HomeUncategorizedಹರ್ಯಾಣದಲ್ಲಿ ಕಾಂಗ್ರೆಸ್‌ ಗೆಲುವಿನ ಹಿಂದೆ ಭೂಪಿಂದರ್‌ ಸಿಂಗ್ ಹೂಡಾ ಮಿಂಚು

ಹರ್ಯಾಣದಲ್ಲಿ ಕಾಂಗ್ರೆಸ್‌ ಗೆಲುವಿನ ಹಿಂದೆ ಭೂಪಿಂದರ್‌ ಸಿಂಗ್ ಹೂಡಾ ಮಿಂಚು

- Advertisement -
- Advertisement -

ಹರ್ಯಾಣ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್‌ನಲ್ಲಿ ಕೇಳಿ ಬರುತ್ತಿರುವ ಹೆಸರು ಭೂಪಿಂದರ್‌ ಸಿಂಗ್‌ ಹೂಡಾ. ಇಷ್ಟುದಿನ ಮಂಕಾಗಿದ್ದ ಕಾಂಗ್ರೆಸ್‌ನ್ನು ಅರಳಿಸಿದ ಕೀರ್ತಿ ಭೂಪಿಂದರ್‌ ಸಿಂಗ್‌ ಹೂಡಾ ಅವರಿಗೆ ಸಲ್ಲತ್ತದೆ. ಇಷ್ಟು ದಿನದ ತಮ್ಮ ರಾಜಕೀಯ ಜೀವನದಲ್ಲಿ ಹೂಡಾ ಈಗ ಮಿಂಚಿನಂತೆ ಎದ್ದು ಬಂದಿದ್ದಾರೆ. ಕಾಂಗ್ರೆಸ್‌ ಗೆಲುವಿನ ಹಿಂದೆ ಹೂಡಾ ಪರಿಶ್ರಮ, ರಾಜಕೀಯ ಲೆಕ್ಕಾಚಾರ ಎಲ್ಲವೂ ಗೆದ್ದು ಬೀಗಿದೆ.

ಭೂಪಿಂದರ್‌ ಸಿಂಗ್‌ ಹೂಡಾರ ಪಕ್ಷ ಸಂಘಟನೆ, ಪಕ್ಷ ಬಲವರ್ಧನೆಯ ತಾಕತ್ತು, ಕಾಂಗ್ರೆಸ್‌ ವರ್ಚಸ್ಸನ್ನು ಮತ್ತೆ ಮರಳುವಂತೆ ಮಾಡಿದೆ. ಹರ್ಯಾಣದಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗದಿದ್ದರೂ, ಕಾಂಗ್ರೆಸ್‌ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಗೆಲುವು ಸಾಧಿಸಿದೆ. ಇದರ ಹಿಂದೆ ಭೂಪಿಂದರ್‌ ಸಿಂಗ್‌ ಹೂಡಾ ಎದ್ದು ಕಾಣುತ್ತಾರೆ.

೨೦೧೪ರಲ್ಲಿ ಸೋಲಿನ ಕಹಿ ಉಂಡಿದ್ದ ಭೂಪಿಂದರ್‌ ಸಿಂಗ್ ಹೂಡಾ ಈ ಬಾರಿ ಗೆದ್ದಿದ್ದಾರೆ. ಮತದಾರರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್‌ನ ಪ್ರಭಾವಿ ಮತ್ತು ಹಿರಿಯ ನಾಯಕ ಹೂಡಾ ೨೦೦೫ರಿಂದ ೨೦೧೪ರವರೆಗೆ ಹರ್ಯಾಣದ ಮುಖ್ಯಮಂತ್ರಿಯಾಗಿದ್ದರು. ೨೦೦೫, ೨೦೦೯ರಲ್ಲೂ ದಿಗ್ವಿಜಯ ಸಾಧಿಸಿದ್ದರು.  ೨೦೧೪ಕ್ಕೂ ಮೊದಲು ಸೋಲನ್ನು ಕಾಣದ ಕಾಂಗ್ರೆಸ್‌, ೨೦೧೪ರ ವಿಧಾನಸಭೆ ಚುನಾವಣೆಯಲ್ಲಿ ಸೋತಿತ್ತು. ೧೯೭೨ರ ನಂತರ ಮೊದಲ ಬಾರಿಗೆ ಕಾಂಗ್ರೆಸ್ ಪರಾಜಿತಗೊಂಡಿತ್ತು. ಹೀಗಾಗಿ ೨೦೧೪ರಲ್ಲಿ ಭೂಪಿಂದರ್‌ ಸಿಂಗ್‌ ಹೂಡಾ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದರು. ನಂತರ ೨೦೧೪ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚಿಸುವಲ್ಲಿ ವಿಫಲರಾಗಿದ್ದರು. ೨೦೧೯ರ ಲೋಕಸಭೆ ಚುನಾವಣೆ ವೇಳೆ ಭೂಪಿಂದರ್‌ ಮಗ ದೀಪೇಂದ್ರ ಸಿಂಗ್‌ ಸೋತರು.

ಕಾನೂನು ಪದವೀಧರ ಭೂಪೇಂದರ್‌ ಸಿಂಗ್‌ ಹೂಡಾ ಹರ್ಯಾಣದ ಒಂಬತ್ತನೇ ಮುಖ್ಯಮಂತ್ರಿಯಾಗಿದ್ದವರು. ೭೨ ವರ್ಷದ ಹೂಡಾ ವಿರುದ್ಧ ಬಿಜೆಪಿ ಸರ್ಕಾರ ಬಂದ ನಂತರ ಅಕ್ರಮ ಭೂವ್ಯವಹಾರ ಚಟುವಟಿಕೆ ಆರೋಪ ಮಾಡಿತ್ತು. ಹೂಡಾ ವಿರುದ್ಧ ಕೇಸ್‌ ಕೂಡ ದಾಖಲಾಗಿತ್ತು. ಹೀಗಾಗಿ ಕೆಲ ದಿನಗಳವರೆಗೆ ಹೂಡಾ ರಾಜಕೀಯವಾಗಿ ಅಷ್ಟಾಗಿ ಚಟುವಟಿಕೆಯಿಂದಿರಲಿಲ್ಲ.

ಹರ್ಯಾಣ ಚುನಾವಣೆಗೂ ಮೊದಲು ಪಕ್ಷದ ಮುಖ್ಯಸ್ಥರಾಗಿದ್ದ ಅಶೋಕ್‌ ತನ್ವಾರ್‌ ರಾಜೀನಾಮೆ ನೀಡಿದ್ದರು. ಬಳಿಕ ಕುಮಾರಿ ಸೆಲ್ಜಾ ಪಕ್ಷದ ಕಾರ್ಯಭಾರ ವಹಿಸಿಕೊಂಡರು. ಪಕ್ಷದಲ್ಲಿ ಸಾಕಷ್ಟು ಬೆಳವಣಿಗೆಗಳಾದ ಹಿನ್ನೆಲೆ ಭೂಪಿಂದರ್‌ ಸಿಂಗ್‌ ಹೂಡಾ ತಾವೇ ಸ್ವತಃ ಪಕ್ಷದ ಪ್ರಚಾರ ಮತ್ತು ಸಂಘಟನೆಗೆ ಟೊಂಕ ಕಟ್ಟಿದರು. ಪರಿಣಾಮ ಇಂದು ಸಂಪೂರ್ಣ ನೆಲಕಚ್ಚಿದ್ದ ಕಾಂಗ್ರೆಸ್‌, ಚೇತರಿಸಿಕೊಂಡಿದ್ದು, ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಗೆಲುವು ಕಂಡಿದೆ. ಇನ್ನು ಸ್ವಲ್ಪ ಪ್ರಯತ್ನಿಸಿದ್ದರೆ ಬಿಜೆಪಿಯನ್ನು ಮಣಿಸಬಹುದಿತ್ತು ಎನ್ನುವ ಮಾತುಗಳು ಕೇಳಿ ಬಂದಿವೆ.

ಹೂಡಾ ಮತ್ತು ಸೆಲ್ಜಾ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಎತ್ತಿ ಹಿಡಿಕದರು. ನಿರುದ್ಯೋಗ, ಕಾನೂನು ಬದಲಾವಣೆ, ಕೃಷಿ ಸಂಬಂಧಿತ ಸಮಸ್ಯೆಗಳು, ಆರ್ಥಿಕ ಕುಸಿತ, ನೌಕರರಲ್ಲಿ ಕೆಲಸ ಕಳೆದುಕೊಳ್ಳುವ ಭಯ ಸೇರಿದಂತೆ ಹಲವು ವಿಷಯಗಳನ್ನು ಖಂಡಿಸಿದರು. ಜತೆಗೆ ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಷದ ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ಕೊಡುವತ್ತ ನಿರ್ಧರಿಸಲಾಗಿದೆ. ಒಟ್ಟಿನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸಮನಾಗಿ ಠಕ್ಕರ್‌ ಕೊಟ್ಟಿರುವ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೇರುವ ಎಲ್ಲ ಸೂಚನೆಗಳನ್ನು ಜೀವಂತವಾಗಿರಿಸಿದೆ. ೯೦ ಸ್ಥಾನಗಳಲ್ಲಿ ೩೧ ಸ್ಥಾನಗಳನ್ನು ಕಾಂಗ್ರೆಸ್‌ ಗೆದ್ದಿದ್ದರೆ, ೪೦ ಬಿಜೆಪಿ ಗೆದ್ದಿದೆ. ಇಲ್ಲಿ ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್‌ ೪೬ ಆಗಿದೆ. ಅಂದಹಾಗೇ ೨೦೧೪ರ ಚುನಾವಣೆಯಲ್ಲಿ ಕಾಂಗ್ರೆಸ್‌ ಕೇವಲ ೧೫ ಸ್ಥಾನಗಳನ್ನಷ್ಟೇ ಗೆದ್ದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...