Homeಕರ್ನಾಟಕಬಿಡದಿ ಉಪನಗರ ಯೋಜನೆ ‘ಭೂ ಬೆಲೆ ನಿಗದಿ ಸಭೆ’ ನ್ಯಾಯ ನಿರಾಕರಣೆಯ ಪಿತೂರಿ: ಕರ್ನಾಟಕ ಪ್ರಾಂತ...

ಬಿಡದಿ ಉಪನಗರ ಯೋಜನೆ ‘ಭೂ ಬೆಲೆ ನಿಗದಿ ಸಭೆ’ ನ್ಯಾಯ ನಿರಾಕರಣೆಯ ಪಿತೂರಿ: ಕರ್ನಾಟಕ ಪ್ರಾಂತ ರೈತ ಸಂಘ

- Advertisement -
- Advertisement -

ಬಿಡದಿ ಉಪನಗರ ಯೋಜನೆ ಭೂ ಬೆಲೆ ನಿಗದಿ ಸಭೆಯನ್ನು ರದ್ದುಪಡಿಸಲು ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹಿಸಿದೆ. ಈ ಬಗ್ಗೆ ಕರ್ನಾಟಕ ಪ್ರಾಂತ ರೈತ ಸಂಘದ, ರಾಜ್ಯ ಸಮಿತಿ ಅಧ್ಯಕ್ಷರಾಗಿರುವ ಯು. ಬಸವರಾಜ ಅವರ ನೇತೃತ್ವದಲ್ಲಿ ಪತ್ರ ಪ್ರಕಟಿಸಲಾಗಿದೆ. 

ಬಿಡದಿ ಸಮಗ್ರ ಉಪ ನಗರ ಅಭಿವೃದ್ಧಿ ಯೋಜನೆಗಾಗಿ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆ 1987 ರ ಅಡಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹೊರಡಿಸಿರುವ ಬಲವಂತ ಹಾಗೂ ಅನ್ಯಾಯದ ಭೂ ಸ್ವಾಧೀನ ಪ್ರಾಥಮಿಕ ಅಧಿಸೂಚನೆಗೆ ಈಗಾಗಲೇ ಶೇಕಡಾ 80 ಕ್ಕಿಂತ ಹೆಚ್ಚು ರೈತರು ತಮ್ಮ ವಿರೋಧ ಹಾಗೂ ಆಕ್ಷೇಪಣೆಗಳನ್ನು ಲಿಖಿತವಾಗಿ ಸಲ್ಲಿಸಿದ್ದರೂ ಪರಿಗಣಿಸದೇ ಕದ್ದುಮುಚ್ಚಿ ತರಾತರಿಯಲ್ಲಿ ದಿನಾಂಕ 06-11-25 ರಂದು  ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲಾಧಿಕಾರಿಗಳು ಭೂ ಬೆಲೆ ದರ ನಿಗದಿ ಸಭೆ ಏರ್ಪಡಿಸಿರುವುದು ಪಾರ ದರ್ಶಕವಾಗಿಲ್ಲ, ಜೊತೆಗೆ ಇದು ನ್ಯಾಯ ನಿರಾಕರಣೆಯ ಪಿತೂರಿಯಾಗಿದೆ, ಈ ನಡೆಯನ್ನು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.  

ಭೂ ಸ್ವಾಧೀನಕ್ಕೆ ಒಳಪಡಿಸುತ್ತಿರುವ ಭೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಮಾರು 9680 ಎಕರೆ ಭೂಮಿ ಬಹು ವಾರ್ಷಿಕ ಫಲವತ್ತಾದ ಸಮೃದ್ಧ ವರ್ಷ ಪೂರ್ತಿ ನೀರಾವರಿ ಸೌಲಭ್ಯ ಹೊಂದಿರುವ ಕೃಷಿ ಭೂಮಿಯಾಗಿದೆ. ಪ್ರತಿಯೊಬ್ಬ ರೈತರು ಬಹು ಬೆಳೆ ಪದ್ದತಿಯನ್ನು ಅಳವಡಿಸಿಕೊಂಡು ತಮ್ಮ ಸಣ್ಣ ಹಿಡುವಳಿಯಲ್ಲಿ ಸುಸ್ಥಿರವಾದ ಬದುಕನ್ನು ನಡೆಸುತ್ತಿದ್ದಾರೆ. ಹೈನುಗಾರಿಕೆ, ರೇಷ್ಮೆ, ಬಾಳೆ ,ವಿವಿಧ ತರಕಾರಿಗಳು, ಅಡಿಕೆ ,ತೆಂಗು ಮುಂತಾದ ಬೆಳೆಗಳನ್ನು ಬೆಳೆಯುತ್ತಾ ಹತ್ತಿರದ ಬೃಹತ್ ಬೆಂಗಳೂರು ಮಹಾನಗರದ ಆಹಾರದ ಕಣಜವಾಗಿದೆ. ಇಂತಹ ಫಲವತ್ತಾದ ಕೃಷಿ ಭೂಮಿ ರಕ್ಷಣೆಗಾಗಿ ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಹೋರಾಡುತ್ತಿರುವ ರೈತರ ಅಹವಾಲುಗಳನ್ನು ಒಮ್ಮೆಯೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ರವರು ಕೇಳಿಲ್ಲ. ಸ್ಥಳೀಯ  ಶಾಸಕರು ಕೂಡ ಭೈರಮಂಗಲ ಗ್ರಾಮದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿಲ್ಲ.

ಬಲವಂತ ಹಾಗೂ ಅನ್ಯಾಯದ ಭೂ ಸ್ವಾಧೀನದ ಪ್ರಾಥಮಿಕ ಅಧಿಸೂಚನೆ ನೋಟೀಸ್ ಗೆ ಲಿಖಿತವಾಗಿ ಸಾವಿರಾರು ರೈತರು ಸಲ್ಲಿಸಿರುವ ಆಕ್ಷೇಪಣೆಗಳನ್ನು ಇತ್ಯರ್ಥ ಪಡಿಸಿಲ್ಲ. ಕೇವಲ ಪ್ರಾಥಮಿಕ ಅಧಿಸೂಚನೆ ಆಧಾರದ ಮೇಲೆ ಭೂ ದರ ನಿಗದಿ ಸಭೆ ಏರ್ಪಡಿಸಿರುವುದು 2013 ರ ಭೂ ಸ್ವಾಧೀನ ಕಾಯ್ದೆಯ ಗಂಭೀರ ಉಲ್ಲಂಘನೆ ಯಾಗಿದ್ದು ಕೂಡಲೇ ದರ ನಿಗದಿ ಸಭೆ ರದ್ದುಪಡಿಸಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಬೆಂಗಳೂರು ದಕ್ಷಿಣ (ರಾಮನಗರ )ಜಿಲ್ಲಾಡಳಿತ ವನ್ನು ಆಗ್ರಹಿಸುತ್ತದೆ.  

ದರ ನಿಗದಿ ಭೂತವನ್ನು ಮುಂದು ಮಾಡಿ ರೈತರಲ್ಲಿ ಗೊಂದಲ ಸೃಷ್ಟಿಸಿ ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಹೋರಾಡುತ್ತಿರುವ ರೈತರಲ್ಲಿ ಒಡಕು ಸೃಷ್ಟಿಸುವ ರಿಯಲ್ ಎಸ್ಟೇಟ್ ಕಿಡಿಗೇಡಿತನವನ್ನು ಅರ್ಥ ಮಾಡಿಕೊಂಡು ಹಿಂದಿನ ಒಡಕು ಮೂಡಿಸುವ ಪ್ರಯತ್ನ ವನ್ನು ವಿಫಲಗೊಳಿಸಿದಂತೆ ಈ ಒಡಕು ಉಂಟು ಮಾಡುವ ಪಿತೂರಿಯನ್ನು ಕೂಡ ನಿರ್ಣಾಯಕವಾಗಿ ಸೋಲಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಭೈರಮಂಗಲ ಹಾಗೂ ಕಂಚುಗಾರನಹಳ್ಳಿ ರೈತರಲ್ಲಿ ವಿನಂತಿಸುತ್ತದೆ. ಈ ರೈತರ ನ್ಯಾಯಬದ್ದವಾದ ಹೋರಾಟವನ್ನು ರಾಜ್ಯದ ಎಲ್ಲಾ ರೈತರು ಹಾಗೂ ಕಾರ್ಮಿಕರು ಬೆಂಬಲಿಸಬೇಕೆಂದು ಮನವಿ ಮಾಡಿಕೊಳ್ಳುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ’ ಎಂದು ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಗುಡುಗಿದ್ದಾರೆ.  ರಾಜ್ಯದ ಗಮನ‌ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ...

“ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ”: ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ದೆಹಲಿಯ ವಾಯುಮಾಲಿನ್ಯ 'ಗಂಭೀರ ಮಟ್ಟ' ತಲುಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಮಾಸ್ಕ್‌ ಧರಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ವಕೀಲರು ವರ್ಚುವಲ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರೆ ಸಾಕು ಎಂದು ಹೇಳಿದೆ. ವಿವಿಧ ಪ್ರಕರಣಗಳಲ್ಲಿ...

ಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನವೆಂಬರ್ 11 ರಂದು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಆರು ಮಾವೋವಾದಿಗಳಲ್ಲಿ ಮಾವೋವಾದಿ ನಾಯಕಿ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಊರ್ಮಿಳಾ ಮತ್ತು ಬುಚಣ್ಣ...

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.  ನವೆಂಬರ್...

ಗಾಜಾದಲ್ಲಿ ಮುಂದುವರೆದ ಪ್ಯಾಲೆಸ್ತೀನಿಯನ್ ಮಕ್ಕಳ ಕಾಣೆ ಪ್ರಕರಣ: ಮಕ್ಕಳ ಹಕ್ಕುಗಳ ಗುಂಪು

ಬುಧವಾರ ಪ್ಯಾಲೆಸ್ತೀನಿಯನ್ ಹಕ್ಕುಗಳ ಗುಂಪಿನ ವರದಿಯ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಗಾಜಾದಿಂದ ಕನಿಷ್ಠ ಆರು ಮಕ್ಕಳು ಕಣ್ಮರೆಯಾಗಿದ್ದಾರೆ ಎಂದು 'ಮಕ್ತೂಬ್‌ ಮೀಡಿಯಾ' ವರದಿ ಮಾಡಿದೆ. ಕಾಣೆಯಾದ ಮಕ್ಕಳ ಕುಟುಂಬಗಳು ಈ ಪ್ರದೇಶದಲ್ಲಿನ ತನ್ನ ಮಿಲಿಟರಿ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್...

ಅಲಿಘರ್| ಶಾಲೆಯಲ್ಲಿ ‘ವಂದೇ ಮಾತರಂ’ ಹಾಡುವುದಕ್ಕೆ ಆಕ್ಷೇಪಿಸಿದ ಶಿಕ್ಷಕನ ಅಮಾನತು

ಉತ್ತರ ಪ್ರದೇಶದ ಶಾಹಪುರ್ ಕುತುಬ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಆಕ್ಷೇಪಿಸಿದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರಾಷ್ಟ್ರಗೀತೆಯ ನಂತರ ವಂದೇಮಾತರಂ...

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ದಿನಾಂಕ ನಿಗದಿಯಾಗಿದೆ. ನವೆಂಬರ್ 16ರ‌ ಭಾನುವಾರ...

ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ...

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

ಗುಜರಾತ್‌ನ ಅಮ್ರೇಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು, ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಕುಟುಂಬಕ್ಕೆ ಸೇರಿದ ಪ್ರಾಣಿಗಳ ಹತ್ಯೆಯನ್ನು ಕಾನೂನು...