Homeಮುಖಪುಟಬೆಟ್ಟಿಂಗ್ ಆ್ಯಪ್ ನಿಷೇಧಿಸುವಂತೆ ಆಗಸ್ಟ್‌ನಲ್ಲಿಯೇ ಬಾಘೇಲ್ ಒತ್ತಾಯಿಸಿದ್ದರು: ಕಾಂಗ್ರೆಸ್

ಬೆಟ್ಟಿಂಗ್ ಆ್ಯಪ್ ನಿಷೇಧಿಸುವಂತೆ ಆಗಸ್ಟ್‌ನಲ್ಲಿಯೇ ಬಾಘೇಲ್ ಒತ್ತಾಯಿಸಿದ್ದರು: ಕಾಂಗ್ರೆಸ್

- Advertisement -
- Advertisement -

ಛತ್ತೀಸ್‌ಗಢದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಬೆಟ್ಟಿಂಗ್ ಪ್ಲಾಟ್‌ಫಾರ್ಮ್ ವಿರುದ್ಧ ಕ್ರಮಕೈಗೊಳ್ಳಲು ತಿಂಗಳುಗಳ ಹಿಂದೆಯೇ ಮನವಿ ಮಾಡಿದ್ದರು. ಆದರೆ ಮಹದೇವ್ ಆ್ಯಪ್ ಮೇಲೆ ನಿಷೇಧ ಹೇರಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ.

ಬಘೆಲ್ ಅವರು ಆ್ಯಪ್‌ನ ಮೇಲಿನ ನಿಷೇಧಕ್ಕೆ ಬೇಡಿಕೆಯಿಟ್ಟಿರುವುದನ್ನು ಸರ್ಕಾರ ಹೊಗಳಬೇಕಿತ್ತು ಆದರೆ ಅವರ ವಿರುದ್ಧವೇ ಆರೋಪ ಮಾಡುತ್ತಿದೆ. ಬಿಜೆಪಿಯ ಈ ಆರೋಪಗಳಿಗೆ ವಿಧಾನಸಭಾ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ಕೊಡಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಈ ಬಗ್ಗೆ X ನಲ್ಲಿನ ಪೋಸ್ಟ್‌ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ”ಮಹಾದೇವ್ ಅಪ್ಲಿಕೇಶನ್ ಪ್ರಕರಣವನ್ನು ಇಡಿ ಹಲವಾರು ತಿಂಗಳುಗಳಿಂದ ತನಿಖೆ ನಡೆಸುತ್ತಿದೆ ಆದರೆ ಅದನ್ನು ನಿಷೇಧಿಸಲು ಇಷ್ಟು ಸಮಯ ತೆಗೆದುಕೊಂಡಿರುವುದು ಆಶ್ಚರ್ಯಕರ” ಎಂದು ಹೇಳಿದರು.

”ಆಗಸ್ಟ್ 24ರಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಮಹದೇವ್ ಆ್ಯಪ್‌ನ್ನು ನಿಷೇಧಿಸುವ ಬೇಡಿಕೆಯನ್ನು ಮೊದಲು ಎತ್ತಿದ್ದರು. ಪ್ರಧಾನಿ ಮೋದಿಯವರು ಅವರನ್ನು ಹೊಗಳುವ ಬದಲು, ಅವರ ವಿರುದ್ಧ ಇಡಿಯನ್ನು ನಿಯೋಜಿಸಿದ್ದಾರೆ” ಎಂದು ರಮೇಶ್ ಆರೋಪಿಸಿದ್ದಾರೆ.

ಛತ್ತೀಸ್‌ಗಢ ಸರ್ಕಾರವು ಮಹದೇವ್ ಆ್ಯಪ್‌ನ್ನು ನಿಷೇಧಿಸುವಂತೆ ಒತ್ತಾಯಿಸಿಲ್ಲ ಎಂದು ಕೇಂದ್ರ ಸಚಿವರು ಹೇಳುತ್ತಿರುವುದು ದೊಡ್ಡ ಸುಳ್ಳು” ಎಂದು ಕಾಂಗ್ರೆಸ್ ಆರೋಪಿಸಿದೆ.

ಆಗಸ್ಟ್ 24, 2023 ರಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಘೇಲ್ ಅವರು ಆರೋಪಿಗಳನ್ನು ಬಂಧಿಸುವಂತೆ ಕರೆ ನೀಡಿದ್ದರು ಮತ್ತು ಕೇಂದ್ರ ಸರ್ಕಾರವು 28 ರಷ್ಟು ತೆರಿಗೆ ವಿಧಿಸುವ ಮೂಲಕ ಆನ್‌ಲೈನ್ ಬೆಟ್ಟಿಂಗ್‌ಗೆ ಕಾನೂನು ಸ್ಥಾನಮಾನ ನೀಡುವ ವಿಷಯವನ್ನು ಪ್ರಸ್ತಾಪಿಸಿದರು ಎಂದು ರಮೇಶ್ ಗಮನಸೆಳೆದರು.

”ಕೇಂದ್ರ ಸರ್ಕಾರವು ಈ ಬೆಟ್ಟಿಂಗ್ ಆ್ಯಪ್‌ನ್ನು ಏಕೆ ನಿಷೇಧಿಸುತ್ತಿಲ್ಲ ಎಂದು ಮುಖ್ಯಮಂತ್ರಿಗಳು ಹಲವಾರು ತಿಂಗಳುಗಳಿಂದ ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಬಹುಶಃ 28% ಜಿಎಸ್‌ಟಿಯ ದುರಾಸೆಯಿಂದ ನಿಷೇಧವನ್ನು ಹೇರಲಾಗುತ್ತಿಲ್ಲ ಎಂದು ಅವರು (ಬಘೆಲ್) ಹೇಳಿದ್ದರು. ಆ್ಯಪ್ ಆಪರೇಟರ್‌ಗಳೊಂದಿಗೆ ಬಿಜೆಪಿಯ ನಂಟು ಇದೆಯೇ? ಎಂದು ತಮ್ಮ ಪೋಸ್ಟ್‌ನಲ್ಲಿ ರಮೇಶ್ ಅವರು ಪ್ರಶ್ನೆ ಮಾಡಿದ್ದಾರೆ.

”ಬಿಜೆಪಿ ಸರ್ಕಾರ ಈ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸದಿರುವುದು ಮಾತ್ರವಲ್ಲದೆ, ತೆರಿಗೆ ವಸೂಲಿ ಮಾಡುವ ಮೂಲಕ ಆ್ಯಪ್ ಆಪರೇಟರ್‌ಗಳ ಅಕ್ರಮಗಳಿಗೆ ಕಾನೂನು ಮಾನ್ಯತೆ ನೀಡಲು ಮುಂದಾಗಿದೆ” ಎಂದು ಅವರು ಆರೋಪಿಸಿದ್ದಾರೆ.

”ಛತ್ತೀಸ್‌ಗಢದ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಬಿಜೆಪಿಯ ಈ ಕ್ರಮಗಳಿಗೆ ರಾಜ್ಯದ ಜನತೆ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪರವಾಗಿ ತಮ್ಮ ಜನಾದೇಶ ನೀಡುವ ಮೂಲಕ ತಕ್ಕ ಉತ್ತರ ನೀಡುತ್ತಾರೆ” ಎಂದು ರಮೇಶ್ ಪ್ರತಿಪಾದಿಸಿದರು.

ಇದನ್ನೂ ಓದಿ: “ಮಹದೇವ್ ಬೆಟ್ಟಿಂಗ್ ಅಪ್ಲಿಕೇಶನ್‌ನೊಂದಿಗೆ ಕೇಂದ್ರದ ರಹಸ್ಯ ಒಪ್ಪಂದ”: ಭೂಪೇಶ್ ಬಾಘೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....