HomeUncategorizedಹರ್ಯಾಣದಲ್ಲಿ ಕಾಂಗ್ರೆಸ್‌ ಗೆಲುವಿನ ಹಿಂದೆ ಭೂಪಿಂದರ್‌ ಸಿಂಗ್ ಹೂಡಾ ಮಿಂಚು

ಹರ್ಯಾಣದಲ್ಲಿ ಕಾಂಗ್ರೆಸ್‌ ಗೆಲುವಿನ ಹಿಂದೆ ಭೂಪಿಂದರ್‌ ಸಿಂಗ್ ಹೂಡಾ ಮಿಂಚು

- Advertisement -
- Advertisement -

ಹರ್ಯಾಣ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್‌ನಲ್ಲಿ ಕೇಳಿ ಬರುತ್ತಿರುವ ಹೆಸರು ಭೂಪಿಂದರ್‌ ಸಿಂಗ್‌ ಹೂಡಾ. ಇಷ್ಟುದಿನ ಮಂಕಾಗಿದ್ದ ಕಾಂಗ್ರೆಸ್‌ನ್ನು ಅರಳಿಸಿದ ಕೀರ್ತಿ ಭೂಪಿಂದರ್‌ ಸಿಂಗ್‌ ಹೂಡಾ ಅವರಿಗೆ ಸಲ್ಲತ್ತದೆ. ಇಷ್ಟು ದಿನದ ತಮ್ಮ ರಾಜಕೀಯ ಜೀವನದಲ್ಲಿ ಹೂಡಾ ಈಗ ಮಿಂಚಿನಂತೆ ಎದ್ದು ಬಂದಿದ್ದಾರೆ. ಕಾಂಗ್ರೆಸ್‌ ಗೆಲುವಿನ ಹಿಂದೆ ಹೂಡಾ ಪರಿಶ್ರಮ, ರಾಜಕೀಯ ಲೆಕ್ಕಾಚಾರ ಎಲ್ಲವೂ ಗೆದ್ದು ಬೀಗಿದೆ.

ಭೂಪಿಂದರ್‌ ಸಿಂಗ್‌ ಹೂಡಾರ ಪಕ್ಷ ಸಂಘಟನೆ, ಪಕ್ಷ ಬಲವರ್ಧನೆಯ ತಾಕತ್ತು, ಕಾಂಗ್ರೆಸ್‌ ವರ್ಚಸ್ಸನ್ನು ಮತ್ತೆ ಮರಳುವಂತೆ ಮಾಡಿದೆ. ಹರ್ಯಾಣದಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗದಿದ್ದರೂ, ಕಾಂಗ್ರೆಸ್‌ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಗೆಲುವು ಸಾಧಿಸಿದೆ. ಇದರ ಹಿಂದೆ ಭೂಪಿಂದರ್‌ ಸಿಂಗ್‌ ಹೂಡಾ ಎದ್ದು ಕಾಣುತ್ತಾರೆ.

೨೦೧೪ರಲ್ಲಿ ಸೋಲಿನ ಕಹಿ ಉಂಡಿದ್ದ ಭೂಪಿಂದರ್‌ ಸಿಂಗ್ ಹೂಡಾ ಈ ಬಾರಿ ಗೆದ್ದಿದ್ದಾರೆ. ಮತದಾರರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್‌ನ ಪ್ರಭಾವಿ ಮತ್ತು ಹಿರಿಯ ನಾಯಕ ಹೂಡಾ ೨೦೦೫ರಿಂದ ೨೦೧೪ರವರೆಗೆ ಹರ್ಯಾಣದ ಮುಖ್ಯಮಂತ್ರಿಯಾಗಿದ್ದರು. ೨೦೦೫, ೨೦೦೯ರಲ್ಲೂ ದಿಗ್ವಿಜಯ ಸಾಧಿಸಿದ್ದರು.  ೨೦೧೪ಕ್ಕೂ ಮೊದಲು ಸೋಲನ್ನು ಕಾಣದ ಕಾಂಗ್ರೆಸ್‌, ೨೦೧೪ರ ವಿಧಾನಸಭೆ ಚುನಾವಣೆಯಲ್ಲಿ ಸೋತಿತ್ತು. ೧೯೭೨ರ ನಂತರ ಮೊದಲ ಬಾರಿಗೆ ಕಾಂಗ್ರೆಸ್ ಪರಾಜಿತಗೊಂಡಿತ್ತು. ಹೀಗಾಗಿ ೨೦೧೪ರಲ್ಲಿ ಭೂಪಿಂದರ್‌ ಸಿಂಗ್‌ ಹೂಡಾ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದರು. ನಂತರ ೨೦೧೪ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚಿಸುವಲ್ಲಿ ವಿಫಲರಾಗಿದ್ದರು. ೨೦೧೯ರ ಲೋಕಸಭೆ ಚುನಾವಣೆ ವೇಳೆ ಭೂಪಿಂದರ್‌ ಮಗ ದೀಪೇಂದ್ರ ಸಿಂಗ್‌ ಸೋತರು.

ಕಾನೂನು ಪದವೀಧರ ಭೂಪೇಂದರ್‌ ಸಿಂಗ್‌ ಹೂಡಾ ಹರ್ಯಾಣದ ಒಂಬತ್ತನೇ ಮುಖ್ಯಮಂತ್ರಿಯಾಗಿದ್ದವರು. ೭೨ ವರ್ಷದ ಹೂಡಾ ವಿರುದ್ಧ ಬಿಜೆಪಿ ಸರ್ಕಾರ ಬಂದ ನಂತರ ಅಕ್ರಮ ಭೂವ್ಯವಹಾರ ಚಟುವಟಿಕೆ ಆರೋಪ ಮಾಡಿತ್ತು. ಹೂಡಾ ವಿರುದ್ಧ ಕೇಸ್‌ ಕೂಡ ದಾಖಲಾಗಿತ್ತು. ಹೀಗಾಗಿ ಕೆಲ ದಿನಗಳವರೆಗೆ ಹೂಡಾ ರಾಜಕೀಯವಾಗಿ ಅಷ್ಟಾಗಿ ಚಟುವಟಿಕೆಯಿಂದಿರಲಿಲ್ಲ.

ಹರ್ಯಾಣ ಚುನಾವಣೆಗೂ ಮೊದಲು ಪಕ್ಷದ ಮುಖ್ಯಸ್ಥರಾಗಿದ್ದ ಅಶೋಕ್‌ ತನ್ವಾರ್‌ ರಾಜೀನಾಮೆ ನೀಡಿದ್ದರು. ಬಳಿಕ ಕುಮಾರಿ ಸೆಲ್ಜಾ ಪಕ್ಷದ ಕಾರ್ಯಭಾರ ವಹಿಸಿಕೊಂಡರು. ಪಕ್ಷದಲ್ಲಿ ಸಾಕಷ್ಟು ಬೆಳವಣಿಗೆಗಳಾದ ಹಿನ್ನೆಲೆ ಭೂಪಿಂದರ್‌ ಸಿಂಗ್‌ ಹೂಡಾ ತಾವೇ ಸ್ವತಃ ಪಕ್ಷದ ಪ್ರಚಾರ ಮತ್ತು ಸಂಘಟನೆಗೆ ಟೊಂಕ ಕಟ್ಟಿದರು. ಪರಿಣಾಮ ಇಂದು ಸಂಪೂರ್ಣ ನೆಲಕಚ್ಚಿದ್ದ ಕಾಂಗ್ರೆಸ್‌, ಚೇತರಿಸಿಕೊಂಡಿದ್ದು, ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಗೆಲುವು ಕಂಡಿದೆ. ಇನ್ನು ಸ್ವಲ್ಪ ಪ್ರಯತ್ನಿಸಿದ್ದರೆ ಬಿಜೆಪಿಯನ್ನು ಮಣಿಸಬಹುದಿತ್ತು ಎನ್ನುವ ಮಾತುಗಳು ಕೇಳಿ ಬಂದಿವೆ.

ಹೂಡಾ ಮತ್ತು ಸೆಲ್ಜಾ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಎತ್ತಿ ಹಿಡಿಕದರು. ನಿರುದ್ಯೋಗ, ಕಾನೂನು ಬದಲಾವಣೆ, ಕೃಷಿ ಸಂಬಂಧಿತ ಸಮಸ್ಯೆಗಳು, ಆರ್ಥಿಕ ಕುಸಿತ, ನೌಕರರಲ್ಲಿ ಕೆಲಸ ಕಳೆದುಕೊಳ್ಳುವ ಭಯ ಸೇರಿದಂತೆ ಹಲವು ವಿಷಯಗಳನ್ನು ಖಂಡಿಸಿದರು. ಜತೆಗೆ ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಷದ ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ಕೊಡುವತ್ತ ನಿರ್ಧರಿಸಲಾಗಿದೆ. ಒಟ್ಟಿನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸಮನಾಗಿ ಠಕ್ಕರ್‌ ಕೊಟ್ಟಿರುವ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೇರುವ ಎಲ್ಲ ಸೂಚನೆಗಳನ್ನು ಜೀವಂತವಾಗಿರಿಸಿದೆ. ೯೦ ಸ್ಥಾನಗಳಲ್ಲಿ ೩೧ ಸ್ಥಾನಗಳನ್ನು ಕಾಂಗ್ರೆಸ್‌ ಗೆದ್ದಿದ್ದರೆ, ೪೦ ಬಿಜೆಪಿ ಗೆದ್ದಿದೆ. ಇಲ್ಲಿ ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್‌ ೪೬ ಆಗಿದೆ. ಅಂದಹಾಗೇ ೨೦೧೪ರ ಚುನಾವಣೆಯಲ್ಲಿ ಕಾಂಗ್ರೆಸ್‌ ಕೇವಲ ೧೫ ಸ್ಥಾನಗಳನ್ನಷ್ಟೇ ಗೆದ್ದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...