Homeಮುಖಪುಟಐಐಟಿ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಬಿಜೆಪಿ ಐಟಿ ಸೆಲ್‌ನ ಇಬ್ಬರ ಬಂಧನ!

ಐಐಟಿ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಬಿಜೆಪಿ ಐಟಿ ಸೆಲ್‌ನ ಇಬ್ಬರ ಬಂಧನ!

- Advertisement -
- Advertisement -

ಐಐಟಿ ಬಿಎಚ್‌ಯು ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಮೂವರು ಶಂಕಿತರನ್ನು ವಾರಣಾಸಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದು, ಆರೋಪಿಗಳಲ್ಲಿ ಇಬ್ಬರು ಬಿಜೆಪಿ ಐಟಿ ಸೆಲ್‌ನ ಸದಸ್ಯರು ಎನ್ನಲಾಗುತ್ತಿದೆ.

ವಾರಣಾಸಿಯ ಬ್ರಿಜ್ ಎನ್‌ಕ್ಲೇವ್ ಕಾಲೋನಿ ಸುಂದರ್‌ಪುರದ ಕುನಾಲ್ ಪಾಂಡೆ ಮತ್ತು ಜಿವಾಧಿಪುರ ಬಜಾರ್ದಿಹಾದ ಆನಂದ್ ಅಲಿಯಾಸ್ ಅಭಿಷೇಕ್ ಚೌಹಾನ್ ಮತ್ತು ಸಕ್ಷಮ್ ಪಟೇಲ್ ಬಂಧಿತ ವ್ಯಕ್ತಿಗಳು. ಅಪರಾಧ ಕೃತ್ಯಕ್ಕೆ ಬಳಸಿದ್ದ ಮೋಟಾರ್ ಸೈಕಲ್ ಅನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಲ್ಲಿ ಇಬ್ಬರು ಬಿಜೆಪಿ ಐಟಿ ಸೆಲ್‌ಗೆ ಸಂಪರ್ಕ ಹೊಂದಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮ ವರದಿಗಳು ಮತ್ತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ತಿಳಿದುಬಂದಿದೆ. ಕುನಾಲ್ ಪಾಂಡೆ ವಾರಣಾಸಿಯ ಬಿಜೆಪಿ ಐಟಿ ಸೆಲ್‌ನಲ್ಲಿ ಮೆಟ್ರೋಪಾಲಿಟನ್ ಸಂಯೋಜಕ ಸ್ಥಾನವನ್ನು ಹೊಂದಿದ್ದರೆ, ಸಕ್ಷಮ್ ಪಟೇಲ್ ಐಟಿ ಸೆಲ್‌ನಲ್ಲಿ ವಾರಣಾಸಿ ಮೆಟ್ರೋಪಾಲಿಟನ್ ಸಹ-ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅಖಿಲೇಶ್ ಖಂಡನೆ:

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಈ ಪ್ರಕರಣದ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ‘ಬಂಧಿತರು ಬಿಜೆಪಿಯ ಹಿರಿಯ ನಾಯಕರ ಆಶ್ರಯದಲ್ಲಿರುವ ಹೊಸ ಬಿಜೆಪಿ ಕಾರ್ಯಕರ್ತರು ಎಂದು ತೋರಿಸಿದ್ದಾರೆ. ಬಂಧಿತರು ಬಿಜೆಪಿ ಕಾರ್ಯಕರ್ತರಾಗಿದ್ದು, ಬಿಜೆಪಿಯ ಉನ್ನತ ನಾಯಕರಿಂದ ವಿನಾಯಿತಿ ಪಡೆದಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

ಆಗಿದ್ದೇನು?

ಐಐಟಿ ಬಿಎಚ್‌ಯುನಲ್ಲಿ ನವೆಂಬರ್ 1ರ ರಾತ್ರಿ ಈ ಭಯಾನಕ ಘಟನೆ ಸಂಭವಿಸಿದ್ದು, ಬೈಕ್‌ನಲ್ಲಿ ಬಂದ ಮೂವರು ಯುವಕರು ಬಂದೂಕು ತೋರಿಸಿ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸುವಂತೆ ಒತ್ತಾಯಿಸಿದರು. ಆಕೆಯ ಮೇಲೆ ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ಎಸಗಲು ಮುಂದಾದ ಅವರು, ಹೇಯ ಕೃತ್ಯವನ್ನು ವಿಡಿಯೋ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಗಣಿತ ಇಂಜಿನಿಯರಿಂಗ್ ವಿಭಾಗದ ಬಿ.ಟೆಕ್ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಮಧ್ಯರಾತ್ರಿ 1:30ರ ಸುಮಾರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಕ್ಯಾಂಪಸ್‌ನ ಗಾಂಧಿ ಸ್ಮೃತಿ ಹಾಸ್ಟೆಲ್ ಬಳಿ ಬಳಿ ತನ್ನ ಸ್ನೇಹಿತೆಗೆ ಎದುರಾಗಿದ್ದಳು. ಆಗ ಬೈಕಿನಲ್ಲಿ ಬಂದ ಮೂವರು ಕಾಮುಕರು ಯುವತಿಯರನ್ನು ಅಡ್ಡಗಟ್ಟಿದ್ದಾರೆ. ಅಂತಿಮವಾಗಿ ಸಂತ್ರಸ್ತೆಯ ಸ್ನೇಹಿತೆಯನ್ನು ಕಳುಹಿಸಿ, ಆಕೆಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಆಕೆಗೆ ಲೈಂಗಿಕ ದೌರ್ಜನ್ಯ ನೀಡಿ, ಬೆದರಿಕೆ ಹಾಕಿದ್ದೂ ಅಲ್ಲದೆ, ಫೋನ್ ಅನ್ನು ಕಸಿದುಕೊಂಡಿದ್ದಾರೆ.

ಘಟನೆ ಬೆಳಕಿಗೆ ಬಂದ ನಂತರ ವಾರಣಾಸಿ ಪೊಲೀಸರು ತೀವ್ರ ತನಿಖೆ ಪ್ರಾರಂಭಿಸಿದ್ದರು. ಐಐಟಿ ಬಿಎಚ್‌ಯು ಕ್ಯಾಂಪಸ್‌ನಲ್ಲಿರುವ 170ಕ್ಕೂ ಹೆಚ್ಚು ಸಿಸಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿದರು. ಸರಿಸುಮಾರು ಎರಡು ತಿಂಗಳ ನಂತರ ನಂತರ, ಸುಸುವಾಹಿ ಪ್ರದೇಶದ ಕುನಾಲ್ ಪಾಂಡೆ ಮತ್ತು ಅವರ ಸ್ನೇಹಿತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ; ಲೈಂಗಿಕ ಕಿರುಕುಳಕ್ಕೆ ಪ್ರತಿರೋಧ; ದಲಿತ ಯುವತಿಯನ್ನು ಬಿಸಿ ಎಣ್ಣೆಗೆ ತಳ್ಳಿದ ದುರುಳರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...