HomeUncategorizedಹರ್ಯಾಣದಲ್ಲಿ ಕಾಂಗ್ರೆಸ್‌ ಗೆಲುವಿನ ಹಿಂದೆ ಭೂಪಿಂದರ್‌ ಸಿಂಗ್ ಹೂಡಾ ಮಿಂಚು

ಹರ್ಯಾಣದಲ್ಲಿ ಕಾಂಗ್ರೆಸ್‌ ಗೆಲುವಿನ ಹಿಂದೆ ಭೂಪಿಂದರ್‌ ಸಿಂಗ್ ಹೂಡಾ ಮಿಂಚು

- Advertisement -
- Advertisement -

ಹರ್ಯಾಣ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್‌ನಲ್ಲಿ ಕೇಳಿ ಬರುತ್ತಿರುವ ಹೆಸರು ಭೂಪಿಂದರ್‌ ಸಿಂಗ್‌ ಹೂಡಾ. ಇಷ್ಟುದಿನ ಮಂಕಾಗಿದ್ದ ಕಾಂಗ್ರೆಸ್‌ನ್ನು ಅರಳಿಸಿದ ಕೀರ್ತಿ ಭೂಪಿಂದರ್‌ ಸಿಂಗ್‌ ಹೂಡಾ ಅವರಿಗೆ ಸಲ್ಲತ್ತದೆ. ಇಷ್ಟು ದಿನದ ತಮ್ಮ ರಾಜಕೀಯ ಜೀವನದಲ್ಲಿ ಹೂಡಾ ಈಗ ಮಿಂಚಿನಂತೆ ಎದ್ದು ಬಂದಿದ್ದಾರೆ. ಕಾಂಗ್ರೆಸ್‌ ಗೆಲುವಿನ ಹಿಂದೆ ಹೂಡಾ ಪರಿಶ್ರಮ, ರಾಜಕೀಯ ಲೆಕ್ಕಾಚಾರ ಎಲ್ಲವೂ ಗೆದ್ದು ಬೀಗಿದೆ.

ಭೂಪಿಂದರ್‌ ಸಿಂಗ್‌ ಹೂಡಾರ ಪಕ್ಷ ಸಂಘಟನೆ, ಪಕ್ಷ ಬಲವರ್ಧನೆಯ ತಾಕತ್ತು, ಕಾಂಗ್ರೆಸ್‌ ವರ್ಚಸ್ಸನ್ನು ಮತ್ತೆ ಮರಳುವಂತೆ ಮಾಡಿದೆ. ಹರ್ಯಾಣದಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗದಿದ್ದರೂ, ಕಾಂಗ್ರೆಸ್‌ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಗೆಲುವು ಸಾಧಿಸಿದೆ. ಇದರ ಹಿಂದೆ ಭೂಪಿಂದರ್‌ ಸಿಂಗ್‌ ಹೂಡಾ ಎದ್ದು ಕಾಣುತ್ತಾರೆ.

೨೦೧೪ರಲ್ಲಿ ಸೋಲಿನ ಕಹಿ ಉಂಡಿದ್ದ ಭೂಪಿಂದರ್‌ ಸಿಂಗ್ ಹೂಡಾ ಈ ಬಾರಿ ಗೆದ್ದಿದ್ದಾರೆ. ಮತದಾರರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್‌ನ ಪ್ರಭಾವಿ ಮತ್ತು ಹಿರಿಯ ನಾಯಕ ಹೂಡಾ ೨೦೦೫ರಿಂದ ೨೦೧೪ರವರೆಗೆ ಹರ್ಯಾಣದ ಮುಖ್ಯಮಂತ್ರಿಯಾಗಿದ್ದರು. ೨೦೦೫, ೨೦೦೯ರಲ್ಲೂ ದಿಗ್ವಿಜಯ ಸಾಧಿಸಿದ್ದರು.  ೨೦೧೪ಕ್ಕೂ ಮೊದಲು ಸೋಲನ್ನು ಕಾಣದ ಕಾಂಗ್ರೆಸ್‌, ೨೦೧೪ರ ವಿಧಾನಸಭೆ ಚುನಾವಣೆಯಲ್ಲಿ ಸೋತಿತ್ತು. ೧೯೭೨ರ ನಂತರ ಮೊದಲ ಬಾರಿಗೆ ಕಾಂಗ್ರೆಸ್ ಪರಾಜಿತಗೊಂಡಿತ್ತು. ಹೀಗಾಗಿ ೨೦೧೪ರಲ್ಲಿ ಭೂಪಿಂದರ್‌ ಸಿಂಗ್‌ ಹೂಡಾ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದರು. ನಂತರ ೨೦೧೪ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚಿಸುವಲ್ಲಿ ವಿಫಲರಾಗಿದ್ದರು. ೨೦೧೯ರ ಲೋಕಸಭೆ ಚುನಾವಣೆ ವೇಳೆ ಭೂಪಿಂದರ್‌ ಮಗ ದೀಪೇಂದ್ರ ಸಿಂಗ್‌ ಸೋತರು.

ಕಾನೂನು ಪದವೀಧರ ಭೂಪೇಂದರ್‌ ಸಿಂಗ್‌ ಹೂಡಾ ಹರ್ಯಾಣದ ಒಂಬತ್ತನೇ ಮುಖ್ಯಮಂತ್ರಿಯಾಗಿದ್ದವರು. ೭೨ ವರ್ಷದ ಹೂಡಾ ವಿರುದ್ಧ ಬಿಜೆಪಿ ಸರ್ಕಾರ ಬಂದ ನಂತರ ಅಕ್ರಮ ಭೂವ್ಯವಹಾರ ಚಟುವಟಿಕೆ ಆರೋಪ ಮಾಡಿತ್ತು. ಹೂಡಾ ವಿರುದ್ಧ ಕೇಸ್‌ ಕೂಡ ದಾಖಲಾಗಿತ್ತು. ಹೀಗಾಗಿ ಕೆಲ ದಿನಗಳವರೆಗೆ ಹೂಡಾ ರಾಜಕೀಯವಾಗಿ ಅಷ್ಟಾಗಿ ಚಟುವಟಿಕೆಯಿಂದಿರಲಿಲ್ಲ.

ಹರ್ಯಾಣ ಚುನಾವಣೆಗೂ ಮೊದಲು ಪಕ್ಷದ ಮುಖ್ಯಸ್ಥರಾಗಿದ್ದ ಅಶೋಕ್‌ ತನ್ವಾರ್‌ ರಾಜೀನಾಮೆ ನೀಡಿದ್ದರು. ಬಳಿಕ ಕುಮಾರಿ ಸೆಲ್ಜಾ ಪಕ್ಷದ ಕಾರ್ಯಭಾರ ವಹಿಸಿಕೊಂಡರು. ಪಕ್ಷದಲ್ಲಿ ಸಾಕಷ್ಟು ಬೆಳವಣಿಗೆಗಳಾದ ಹಿನ್ನೆಲೆ ಭೂಪಿಂದರ್‌ ಸಿಂಗ್‌ ಹೂಡಾ ತಾವೇ ಸ್ವತಃ ಪಕ್ಷದ ಪ್ರಚಾರ ಮತ್ತು ಸಂಘಟನೆಗೆ ಟೊಂಕ ಕಟ್ಟಿದರು. ಪರಿಣಾಮ ಇಂದು ಸಂಪೂರ್ಣ ನೆಲಕಚ್ಚಿದ್ದ ಕಾಂಗ್ರೆಸ್‌, ಚೇತರಿಸಿಕೊಂಡಿದ್ದು, ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಗೆಲುವು ಕಂಡಿದೆ. ಇನ್ನು ಸ್ವಲ್ಪ ಪ್ರಯತ್ನಿಸಿದ್ದರೆ ಬಿಜೆಪಿಯನ್ನು ಮಣಿಸಬಹುದಿತ್ತು ಎನ್ನುವ ಮಾತುಗಳು ಕೇಳಿ ಬಂದಿವೆ.

ಹೂಡಾ ಮತ್ತು ಸೆಲ್ಜಾ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಎತ್ತಿ ಹಿಡಿಕದರು. ನಿರುದ್ಯೋಗ, ಕಾನೂನು ಬದಲಾವಣೆ, ಕೃಷಿ ಸಂಬಂಧಿತ ಸಮಸ್ಯೆಗಳು, ಆರ್ಥಿಕ ಕುಸಿತ, ನೌಕರರಲ್ಲಿ ಕೆಲಸ ಕಳೆದುಕೊಳ್ಳುವ ಭಯ ಸೇರಿದಂತೆ ಹಲವು ವಿಷಯಗಳನ್ನು ಖಂಡಿಸಿದರು. ಜತೆಗೆ ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಷದ ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ಕೊಡುವತ್ತ ನಿರ್ಧರಿಸಲಾಗಿದೆ. ಒಟ್ಟಿನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸಮನಾಗಿ ಠಕ್ಕರ್‌ ಕೊಟ್ಟಿರುವ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೇರುವ ಎಲ್ಲ ಸೂಚನೆಗಳನ್ನು ಜೀವಂತವಾಗಿರಿಸಿದೆ. ೯೦ ಸ್ಥಾನಗಳಲ್ಲಿ ೩೧ ಸ್ಥಾನಗಳನ್ನು ಕಾಂಗ್ರೆಸ್‌ ಗೆದ್ದಿದ್ದರೆ, ೪೦ ಬಿಜೆಪಿ ಗೆದ್ದಿದೆ. ಇಲ್ಲಿ ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್‌ ೪೬ ಆಗಿದೆ. ಅಂದಹಾಗೇ ೨೦೧೪ರ ಚುನಾವಣೆಯಲ್ಲಿ ಕಾಂಗ್ರೆಸ್‌ ಕೇವಲ ೧೫ ಸ್ಥಾನಗಳನ್ನಷ್ಟೇ ಗೆದ್ದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...