HomeUncategorizedಹರ್ಯಾಣದಲ್ಲಿ ಕಾಂಗ್ರೆಸ್‌ ಗೆಲುವಿನ ಹಿಂದೆ ಭೂಪಿಂದರ್‌ ಸಿಂಗ್ ಹೂಡಾ ಮಿಂಚು

ಹರ್ಯಾಣದಲ್ಲಿ ಕಾಂಗ್ರೆಸ್‌ ಗೆಲುವಿನ ಹಿಂದೆ ಭೂಪಿಂದರ್‌ ಸಿಂಗ್ ಹೂಡಾ ಮಿಂಚು

- Advertisement -
- Advertisement -

ಹರ್ಯಾಣ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್‌ನಲ್ಲಿ ಕೇಳಿ ಬರುತ್ತಿರುವ ಹೆಸರು ಭೂಪಿಂದರ್‌ ಸಿಂಗ್‌ ಹೂಡಾ. ಇಷ್ಟುದಿನ ಮಂಕಾಗಿದ್ದ ಕಾಂಗ್ರೆಸ್‌ನ್ನು ಅರಳಿಸಿದ ಕೀರ್ತಿ ಭೂಪಿಂದರ್‌ ಸಿಂಗ್‌ ಹೂಡಾ ಅವರಿಗೆ ಸಲ್ಲತ್ತದೆ. ಇಷ್ಟು ದಿನದ ತಮ್ಮ ರಾಜಕೀಯ ಜೀವನದಲ್ಲಿ ಹೂಡಾ ಈಗ ಮಿಂಚಿನಂತೆ ಎದ್ದು ಬಂದಿದ್ದಾರೆ. ಕಾಂಗ್ರೆಸ್‌ ಗೆಲುವಿನ ಹಿಂದೆ ಹೂಡಾ ಪರಿಶ್ರಮ, ರಾಜಕೀಯ ಲೆಕ್ಕಾಚಾರ ಎಲ್ಲವೂ ಗೆದ್ದು ಬೀಗಿದೆ.

ಭೂಪಿಂದರ್‌ ಸಿಂಗ್‌ ಹೂಡಾರ ಪಕ್ಷ ಸಂಘಟನೆ, ಪಕ್ಷ ಬಲವರ್ಧನೆಯ ತಾಕತ್ತು, ಕಾಂಗ್ರೆಸ್‌ ವರ್ಚಸ್ಸನ್ನು ಮತ್ತೆ ಮರಳುವಂತೆ ಮಾಡಿದೆ. ಹರ್ಯಾಣದಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗದಿದ್ದರೂ, ಕಾಂಗ್ರೆಸ್‌ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಗೆಲುವು ಸಾಧಿಸಿದೆ. ಇದರ ಹಿಂದೆ ಭೂಪಿಂದರ್‌ ಸಿಂಗ್‌ ಹೂಡಾ ಎದ್ದು ಕಾಣುತ್ತಾರೆ.

೨೦೧೪ರಲ್ಲಿ ಸೋಲಿನ ಕಹಿ ಉಂಡಿದ್ದ ಭೂಪಿಂದರ್‌ ಸಿಂಗ್ ಹೂಡಾ ಈ ಬಾರಿ ಗೆದ್ದಿದ್ದಾರೆ. ಮತದಾರರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್‌ನ ಪ್ರಭಾವಿ ಮತ್ತು ಹಿರಿಯ ನಾಯಕ ಹೂಡಾ ೨೦೦೫ರಿಂದ ೨೦೧೪ರವರೆಗೆ ಹರ್ಯಾಣದ ಮುಖ್ಯಮಂತ್ರಿಯಾಗಿದ್ದರು. ೨೦೦೫, ೨೦೦೯ರಲ್ಲೂ ದಿಗ್ವಿಜಯ ಸಾಧಿಸಿದ್ದರು.  ೨೦೧೪ಕ್ಕೂ ಮೊದಲು ಸೋಲನ್ನು ಕಾಣದ ಕಾಂಗ್ರೆಸ್‌, ೨೦೧೪ರ ವಿಧಾನಸಭೆ ಚುನಾವಣೆಯಲ್ಲಿ ಸೋತಿತ್ತು. ೧೯೭೨ರ ನಂತರ ಮೊದಲ ಬಾರಿಗೆ ಕಾಂಗ್ರೆಸ್ ಪರಾಜಿತಗೊಂಡಿತ್ತು. ಹೀಗಾಗಿ ೨೦೧೪ರಲ್ಲಿ ಭೂಪಿಂದರ್‌ ಸಿಂಗ್‌ ಹೂಡಾ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದರು. ನಂತರ ೨೦೧೪ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚಿಸುವಲ್ಲಿ ವಿಫಲರಾಗಿದ್ದರು. ೨೦೧೯ರ ಲೋಕಸಭೆ ಚುನಾವಣೆ ವೇಳೆ ಭೂಪಿಂದರ್‌ ಮಗ ದೀಪೇಂದ್ರ ಸಿಂಗ್‌ ಸೋತರು.

ಕಾನೂನು ಪದವೀಧರ ಭೂಪೇಂದರ್‌ ಸಿಂಗ್‌ ಹೂಡಾ ಹರ್ಯಾಣದ ಒಂಬತ್ತನೇ ಮುಖ್ಯಮಂತ್ರಿಯಾಗಿದ್ದವರು. ೭೨ ವರ್ಷದ ಹೂಡಾ ವಿರುದ್ಧ ಬಿಜೆಪಿ ಸರ್ಕಾರ ಬಂದ ನಂತರ ಅಕ್ರಮ ಭೂವ್ಯವಹಾರ ಚಟುವಟಿಕೆ ಆರೋಪ ಮಾಡಿತ್ತು. ಹೂಡಾ ವಿರುದ್ಧ ಕೇಸ್‌ ಕೂಡ ದಾಖಲಾಗಿತ್ತು. ಹೀಗಾಗಿ ಕೆಲ ದಿನಗಳವರೆಗೆ ಹೂಡಾ ರಾಜಕೀಯವಾಗಿ ಅಷ್ಟಾಗಿ ಚಟುವಟಿಕೆಯಿಂದಿರಲಿಲ್ಲ.

ಹರ್ಯಾಣ ಚುನಾವಣೆಗೂ ಮೊದಲು ಪಕ್ಷದ ಮುಖ್ಯಸ್ಥರಾಗಿದ್ದ ಅಶೋಕ್‌ ತನ್ವಾರ್‌ ರಾಜೀನಾಮೆ ನೀಡಿದ್ದರು. ಬಳಿಕ ಕುಮಾರಿ ಸೆಲ್ಜಾ ಪಕ್ಷದ ಕಾರ್ಯಭಾರ ವಹಿಸಿಕೊಂಡರು. ಪಕ್ಷದಲ್ಲಿ ಸಾಕಷ್ಟು ಬೆಳವಣಿಗೆಗಳಾದ ಹಿನ್ನೆಲೆ ಭೂಪಿಂದರ್‌ ಸಿಂಗ್‌ ಹೂಡಾ ತಾವೇ ಸ್ವತಃ ಪಕ್ಷದ ಪ್ರಚಾರ ಮತ್ತು ಸಂಘಟನೆಗೆ ಟೊಂಕ ಕಟ್ಟಿದರು. ಪರಿಣಾಮ ಇಂದು ಸಂಪೂರ್ಣ ನೆಲಕಚ್ಚಿದ್ದ ಕಾಂಗ್ರೆಸ್‌, ಚೇತರಿಸಿಕೊಂಡಿದ್ದು, ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಗೆಲುವು ಕಂಡಿದೆ. ಇನ್ನು ಸ್ವಲ್ಪ ಪ್ರಯತ್ನಿಸಿದ್ದರೆ ಬಿಜೆಪಿಯನ್ನು ಮಣಿಸಬಹುದಿತ್ತು ಎನ್ನುವ ಮಾತುಗಳು ಕೇಳಿ ಬಂದಿವೆ.

ಹೂಡಾ ಮತ್ತು ಸೆಲ್ಜಾ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಎತ್ತಿ ಹಿಡಿಕದರು. ನಿರುದ್ಯೋಗ, ಕಾನೂನು ಬದಲಾವಣೆ, ಕೃಷಿ ಸಂಬಂಧಿತ ಸಮಸ್ಯೆಗಳು, ಆರ್ಥಿಕ ಕುಸಿತ, ನೌಕರರಲ್ಲಿ ಕೆಲಸ ಕಳೆದುಕೊಳ್ಳುವ ಭಯ ಸೇರಿದಂತೆ ಹಲವು ವಿಷಯಗಳನ್ನು ಖಂಡಿಸಿದರು. ಜತೆಗೆ ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಷದ ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ಕೊಡುವತ್ತ ನಿರ್ಧರಿಸಲಾಗಿದೆ. ಒಟ್ಟಿನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸಮನಾಗಿ ಠಕ್ಕರ್‌ ಕೊಟ್ಟಿರುವ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೇರುವ ಎಲ್ಲ ಸೂಚನೆಗಳನ್ನು ಜೀವಂತವಾಗಿರಿಸಿದೆ. ೯೦ ಸ್ಥಾನಗಳಲ್ಲಿ ೩೧ ಸ್ಥಾನಗಳನ್ನು ಕಾಂಗ್ರೆಸ್‌ ಗೆದ್ದಿದ್ದರೆ, ೪೦ ಬಿಜೆಪಿ ಗೆದ್ದಿದೆ. ಇಲ್ಲಿ ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್‌ ೪೬ ಆಗಿದೆ. ಅಂದಹಾಗೇ ೨೦೧೪ರ ಚುನಾವಣೆಯಲ್ಲಿ ಕಾಂಗ್ರೆಸ್‌ ಕೇವಲ ೧೫ ಸ್ಥಾನಗಳನ್ನಷ್ಟೇ ಗೆದ್ದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...