Homeಮುಖಪುಟಐಐಟಿ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಬಿಜೆಪಿ ಐಟಿ ಸೆಲ್‌ನ ಇಬ್ಬರ ಬಂಧನ!

ಐಐಟಿ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಬಿಜೆಪಿ ಐಟಿ ಸೆಲ್‌ನ ಇಬ್ಬರ ಬಂಧನ!

- Advertisement -
- Advertisement -

ಐಐಟಿ ಬಿಎಚ್‌ಯು ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಮೂವರು ಶಂಕಿತರನ್ನು ವಾರಣಾಸಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದು, ಆರೋಪಿಗಳಲ್ಲಿ ಇಬ್ಬರು ಬಿಜೆಪಿ ಐಟಿ ಸೆಲ್‌ನ ಸದಸ್ಯರು ಎನ್ನಲಾಗುತ್ತಿದೆ.

ವಾರಣಾಸಿಯ ಬ್ರಿಜ್ ಎನ್‌ಕ್ಲೇವ್ ಕಾಲೋನಿ ಸುಂದರ್‌ಪುರದ ಕುನಾಲ್ ಪಾಂಡೆ ಮತ್ತು ಜಿವಾಧಿಪುರ ಬಜಾರ್ದಿಹಾದ ಆನಂದ್ ಅಲಿಯಾಸ್ ಅಭಿಷೇಕ್ ಚೌಹಾನ್ ಮತ್ತು ಸಕ್ಷಮ್ ಪಟೇಲ್ ಬಂಧಿತ ವ್ಯಕ್ತಿಗಳು. ಅಪರಾಧ ಕೃತ್ಯಕ್ಕೆ ಬಳಸಿದ್ದ ಮೋಟಾರ್ ಸೈಕಲ್ ಅನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಲ್ಲಿ ಇಬ್ಬರು ಬಿಜೆಪಿ ಐಟಿ ಸೆಲ್‌ಗೆ ಸಂಪರ್ಕ ಹೊಂದಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮ ವರದಿಗಳು ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ತಿಳಿದುಬಂದಿದೆ. ಕುನಾಲ್ ಪಾಂಡೆ ವಾರಣಾಸಿಯ ಬಿಜೆಪಿ ಐಟಿ ಸೆಲ್‌ನಲ್ಲಿ ಮೆಟ್ರೋಪಾಲಿಟನ್ ಸಂಯೋಜಕ ಸ್ಥಾನವನ್ನು ಹೊಂದಿದ್ದರೆ, ಸಕ್ಷಮ್ ಪಟೇಲ್ ಐಟಿ ಸೆಲ್‌ನಲ್ಲಿ ವಾರಣಾಸಿ ಮೆಟ್ರೋಪಾಲಿಟನ್ ಸಹ-ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅಖಿಲೇಶ್ ಖಂಡನೆ:

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಈ ಪ್ರಕರಣದ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ‘ಬಂಧಿತರು ಬಿಜೆಪಿಯ ಹಿರಿಯ ನಾಯಕರ ಆಶ್ರಯದಲ್ಲಿರುವ ಹೊಸ ಬಿಜೆಪಿ ಕಾರ್ಯಕರ್ತರು ಎಂದು ತೋರಿಸಿದ್ದಾರೆ. ಬಂಧಿತರು ಬಿಜೆಪಿ ಕಾರ್ಯಕರ್ತರಾಗಿದ್ದು, ಬಿಜೆಪಿಯ ಉನ್ನತ ನಾಯಕರಿಂದ ವಿನಾಯಿತಿ ಪಡೆದಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

ಆಗಿದ್ದೇನು?

ಐಐಟಿ ಬಿಎಚ್‌ಯುನಲ್ಲಿ ನವೆಂಬರ್ 1ರ ರಾತ್ರಿ ಈ ಭಯಾನಕ ಘಟನೆ ಸಂಭವಿಸಿದ್ದು, ಬೈಕ್‌ನಲ್ಲಿ ಬಂದ ಮೂವರು ಯುವಕರು ಬಂದೂಕು ತೋರಿಸಿ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸುವಂತೆ ಒತ್ತಾಯಿಸಿದರು. ಆಕೆಯ ಮೇಲೆ ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ಎಸಗಲು ಮುಂದಾದ ಅವರು, ಹೇಯ ಕೃತ್ಯವನ್ನು ವಿಡಿಯೋ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಗಣಿತ ಇಂಜಿನಿಯರಿಂಗ್ ವಿಭಾಗದ ಬಿ.ಟೆಕ್ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಮಧ್ಯರಾತ್ರಿ 1:30ರ ಸುಮಾರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಕ್ಯಾಂಪಸ್‌ನ ಗಾಂಧಿ ಸ್ಮೃತಿ ಹಾಸ್ಟೆಲ್ ಬಳಿ ಬಳಿ ತನ್ನ ಸ್ನೇಹಿತೆಗೆ ಎದುರಾಗಿದ್ದಳು. ಆಗ ಬೈಕಿನಲ್ಲಿ ಬಂದ ಮೂವರು ಕಾಮುಕರು ಯುವತಿಯರನ್ನು ಅಡ್ಡಗಟ್ಟಿದ್ದಾರೆ. ಅಂತಿಮವಾಗಿ ಸಂತ್ರಸ್ತೆಯ ಸ್ನೇಹಿತೆಯನ್ನು ಕಳುಹಿಸಿ, ಆಕೆಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಆಕೆಗೆ ಲೈಂಗಿಕ ದೌರ್ಜನ್ಯ ನೀಡಿ, ಬೆದರಿಕೆ ಹಾಕಿದ್ದೂ ಅಲ್ಲದೆ, ಫೋನ್ ಅನ್ನು ಕಸಿದುಕೊಂಡಿದ್ದಾರೆ.

ಘಟನೆ ಬೆಳಕಿಗೆ ಬಂದ ನಂತರ ವಾರಣಾಸಿ ಪೊಲೀಸರು ತೀವ್ರ ತನಿಖೆ ಪ್ರಾರಂಭಿಸಿದ್ದರು. ಐಐಟಿ ಬಿಎಚ್‌ಯು ಕ್ಯಾಂಪಸ್‌ನಲ್ಲಿರುವ 170ಕ್ಕೂ ಹೆಚ್ಚು ಸಿಸಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿದರು. ಸರಿಸುಮಾರು ಎರಡು ತಿಂಗಳ ನಂತರ ನಂತರ, ಸುಸುವಾಹಿ ಪ್ರದೇಶದ ಕುನಾಲ್ ಪಾಂಡೆ ಮತ್ತು ಅವರ ಸ್ನೇಹಿತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ; ಲೈಂಗಿಕ ಕಿರುಕುಳಕ್ಕೆ ಪ್ರತಿರೋಧ; ದಲಿತ ಯುವತಿಯನ್ನು ಬಿಸಿ ಎಣ್ಣೆಗೆ ತಳ್ಳಿದ ದುರುಳರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...