Homeಕರ್ನಾಟಕಭೋವಿ ನಿಗಮ ಹಗರಣ: ತನಿಖಾಧಿಕಾರಿಯ ಕಿರುಕುಳಕ್ಕೆ ಬೇಸತ್ತು ಮಹಿಳಾ ಆರೋಪಿ ಆತ್ಮಹತ್ಯೆಗೆ ಶರಣು?

ಭೋವಿ ನಿಗಮ ಹಗರಣ: ತನಿಖಾಧಿಕಾರಿಯ ಕಿರುಕುಳಕ್ಕೆ ಬೇಸತ್ತು ಮಹಿಳಾ ಆರೋಪಿ ಆತ್ಮಹತ್ಯೆಗೆ ಶರಣು?

- Advertisement -
- Advertisement -

ಭೋವಿ ನಿಗಮ ಹಗರಣದಲ್ಲಿ ಆರೋಪಿಯಾಗಿದ್ದ 33 ವರ್ಷದ ಮಹಿಳೆಯೊಬ್ಬರು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ಮಹಿಳೆ ಸಿಐಡಿ ತನಿಖೆ ನಡೆಸುತ್ತಿರುವ ಪ್ರಕರಣದಲ್ಲಿ ಆರೋಪಿಯಾಗಿದ್ದರು. ಆಕೆಯ ಸೂಸೈಡ್ ನೋಟ್‌ನಲ್ಲಿ, ತನಿಖಾಧಿಕಾರಿಯಿಂದ ಕಿರುಕುಳವನ್ನು ಅವರು ಆರೋಪಿಸಿದ್ದಾರೆ.

ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದರು.

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಇಲಾಖೆ (ಸಿಐಡಿ) ಮಹಿಳೆಯನ್ನು ವಿಚಾರಣೆ ನಡೆಸಿದ್ದರು. ಅವರು ಶುಕ್ರವಾರ ಇಲ್ಲಿನ ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದಾರೆ. ಅವರು ಡೆತ್ ನೋಟ್ ಬರೆದಿದ್ದಾರೆ ಎನ್ನಲಾಗಿದೆ ಎಂದು ವರದಿಯಾಗಿದೆ. ಅದರಲ್ಲಿ ಅವರು ತಮ್ಮ ಸಾವಿಗೆ ಸಿಐಡಿಯ ತನಿಖಾಧಿಕಾರಿಗಳನ್ನು ದೂಷಿಸಿದ್ದಾರೆ.

ಸಾವನ್ನು ದೃಢಪಡಿಸಿರುವ ಬೆಂಗಳೂರು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಲೋಕೇಶ್ ಬಿ.ಜಗಲಾಸರ್, ಡಿವೈ ಕನಕಲಕ್ಷ್ಮಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೃತರನ್ನು ಜೀವಾ ಎಂದು ಗುರುತಿಸಲಾಗಿದೆ. ಉದ್ಯೋಗ ಯೋಜನೆಯಡಿ ರಾಜ್ಯ ಸರ್ಕಾರ ನಿಗಮಕ್ಕೆ ನೀಡಿದ್ದ ಒಟ್ಟು ₹97 ಕೋಟಿಯನ್ನು 500 ಫಲಾನುಭವಿಗಳ ಹೆಸರಿನಲ್ಲಿ ದುರ್ಬಳಕೆ ಮಾಡಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಈ ಹಣದ ಒಂದು ಭಾಗವನ್ನು ಮೃತ ಮಹಿಳೆಯ ಹೆಸರಿನ ಖಾತೆಗಳಿಗೆ ವರ್ಗಾಯಿಸಲಾಗಿದೆ. ಅಲ್ಲಿಂದ ಇತರ ಆರೋಪಿಗಳಿಗೆ ವಿತರಿಸಲಾಗಿದೆ ಎಂದು ಸಿಐಡಿ ಅಧಿಕಾರಿಗಳು ಹೇಳುತ್ತಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಿಐಡಿ ಬಿಜೆಪಿ ಎಂಎಲ್‌ಸಿ ಸುನೀಲ್ ವಲ್ಯಾಪುರೆ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು.

ಇದನ್ನೂ ಓದಿ; ಗ್ಯಾರಂಟಿ, ಅಭಿವೃದ್ದಿಯ ಗೆಲುವು : ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...