Homeಮುಖಪುಟಬಲವಂತವಾಗಿ 68 ಹುಡುಗಿಯರ ಒಳವಸ್ತ್ರ ತೆಗೆಸಿ ಅವಮಾನ ಮಾಡಿದ ಪ್ರಾಂಶುಪಾಲೆ: ಗುಜರಾತಿನ ಕಾಲೇಜಿನಲ್ಲೊಂದು ಆಘಾತಕಾರಿ ಘಟನೆ

ಬಲವಂತವಾಗಿ 68 ಹುಡುಗಿಯರ ಒಳವಸ್ತ್ರ ತೆಗೆಸಿ ಅವಮಾನ ಮಾಡಿದ ಪ್ರಾಂಶುಪಾಲೆ: ಗುಜರಾತಿನ ಕಾಲೇಜಿನಲ್ಲೊಂದು ಆಘಾತಕಾರಿ ಘಟನೆ

ಸಂಸ್ಥೆಯ ಪ್ರಾಂಶುಪಾಲರು ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಮತ್ತು ದೂರನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ ಎಂದು ಬಾಲಕಿಯರು ಆರೋಪಿಸಿದ್ದಾಳೆ.

- Advertisement -
- Advertisement -

ಗುಜರಾತ್‌ನ ಭುಜ್‌ನ ಶ್ರೀ ಸಹಜಾನಂದ್ ಬಾಲಕಿಯರ ಸಂಸ್ಥೆಯ (ಎಸ್‌ಎಸ್‌ಜಿಐ) ಕನಿಷ್ಠ 68 ಬಾಲಕಿಯರಿಗೆ ಮುಟ್ಟಾಗಿಲ್ಲ ಎಂದು ಸಾಬೀತುಪಡಿಸಲು ಅವರ ಒಳ ಉಡುಪುಗಳನ್ನು ತೆಗೆಯುವಂತೆ ಒತ್ತಾಯಿಸಿರುವ ಆಘಾತಕಾರಿ ಘಟನೆಯೊಂದು ಜರುಗಿದೆ. ದೇಶವೇ ತಲೆತಗ್ಗಿಸುವಂತಹ ಈ ಬಲವಂತದ ಕ್ರಮ ಕೈಗೊಂಡಿದ್ದಕ್ಕಾಗಿ ಶಿಕ್ಷಣ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಈಗ ಒತ್ತಾಯಿಸುತ್ತಿದ್ದಾರೆ.

ಮುಟ್ಟಾದ ಹೆಣ್ಣು ಮಕ್ಕಳು ಅಡುಗೆ ಮನೆಗೆ, ದೇವರ ಕೋಣೆಗೆ ಬಂದು ಎಲ್ಲರನ್ನು ಮುಟ್ಟುತ್ತಾರೆ ಎಂದು ಹಾಸ್ಟೆಲ್‌‌ನ ವಾರ್ಡನ್‌ ದೂರು ನೀಡಿದ ನಂತರ ಕಾಲೇಜಿನ ಪ್ರಾಂಶುಪಾಲರು 68 ವಿದ್ಯಾರ್ಥಿನಿಯರನ್ನು ಶೌಚಾಲಯಕ್ಕೆ ಕರೆಸಿ ಅವರ ಒಳವಸ್ತ್ರ ತೆಗೆಯುವಂತೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

“ನಾವು ನಮ್ಮ ಸಂಸ್ಥೆಯನ್ನು ಗೌರವಿಸುತ್ತೇವೆ, ಆದರೆ ಅವರು ಮಾಡಿದ್ದು ಸರಿಯಲ್ಲ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಈ ವಿಷಯದ ಬಗ್ಗೆ ಬೆಳಕು ಚೆಲ್ಲುವಂತೆ ನಾವು ಮಾಧ್ಯಮಗಳನ್ನು ಕರೆಯಲು ನಿರ್ಧರಿಸಿದ್ದೇವೆ “ಎಂದು ದೂರುದಾರರೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಈ ಮಧ್ಯೆ ಸಂಸ್ಥೆಯ ಪ್ರಾಂಶುಪಾಲರು ನಮ್ಮನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದು, ದೂರನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ ಎಂದು ಬಾಲಕಿಯೊಬ್ಬರು ಆರೋಪಿಸಿದ್ದಾರೆ.

“ಪ್ರಾಂಶುಪಾಲರು ಮತ್ತು ಇತರರು ನಮ್ಮನ್ನು ಕರೆದು ಭಾವನಾತ್ಮಕವಾಗಿ ಬ್ಲ್ಯಾಕ್ ಮೇಲ್ ಮಾಡಲು ಪ್ರಯತ್ನಿಸಿದ್ದಾರೆ. ಈಗ ಎಲ್ಲವೂ ಸರಿಯಾಗಿದೆ, ನಮಗೆ ಯಾವುದೆ ಸಮಸ್ಯೆಯಿಲ್ಲ ಎಂದು ಲಿಖಿತವಾಗಿ ಹೇಳಿಕೆ ನೀಡುವಂತೆ ಅವರು ಹೇಳಿದ್ದಾರೆ. ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು. ಅಷ್ಟೆ ಅಲ್ಲದೆ ಘಟನೆಯ ಬಗ್ಗೆ ಇದುವರೆಗೂ ಆಡಳಿತ ಮಂಡಳಿ ಕ್ಷಮೆಯಾಚಿಸಿಲ್ಲ” ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ಇದುವರೆಗೂ ಈ ವಿಚಾರದ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಆದರೆ ಈ ಬಗ್ಗೆ ಪರಿಶೀಲನೆ ನಡೆಸಲು ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಎಸ್‌ಎಸ್‌ಜಿಐ ಡೀನ್ ದರ್ಶನಾ ಧೋಲಾಕಿಯಾ ಹೇಳಿದ್ದಾರೆ.

“ಈ ವಿಷಯವು ಹಾಸ್ಟೆಲ್‌ಗೆ ಸಂಬಂಧಿಸಿದ್ದು, ಘಟನೆಗೂ ವಿಶ್ವವಿದ್ಯಾಲಯ ಅಥವಾ ಕಾಲೇಜಿಗೂ ಯಾವುದೇ ಸಂಬಂಧವಿಲ್ಲ. ಹುಡುಗಿಯರ ಅನುಮತಿಯೊಂದಿಗೆ ಎಲ್ಲವೂ ಸಂಭವಿಸಿದೆ. ಯಾರನ್ನೂ ಒತ್ತಾಯಿಸಲಿಲ್ಲ. ಯಾರೂ ಅವರನ್ನು ಮುಟ್ಟಲಿಲ್ಲ. ಈ ಬಗ್ಗೆ ತನಿಖೆ ನಡೆಸಲು ತನಿಖಾ ತಂಡವನ್ನು ರಚಿಸಲಾಗಿದೆ” ಎಂದು ಹೇಳಿದ್ದಾರೆ.

ಈ ವಿಷಯದ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಗುಜರಾತ್‌ನ ವಡ್ನಾವ್‌ನ ಶಾಸಕ ಜಿಗ್ನೇಶ್‌ ಮೇವಾನಿ “ಮುಖ್ಯಮಂತ್ರಿ ವಿಜಯ್‌ ರೂಪಾಣಿಯವರೆ ಈ ವಿಷಯವನ್ನು ತಿಳಿದುಕೊಳ್ಳಿ. ತಪ್ಪತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ. ಹೀಗೆ ಕ್ರಮ ಕೈಗೊಂಡರೆ ಇಂತಹ ‘ಗುಜರಾತ್ ಮಾದರಿ’ ಎಲ್ಲಿಯೂ ಮತ್ತೆ ನಡೆಯುವುದಿಲ್ಲ. ಡ್ಯಾಮ್ ಇಟ್!!” ಎಂದು ಟ್ವೀಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಅಮಾನವೀಯ ಕ್ರಮಕ್ಕೆ ದಿಕ್ಕಾರ. ನಿಷ್ಪಕ್ಷಪಾತವಾದ ತನಿಖೆ ನಡೆದು, ತಪ್ಪಿತಸ್ಥರೆಲ್ಲರಿಗೂ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...