ಬಂದಿಯ ಸಂಭಾವ್ಯ ಪಿತೂರಿಯನ್ನು ಪರಿಶೀಲಿಸುವುದು ಸೇರಿದಂತೆ ಪೊಲೀಸ್ ತನಿಖೆಗಳು ನಡೆಯುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಮೊದಲೇ ಬಂಧಿಸಲಾಗಿತ್ತು.

ಈ ಪ್ರಕರಣವು ಭೋಪಾಲ್‌ನಾದ್ಯಂತ ಭಾರಿ ಪ್ರತಿಭಟನೆಗೆ ಕಾರಣವಾಗಿದೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಗೋಹತ್ಯೆ ಮತ್ತು ಅಕ್ರಮ ಮಾಂಸ ಸಾಗಣೆಯಲ್ಲಿ ತೊಡಗಿರುವವರನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿ ಬಜರಂಗ ದಳ, ಕರ್ಣಿ ಸೇನಾ ಮತ್ತು ಇತರ ಕೇಸರಿ ಗುಂಪುಗಳ ಕಾರ್ಯಕರ್ತರು ಸೋಮವಾರ ಮತ್ತು ಮಂಗಳವಾರ ಪ್ರತಿಭಟನೆ ನಡೆಸಿದರು. ಡಿಸೆಂಬರ್‌ನಿಂದ ಪದೇ ಪದೇ ಎಚ್ಚರಿಕೆಗಳನ್ನು ನಿರ್ಲಕ್ಷಿಸುತ್ತಿರುವ ಬಿಎಂಸಿ ಮತ್ತು ನಗರ ಅಧಿಕಾರಿಗಳನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಸಹ ಬಲಪಂಥೀಯ ಗುಂಪುಗಳ ಪ್ರತಿಭನೆಗೆ ಕೈಜೋಡಿದ್ದಾರೆ.

“ನಮ್ಮ ಭಾವನೆಗಳಿಗೆ ನೋವುಂಟು ಮಾಡಲಾಗಿದೆ; ಇದನ್ನು ಸಹಿಸುವುದಿಲ್ಲ. ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮುಖ್ಯಮಂತ್ರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲಾಗುತ್ತಿದೆ” ಎಂದು ಜೈ ಮಾ ಭವಾನಿ ಹಿಂದೂ ಸಂಘಟನೆಯ ಭಾನು ಹೇಳಿದರು. ಅಕ್ಟೋಬರ್ 2025 ರಲ್ಲಿ ಕಾರ್ಯಾಚರಣೆ ಆರಂಭಿಸಿದ ಕಸಾಯಿಖಾನೆಯನ್ನು ಕೆಡವಲು ಮತ್ತು ಪ್ರಮುಖ ಆರೋಪಿ ಅಸ್ಲಾಂ ‘ಚಮ್ದಾ’ ಖುರೇಷಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ.

ಈ ವಿವಾದವು ಬಿಎಂಸಿಯಲ್ಲಿಯೂ ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಕಾರ್ಪೊರೇಟರ್‌ಗಳು ಸಹ ಆಕ್ಷೇಪಿಸಿದ್ದಾರೆ. ವಿರೋಧ ಪಕ್ಷದ ನಾಯಕ ಎಸ್. ಝಾಕಿ, “ನಾವು ಡಿಸೆಂಬರ್‌ನಿಂದ ಈ ವಿಷಯವನ್ನು ಎಲ್ಲರ ಗಮನಕ್ಕೆ ತರಲು ಪ್ರಯತ್ನಿಸುತ್ತಿದ್ದೇವೆ, ಆದರೆ ಅವರು ಕಿವುಡಾಗಿದೆ. ಈಗಲೂ ಯಾವುದೇ ಕ್ರಮ ಕೈಗೊಳ್ಳದಿದ್ದರೆ, ನಾವು ಬಲವಾದ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ” ಎಂದು ಹೇಳಿದರು.

ಯಾವುದೇ ಕಠಿಣ ಕ್ರಮ ಕೈಗೊಳ್ಳದಿದ್ದರೆ ರಾಜೀನಾಮೆ ನೀಡುವುದಾಗಿ ಬಿಜೆಪಿ ಕಾರ್ಪೊರೇಟರ್ ದೇವೇಂದ್ರ ಭಾರ್ಗವ ಬೆದರಿಕೆ ಹಾಕಿದರು. “ನಮ್ಮ ನಗರದಲ್ಲಿ ಘಟನೆ ಸಂಭವಿಸಿದ್ದು ಗಮನಕ್ಕೆ ಬಾರದೆ ಇರುವುದು ನಾಚಿಕೆಗೇಡಿನ ಸಂಗತಿ. ನಾನು ನಿಗಮಕ್ಕೆ ಗಡುವು ನೀಡಿದ್ದೇನೆ. ಯಾವುದೇ ಕ್ರಮ ಕೈಗೊಳ್ಳದಿದ್ದರೆ, ನಾನು ರಾಜೀನಾಮೆ ನೀಡುತ್ತೇನೆ” ಎಂದು ಹೇಳಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಬಿಎಂಸಿ ಅಧ್ಯಕ್ಷ ಕಿಶನ್ ಸೂರ್ಯವಂಶಿ, ಮೇಯರ್ ಮಾಲ್ತಿ ರೈ ಮತ್ತು ಸ್ಥಳೀಯ ಶಾಸಕ ಮತ್ತು ಕ್ಯಾಬಿನೆಟ್ ಸಚಿವ ವಿಶ್ವಾಸ್ ಸಾರಂಗ್ ಸಾರ್ವಜನಿಕರಿಗೆ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. “ಗೋಹತ್ಯೆ ಅಥವಾ ಗೋಮಾಂಸ ವ್ಯಾಪಾರಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಯಾರನ್ನೂ ಬಿಡಲಾಗುವುದಿಲ್ಲ. ವ್ಯಾಪಾರಿಯಾಗಲಿ ಅಥವಾ ಅಧಿಕಾರಿಯಾಗಲಿ, ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಸ್ಪಷ್ಟ ಮತ್ತು ದೃಢವಾದ ಸೂಚನೆಗಳನ್ನು ನೀಡಿದ್ದಾರೆ” ಎಂದು ಅವರು ಹೇಳಿದರು.

ಈ ಮಧ್ಯೆ, ಕಸಾಯಿಖಾನೆಯಿಂದ ಕೆಲವು ಮಾಂಸವನ್ನು ಮಹಾರಾಷ್ಟ್ರ ಮತ್ತು ಚೆನ್ನೈ ಮೂಲಕ ಯುಎಇ ಸೇರಿದಂತೆ ಗಲ್ಫ್ ರಾಷ್ಟ್ರಗಳಿಗೆ ರಫ್ತು ಮಾಡಿರಬಹುದು ಎಂದು ದೃಢೀಕರಿಸದ ವರದಿಗಳು ಸೂಚಿಸುತ್ತವೆ. ನಗರದಾದ್ಯಂತ ಪ್ರತಿಭಟನೆ ಮತ್ತು ಸಾರ್ವಜನಿಕ ಆಕ್ರೋಶ ಮುಂದುವರಿದಂತೆ ಈ ಆರೋಪಗಳ ಕುರಿತು ತನಿಖೆ ನಡೆಯುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...