HomeUncategorizedಹರ್ಯಾಣದಲ್ಲಿ ಕಾಂಗ್ರೆಸ್‌ ಗೆಲುವಿನ ಹಿಂದೆ ಭೂಪಿಂದರ್‌ ಸಿಂಗ್ ಹೂಡಾ ಮಿಂಚು

ಹರ್ಯಾಣದಲ್ಲಿ ಕಾಂಗ್ರೆಸ್‌ ಗೆಲುವಿನ ಹಿಂದೆ ಭೂಪಿಂದರ್‌ ಸಿಂಗ್ ಹೂಡಾ ಮಿಂಚು

- Advertisement -
- Advertisement -

ಹರ್ಯಾಣ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್‌ನಲ್ಲಿ ಕೇಳಿ ಬರುತ್ತಿರುವ ಹೆಸರು ಭೂಪಿಂದರ್‌ ಸಿಂಗ್‌ ಹೂಡಾ. ಇಷ್ಟುದಿನ ಮಂಕಾಗಿದ್ದ ಕಾಂಗ್ರೆಸ್‌ನ್ನು ಅರಳಿಸಿದ ಕೀರ್ತಿ ಭೂಪಿಂದರ್‌ ಸಿಂಗ್‌ ಹೂಡಾ ಅವರಿಗೆ ಸಲ್ಲತ್ತದೆ. ಇಷ್ಟು ದಿನದ ತಮ್ಮ ರಾಜಕೀಯ ಜೀವನದಲ್ಲಿ ಹೂಡಾ ಈಗ ಮಿಂಚಿನಂತೆ ಎದ್ದು ಬಂದಿದ್ದಾರೆ. ಕಾಂಗ್ರೆಸ್‌ ಗೆಲುವಿನ ಹಿಂದೆ ಹೂಡಾ ಪರಿಶ್ರಮ, ರಾಜಕೀಯ ಲೆಕ್ಕಾಚಾರ ಎಲ್ಲವೂ ಗೆದ್ದು ಬೀಗಿದೆ.

ಭೂಪಿಂದರ್‌ ಸಿಂಗ್‌ ಹೂಡಾರ ಪಕ್ಷ ಸಂಘಟನೆ, ಪಕ್ಷ ಬಲವರ್ಧನೆಯ ತಾಕತ್ತು, ಕಾಂಗ್ರೆಸ್‌ ವರ್ಚಸ್ಸನ್ನು ಮತ್ತೆ ಮರಳುವಂತೆ ಮಾಡಿದೆ. ಹರ್ಯಾಣದಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗದಿದ್ದರೂ, ಕಾಂಗ್ರೆಸ್‌ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಗೆಲುವು ಸಾಧಿಸಿದೆ. ಇದರ ಹಿಂದೆ ಭೂಪಿಂದರ್‌ ಸಿಂಗ್‌ ಹೂಡಾ ಎದ್ದು ಕಾಣುತ್ತಾರೆ.

೨೦೧೪ರಲ್ಲಿ ಸೋಲಿನ ಕಹಿ ಉಂಡಿದ್ದ ಭೂಪಿಂದರ್‌ ಸಿಂಗ್ ಹೂಡಾ ಈ ಬಾರಿ ಗೆದ್ದಿದ್ದಾರೆ. ಮತದಾರರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್‌ನ ಪ್ರಭಾವಿ ಮತ್ತು ಹಿರಿಯ ನಾಯಕ ಹೂಡಾ ೨೦೦೫ರಿಂದ ೨೦೧೪ರವರೆಗೆ ಹರ್ಯಾಣದ ಮುಖ್ಯಮಂತ್ರಿಯಾಗಿದ್ದರು. ೨೦೦೫, ೨೦೦೯ರಲ್ಲೂ ದಿಗ್ವಿಜಯ ಸಾಧಿಸಿದ್ದರು.  ೨೦೧೪ಕ್ಕೂ ಮೊದಲು ಸೋಲನ್ನು ಕಾಣದ ಕಾಂಗ್ರೆಸ್‌, ೨೦೧೪ರ ವಿಧಾನಸಭೆ ಚುನಾವಣೆಯಲ್ಲಿ ಸೋತಿತ್ತು. ೧೯೭೨ರ ನಂತರ ಮೊದಲ ಬಾರಿಗೆ ಕಾಂಗ್ರೆಸ್ ಪರಾಜಿತಗೊಂಡಿತ್ತು. ಹೀಗಾಗಿ ೨೦೧೪ರಲ್ಲಿ ಭೂಪಿಂದರ್‌ ಸಿಂಗ್‌ ಹೂಡಾ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದರು. ನಂತರ ೨೦೧೪ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚಿಸುವಲ್ಲಿ ವಿಫಲರಾಗಿದ್ದರು. ೨೦೧೯ರ ಲೋಕಸಭೆ ಚುನಾವಣೆ ವೇಳೆ ಭೂಪಿಂದರ್‌ ಮಗ ದೀಪೇಂದ್ರ ಸಿಂಗ್‌ ಸೋತರು.

ಕಾನೂನು ಪದವೀಧರ ಭೂಪೇಂದರ್‌ ಸಿಂಗ್‌ ಹೂಡಾ ಹರ್ಯಾಣದ ಒಂಬತ್ತನೇ ಮುಖ್ಯಮಂತ್ರಿಯಾಗಿದ್ದವರು. ೭೨ ವರ್ಷದ ಹೂಡಾ ವಿರುದ್ಧ ಬಿಜೆಪಿ ಸರ್ಕಾರ ಬಂದ ನಂತರ ಅಕ್ರಮ ಭೂವ್ಯವಹಾರ ಚಟುವಟಿಕೆ ಆರೋಪ ಮಾಡಿತ್ತು. ಹೂಡಾ ವಿರುದ್ಧ ಕೇಸ್‌ ಕೂಡ ದಾಖಲಾಗಿತ್ತು. ಹೀಗಾಗಿ ಕೆಲ ದಿನಗಳವರೆಗೆ ಹೂಡಾ ರಾಜಕೀಯವಾಗಿ ಅಷ್ಟಾಗಿ ಚಟುವಟಿಕೆಯಿಂದಿರಲಿಲ್ಲ.

ಹರ್ಯಾಣ ಚುನಾವಣೆಗೂ ಮೊದಲು ಪಕ್ಷದ ಮುಖ್ಯಸ್ಥರಾಗಿದ್ದ ಅಶೋಕ್‌ ತನ್ವಾರ್‌ ರಾಜೀನಾಮೆ ನೀಡಿದ್ದರು. ಬಳಿಕ ಕುಮಾರಿ ಸೆಲ್ಜಾ ಪಕ್ಷದ ಕಾರ್ಯಭಾರ ವಹಿಸಿಕೊಂಡರು. ಪಕ್ಷದಲ್ಲಿ ಸಾಕಷ್ಟು ಬೆಳವಣಿಗೆಗಳಾದ ಹಿನ್ನೆಲೆ ಭೂಪಿಂದರ್‌ ಸಿಂಗ್‌ ಹೂಡಾ ತಾವೇ ಸ್ವತಃ ಪಕ್ಷದ ಪ್ರಚಾರ ಮತ್ತು ಸಂಘಟನೆಗೆ ಟೊಂಕ ಕಟ್ಟಿದರು. ಪರಿಣಾಮ ಇಂದು ಸಂಪೂರ್ಣ ನೆಲಕಚ್ಚಿದ್ದ ಕಾಂಗ್ರೆಸ್‌, ಚೇತರಿಸಿಕೊಂಡಿದ್ದು, ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಗೆಲುವು ಕಂಡಿದೆ. ಇನ್ನು ಸ್ವಲ್ಪ ಪ್ರಯತ್ನಿಸಿದ್ದರೆ ಬಿಜೆಪಿಯನ್ನು ಮಣಿಸಬಹುದಿತ್ತು ಎನ್ನುವ ಮಾತುಗಳು ಕೇಳಿ ಬಂದಿವೆ.

ಹೂಡಾ ಮತ್ತು ಸೆಲ್ಜಾ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಎತ್ತಿ ಹಿಡಿಕದರು. ನಿರುದ್ಯೋಗ, ಕಾನೂನು ಬದಲಾವಣೆ, ಕೃಷಿ ಸಂಬಂಧಿತ ಸಮಸ್ಯೆಗಳು, ಆರ್ಥಿಕ ಕುಸಿತ, ನೌಕರರಲ್ಲಿ ಕೆಲಸ ಕಳೆದುಕೊಳ್ಳುವ ಭಯ ಸೇರಿದಂತೆ ಹಲವು ವಿಷಯಗಳನ್ನು ಖಂಡಿಸಿದರು. ಜತೆಗೆ ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಷದ ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ಕೊಡುವತ್ತ ನಿರ್ಧರಿಸಲಾಗಿದೆ. ಒಟ್ಟಿನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸಮನಾಗಿ ಠಕ್ಕರ್‌ ಕೊಟ್ಟಿರುವ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೇರುವ ಎಲ್ಲ ಸೂಚನೆಗಳನ್ನು ಜೀವಂತವಾಗಿರಿಸಿದೆ. ೯೦ ಸ್ಥಾನಗಳಲ್ಲಿ ೩೧ ಸ್ಥಾನಗಳನ್ನು ಕಾಂಗ್ರೆಸ್‌ ಗೆದ್ದಿದ್ದರೆ, ೪೦ ಬಿಜೆಪಿ ಗೆದ್ದಿದೆ. ಇಲ್ಲಿ ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್‌ ೪೬ ಆಗಿದೆ. ಅಂದಹಾಗೇ ೨೦೧೪ರ ಚುನಾವಣೆಯಲ್ಲಿ ಕಾಂಗ್ರೆಸ್‌ ಕೇವಲ ೧೫ ಸ್ಥಾನಗಳನ್ನಷ್ಟೇ ಗೆದ್ದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...