Homeಕರ್ನಾಟಕಬೀದರ್ ಎಟಿಎಂ ದರೋಡೆ ಪ್ರಕರಣ: ಹೈದರಾಬಾದ್‌ನಲ್ಲಿ ಆರೋಪಿಗಳು-ಪೊಲೀಸರ ನಡುವೆ ಗುಂಡಿನ ಚಕಮಕಿ

ಬೀದರ್ ಎಟಿಎಂ ದರೋಡೆ ಪ್ರಕರಣ: ಹೈದರಾಬಾದ್‌ನಲ್ಲಿ ಆರೋಪಿಗಳು-ಪೊಲೀಸರ ನಡುವೆ ಗುಂಡಿನ ಚಕಮಕಿ

- Advertisement -
- Advertisement -

ಬೀದರ್‌ನ ಎಟಿಎಂ ದರೋಡೆ ಆರೋಪಿಗಳು ಹಾಗೂ ಕರ್ನಾಟಕ ಪೊಲೀಸರ ನಡುವೆ ಹೈದರಾಬಾದಿನ ಜನನಿಬಿಡ ಅಫ್ಜಲ್‌ಗುಂಜ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.

ಬೀದರ್‌ನಲ್ಲಿ ಎಟಿಎಂಗೆ ತುಂಬಲು ತಂದಿದ್ದ ₹93 ಲಕ್ಷ ದರೋಡೆ ನಡೆಸಿದ ಗ್ಯಾಂಗ್, ನಂತರ ಹೈದರಾಬಾದ್‌ಗೆ ಪಲಾಯನ ಮಾಡಿತು. ಈ ದುಷ್ಕರ್ಮಿಗಳನ್ನು ಬೀದರ್ ಮತ್ತು ಹೈದರಾಬಾದ್ ಪೊಲೀಸರು ಜಂಟಿಯಾಗಿ ಬೆನ್ನುಹತ್ತಿದ್ದರು.

ಪೂರ್ವ ವಲಯ ಡಿಸಿಪಿ ಬಾಲ ಸ್ವಾಮಿ ಅವರ ಪ್ರಕಾರ, ಈ ಗ್ಯಾಂಗ್ ಬೀದರ್‌ನ ಎಸ್‌ಬಿಐ ಬ್ಯಾಂಕ್ ಬಳಿಯ ಎಟಿಎಂಗೆ ಹಣ ತುಂಬಲು ಬಂದಿದ್ದವರ ಮೇಲೆ ಗುಂಡು ಹಾರಿಸಿ ಓರ್ವ ಸಿಬ್ಬಂದಿಯನ್ನು ಕೊಂದಿತು. ಅವರು ಬ್ಯಾಂಕ್ ಸಿಬ್ಬಂದಿಯ ಮೇಲೆ ಮೆಣಸಿನ ಪುಡಿ ಎಸೆದು ಆರು ಸುತ್ತು ಗುಂಡು ಹಾರಿಸಿದರು, ಇದರಿಂದ ಒಬ್ಬ ಉದ್ಯೋಗಿ ಗಿರಿ ವೆಂಕಟೇಶ್ ಸಾವನ್ನಪ್ಪಿದರು ಮತ್ತು ಇನ್ನೊಬ್ಬ ಶಿವ ಕಾಶಿನಾಥ್ ತೀವ್ರವಾಗಿ ಗಾಯಗೊಂಡರು. ಎಟಿಎಂ ಮರುಪೂರಣಕ್ಕಾಗಿ ಮೀಸಲಾದ ಹಣದೊಂದಿಗೆ ಗ್ಯಾಂಗ್ ಪರಾರಿಯಾಗಿತ್ತು.

ಶಂಕಿತರಲ್ಲಿ ಒರ್ವ ‘ಅಮಿತ್ ಕುಮಾರ್’ ಎಂಬ ಹೆಸರಿನಲ್ಲಿ ರಾಯ್‌ಪುರಕ್ಕೆ ಬಸ್ ಟಿಕೆಟ್ ಬುಕ್ ಮಾಡಲು ಪ್ರಯತ್ನಿಸಿದಾಗ ಪೊಲೀಸರ ಕಣ್ಣಿಗೆ ಬಿದ್ದಿದ್ದಾನೆ. ತಮಗೆ ಅರಿವಿಲ್ಲದೆ ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಬೀದರ್ ಪೊಲೀಸ್ ಅಧಿಕಾರಿಗಳು ಶಂಕಿತನನ್ನು ಗುರುತಿಸಿದ್ದಾರೆ. ಬಂಧನಕ್ಕೆ ಯತ್ನಿಸಿದಾಗ, ಆ ಗ್ಯಾಂಗ್ ಗುಂಡು ಹಾರಿಸಿ ಕದ್ದ ಹಣ ಮತ್ತು ಆಯುಧಗಳನ್ನು ತೆಗೆದುಕೊಂಡು ಪರಾರಿಯಾಗಿದೆ.

ಆರೋಪಿಗಳ ಬಂಧನಕ್ಕೆ ಹೈದರಾಬಾದ್ ಪೊಲೀಸರು ತಮ್ಮ ಪ್ರಯತ್ನಗಳನ್ನು ತೀವ್ರಗೊಳಿಸಿದ್ದಾರೆ. ವಿಶೇಷ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದ್ದಾರೆ ಮತ್ತು ಶಂಕಿತರನ್ನು ಬಂಧಿಸಲು ನಾಲ್ಕು ಮೀಸಲು ತಂಡಗಳನ್ನು ನಿಯೋಜಿಸಿದ್ದಾರೆ. “ಆರೋಪಿಗಳು ಶಸ್ತ್ರಸಜ್ಜಿತರು ಮತ್ತು ಅಪಾಯಕಾರಿಗಳಾಗಿದ್ದಾರೆ. ಅವರ ಚಲನವಲನಗಳನ್ನು ಪತ್ತೆಹಚ್ಚುವಾಗ ನಾವು ಸಾರ್ವಜನಿಕ ಸುರಕ್ಷತೆಗೆ ಆದ್ಯತೆ ನೀಡುತ್ತಿದ್ದೇವೆ” ಎಂದು ಡಿಸಿಪಿ ಸ್ವಾಮಿ ಹೇಳಿದರು.

ದರೋಡ ಮತ್ತು ನಂತರದ ಗುಂಡಿನ ಚಕಮಕಿ ಬೀದರ್ ಮತ್ತು ಹೈದರಾಬಾದ್ ಎರಡರಲ್ಲೂ ಜಾಗರೂಕತೆಯನ್ನು ಹೆಚ್ಚಿಸಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆಯನ್ನು ವರದಿ ಮಾಡುವಂತೆ ಅಧಿಕಾರಿಗಳು ನಿವಾಸಿಗಳಲ್ಲಿ ಒತ್ತಾಯಿಸುತ್ತಿದ್ದಾರೆ. ತನಿಖೆಗಳು ನಡೆಯುತ್ತಿವೆ ಮತ್ತು ಹೆಚ್ಚುವರಿ ಸುಳಿವುಗಳಿಗಾಗಿ ಪೊಲೀಸರು ಅಪರಾಧ ಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ಬೀದರ್‌ನಲ್ಲಿ ನಡೆದ ದರೋಡೆಯನ್ನು ಪರಿಶೀಲಿಸಿದ ಗೃಹ ಸಚಿವ ಜಿ. ಪರಮೇಶ್ವರ್, ‘ಪೊಲೀಸರು ಇಬ್ಬರು ಆರೋಪಿಗಳನ್ನು ಗುರುತಿಸಿದ್ದಾರೆ; ಅವರೆಲ್ಲರ ಮೇಲೆ ನಿಗಾ ಇಡುತ್ತಿದ್ದಾರೆ. ಅವರು ಹೈದರಾಬಾದ್‌ಗೆ ಹೋಗಿ ಅಲ್ಲಿಂದ ಬಸ್ ಹತ್ತಲು ಪ್ರಯತ್ನಿಸಿದರು. ಬಹುಶಃ ಒಂದು ಅಥವಾ ಎರಡು ದಿನಗಳಲ್ಲಿ ಅವರನ್ನು ಬಂಧಿಸಬಹುದು” ಎಂದರು.

ಇದನ್ನೂ ಓದಿ; ಬೀದರ್‌| ಗುಂಡು ಹಾರಿಸಿ ₹93 ಲಕ್ಷ ಹಣ ದೋಚಿದ ಬಂದೂಕುದಾರಿಗಳು; ಓರ್ವ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...