Homeಕರ್ನಾಟಕ​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

- Advertisement -
- Advertisement -


​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.

​ಭೂಸ್ವಾಧೀನದ ವಿರುದ್ಧ ತಿರುಗಿಬಿದ್ದ ಬಿಡದಿ ರೈತರು ಕಳೆದ ಒಂದು ವರ್ಷದಿಂದ ನಿರಂತರ ಧರಣಿ ನಡೆಸುತ್ತಿದ್ದಾರೆ. ಬಿಎಂಆರ್‌ಡಿಎ (ಅಥವಾ ಜಿಬಿಎ) ಟೌನ್‌ಶಿಪ್‌ಗಾಗಿ ಬೈರಮಂಗಲ, ಕೆಂಚಗಾರನಹಳ್ಳಿ ಗ್ರಾಮ ಪಂಚಾಯಿತಿಗಳ 26 ಹಳ್ಳಿಗಳ ಸುಮಾರು 9600 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಸ್ಥಳೀಯ ರೈತರು ಗಟ್ಟಿ ಧ್ವನಿಯಲ್ಲಿ ವಿರೋಧಿಸುತ್ತಿದ್ದಾರೆ. ವಾಸ್ತವವಾಗಿ ಇಲ್ಲಿನ ಬಹುಪಾಲು ಕುಟುಂಬಗಳು ರೈತಾಪಿ ಕುಟುಂಬಗಳಾಗಿದ್ದು, ವೃಷಭಾವತಿ ಜಲಾಶಯಕ್ಕೆ (ರಿಸರ್ವಾಯರ್) ಹೊಂದಿಕೊಂಡಂತಿರುವ ಈ ಭೂಮಿಗಳಲ್ಲಿ ತೋಟಗಾರಿಕೆ ಬೆಳೆಗಳಾದ ತೆಂಗು, ಅಡಿಕೆ, ಮಾವು ಸೇರಿದಂತೆ ರೇಷ್ಮೆಯಂತಹ ವಾಣಿಜ್ಯ ಬೆಳೆಗಳು, ಹಲವು ಬಗೆಯ ಸೊಪ್ಪು, ಹಣ್ಣು, ತರಕಾರಿಗಳು ಹೇರಳವಾಗಿ ಬೆಳೆಯುವ ಪ್ರದೇಶವಾಗಿದೆ. ಹಾಲು ಇಲ್ಲಿನ ಮತ್ತೊಂದು ಬಹುಮುಖ್ಯ ಕೃಷಿ ಉತ್ಪಾದನೆಯಾಗಿದೆ.

​ಕಳೆದ 20 ವರ್ಷಗಳಿಂದಲೂ ಸುದ್ದಿಯಲ್ಲಿರುವ ಈ ಟೌನ್‌ಶಿಪ್ ಯೋಜನೆಯು ಎಲ್ಲಾ ಪಕ್ಷಗಳ ಸರ್ಕಾರಗಳ ಅವಧಿಯನ್ನೂ ದಾಟಿ ಬಂದಿದ್ದು, ಇದೇ ಕಾರಣಕ್ಕೆ ಪರಸ್ಪರ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾಗಿದೆ.
​ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯವರು ಭೂಸ್ವಾಧೀನಕ್ಕೆ ನೋಟಿಫಿಕೇಶನ್ ಮಾಡಿದ್ದು, ಆ ಭೂಮಿಯನ್ನು ಕೆಂಪು ವಲಯವಾಗಿ ಮೀಸಲಿರಿಸಿ ಯಾವುದೇ ರೀತಿಯ ಅಭಿವೃದ್ಧಿಯಾಗದಂತೆ ತಡೆ ಹಿಡಿದಿದ್ದರು. ಆದರೆ, ಇಂದು “ನಾವು ರೈತರ ಪರ, ಭೂಮಿ ಉಳಿಸುತ್ತೇವೆ” ಎಂದು ಸರಣಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಇದನ್ನೇ ದಾಳವಾಗಿ ಬಳಸಿಕೊಳ್ಳುತ್ತಿರುವ ಪ್ರಭಾವಿ ರಾಜಕಾರಣಿ, ಜಿಬಿಎ ನೇತೃತ್ವ ವಹಿಸಿರುವ ಡಿಕೆಶಿ, “ಟೌನ್‌ಶಿಪ್ ಮಾಡಿಯೇ ಸಿದ್ದ” ಎಂದು ಮುನ್ನುಗ್ಗುತ್ತಿದ್ದಾರೆ.

​ಎರಡೂ ಪಕ್ಷಗಳು ಪ್ರತಿದಿನ ಒಂದಿಲ್ಲೊಂದು ದಾಳ ಉರುಳಿಸುತ್ತಿವೆ. ಡಿಕೆಶಿ ಕೆಲವು ರೈತರನ್ನು ಕರೆದು “ಭೂಮಿ ನೀಡಲು ಸಿದ್ಧ” ಎಂದು ಹೇಳಿಕೆ ಕೊಡಿಸಿ, “80% ರೈತರು ಭೂಸ್ವಾಧೀನಕ್ಕೆ ಒಪ್ಪಿದ್ದಾರೆ” ಎಂದು ಪತ್ರಿಕಾಗೋಷ್ಠಿ ನಡೆಸಿದರೆ, ಜೆಡಿಎಸ್ ನಾಯಕರು ಗ್ರಾಮಗಳಿಗೆ ಭೇಟಿ ನೀಡಿ ಜನಾಭಿಪ್ರಾಯ ಸಂಗ್ರಹಣೆ ನಡೆಸುವ ನೆಪದಲ್ಲಿ ರೋಡ್ ಶೋ ನಡೆಸಿ, “ರೈತರು ಭೂಸ್ವಾಧೀನದ ವಿರುದ್ಧವಿದ್ದಾರೆ, ನಾವು ಅವರ ಜೊತೆಗಿದ್ದೇವೆ” ಎಂದಿದ್ದಾರೆ. ರೈತರು ಮಾತ್ರ, “ಡಿಕೆಶಿ ಸುಳ್ಳು ಹೇಳುತ್ತಿದ್ದಾರೆ, ಅವರ ಮಾತು ನಿಜವಾಗಿದ್ದರೆ ಭೂಮಿ ನೀಡಲು ಒಪ್ಪಿರುವ 80% ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಿ” ಎಂದು ಸವಾಲು ಹಾಕಿದ್ದಾರೆ.ದಿಯ ಈ ಟೌನ್‌ಶಿಪ್ ಯೋಜನೆ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದ್ದರೆ, ಈ ರಾಜಕಾರಣಿಗಳ ಪ್ರತಿಷ್ಠೆಯ ಬರಾಟೆಯ ಮಧ್ಯೆ ನಲುಗುತ್ತಿರುವುದು ಮಾತ್ರ ಸಾಮಾನ್ಯ ರೈತರು.

​ಇಲ್ಲಿರುವುದು ಸಣ್ಣ ಮತ್ತು ಅತಿ ಸಣ್ಣ ರೈತರಾದರೂ, ಮೊದಲಿನಿಂದಲೂ ನೀರಾವರಿ ಪ್ರದೇಶವಾಗಿರುವುದರಿಂದ ಮತ್ತು ಬೆಂಗಳೂರಿಗೆ ಹೊಂದಿಕೊಂಡಂತಿರುವುದರಿಂದ, ಈ ಭಾಗದ ಬಹುಪಾಲು ಕುಟುಂಬಗಳು ಆರ್ಥಿಕವಾಗಿ ಸದೃಢವಾಗಿವೆ.

​ಇವೆಲ್ಲವುಗಳ ಮಧ್ಯೆ ರೈತರು ಯಾವುದೇ ಕಾರಣಕ್ಕೂ ಭೂಮಿಯನ್ನು ಬಿಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. ಬಿಡದಿ ರೈತರಿಗೆ ರಾಜ್ಯದಾದ್ಯಂತ ಬೆಂಬಲ ವ್ಯಕ್ತವಾಗುತ್ತಿದ್ದು, ಕರ್ನಾಟಕ ಪ್ರಾಂತ್ಯ ರೈತಸಂಘ, ಕರ್ನಾಟಕ ರಾಜ್ಯ ರೈತಸಂಘ, ಕಾರ್ಮಿಕ ಸಂಘಟನೆಗಳು ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು, ರಾಜಕೀಯ ಪಕ್ಷಗಳು ಸೇರಿದಂತೆ ಹೋರಾಟಗಾರರು, ಬರಹಗಾರರು, ಪ್ರಗತಿಪರರು ರೈತರ ಈ ಹೋರಾಟಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ. ಪ್ರತಿದಿನ ಹೋರಾಟದ ಕಾವು ಹೆಚ್ಚುತ್ತಿದ್ದು ಇದು ನೇರವಾಗಿ ಡಿಕೆಶಿ ವಿರುದ್ಧ ತಿರುಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.

ರಮೇಶ್‌ ಚೀಮಾಚನಹಳ್ಳಿ

ದೇವನಹಳ್ಳಿ ಭೂ ಸ್ವಾದೀನ ವಿರೋಧಿ ಹೋರಾಟದ ಮುಂಚೂಣಿ ನಾಯಕರು ಹಾಗೂ ಸಾಮಾಜಿಕ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ರಮೇಶ್‌ ಚೀಮಾಚನಹಳ್ಳಿ
ರಮೇಶ್‌ ಚೀಮಾಚನಹಳ್ಳಿ
ದೇವನಹಳ್ಳಿ ಭೂ ಸ್ವಾದೀನ ವಿರೋಧಿ ಹೋರಾಟದ ಮುಂಚೂಣಿ ನಾಯಕರು ಹಾಗೂ ಸಾಮಾಜಿಕ ಕಾರ್ಯಕರ್ತರು
- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಒಪ್ಪುವುದಿಲ್ಲ : ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...