Homeಕರ್ನಾಟಕಬಿಡದಿ ಉಪನಗರ ಯೋಜನೆ ‘ಭೂ ಬೆಲೆ ನಿಗದಿ ಸಭೆ’ ನ್ಯಾಯ ನಿರಾಕರಣೆಯ ಪಿತೂರಿ: ಕರ್ನಾಟಕ ಪ್ರಾಂತ...

ಬಿಡದಿ ಉಪನಗರ ಯೋಜನೆ ‘ಭೂ ಬೆಲೆ ನಿಗದಿ ಸಭೆ’ ನ್ಯಾಯ ನಿರಾಕರಣೆಯ ಪಿತೂರಿ: ಕರ್ನಾಟಕ ಪ್ರಾಂತ ರೈತ ಸಂಘ

- Advertisement -
- Advertisement -

ಬಿಡದಿ ಉಪನಗರ ಯೋಜನೆ ಭೂ ಬೆಲೆ ನಿಗದಿ ಸಭೆಯನ್ನು ರದ್ದುಪಡಿಸಲು ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹಿಸಿದೆ. ಈ ಬಗ್ಗೆ ಕರ್ನಾಟಕ ಪ್ರಾಂತ ರೈತ ಸಂಘದ, ರಾಜ್ಯ ಸಮಿತಿ ಅಧ್ಯಕ್ಷರಾಗಿರುವ ಯು. ಬಸವರಾಜ ಅವರ ನೇತೃತ್ವದಲ್ಲಿ ಪತ್ರ ಪ್ರಕಟಿಸಲಾಗಿದೆ. 

ಬಿಡದಿ ಸಮಗ್ರ ಉಪ ನಗರ ಅಭಿವೃದ್ಧಿ ಯೋಜನೆಗಾಗಿ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆ 1987 ರ ಅಡಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹೊರಡಿಸಿರುವ ಬಲವಂತ ಹಾಗೂ ಅನ್ಯಾಯದ ಭೂ ಸ್ವಾಧೀನ ಪ್ರಾಥಮಿಕ ಅಧಿಸೂಚನೆಗೆ ಈಗಾಗಲೇ ಶೇಕಡಾ 80 ಕ್ಕಿಂತ ಹೆಚ್ಚು ರೈತರು ತಮ್ಮ ವಿರೋಧ ಹಾಗೂ ಆಕ್ಷೇಪಣೆಗಳನ್ನು ಲಿಖಿತವಾಗಿ ಸಲ್ಲಿಸಿದ್ದರೂ ಪರಿಗಣಿಸದೇ ಕದ್ದುಮುಚ್ಚಿ ತರಾತರಿಯಲ್ಲಿ ದಿನಾಂಕ 06-11-25 ರಂದು  ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲಾಧಿಕಾರಿಗಳು ಭೂ ಬೆಲೆ ದರ ನಿಗದಿ ಸಭೆ ಏರ್ಪಡಿಸಿರುವುದು ಪಾರ ದರ್ಶಕವಾಗಿಲ್ಲ, ಜೊತೆಗೆ ಇದು ನ್ಯಾಯ ನಿರಾಕರಣೆಯ ಪಿತೂರಿಯಾಗಿದೆ, ಈ ನಡೆಯನ್ನು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.  

ಭೂ ಸ್ವಾಧೀನಕ್ಕೆ ಒಳಪಡಿಸುತ್ತಿರುವ ಭೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಮಾರು 9680 ಎಕರೆ ಭೂಮಿ ಬಹು ವಾರ್ಷಿಕ ಫಲವತ್ತಾದ ಸಮೃದ್ಧ ವರ್ಷ ಪೂರ್ತಿ ನೀರಾವರಿ ಸೌಲಭ್ಯ ಹೊಂದಿರುವ ಕೃಷಿ ಭೂಮಿಯಾಗಿದೆ. ಪ್ರತಿಯೊಬ್ಬ ರೈತರು ಬಹು ಬೆಳೆ ಪದ್ದತಿಯನ್ನು ಅಳವಡಿಸಿಕೊಂಡು ತಮ್ಮ ಸಣ್ಣ ಹಿಡುವಳಿಯಲ್ಲಿ ಸುಸ್ಥಿರವಾದ ಬದುಕನ್ನು ನಡೆಸುತ್ತಿದ್ದಾರೆ. ಹೈನುಗಾರಿಕೆ, ರೇಷ್ಮೆ, ಬಾಳೆ ,ವಿವಿಧ ತರಕಾರಿಗಳು, ಅಡಿಕೆ ,ತೆಂಗು ಮುಂತಾದ ಬೆಳೆಗಳನ್ನು ಬೆಳೆಯುತ್ತಾ ಹತ್ತಿರದ ಬೃಹತ್ ಬೆಂಗಳೂರು ಮಹಾನಗರದ ಆಹಾರದ ಕಣಜವಾಗಿದೆ. ಇಂತಹ ಫಲವತ್ತಾದ ಕೃಷಿ ಭೂಮಿ ರಕ್ಷಣೆಗಾಗಿ ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಹೋರಾಡುತ್ತಿರುವ ರೈತರ ಅಹವಾಲುಗಳನ್ನು ಒಮ್ಮೆಯೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ರವರು ಕೇಳಿಲ್ಲ. ಸ್ಥಳೀಯ  ಶಾಸಕರು ಕೂಡ ಭೈರಮಂಗಲ ಗ್ರಾಮದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿಲ್ಲ.

ಬಲವಂತ ಹಾಗೂ ಅನ್ಯಾಯದ ಭೂ ಸ್ವಾಧೀನದ ಪ್ರಾಥಮಿಕ ಅಧಿಸೂಚನೆ ನೋಟೀಸ್ ಗೆ ಲಿಖಿತವಾಗಿ ಸಾವಿರಾರು ರೈತರು ಸಲ್ಲಿಸಿರುವ ಆಕ್ಷೇಪಣೆಗಳನ್ನು ಇತ್ಯರ್ಥ ಪಡಿಸಿಲ್ಲ. ಕೇವಲ ಪ್ರಾಥಮಿಕ ಅಧಿಸೂಚನೆ ಆಧಾರದ ಮೇಲೆ ಭೂ ದರ ನಿಗದಿ ಸಭೆ ಏರ್ಪಡಿಸಿರುವುದು 2013 ರ ಭೂ ಸ್ವಾಧೀನ ಕಾಯ್ದೆಯ ಗಂಭೀರ ಉಲ್ಲಂಘನೆ ಯಾಗಿದ್ದು ಕೂಡಲೇ ದರ ನಿಗದಿ ಸಭೆ ರದ್ದುಪಡಿಸಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಬೆಂಗಳೂರು ದಕ್ಷಿಣ (ರಾಮನಗರ )ಜಿಲ್ಲಾಡಳಿತ ವನ್ನು ಆಗ್ರಹಿಸುತ್ತದೆ.  

ದರ ನಿಗದಿ ಭೂತವನ್ನು ಮುಂದು ಮಾಡಿ ರೈತರಲ್ಲಿ ಗೊಂದಲ ಸೃಷ್ಟಿಸಿ ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಹೋರಾಡುತ್ತಿರುವ ರೈತರಲ್ಲಿ ಒಡಕು ಸೃಷ್ಟಿಸುವ ರಿಯಲ್ ಎಸ್ಟೇಟ್ ಕಿಡಿಗೇಡಿತನವನ್ನು ಅರ್ಥ ಮಾಡಿಕೊಂಡು ಹಿಂದಿನ ಒಡಕು ಮೂಡಿಸುವ ಪ್ರಯತ್ನ ವನ್ನು ವಿಫಲಗೊಳಿಸಿದಂತೆ ಈ ಒಡಕು ಉಂಟು ಮಾಡುವ ಪಿತೂರಿಯನ್ನು ಕೂಡ ನಿರ್ಣಾಯಕವಾಗಿ ಸೋಲಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ಭೈರಮಂಗಲ ಹಾಗೂ ಕಂಚುಗಾರನಹಳ್ಳಿ ರೈತರಲ್ಲಿ ವಿನಂತಿಸುತ್ತದೆ. ಈ ರೈತರ ನ್ಯಾಯಬದ್ದವಾದ ಹೋರಾಟವನ್ನು ರಾಜ್ಯದ ಎಲ್ಲಾ ರೈತರು ಹಾಗೂ ಕಾರ್ಮಿಕರು ಬೆಂಬಲಿಸಬೇಕೆಂದು ಮನವಿ ಮಾಡಿಕೊಳ್ಳುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...