Homeಮುಖಪುಟಭೋಪಾಲ್‌| ಪುರಸಭೆಯ ಕಸಾಯಿಖಾನೆಯಲ್ಲಿ ಗೋಮಾಂಸ ಪತ್ತೆ; ಕಾಂಗ್ರೆಸ್‌-ಬಿಜೆಪಿ ಪ್ರತಿಭಟನೆ

ಭೋಪಾಲ್‌| ಪುರಸಭೆಯ ಕಸಾಯಿಖಾನೆಯಲ್ಲಿ ಗೋಮಾಂಸ ಪತ್ತೆ; ಕಾಂಗ್ರೆಸ್‌-ಬಿಜೆಪಿ ಪ್ರತಿಭಟನೆ

- Advertisement -
- Advertisement -

ಪುರಸಭೆಯ ಕಸಾಯಿಖಾನೆಯಲ್ಲಿ ಗೋಹತ್ಯೆ ನಡೆದಿದೆ ಎಂಬುದನ್ನು ಅಧಿಕಾರಿಗಳು ಮತ್ತೆಹಚ್ಚಿದ ನಂತರ ದೊಡ್ಡ ವಿವಾದ ಭುಗಿಲೆದ್ದಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಹಿಂದೂ ಬಲಪಂಥೀಯ ಸಂಘಟನೆಗಳು ಮತ್ತು ವಿರೋಧ ಪಕ್ಷದ ಕಾಂಗ್ರೆಸ್ ಕಾರ್ಯಕರ್ತರಿಂದ ವ್ಯಾಪಕ ಪ್ರತಿಭಟನೆ ನಡೆಸಿವೆ.

ಡಿಸೆಂಬರ್ 17, 2025 ರಂದು, ಸಂಸ್ಕೃತಿ ಬಚಾವೊ ಮಂಚ್ ಮತ್ತು ಹಿಂದೂ ಉತ್ಸವ ಸಮಿತಿ ಸೇರಿದಂತೆ ಕೇಸರಿ ಸಂಘಟನೆಗಳ ಕಾರ್ಯಕರ್ತರು ಜಹಾಂಗೀರಾಬಾದ್‌ನ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯ ಬಳಿ 25 ಟನ್‌ಗಳಿಗೂ ಹೆಚ್ಚು ಮಾಂಸವನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ತಡೆದಿದ್ದಾರೆ. ಆರಂಭದಲ್ಲಿ, ಭೋಪಾಲ್ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ವೈದ್ಯ ಬೇನಿ ಪ್ರಸಾದ್ ಗೌರ್ ಈ ಮಾಂಸವನ್ನು ಎಮ್ಮೆ ಎಂದು ಪ್ರಮಾಣೀಕರಿಸಿದರು. ಆದರೆ, ನಂತರ ಮಥುರಾದ ಪಶುವೈದ್ಯಕೀಯ ಕಾಲೇಜು ಪ್ರಯೋಗಾಲಯದಲ್ಲಿ ನಡೆದ ವಿಧಿವಿಜ್ಞಾನ ಪರೀಕ್ಷೆಯು ಇದು ಹಸು ಅಥವಾ ಸಂತತಿಯ ಮಾಂಸ ಎಂದು ದೃಢಪಡಿಸಿತು. ಮಧ್ಯಪ್ರದೇಶದಲ್ಲಿ ಗೋಹತ್ಯೆಯನ್ನು ನಿಷೇಧಿಸಲಾಗಿದ್ದು, ಕಠಿಣ ದಂಡವನ್ನು ವಿಧಿಸಲಾಗುತ್ತದೆ.

ಮಾಂಸವು ಜಿನ್ಸಿಯಲ್ಲಿರುವ ಬಿಎಂಸಿ ನಿರ್ವಹಿಸುವ ಕಸಾಯಿಖಾನೆಯಿಂದ ತರಲಾಗಿದೆ ಎಂದು ಪೊಲೀಸ್ ತನಿಖೆಯಿಂದ ಬಹಿರಂಗವಾಗಿದೆ. ಇಲ್ಲಿ ಎಮ್ಮೆಗಳನ್ನು ಮಾತ್ರ ಕತ್ತರಿಸುವ ಅನುಮತಿ ಇದೆ. ಮಾಂಸ ವಿವಾದದ ಬಳಿಕ, ಬಿಎಂಸಿಯು ಜನವರಿ 9 ರಂದು ಕಸಾಯಿಖಾನೆಯನ್ನು ಮುಚ್ಚಿತು.

ಮಂಗಳವಾರ, ಮಧ್ಯಪ್ರದೇಶ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಕೈಲಾಶ್ ವಿಜಯವರ್ಗಿಯ ಅವರು ಡಾ. ಬೇಣಿ ಪ್ರಸಾದ್ ಗೌರ್ ಅವರನ್ನು ತಕ್ಷಣ ಅಮಾನತುಗೊಳಿಸುವಂತೆ ಆದೇಶಿಸಿದರು. ನಾಗರಿಕ ಸಂಸ್ಥೆಯಿಂದ ಆಳವಾದ ತನಿಖೆಗೆ ಆದೇಶಿಸಿದರು. ಪುರಸಭೆಯ ಸಿಬ್ಬಂದಿಯ ಸಂಭಾವ್ಯ ಪಿತೂರಿಯನ್ನು ಪರಿಶೀಲಿಸುವುದು ಸೇರಿದಂತೆ ಪೊಲೀಸ್ ತನಿಖೆಗಳು ನಡೆಯುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಮೊದಲೇ ಬಂಧಿಸಲಾಗಿತ್ತು.

ಈ ಪ್ರಕರಣವು ಭೋಪಾಲ್‌ನಾದ್ಯಂತ ಭಾರಿ ಪ್ರತಿಭಟನೆಗೆ ಕಾರಣವಾಗಿದೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಗೋಹತ್ಯೆ ಮತ್ತು ಅಕ್ರಮ ಮಾಂಸ ಸಾಗಣೆಯಲ್ಲಿ ತೊಡಗಿರುವವರನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿ ಬಜರಂಗ ದಳ, ಕರ್ಣಿ ಸೇನಾ ಮತ್ತು ಇತರ ಕೇಸರಿ ಗುಂಪುಗಳ ಕಾರ್ಯಕರ್ತರು ಸೋಮವಾರ ಮತ್ತು ಮಂಗಳವಾರ ಪ್ರತಿಭಟನೆ ನಡೆಸಿದರು. ಡಿಸೆಂಬರ್‌ನಿಂದ ಪದೇ ಪದೇ ಎಚ್ಚರಿಕೆಗಳನ್ನು ನಿರ್ಲಕ್ಷಿಸುತ್ತಿರುವ ಬಿಎಂಸಿ ಮತ್ತು ನಗರ ಅಧಿಕಾರಿಗಳನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಸಹ ಬಲಪಂಥೀಯ ಗುಂಪುಗಳ ಪ್ರತಿಭನೆಗೆ ಕೈಜೋಡಿದ್ದಾರೆ.

“ನಮ್ಮ ಭಾವನೆಗಳಿಗೆ ನೋವುಂಟು ಮಾಡಲಾಗಿದೆ; ಇದನ್ನು ಸಹಿಸುವುದಿಲ್ಲ. ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮುಖ್ಯಮಂತ್ರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲಾಗುತ್ತಿದೆ” ಎಂದು ಜೈ ಮಾ ಭವಾನಿ ಹಿಂದೂ ಸಂಘಟನೆಯ ಭಾನು ಹೇಳಿದರು. ಅಕ್ಟೋಬರ್ 2025 ರಲ್ಲಿ ಕಾರ್ಯಾಚರಣೆ ಆರಂಭಿಸಿದ ಕಸಾಯಿಖಾನೆಯನ್ನು ಕೆಡವಲು ಮತ್ತು ಪ್ರಮುಖ ಆರೋಪಿ ಅಸ್ಲಾಂ ‘ಚಮ್ದಾ’ ಖುರೇಷಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ.

ಈ ವಿವಾದವು ಬಿಎಂಸಿಯಲ್ಲಿಯೂ ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಕಾರ್ಪೊರೇಟರ್‌ಗಳು ಸಹ ಆಕ್ಷೇಪಿಸಿದ್ದಾರೆ. ವಿರೋಧ ಪಕ್ಷದ ನಾಯಕ ಎಸ್. ಝಾಕಿ, “ನಾವು ಡಿಸೆಂಬರ್‌ನಿಂದ ಈ ವಿಷಯವನ್ನು ಎಲ್ಲರ ಗಮನಕ್ಕೆ ತರಲು ಪ್ರಯತ್ನಿಸುತ್ತಿದ್ದೇವೆ, ಆದರೆ ಅವರು ಕಿವುಡಾಗಿದೆ. ಈಗಲೂ ಯಾವುದೇ ಕ್ರಮ ಕೈಗೊಳ್ಳದಿದ್ದರೆ, ನಾವು ಬಲವಾದ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ” ಎಂದು ಹೇಳಿದರು.

ಯಾವುದೇ ಕಠಿಣ ಕ್ರಮ ಕೈಗೊಳ್ಳದಿದ್ದರೆ ರಾಜೀನಾಮೆ ನೀಡುವುದಾಗಿ ಬಿಜೆಪಿ ಕಾರ್ಪೊರೇಟರ್ ದೇವೇಂದ್ರ ಭಾರ್ಗವ ಬೆದರಿಕೆ ಹಾಕಿದರು. “ನಮ್ಮ ನಗರದಲ್ಲಿ ಘಟನೆ ಸಂಭವಿಸಿದ್ದು ಗಮನಕ್ಕೆ ಬಾರದೆ ಇರುವುದು ನಾಚಿಕೆಗೇಡಿನ ಸಂಗತಿ. ನಾನು ನಿಗಮಕ್ಕೆ ಗಡುವು ನೀಡಿದ್ದೇನೆ. ಯಾವುದೇ ಕ್ರಮ ಕೈಗೊಳ್ಳದಿದ್ದರೆ, ನಾನು ರಾಜೀನಾಮೆ ನೀಡುತ್ತೇನೆ” ಎಂದು ಹೇಳಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಬಿಎಂಸಿ ಅಧ್ಯಕ್ಷ ಕಿಶನ್ ಸೂರ್ಯವಂಶಿ, ಮೇಯರ್ ಮಾಲ್ತಿ ರೈ ಮತ್ತು ಸ್ಥಳೀಯ ಶಾಸಕ ಮತ್ತು ಕ್ಯಾಬಿನೆಟ್ ಸಚಿವ ವಿಶ್ವಾಸ್ ಸಾರಂಗ್ ಸಾರ್ವಜನಿಕರಿಗೆ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. “ಗೋಹತ್ಯೆ ಅಥವಾ ಗೋಮಾಂಸ ವ್ಯಾಪಾರಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಯಾರನ್ನೂ ಬಿಡಲಾಗುವುದಿಲ್ಲ. ವ್ಯಾಪಾರಿಯಾಗಲಿ ಅಥವಾ ಅಧಿಕಾರಿಯಾಗಲಿ, ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಸ್ಪಷ್ಟ ಮತ್ತು ದೃಢವಾದ ಸೂಚನೆಗಳನ್ನು ನೀಡಿದ್ದಾರೆ” ಎಂದು ಅವರು ಹೇಳಿದರು.

ಈ ಮಧ್ಯೆ, ಕಸಾಯಿಖಾನೆಯಿಂದ ಕೆಲವು ಮಾಂಸವನ್ನು ಮಹಾರಾಷ್ಟ್ರ ಮತ್ತು ಚೆನ್ನೈ ಮೂಲಕ ಯುಎಇ ಸೇರಿದಂತೆ ಗಲ್ಫ್ ರಾಷ್ಟ್ರಗಳಿಗೆ ರಫ್ತು ಮಾಡಿರಬಹುದು ಎಂದು ದೃಢೀಕರಿಸದ ವರದಿಗಳು ಸೂಚಿಸುತ್ತವೆ. ನಗರದಾದ್ಯಂತ ಪ್ರತಿಭಟನೆ ಮತ್ತು ಸಾರ್ವಜನಿಕ ಆಕ್ರೋಶ ಮುಂದುವರಿದಂತೆ ಈ ಆರೋಪಗಳ ಕುರಿತು ತನಿಖೆ ನಡೆಯುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಕಲಿ ನ್ಯಾಯಾಧೀಶನನ್ನು ಬಂಧಿಸಿದ ದೆಹಲಿ ಪೊಲೀಸರು; ಬಂದೂಕು ಹೊಂದಿದ್ದ ವ್ಯಕ್ತಿಗಳು

ನಕಲಿ ದಾಖಲೆಗಳನ್ನು ಬಳಸಿ ನ್ಯಾಯಾಂಗ ಅಧಿಕಾರಿಯಂತೆ ನಟಿಸುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ನವದೆಹಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಅವರ ಬಳಿಯಿಂದ ಬಂದೂಕು ಮತ್ತು ಜೀವಂತ ಮದ್ದುಗುಂಡುಗಳೊಂದಿಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಉತ್ತರ...

ಪಶ್ಚಿಮ ಬಂಗಾಳ| ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಐ-ಪ್ಯಾಕ್ ನಿರ್ದೇಶಕ ವಿನೇಶ್ ಚಾಂಡೆಲ್ ಬಂಧನ

ಪಶ್ಚಿಮ ಬಂಗಾಳದಲ್ಲಿ ನಡೆದಿದೆ ಎನ್ನಲಾದ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ (ಏಪ್ರಿಲ್ 13) ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿಯ ಸಹ-ಸಂಸ್ಥಾಪಕ ಮತ್ತು ನಿರ್ದೇಶಕ...

ಇಸ್ಲಾಮಾಬಾದ್ ಸಂದಾನ ವಿಫಲ; ಇರಾನ್ ಜೊತೆ ಹೊಸ ಮಾತುಕತೆ ನಡೆಸಲು ಅಮೆರಿಕ ಚಿಂತನೆ

ಪ್ರಸ್ತುತ ಅಮೆರಿಕ ಮತ್ತು ಇರಾನ್‌ ನಡುವಿನ ಕದನ ವಿರಾಮವು ತನ್ನ ಗಡುವನ್ನು ಸಮೀಪಿಸುತ್ತಿದ್ದಂತೆ ಇರಾನ್ ಅಧಿಕಾರಿಗಳೊಂದಿಗೆ ಮತ್ತೊಂದು ಮುಖಾಮುಖಿ ಸಭೆ ನಡೆಸುವ ಆಯ್ಕೆಯನ್ನು ಅಮೆರಿಕ ಪರಿಗಣಿಸುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ. ಸಭೆಯ...

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...