Homeಮುಖಪುಟ“ಭೂತಕೋಲ ಹಿಂದೂ ಸಂಸ್ಕೃತಿಯಲ್ಲ” ಎಂದ ನಟ ಚೇತನ್‌ ವಿರುದ್ಧ ದೂರು

“ಭೂತಕೋಲ ಹಿಂದೂ ಸಂಸ್ಕೃತಿಯಲ್ಲ” ಎಂದ ನಟ ಚೇತನ್‌ ವಿರುದ್ಧ ದೂರು

- Advertisement -
- Advertisement -

ಕಾಂತಾರ ಚಿತ್ರದ ಕುರಿತು ಪ್ರತಿಕ್ರಿಯೆ ನೀಡುತ್ತಾ “ಭೂತಕೋಲವು ಹಿಂದೂ ಸಂಸ್ಕೃತಿಯಲ್ಲ” ಎಂದಿದ್ದ ನಟ ಚೇತನ್ ವಿರುದ್ಧ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದ ನಟ ಚೇತನ್‌, “ನಮ್ಮ ಕನ್ನಡ ಚಿತ್ರ ‘ಕಾಂತಾರ’ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿ ತಂದಿದೆ. ಭೂತಕೋಲ ಹಿಂದೂ ಸಂಸ್ಕೃತಿ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ. ಇದು ನಿಜವಲ್ಲ” ಎಂದಿದ್ದರು.

ಮುಂದುವರಿದು “ನಮ್ಮ ಪಂಬದ/ನಲಿಕೆ/ಪರವ ಬಹುಜನ ಸಂಪ್ರದಾಯಗಳಾಗಿವೆ. ವೈದಿಕ-ಬ್ರಾಹ್ಮಣೀಯ ಹಿಂದೂ ಧರ್ಮಕ್ಕಿಂತ ಇವು ಹಿಂದಿನವುಗಳಾಗಿವೆ. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲಾಗಲೀ, ಅದರಾಚೆಯಾಗಲೀ ಸತ್ಯಸಂಗತಿಗಳೊಂದಿಗೆ ತೋರಿಸಬೇಕು” ಎಂದು ಆಗ್ರಹಿಸಿದ್ದರು.

ಚೇತನ್ ಅವರ ಅಭಿಪ್ರಾಯಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಅಶ್ಲೀಲ ಪದಗಳಿಂದ ಟ್ರೋಲ್ ಮಾಡಲಾಗಿತ್ತು. ಇಷ್ಟೆಲ್ಲ ಬೆಳವಣಿಗೆಗಳ ನಡುವೆ ಚೇತನ್‌ ಅವರ ಹೇಳಿಕೆಯನ್ನು ಸಮರ್ಥಿಸುವಂತೆ ‘ಒಂದು ಮುತ್ತಿನ ಕಥೆ’ ಸಿನಿಮಾದ ದೃಶ್ಯವೊಂದು ವೈರಲ್ ಆಗಿತ್ತು.

ಭಾರತವು ವೈವಿಧ್ಯಮಯವಾದ ಮತ್ತು ರೋಮಾಂಚಕವಾದ ಸಾಂಸ್ಕೃತಿಕ ಹಾಗೂ ಧಾರ್ಮಿಕ ಸಂಪ್ರದಾಯಗಳನ್ನು ಹೊಂದಿದೆ. ನಮ್ಮ ಆದಿವಾಸಿ/ಅಲೆಮಾರಿ ಮೂಲನಿವಾಸಿ ವಿಶ್ವಗಳನ್ನು ಸಂರಕ್ಷಿಸುವ ಮತ್ತು ಗುರುತಿಸುವ ಆಂದೋಲನವು ನಡೆಯುತ್ತಿದೆ. ಹಿಂದೂ ಧರ್ಮ, ಕ್ರಿಶ್ಚಿಯನ್ ಧರ್ಮ ಮತ್ತು ಇಸ್ಲಾಂ ಧರ್ಮ – ಇಂತಹ ‘ಆಮದು ಮಾಡಿಕೊಂಡ’ ಧರ್ಮಗಳು – ಇತರ ಎಲ್ಲಾ ಧರ್ಮಗಳಂತೆಯೇ ಅವಿಭಾಜ್ಯವಾಗಿವೆ.
ಎಲ್ಲಾ ಅಸಮಾನತೆಗಳನ್ನ ನಾವು ವಿರೋಧಿಸಬೇಕು ಎಂದು ಚೇತನ್ ಮತ್ತೆ ಪೋಸ್ಟ್ ಮಾಡಿದ್ದರು.

ಚೇತನ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ್ದ ಕಾಂತಾರ ಚಿತ್ರ ನಿರ್ದೇಶಕ, ನಟ ರಿಷಬ್ ಶೆಟ್ಟಿ, “ನಾನು ಈ ಸಿನಿಮಾ ಮಾಡಬೇಕಾದ್ರೆ ಮೂಲ ನಿವಾಸಿಗಳು ನನ್ನ ಜೊತೆಯಲ್ಲಿದ್ದರು. ಚಿಕ್ಕಂದಿನಿಂದಲೇ ನಾವು ದೈವ ನಂಬಿದ್ದೇವೆ. ಇಂಥದ್ದೊಂದು ಕತೆ ಹೇಳೋಕೆ ಹೋಗ್ತಿದ್ದೀನಿ ಎಂದಾಗ ಇಲ್ಲಿನ ಮೂಲ ಜನರಿಗೆ ನೋವಾಗಬಾರದು ಎಂದು ನಾನು ಬಯಸಿದ್ದೆ. ಎಲ್ಲೂ ದೈವ ದೇವಾದಿಗಳಿಗೆ, ಇದನ್ನು ಆರಾಧಿಸುವ ಜನರಿಗೆ ನೋವಾಗಬಾರದು, ಎಲ್ಲೂ ಕೂಡ ತಪ್ಪಾಗಬಾರದು ಎಂಬುದು ನನ್ನ ಉದ್ದೇಶ ಆಗಿತ್ತು. ಈ ವಿಚಾರದಲ್ಲಿ ನಾನು ಯಾರಿಗೂ ಉತ್ತರ ಕೊಡಬೇಕಾಗಿಲ್ಲ, ನೋ ಕಮೆಂಟ್ಸ್” ಎಂದಿದ್ದಾರೆ.

ಇದನ್ನೂ ಓದಿ: ಭೂತಾರಾಧನೆ ವೈದಿಕ ಸಂಸ್ಕೃತಿಯಲ್ಲ: ‘ಒಂದು ಮುತ್ತಿನ ಕಥೆ’ ಸಿನಿಮಾ ದೃಶ್ಯ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...