HomeUncategorizedಹರ್ಯಾಣದಲ್ಲಿ ಕಾಂಗ್ರೆಸ್‌ ಗೆಲುವಿನ ಹಿಂದೆ ಭೂಪಿಂದರ್‌ ಸಿಂಗ್ ಹೂಡಾ ಮಿಂಚು

ಹರ್ಯಾಣದಲ್ಲಿ ಕಾಂಗ್ರೆಸ್‌ ಗೆಲುವಿನ ಹಿಂದೆ ಭೂಪಿಂದರ್‌ ಸಿಂಗ್ ಹೂಡಾ ಮಿಂಚು

- Advertisement -
- Advertisement -

ಹರ್ಯಾಣ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್‌ನಲ್ಲಿ ಕೇಳಿ ಬರುತ್ತಿರುವ ಹೆಸರು ಭೂಪಿಂದರ್‌ ಸಿಂಗ್‌ ಹೂಡಾ. ಇಷ್ಟುದಿನ ಮಂಕಾಗಿದ್ದ ಕಾಂಗ್ರೆಸ್‌ನ್ನು ಅರಳಿಸಿದ ಕೀರ್ತಿ ಭೂಪಿಂದರ್‌ ಸಿಂಗ್‌ ಹೂಡಾ ಅವರಿಗೆ ಸಲ್ಲತ್ತದೆ. ಇಷ್ಟು ದಿನದ ತಮ್ಮ ರಾಜಕೀಯ ಜೀವನದಲ್ಲಿ ಹೂಡಾ ಈಗ ಮಿಂಚಿನಂತೆ ಎದ್ದು ಬಂದಿದ್ದಾರೆ. ಕಾಂಗ್ರೆಸ್‌ ಗೆಲುವಿನ ಹಿಂದೆ ಹೂಡಾ ಪರಿಶ್ರಮ, ರಾಜಕೀಯ ಲೆಕ್ಕಾಚಾರ ಎಲ್ಲವೂ ಗೆದ್ದು ಬೀಗಿದೆ.

ಭೂಪಿಂದರ್‌ ಸಿಂಗ್‌ ಹೂಡಾರ ಪಕ್ಷ ಸಂಘಟನೆ, ಪಕ್ಷ ಬಲವರ್ಧನೆಯ ತಾಕತ್ತು, ಕಾಂಗ್ರೆಸ್‌ ವರ್ಚಸ್ಸನ್ನು ಮತ್ತೆ ಮರಳುವಂತೆ ಮಾಡಿದೆ. ಹರ್ಯಾಣದಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗದಿದ್ದರೂ, ಕಾಂಗ್ರೆಸ್‌ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಗೆಲುವು ಸಾಧಿಸಿದೆ. ಇದರ ಹಿಂದೆ ಭೂಪಿಂದರ್‌ ಸಿಂಗ್‌ ಹೂಡಾ ಎದ್ದು ಕಾಣುತ್ತಾರೆ.

೨೦೧೪ರಲ್ಲಿ ಸೋಲಿನ ಕಹಿ ಉಂಡಿದ್ದ ಭೂಪಿಂದರ್‌ ಸಿಂಗ್ ಹೂಡಾ ಈ ಬಾರಿ ಗೆದ್ದಿದ್ದಾರೆ. ಮತದಾರರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್‌ನ ಪ್ರಭಾವಿ ಮತ್ತು ಹಿರಿಯ ನಾಯಕ ಹೂಡಾ ೨೦೦೫ರಿಂದ ೨೦೧೪ರವರೆಗೆ ಹರ್ಯಾಣದ ಮುಖ್ಯಮಂತ್ರಿಯಾಗಿದ್ದರು. ೨೦೦೫, ೨೦೦೯ರಲ್ಲೂ ದಿಗ್ವಿಜಯ ಸಾಧಿಸಿದ್ದರು.  ೨೦೧೪ಕ್ಕೂ ಮೊದಲು ಸೋಲನ್ನು ಕಾಣದ ಕಾಂಗ್ರೆಸ್‌, ೨೦೧೪ರ ವಿಧಾನಸಭೆ ಚುನಾವಣೆಯಲ್ಲಿ ಸೋತಿತ್ತು. ೧೯೭೨ರ ನಂತರ ಮೊದಲ ಬಾರಿಗೆ ಕಾಂಗ್ರೆಸ್ ಪರಾಜಿತಗೊಂಡಿತ್ತು. ಹೀಗಾಗಿ ೨೦೧೪ರಲ್ಲಿ ಭೂಪಿಂದರ್‌ ಸಿಂಗ್‌ ಹೂಡಾ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದರು. ನಂತರ ೨೦೧೪ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚಿಸುವಲ್ಲಿ ವಿಫಲರಾಗಿದ್ದರು. ೨೦೧೯ರ ಲೋಕಸಭೆ ಚುನಾವಣೆ ವೇಳೆ ಭೂಪಿಂದರ್‌ ಮಗ ದೀಪೇಂದ್ರ ಸಿಂಗ್‌ ಸೋತರು.

ಕಾನೂನು ಪದವೀಧರ ಭೂಪೇಂದರ್‌ ಸಿಂಗ್‌ ಹೂಡಾ ಹರ್ಯಾಣದ ಒಂಬತ್ತನೇ ಮುಖ್ಯಮಂತ್ರಿಯಾಗಿದ್ದವರು. ೭೨ ವರ್ಷದ ಹೂಡಾ ವಿರುದ್ಧ ಬಿಜೆಪಿ ಸರ್ಕಾರ ಬಂದ ನಂತರ ಅಕ್ರಮ ಭೂವ್ಯವಹಾರ ಚಟುವಟಿಕೆ ಆರೋಪ ಮಾಡಿತ್ತು. ಹೂಡಾ ವಿರುದ್ಧ ಕೇಸ್‌ ಕೂಡ ದಾಖಲಾಗಿತ್ತು. ಹೀಗಾಗಿ ಕೆಲ ದಿನಗಳವರೆಗೆ ಹೂಡಾ ರಾಜಕೀಯವಾಗಿ ಅಷ್ಟಾಗಿ ಚಟುವಟಿಕೆಯಿಂದಿರಲಿಲ್ಲ.

ಹರ್ಯಾಣ ಚುನಾವಣೆಗೂ ಮೊದಲು ಪಕ್ಷದ ಮುಖ್ಯಸ್ಥರಾಗಿದ್ದ ಅಶೋಕ್‌ ತನ್ವಾರ್‌ ರಾಜೀನಾಮೆ ನೀಡಿದ್ದರು. ಬಳಿಕ ಕುಮಾರಿ ಸೆಲ್ಜಾ ಪಕ್ಷದ ಕಾರ್ಯಭಾರ ವಹಿಸಿಕೊಂಡರು. ಪಕ್ಷದಲ್ಲಿ ಸಾಕಷ್ಟು ಬೆಳವಣಿಗೆಗಳಾದ ಹಿನ್ನೆಲೆ ಭೂಪಿಂದರ್‌ ಸಿಂಗ್‌ ಹೂಡಾ ತಾವೇ ಸ್ವತಃ ಪಕ್ಷದ ಪ್ರಚಾರ ಮತ್ತು ಸಂಘಟನೆಗೆ ಟೊಂಕ ಕಟ್ಟಿದರು. ಪರಿಣಾಮ ಇಂದು ಸಂಪೂರ್ಣ ನೆಲಕಚ್ಚಿದ್ದ ಕಾಂಗ್ರೆಸ್‌, ಚೇತರಿಸಿಕೊಂಡಿದ್ದು, ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ಗೆಲುವು ಕಂಡಿದೆ. ಇನ್ನು ಸ್ವಲ್ಪ ಪ್ರಯತ್ನಿಸಿದ್ದರೆ ಬಿಜೆಪಿಯನ್ನು ಮಣಿಸಬಹುದಿತ್ತು ಎನ್ನುವ ಮಾತುಗಳು ಕೇಳಿ ಬಂದಿವೆ.

ಹೂಡಾ ಮತ್ತು ಸೆಲ್ಜಾ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಎತ್ತಿ ಹಿಡಿಕದರು. ನಿರುದ್ಯೋಗ, ಕಾನೂನು ಬದಲಾವಣೆ, ಕೃಷಿ ಸಂಬಂಧಿತ ಸಮಸ್ಯೆಗಳು, ಆರ್ಥಿಕ ಕುಸಿತ, ನೌಕರರಲ್ಲಿ ಕೆಲಸ ಕಳೆದುಕೊಳ್ಳುವ ಭಯ ಸೇರಿದಂತೆ ಹಲವು ವಿಷಯಗಳನ್ನು ಖಂಡಿಸಿದರು. ಜತೆಗೆ ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಷದ ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ಕೊಡುವತ್ತ ನಿರ್ಧರಿಸಲಾಗಿದೆ. ಒಟ್ಟಿನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸಮನಾಗಿ ಠಕ್ಕರ್‌ ಕೊಟ್ಟಿರುವ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೇರುವ ಎಲ್ಲ ಸೂಚನೆಗಳನ್ನು ಜೀವಂತವಾಗಿರಿಸಿದೆ. ೯೦ ಸ್ಥಾನಗಳಲ್ಲಿ ೩೧ ಸ್ಥಾನಗಳನ್ನು ಕಾಂಗ್ರೆಸ್‌ ಗೆದ್ದಿದ್ದರೆ, ೪೦ ಬಿಜೆಪಿ ಗೆದ್ದಿದೆ. ಇಲ್ಲಿ ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್‌ ೪೬ ಆಗಿದೆ. ಅಂದಹಾಗೇ ೨೦೧೪ರ ಚುನಾವಣೆಯಲ್ಲಿ ಕಾಂಗ್ರೆಸ್‌ ಕೇವಲ ೧೫ ಸ್ಥಾನಗಳನ್ನಷ್ಟೇ ಗೆದ್ದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...