Homeಕರ್ನಾಟಕಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ 'ವಾಲ್ಮೀಕಿ ನಾಯಕ ಸಂಘ'ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

- Advertisement -
- Advertisement -

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ ‘ಬಹುಜನ ಮುಖಂಡ ಭೂಮಾನಂದನ ಕಗ್ಗೋಲೆ ವಿರೋಧಿ ಒಕ್ಕೂಟ’ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇಂದು (ಆಗಸ್ಟ್ 13, 2026) ರಾಯಚೂರಿನಲ್ಲಿ ಪತ್ರಿಕಾಗೋಷ್ಠಿ 

ಕರೆದು ಮಾತನಾಡಿದ ಒಕ್ಕೂಟದ ಮುಖಂಡರು, ಕೊಲೆಗಡುಕರ ಬೆಂಬಲಿಗರ ನೈತಿಕ ದಿವಾಳಿತನವನ್ನು ಬಯಲುಗೊಳಿಸುವುದರ ಜೊತೆಗೆ, ಅಪರಾಧಿಗಳಿಗೆ ಉಗ್ರ ಶಿಕ್ಷೆಯಾಗುವವರೆಗೆ ಬೃಹತ್ ಪ್ರತಿಭಟನಾ ಹೋರಾಟ ನಡೆಸುವುದಾಗಿ ಬಹಿರಂಗವಾಗಿ ಘೋಷಿಸಿದ್ದಾರೆ.

ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದಲ್ಲಿ ನಡೆದ ಬಹುಜನ ಮುಖಂಡ ಭೂಮಾನಂದ ಅವರ ಹತ್ಯೆಯು ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ. ಯಾವುದೇ ನಾಗರಿಕ ಪ್ರಜ್ಞೆಯಿರುವ ಸಂಘ-ಸಂಸ್ಥೆಯು ಕೊಲೆಯಾದವರ ಕುಟುಂಬದ ಪರವಾಗಿ ನಿಂತು ನ್ಯಾಯಕ್ಕಾಗಿ ಧ್ವನಿ ಎತ್ತಬೇಕಾದದ್ದು ಅವರ ಕನಿಷ್ಠ ಕರ್ತವ್ಯವಾಗಿದೆ. ಆದರೆ ‘ಹೈದ್ರಾಬಾದ್ ಕರ್ನಾಟಕ ವಾಲ್ಮೀಕಿ ನಾಯಕ ಸಂಘ’ದ ಪದಾಧಿಕಾರಿಗಳು ಕೊಲೆಯಾದ ಭೂಮಾನಂದ ಅವರ ಬಗ್ಗೆ ಕನಿಷ್ಠ ಅನುಕಂಪವನ್ನೂ ತೋರದೆ, ಉಗ್ರ ಕೃತ್ಯ ಎಸಗಿದ ಕೊಲೆಗಡುಕನ ಕುಟುಂಬದ ಪರವಾಗಿ ನಿಂತಿರುವುದು ಅವರ ನೈತಿಕ ದಿವಾಳಿತನ ಮತ್ತು ಸ್ವಜಾತಿ ಪಕ್ಷಪಾತವನ್ನು ಎತ್ತಿಹಿಡಿಯುತ್ತದೆ ಎಂದು ಒಕ್ಕೂಟದ ಮುಖಂಡರು ಸಭೆಯಲ್ಲಿ ಕಟುವಾಗಿ ಟೀಕಿಸಿದರು. ಇಂತಹ ಮನಸಾಕ್ಷಿಯ ಕೊರತೆಯೇ ಸಮಾಜದಲ್ಲಿ ಅಮಾನವೀಯ ಬರ್ಬರ ಹತ್ಯೆಗಳು ಹೆಚ್ಚಾಗಲು ಕಾರಣವಾಗುತ್ತಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರು ಹಾಗೂ ಸಂಘಟನೆಗಳು ಜಂಟಿಯಾಗಿ ಈ ಸಾಮಾಜಿಕ ಪ್ರಜ್ಞೆಯ ಕೊರತೆಯನ್ನು ಸರಿಪಡಿಸುವ ಮೂಲಕ ಶಾಂತಿ ಮತ್ತು ಸೌಹಾರ್ದಯುತ ವಾತಾವರಣವನ್ನು ನಿರ್ಮಿಸಬೇಕಾಗಿದೆ.

ದಲಿತ ಸಂಘಟನೆಗಳು ಯಾವಾಗಲೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಸಣ್ಣಪುಟ್ಟ ಸಮುದಾಯಗಳ ಪರವಾಗಿ ನಿಂತು ಅವರ ಹಕ್ಕುಗಳಿಗಾಗಿ ಹೋರಾಡಿದ ಸುದೀರ್ಘ ಇತಿಹಾಸವನ್ನು ಹೊಂದಿದ್ದು, ಭೂಮಾನಂದ ಹಾಗೂ ಅವರ ಕುಟುಂಬದ ಪರವಾಗಿ ನಿಂತು ಸತ್ಯ ಮತ್ತು ನ್ಯಾಯಕ್ಕಾಗಿ ಹೋರಾಡುವುದು ತಮ್ಮ ಆದ್ಯ ಕರ್ತವ್ಯ ಎಂದು ಒಕ್ಕೂಟ ಸ್ಪಷ್ಟಪಡಿಸಿದೆ.

ಈ ಭೀಕರ ಹತ್ಯೆ ಪ್ರಕರಣದ ತನಿಖೆ ಹಾಗೂ ಆರೋಪಿಗಳ ವಿಚಾರದಲ್ಲಿ ಅಧಿಕಾರಿಗಳು ಮತ್ತು ಕೆಲ ಸಮಿತಿ ಸದಸ್ಯರು ತಾರತಮ್ಯ ಎಸಗುತ್ತಿರುವುದನ್ನು ಒಕ್ಕೂಟ ಬಯಲಿಗೆಳೆದಿದೆ. ಕೊಲೆ ಮಾಡಿದ ದೇವಪ್ಪ ಅಲಿಯಾಸ್ ದೇವರಾಜ ಎಂಬಾತನ ಹಿರಿಯ ಸಹೋದರ ಭೀಮರಾಯ ಹದ್ದಿನಾಳ ಈ ಕೊಲೆಯ ಮುಖ್ಯ ರೂವಾರಿಯಾಗಿದ್ದು, ಆತನನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಲಾಗಿದೆ. ಆದರೆ, ಈ ಕೊಲೆಯ ಮುಖ್ಯ ಸೂತ್ರಧಾರಿಯನ್ನು ಅಮಾಯಕನೆಂದು ಬಿಂಬಿಸಿ ಆತನನ್ನು ಆಪಾದಿತರ ಪಟ್ಟಿಯಿಂದ ತೆಗೆಯಬೇಕೆಂದು ಒತ್ತಾಯಿಸಿ ಮನವಿ ನೀಡಿದ ವ್ಯಕ್ತಿಯೊಬ್ಬರು ಜಿಲ್ಲಾ ಪರಿಶಿಷ್ಟ ಜಾತಿ ದೌರ್ಜನ್ಯ ತಡೆ ಸಮಿತಿಯ ಸದಸ್ಯರಾಗಿರುವುದು ಈ ಜಿಲ್ಲೆಯ ದೊಡ್ಡ ದುರಂತವಾಗಿದೆ. ಇಂತಹ ಸ್ವಜನಪಕ್ಷಪಾತಿಯನ್ನು ತಕ್ಷಣವೇ ದೌರ್ಜನ್ಯ ತಡೆ ಸಮಿತಿಯ ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು ಒಕ್ಕೂಟ ಆಗ್ರಹಿಸಿದೆ. ಇದರ ಜೊತೆಗೆ ಗ್ರಾಮದಲ್ಲಿ ಕೊಲೆಯಾದ ಕುಟುಂಬಕ್ಕೆ ಬೆದರಿಕೆ ಹಾಕುತ್ತಾ, ಕುಹಕದ ಮೂಲಕ ಪ್ರಭಾವ ಬೀರಲು ಯತ್ನಿಸುತ್ತಿರುವ ಪ್ರಮುಖ ಆರೋಪಿ ದೇವರಾಜನ ಅಣ್ಣ ಪ್ರಭು ರಾಮಸ್ವಾಮಿ ಎಂಬಾತನನ್ನು ಕೂಡಲೇ ಬಂಧಿಸಬೇಕೆಂಬುದು ಒಕ್ಕೂಟದ ಪ್ರಮುಖ ಬೇಡಿಕೆಯಾಗಿದೆ.

ಇನ್ನು, ಮೀಸಲು ಕ್ಷೇತ್ರದಿಂದ ಆಯ್ಕೆಯಾದ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು, ಶಾಸಕರು ಹಾಗೂ ಸಂಸದರ ಜಾಣಮೌನವನ್ನು ಒಕ್ಕೂಟ ತೀವ್ರವಾಗಿ ಖಂಡಿಸಿದೆ. ಇಂತಹ ಭೀಕರ ಹತ್ಯೆ ನಡೆದಾಗಲೂ ಕ್ಷೇತ್ರದ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳದಿರುವುದು ಅವರ ನಡೆ ಅನುಮಾನ ಮೂಡಿಸುವಂತಿದ್ದು, ಇವರ ಈ ಮೌನವು ಕೊಲೆಗಡುಕರಿಗೆ ಬೆಂಬಲ ನೀಡುವಂತಿದೆ ಎಂದು ಮುಖಂಡರು ದೂರಿದ್ದಾರೆ. ಅಷ್ಟೇ ಅಲ್ಲದೆ, ಇತ್ತೀಚೆಗೆ ಬರದ ವೀಕ್ಷಣೆಗಾಗಿ ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಗ್ರಾಮಕ್ಕೆ ಭೇಟಿ ನೀಡಿದ್ದ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಅಜಯ್ ಧರಮ್ ಸಿಂಗ್ ಅವರು, ಕೇವಲ ಒಂದು ಕಿಲೋಮೀಟರ್ ದೂರದಲ್ಲಿದ್ದ ಹದ್ದಿನಾಳ ಗ್ರಾಮದ ಭೂಮಾನಂದ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳದಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪರಿಣಾಮವಾಗಿ, ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ನೆರವೇರಿಸಲು ಉಸ್ತುವಾರಿ ಸಚಿವರಿಗೆ ಯಾವುದೇ ನೈತಿಕತೆಯಿಲ್ಲ ಎಂದು ಪ್ರತಿಭಟಿಸಿ, ಬರುವ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಸಚಿವ ಅಜಯ್ ಧರಮ್ ಸಿಂಗ್ ಅವರಿಗೆ ಕಪ್ಪುಪಟ್ಟಿ ಪ್ರದರ್ಶಿಸುವ ಮೂಲಕ ತೀವ್ರ ವಿರೋಧ ವ್ಯಕ್ತಪಡಿಸುವುದಾಗಿ ಒಕ್ಕೂಟ ಬಹಿರಂಗಪಡಿಸಿದೆ.

ಹತ್ಯೆಯನ್ನು ಖಂಡಿಸಿ ಹಾಗೂ ಅಪರಾಧಿಗಳಿಗೆ ಉಗ್ರ ಶಿಕ್ಷೆಗೆ ಒತ್ತಾಯಿಸಿ ಬೃಹತ್ ಚಳವಳಿಯ ರೂಪುರೇಷೆಯನ್ನು ಪ್ರೆಸ್ ಮೀಟ್‌ನಲ್ಲಿ ಪ್ರಕಟಿಸಲಾಗಿದೆ. ಮುಂಬರುವ ಆಗಸ್ಟ್ 23, 2026 ರಂದು ಹದ್ದಿನಾಳ ಗ್ರಾಮದಿಂದ ಬೃಹತ್ ಬೈಕ್ ರ್ಯಾಲಿ ಪ್ರಾರಂಭವಾಗಲಿದ್ದು, ಈ ರ್ಯಾಲಿಯು ಗಟ್ಟೂರು, ಸುಲ್ತಾನಪೂರ, ಮುರಾನಪುರ, ಕಲ್ಮಾಲ ಮಾರ್ಗವಾಗಿ ಸಾಗಿ ಅಸ್ಕಿಹಾಳ ಬಳಿಯ ಮುಗಳಖೋಡ ಮಠ ತಲುಪಿ ಅಲ್ಲಿ ವಾಸ್ತವ್ಯ ಹೂಡಲಿದೆ. ಮರುದಿನ ಅಂದರೆ ಆಗಸ್ಟ್ 24 ರಂದು ಬೆಳಿಗ್ಗೆ ಮುಗಳಖೋಡ ಮಠದಿಂದ ಪಾದಯಾತ್ರೆ ಮೂಲಕ ಹೊರಟು ರಾಯಚೂರಿನ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ತಲುಪಿ ಅಲ್ಲಿ ಬೃಹತ್ ಬಹಿರಂಗ ಸಮಾವೇಶವನ್ನು ನಡೆಸಿ, ತದನಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗುವುದು. ಈ ಬಹಿರಂಗ ಸಭೆ ಹಾಗೂ ಚಳವಳಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಸಮಾಜ ಬಾಂಧವರು ಮುಂಚೂಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಪ್ರಮುಖ ಮುಖಂಡರಾದ ಎಸ್. ಮಾರಪ್ಪ ಸೇರಿದಂತೆ ರವೀಂದ್ರನಾಥ ಪಟ್ಟಿ, ಜೆ.ಬಿ. ರಾಜು, ಶಿವರಾಜ ಅಕ್ಕರಕಿ, ಅಂಬಣ್ಣ ಅರೋಲಿಕರ್, ಹೇಮರಾಜ ಅಸ್ಕಿಹಾಳ, ಜೈಭೀಮವಲ್ಲಭ, ಹನುಮಂತ ಮನ್ನಾಪುರೆ, ನರಸಿಂಹಲು ನೆಲಹಾಳ, ವಿಶ್ವನಾಥ ಪಟ್ಟಿ, ಮಾನಪ್ಪ ಮೇಸ್ತ್ರಿ ಹಾಗೂ ತಮ್ಮಣ್ಣ (ವಕೀಲರು) ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...

ಕರ್ನಾಟಕ ಎಸ್‌ಐಆರ್: ಶಾಶ್ವತ ನಿವಾಸಿ ಪ್ರಮಾಣಪತ್ರಕ್ಕೆ ಬೆಂಗಳೂರು ನಗರದಲ್ಲೇ ಭಾರೀ ಬೇಡಿಕೆ: ಕಂದಾಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಡುವೆಯೇ, ಕಂದಾಯ ಇಲಾಖೆಗೆ ಸಲ್ಲಿಕೆಯಾಗುತ್ತಿರುವ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್‌ಸಿ) ಅರ್ಜಿಗಳ ಸಂಖ್ಯೆಯಲ್ಲಿ ಬೆಂಗಳೂರು ನಗರ ಜಿಲ್ಲೆಯು...

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...