Homeದಲಿತ್ ಫೈಲ್ಸ್ಸಾಮಾನ್ಯ ವಿಭಾಗದಲ್ಲಿ 2ನೇ ರ‍್ಯಾಂಕ್ ಪಡೆದಿದ್ದರೂ ಪ್ರವೇಶ ನಿರಾಕರಿಸಿದ ಬಿಎಚ್‌ಯು; ದಲಿತ ವಿದ್ಯಾರ್ಥಿಯಿಂದ ಧರಣಿ

ಸಾಮಾನ್ಯ ವಿಭಾಗದಲ್ಲಿ 2ನೇ ರ‍್ಯಾಂಕ್ ಪಡೆದಿದ್ದರೂ ಪ್ರವೇಶ ನಿರಾಕರಿಸಿದ ಬಿಎಚ್‌ಯು; ದಲಿತ ವಿದ್ಯಾರ್ಥಿಯಿಂದ ಧರಣಿ

- Advertisement -
- Advertisement -

ಸಾಮಾನ್ಯ ವಿಭಾಗದಲ್ಲಿ ಪ್ರವೇಶ ಪರೀಕ್ಷೆಯಲ್ಲಿ ಎರಡನೇ ಸ್ಥಾನ ಪಡೆದಿದ್ದರೂ ಪಿಎಚ್‌ಡಿ ಮಾಡಲು ಪ್ರವೇಶ ನಿರಾಕರಿಸಿದ್ದಕ್ಕಾಗಿ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ (ಬಿಎಚ್‌ಯು) ದಲಿತ ವಿದ್ಯಾರ್ಥಿಯೊಬ್ಬರು ಪ್ರತಿಭಟನೆ ನಡೆಸುತ್ತಿದ್ದಾರೆ.

ಶಿವಂ ಸೋಂಕರ್ ಪ್ರವೇಶ ಪಡೆಯಲು ಮಾಡಿದ ಎಲ್ಲ ಪ್ರಯತ್ನಗಳು ವಿಫಲವಾದಾಗ ಉಪಕುಲಪತಿಗಳ ನಿವಾಸದ ಹೊರಗೆ ಧರಣಿ ಕುಳಿತಿದ್ದಾರೆ. ವಿದ್ಯಾರ್ಥಿಗಳು ಮತ್ತು ರಾಜಕಾರಣಿಗಳು ಸಹ ಶಿವಂ ಬೆಂಬಲ ಸೂಚಿಸಿದ್ದಾರೆ.

ಮಾಳವೀಯ ಸೆಂಟರ್ ಫಾರ್ ಪೀಸ್ ರಿಸರ್ಚ್‌ನಲ್ಲಿ ಪಿಎಚ್‌ಡಿ ಪ್ರವೇಶಕ್ಕಾಗಿ ಸೋಂಕರ್ ಪರೀಕ್ಷೆ ಬರೆದಿದ್ದರು. ಎರಡನೇ ರ‍್ಯಾಂಕ್ ಪಡೆದಿದ್ದರೂ ಅವರಿಗೆ ಪ್ರವೇಶ ಸಿಗಲಿಲ್ಲ. ವಿಭಾಗದಲ್ಲಿ ಒಟ್ಟು ಏಳು ಸೀಟುಗಳಿವೆ. ಆದರೆ, ಕೇವಲ ನಾಲ್ಕು ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗಿದೆ.

ಸೋಂಕರ್ ಅವರನ್ನು ಬೆಂಬಲಿಸಲು ಕ್ಯಾಂಪಸ್ ತಲುಪಿದ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಜಯ್ ರೈ, ವಿಶ್ವವಿದ್ಯಾಲಯವು ಶಿಕ್ಷಣದ ದೇವಾಲಯವಾಗಿ ಸ್ಥಾಪಿಸಲ್ಪಟ್ಟಿದ್ದರೂ, ಅದು ಈಗ ತಾರತಮ್ಯ ಮತ್ತು ಅನ್ಯಾಯದ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ಹೇಳಿದರು. ಪ್ರಧಾನಿಯವರ ಕ್ಷೇತ್ರದಲ್ಲಿ ಈ ರೀತಿ ನಡೆಯುತ್ತಿರುವುದು ‘ನಾಚಿಕೆಗೇಡಿನ’ ಸಂಗತಿ ಎಂದರು.

ಮೀಸಲಾತಿ ಅಥವಾ ಮೀಸಲಾತಿ ಇಲ್ಲದ ವರ್ಗಕ್ಕೆ ಸೇರುವ ಸೀಟುಗಳ ಸ್ಥಿತಿಯಲ್ಲಿ ಯಾವುದೇ ಬದಲಾವಣೆಯನ್ನು ಕೌನ್ಸೆಲಿಂಗ್ ಅವಧಿಗೆ ಮಾತ್ರ ಮಾಡಬಹುದು ಎಂದು ವಿಶ್ವವಿದ್ಯಾಲಯದ ವಿವರಣೆಯಾಗಿದೆ. ಮೀಸಲಾತಿ ಸೀಟುಗಳಿಗೆ ಸೂಕ್ತ ಅರ್ಜಿಗಳು ಬರದ ಕಾರಣ ಖಾಲಿ ಉಳಿದಿವೆ. ಸೋಂಕರ್ ಸಾಮಾನ್ಯ ವಿಭಾಗದಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದರಿಂದ ಅವರನ್ನು ಸಾಮಾನ್ಯ ವರ್ಗದ ಸ್ಥಾನಕ್ಕೆ ಸೇರಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ವಿವಿ ಸಮರ್ಥಿಸಿಕೊಂಡಿದೆ.

ಸಮಾಜವಾದಿ ಪಕ್ಷದ ಎಂಎಲ್‌ಸಿ ಅಶುತೋಷ್ ಸಿನ್ಹಾ ಅವರು ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದು, ಸೋಂಕರ್ ಅವರ ಪರಿಸ್ಥಿತಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಹಾದಿಯಲ್ಲಿ ಅಡೆತಡೆಗಳನ್ನು ಸೃಷ್ಟಿಸುವುದಕ್ಕೆ ಉದಾಹರಣೆಯಾಗಿದೆ ಎಂದು ಆರೋಪಿಸಿದ್ದಾರೆ.

ಭೀಮ್ ಸೇನೆಯ ಮುಖ್ಯಸ್ಥ ಮತ್ತು ನಗೀನಾ ಸಂಸದ ಚಂದ್ರಶೇಖರ್ ಆಜಾದ್ ಅವರು ಸೋಂಕರ್ ಅವರ ಪ್ರಕರಣದ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಈ ಇಡೀ ಪ್ರಕರಣವು ವಿಶ್ವವಿದ್ಯಾಲಯವು ಅಳವಡಿಸಿಕೊಂಡ ಪ್ರವೇಶ ಪ್ರಕ್ರಿಯೆಗಳ ಪಾರದರ್ಶಕತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ.

ಈ ಮಧ್ಯೆ, ಸೋಂಕರ್ ಅವರ ಸಮಸ್ಯೆ ಪರಿಹರಿಸದಿದ್ದರೆ ಆಂದೋಲನ ಪ್ರಾರಂಭಿಸುವುದಾಗಿ ವಿದ್ಯಾರ್ಥಿ ಸಂಘ ಎಚ್ಚರಿಕೆ ನೀಡಿದೆ. ವಿದ್ಯಾರ್ಥಿಗಳು ಈಗಾಗಲೇ ಕುಲಪತಿಯ ಪ್ರತಿಕೃತಿಯನ್ನು ಸುಟ್ಟು ಅವರ ವಿರುದ್ಧ ಘೋಷಣೆ ಕೂಗಿದ್ದಾರೆ.

ಈ ಮಧ್ಯೆ, ಸೋಂಕರ್, ಬಿಎಚ್‌ಯು ಸಂಸ್ಥಾಪಕ ಮದನ್ ಮೋಹನ್ ಮಾಳವೀಯ, ಭೀಮ್ ರಾವ್ ಅಂಬೇಡ್ಕರ್ ಮತ್ತು ಭಗವಾನ್ ರಾಮನ ಚಿತ್ರಗಳೊಂದಿಗೆ ಧರಣಿ ಕುಳಿತಿದ್ದಾರೆ.

ದಕ್ಷಿಣ ಕನ್ನಡ | ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...