Homeಮುಖಪುಟಬೆಟ್ಟಿಂಗ್ ಆ್ಯಪ್ ನಿಷೇಧಿಸುವಂತೆ ಆಗಸ್ಟ್‌ನಲ್ಲಿಯೇ ಬಾಘೇಲ್ ಒತ್ತಾಯಿಸಿದ್ದರು: ಕಾಂಗ್ರೆಸ್

ಬೆಟ್ಟಿಂಗ್ ಆ್ಯಪ್ ನಿಷೇಧಿಸುವಂತೆ ಆಗಸ್ಟ್‌ನಲ್ಲಿಯೇ ಬಾಘೇಲ್ ಒತ್ತಾಯಿಸಿದ್ದರು: ಕಾಂಗ್ರೆಸ್

- Advertisement -
- Advertisement -

ಛತ್ತೀಸ್‌ಗಢದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್ ವಿರುದ್ಧ ಕ್ರಮಕೈಗೊಳ್ಳಲು ತಿಂಗಳುಗಳ ಹಿಂದೆಯೇ ಮನವಿ ಮಾಡಿದ್ದರು. ಆದರೆ ಮಹದೇವ್ ಆ್ಯಪ್ ಮೇಲೆ ನಿಷೇಧ ಹೇರಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ.

ಬಘೆಲ್ ಅವರು ಆ್ಯಪ್‌ನ ಮೇಲಿನ ನಿಷೇಧಕ್ಕೆ ಬೇಡಿಕೆಯಿಟ್ಟಿರುವುದನ್ನು ಸರ್ಕಾರ ಹೊಗಳಬೇಕಿತ್ತು ಆದರೆ ಅವರ ವಿರುದ್ಧವೇ ಆರೋಪ ಮಾಡುತ್ತಿದೆ. ಬಿಜೆಪಿಯ ಈ ಆರೋಪಗಳಿಗೆ ವಿಧಾನಸಭಾ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ಕೊಡಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಈ ಬಗ್ಗೆ X ನಲ್ಲಿನ ಪೋಸ್ಟ್‌ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ”ಮಹಾದೇವ್ ಅಪ್ಲಿಕೇಶನ್ ಪ್ರಕರಣವನ್ನು ಇಡಿ ಹಲವಾರು ತಿಂಗಳುಗಳಿಂದ ತನಿಖೆ ನಡೆಸುತ್ತಿದೆ ಆದರೆ ಅದನ್ನು ನಿಷೇಧಿಸಲು ಇಷ್ಟು ಸಮಯ ತೆಗೆದುಕೊಂಡಿರುವುದು ಆಶ್ಚರ್ಯಕರ” ಎಂದು ಹೇಳಿದರು.

”ಆಗಸ್ಟ್ 24ರಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಮಹದೇವ್ ಆ್ಯಪ್‌ನ್ನು ನಿಷೇಧಿಸುವ ಬೇಡಿಕೆಯನ್ನು ಮೊದಲು ಎತ್ತಿದ್ದರು. ಪ್ರಧಾನಿ ಮೋದಿಯವರು ಅವರನ್ನು ಹೊಗಳುವ ಬದಲು, ಅವರ ವಿರುದ್ಧ ಇಡಿಯನ್ನು ನಿಯೋಜಿಸಿದ್ದಾರೆ” ಎಂದು ರಮೇಶ್ ಆರೋಪಿಸಿದ್ದಾರೆ.

ಛತ್ತೀಸ್‌ಗಢ ಸರ್ಕಾರವು ಮಹದೇವ್ ಆ್ಯಪ್‌ನ್ನು ನಿಷೇಧಿಸುವಂತೆ ಒತ್ತಾಯಿಸಿಲ್ಲ ಎಂದು ಕೇಂದ್ರ ಸಚಿವರು ಹೇಳುತ್ತಿರುವುದು ದೊಡ್ಡ ಸುಳ್ಳು” ಎಂದು ಕಾಂಗ್ರೆಸ್ ಆರೋಪಿಸಿದೆ.

ಆಗಸ್ಟ್ 24, 2023 ರಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಘೇಲ್ ಅವರು ಆರೋಪಿಗಳನ್ನು ಬಂಧಿಸುವಂತೆ ಕರೆ ನೀಡಿದ್ದರು ಮತ್ತು ಕೇಂದ್ರ ಸರ್ಕಾರವು 28 ರಷ್ಟು ತೆರಿಗೆ ವಿಧಿಸುವ ಮೂಲಕ ಆನ್‌ಲೈನ್ ಬೆಟ್ಟಿಂಗ್‌ಗೆ ಕಾನೂನು ಸ್ಥಾನಮಾನ ನೀಡುವ ವಿಷಯವನ್ನು ಪ್ರಸ್ತಾಪಿಸಿದರು ಎಂದು ರಮೇಶ್ ಗಮನಸೆಳೆದರು.

”ಕೇಂದ್ರ ಸರ್ಕಾರವು ಈ ಬೆಟ್ಟಿಂಗ್ ಆ್ಯಪ್‌ನ್ನು ಏಕೆ ನಿಷೇಧಿಸುತ್ತಿಲ್ಲ ಎಂದು ಮುಖ್ಯಮಂತ್ರಿಗಳು ಹಲವಾರು ತಿಂಗಳುಗಳಿಂದ ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಬಹುಶಃ 28% ಜಿಎಸ್‌ಟಿಯ ದುರಾಸೆಯಿಂದ ನಿಷೇಧವನ್ನು ಹೇರಲಾಗುತ್ತಿಲ್ಲ ಎಂದು ಅವರು (ಬಘೆಲ್) ಹೇಳಿದ್ದರು. ಆ್ಯಪ್ ಆಪರೇಟರ್‌ಗಳೊಂದಿಗೆ ಬಿಜೆಪಿಯ ನಂಟು ಇದೆಯೇ? ಎಂದು ತಮ್ಮ ಪೋಸ್ಟ್‌ನಲ್ಲಿ ರಮೇಶ್ ಅವರು ಪ್ರಶ್ನೆ ಮಾಡಿದ್ದಾರೆ.

”ಬಿಜೆಪಿ ಸರ್ಕಾರ ಈ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸದಿರುವುದು ಮಾತ್ರವಲ್ಲದೆ, ತೆರಿಗೆ ವಸೂಲಿ ಮಾಡುವ ಮೂಲಕ ಆ್ಯಪ್ ಆಪರೇಟರ್‌ಗಳ ಅಕ್ರಮಗಳಿಗೆ ಕಾನೂನು ಮಾನ್ಯತೆ ನೀಡಲು ಮುಂದಾಗಿದೆ” ಎಂದು ಅವರು ಆರೋಪಿಸಿದ್ದಾರೆ.

”ಛತ್ತೀಸ್‌ಗಢದ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಬಿಜೆಪಿಯ ಈ ಕ್ರಮಗಳಿಗೆ ರಾಜ್ಯದ ಜನತೆ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪರವಾಗಿ ತಮ್ಮ ಜನಾದೇಶ ನೀಡುವ ಮೂಲಕ ತಕ್ಕ ಉತ್ತರ ನೀಡುತ್ತಾರೆ” ಎಂದು ರಮೇಶ್ ಪ್ರತಿಪಾದಿಸಿದರು.

ಇದನ್ನೂ ಓದಿ: “ಮಹದೇವ್ ಬೆಟ್ಟಿಂಗ್ ಅಪ್ಲಿಕೇಶನ್‌ನೊಂದಿಗೆ ಕೇಂದ್ರದ ರಹಸ್ಯ ಒಪ್ಪಂದ”: ಭೂಪೇಶ್ ಬಾಘೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...