Homeಮುಖಪುಟಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

- Advertisement -
- Advertisement -

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ ಮುಂದೆಯೇ ಬಹಿರಂಗವಾಗಿ ಸಾಬೀತುಪಡಿಸಲಿ ಎಂದು ಸಂಯುಕ್ತ ಹೋರಾಟ – ಕರ್ನಾಟಕ ವೇದಿಕೆ ನೇರ ಪಂಥಾಹ್ವಾನ ನೀಡಿದೆ.

ಯೋಜನೆಗೆ ಎಷ್ಟು ಪ್ರಮಾಣದ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬುದನ್ನು ಸ್ವತಃ ಗ್ರಹಿಸಲು ಸರ್ಕಾರ ಹಾಗೂ ಸಂಬಂಧಪಟ್ಟ ಜಿ-ಬಿಡಿ (G-BDA) ಅಧಿಕಾರಿಗಳು ಬಹಿರಂಗ ಜನಸಾಕ್ಷಿ ವಿಚಾರಣೆಯಲ್ಲಿ (Public Hearing) ಖುದ್ದು ಭಾಗವಹಿಸಬೇಕು ಎಂದು ಸಂಘಟನೆಯು ಆಗ್ರಹಿಸಿದೆ.

ರೈತರ ನೈಜ ಅಭಿಪ್ರಾಯ ಹಾಗೂ ಅಳಲುಗಳನ್ನು ದಾಖಲಿಸಲು ಸಂಯುಕ್ತ ಹೋರಾಟ ಕರ್ನಾಟಕ ವೇದಿಕೆಯು ಜುಲೈ 23ರಂದು ಬೆಳಿಗ್ಗೆ 10.30ಕ್ಕೆ ಬಿಡದಿ ಹೋಬಳಿಯ ಬೈರಮಂಗಲದಲ್ಲಿ ಬಹಿರಂಗ ಪಬ್ಲಿಕ್ ಹಿಯರಿಂಗ್ ಆಯೋಜಿಸಿದೆ. ನಿವೃತ್ತ ನ್ಯಾಯಮೂರ್ತಿ ಎ. ಗೋಪಾಲಗೌಡ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಪ್ರಕ್ರಿಯೆಯಲ್ಲಿ ನೂರಾರು ರೈತರು ಭಾಗವಹಿಸಿ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲಿದ್ದಾರೆ. ಈ ವಿಚಾರಣೆಗೆ ಸರ್ಕಾರ, ಅಧಿಕಾರಿಗಳು ಹಾಗೂ ಯೋಜನೆಗೆ ಬೆಂಬಲ ನೀಡುವವರು ಮುಕ್ತವಾಗಿ ಭಾಗವಹಿಸಿ ತಮ್ಮಲ್ಲೇನಾದರೂ ದಾಖಲೆಗಳಿದ್ದರೆ ಮಂಡಿಸಬಹುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹಾಗೂ ಸಂಯುಕ್ತ ಹೋರಾಟ ಕರ್ನಾಟಕದ ಸಂಚಾಲಕರಾದ ಬಡಗಲಪುರ ನಾಗೇಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಜನಶಕ್ತಿಯ ರಾಜ್ಯಾಧ್ಯಕ್ಷರಾದ ನೂರ್ ಶ್ರೀಧರ್, ಸರ್ಕಾರ ಮಾಡುತ್ತಿರುವ ಪ್ರತಿಯೊಂದು ಹೇಳಿಕೆಯನ್ನು ಜನರ ಮುಂದೆಯೇ ಪರಿಶೀಲಿಸುವ ಸಮಯ ಬಂದಿದೆ. ಸತ್ಯವನ್ನು ಮುಚ್ಚಿಡುವ ಅಗತ್ಯ ನಮಗಿಲ್ಲ. ವಾಸ್ತವದಲ್ಲಿ 80%ಕ್ಕೂ ಹೆಚ್ಚು ರೈತರು ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡೆಯನ್ನು ಪ್ರಶ್ನಿಸಿದ ಅವರು, ನೀವು ಮತ್ತೆ ಮತ್ತೆ ಹೆಚ್.ಡಿ. ಕುಮಾರಸ್ವಾಮಿ ಅವರನ್ನೇ ಚರ್ಚೆಗೆ ಕರೆಯುವ ಬದಲು, ನೇರವಾಗಿ ಸಂಕಷ್ಟದಲ್ಲಿರುವ ರೈತರ ಜೊತೆ ಮುಖಾಮುಖಿಯಾಗಿ ಮಾತನಾಡಿ. ರೈತರ ಒಪ್ಪಿಗೆಯಿಲ್ಲದೆ ಭೂಮಿ ಪಡೆಯುವುದಿಲ್ಲ ಎಂದು ಒಂದು ಕಡೆ ಹೇಳುತ್ತಾ, ಇನ್ನೊಂದೆಡೆ ಜಿ-ಬಿಡಿ ಅಧಿಕಾರಿಗಳಿಂದ ಅಂತಿಮ ನೋಟಿಸ್ ಕಳುಹಿಸುತ್ತಿರುವುದು ರೈತರಿಗೆ ಮಾಡುತ್ತಿರುವ ವಂಚನೆ. ಯೋಜನೆ ಪರವಾಗಿ ಮಾತನಾಡುತ್ತಿರುವವರಲ್ಲಿ ಹೆಚ್ಚಿನವರು ನಿಜವಾದ ಕೃಷಿಕರಲ್ಲ, ಬದಲಿಗೆ ಲಾಭದ ಕಣ್ಣಿಟ್ಟಿರುವ ರಿಯಲ್ ಎಸ್ಟೇಟ್ ಹೂಡಿಕೆದಾರರು. ಇದು ರಾಜಕೀಯ ಪಕ್ಷಗಳ ನಡುವಿನ ಯುದ್ಧವಲ್ಲ ಸರ್ಕಾರ ಮತ್ತು ರೈತರ ನಡುವಿನ ಜೀವನ್ಮರಣ ಹೋರಾಟ ಎಂದು ಸ್ಪಷ್ಟಪಡಿಸಿದರು.

ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷರಾದ ಗುರುಪ್ರಸಾದ್ ಕೆರಗೋಡು ಮಾತನಾಡಿ, “ಬಿಡದಿ ಟೌನ್‌ಶಿಪ್‌ಗೆ ಗುರುತಿಸಲಾಗಿರುವ ಪ್ರದೇಶವನ್ನು ಬರಡುಭೂಮಿ ಎಂದು ಸರ್ಕಾರ ಸುಳ್ಳು ಹೇಳುತ್ತಿದೆ. ಅದು ಅತ್ಯಂತ ಫಲವತ್ತಾದ ಭೂಮಿಯಾಗಿದ್ದು, ದಲಿತರು ಸೇರಿದಂತೆ ನೂರಾರು ಕುಟುಂಬಗಳು ಕೃಷಿಯನ್ನೇ ನಂಬಿ ಬದುಕುತ್ತಿವೆ. ಆ ನೆಲವನ್ನು ಉಳಿಸಿಕೊಳ್ಳುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದರು.

ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ಕಾರ್ಪೊರೇಟ್ ಮತ್ತು ಬಂಡವಾಳಶಾಹಿ ಮಾದರಿಯ ವಿರುದ್ಧ ದೇಶದಾದ್ಯಂತ ಜನರ ಪ್ರತಿರೋಧ ಶುರುವಾಗಿದೆ. ಕೊಪ್ಪಳದಲ್ಲಿ ಬಲ್ಡೋಟಾ ಕಂಪನಿ ವಿರುದ್ಧ ನಡೆದ ಚಳುವಳಿಯಂತೆ ಬಿಡದಿಯಲ್ಲೂ ಜನರು ತಮ್ಮ ಹಕ್ಕುಗಳ ರಕ್ಷಣೆಗೆ ನಿಂತಿದ್ದಾರೆ. ಕೇವಲ ಹಣವಿದೆ ಎಂಬ ಕಾರಣಕ್ಕೆ ಕಾರ್ಪೊರೇಟ್ ಕಂಪನಿಗಳಿಗೆ ರೈತರ ಭೂಮಿಯನ್ನು ಕಬಳಿಸಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

ಸ್ಥಳೀಯ ರೈತ ಪ್ರಕಾಶ್ ಮಾತನಾಡಿ, ಮುಖ್ಯಮಂತ್ರಿಗಳ ಭರವಸೆಗೂ ಜಿ-ಬಿಡಿ ಅಧಿಕಾರಿಗಳ ನಡೆಗೂ ಸಂಪೂರ್ಣ ವಿರೋಧಾಭಾಸವಿದೆ. ಅಧಿಕಾರಿಗಳು ಭೂಮಿಯ ವಿಸ್ತೀರ್ಣವನ್ನು ಕಡಿಮೆ ತೋರಿಸಿ ಪರಿಹಾರದಲ್ಲಿ ವಂಚಿಸಲು ಯತ್ನಿಸುತ್ತಿದ್ದಾರೆ. ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು, ಸುಳ್ಳು ಕೇಸ್ ಹಾಕುವ ಬೆದರಿಕೆ ಒಡ್ಡಿ ರೈತರನ್ನು ಮಣಿಸಲು ನೋಡುತ್ತಿದ್ದಾರೆ. ತಜ್ಞರ ಸಲಹಾ ಸಮಿತಿ ವರದಿ ಬರುವವರೆಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ತಕ್ಷಣವೇ ತಡೆಹಿಡಿಯಬೇಕು ಎಂದು ಒತ್ತಾಯಿಸಿದರು.

ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯು ಆಯೋಜಿಸಿರುವ ಈ ಪಬ್ಲಿಕ್ ಹಿಯರಿಂಗ್‌ನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಹಾಗೂ ಯೋಜನೆ ಪರ-ವಿರೋಧ ಇರುವ ಎಲ್ಲರೂ ಭಾಗವಹಿಸಿ ತಮ್ಮ ದಾಖಲೆಗಳನ್ನು ಜನರ ಮುಂದಿಡಲು ಮುಕ್ತ ಅವಕಾಶ ನೀಡಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯ ಬಡಗಲಪುರ ನಾಗೇಂದ್ರ, ಟಿ. ಯಶವಂತ್, ಕೆ. ವಿ. ಭಟ್, ನೂರ್ ಶ್ರೀಧರ್, ಗುರುಪ್ರಸಾದ್ ಕೆರಗೋಡು ಮತ್ತಿತರರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...