Homeಕರ್ನಾಟಕಬೀದರ್ ಎಟಿಎಂ ದರೋಡೆ ಪ್ರಕರಣ: ಹೈದರಾಬಾದ್‌ನಲ್ಲಿ ಆರೋಪಿಗಳು-ಪೊಲೀಸರ ನಡುವೆ ಗುಂಡಿನ ಚಕಮಕಿ

ಬೀದರ್ ಎಟಿಎಂ ದರೋಡೆ ಪ್ರಕರಣ: ಹೈದರಾಬಾದ್‌ನಲ್ಲಿ ಆರೋಪಿಗಳು-ಪೊಲೀಸರ ನಡುವೆ ಗುಂಡಿನ ಚಕಮಕಿ

- Advertisement -
- Advertisement -

ಬೀದರ್‌ನ ಎಟಿಎಂ ದರೋಡೆ ಆರೋಪಿಗಳು ಹಾಗೂ ಕರ್ನಾಟಕ ಪೊಲೀಸರ ನಡುವೆ ಹೈದರಾಬಾದಿನ ಜನನಿಬಿಡ ಅಫ್ಜಲ್‌ಗುಂಜ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.

ಬೀದರ್‌ನಲ್ಲಿ ಎಟಿಎಂಗೆ ತುಂಬಲು ತಂದಿದ್ದ ₹93 ಲಕ್ಷ ದರೋಡೆ ನಡೆಸಿದ ಗ್ಯಾಂಗ್, ನಂತರ ಹೈದರಾಬಾದ್‌ಗೆ ಪಲಾಯನ ಮಾಡಿತು. ಈ ದುಷ್ಕರ್ಮಿಗಳನ್ನು ಬೀದರ್ ಮತ್ತು ಹೈದರಾಬಾದ್ ಪೊಲೀಸರು ಜಂಟಿಯಾಗಿ ಬೆನ್ನುಹತ್ತಿದ್ದರು.

ಪೂರ್ವ ವಲಯ ಡಿಸಿಪಿ ಬಾಲ ಸ್ವಾಮಿ ಅವರ ಪ್ರಕಾರ, ಈ ಗ್ಯಾಂಗ್ ಬೀದರ್‌ನ ಎಸ್‌ಬಿಐ ಬ್ಯಾಂಕ್ ಬಳಿಯ ಎಟಿಎಂಗೆ ಹಣ ತುಂಬಲು ಬಂದಿದ್ದವರ ಮೇಲೆ ಗುಂಡು ಹಾರಿಸಿ ಓರ್ವ ಸಿಬ್ಬಂದಿಯನ್ನು ಕೊಂದಿತು. ಅವರು ಬ್ಯಾಂಕ್ ಸಿಬ್ಬಂದಿಯ ಮೇಲೆ ಮೆಣಸಿನ ಪುಡಿ ಎಸೆದು ಆರು ಸುತ್ತು ಗುಂಡು ಹಾರಿಸಿದರು, ಇದರಿಂದ ಒಬ್ಬ ಉದ್ಯೋಗಿ ಗಿರಿ ವೆಂಕಟೇಶ್ ಸಾವನ್ನಪ್ಪಿದರು ಮತ್ತು ಇನ್ನೊಬ್ಬ ಶಿವ ಕಾಶಿನಾಥ್ ತೀವ್ರವಾಗಿ ಗಾಯಗೊಂಡರು. ಎಟಿಎಂ ಮರುಪೂರಣಕ್ಕಾಗಿ ಮೀಸಲಾದ ಹಣದೊಂದಿಗೆ ಗ್ಯಾಂಗ್ ಪರಾರಿಯಾಗಿತ್ತು.

ಶಂಕಿತರಲ್ಲಿ ಒರ್ವ ‘ಅಮಿತ್ ಕುಮಾರ್’ ಎಂಬ ಹೆಸರಿನಲ್ಲಿ ರಾಯ್‌ಪುರಕ್ಕೆ ಬಸ್ ಟಿಕೆಟ್ ಬುಕ್ ಮಾಡಲು ಪ್ರಯತ್ನಿಸಿದಾಗ ಪೊಲೀಸರ ಕಣ್ಣಿಗೆ ಬಿದ್ದಿದ್ದಾನೆ. ತಮಗೆ ಅರಿವಿಲ್ಲದೆ ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಬೀದರ್ ಪೊಲೀಸ್ ಅಧಿಕಾರಿಗಳು ಶಂಕಿತನನ್ನು ಗುರುತಿಸಿದ್ದಾರೆ. ಬಂಧನಕ್ಕೆ ಯತ್ನಿಸಿದಾಗ, ಆ ಗ್ಯಾಂಗ್ ಗುಂಡು ಹಾರಿಸಿ ಕದ್ದ ಹಣ ಮತ್ತು ಆಯುಧಗಳನ್ನು ತೆಗೆದುಕೊಂಡು ಪರಾರಿಯಾಗಿದೆ.

ಆರೋಪಿಗಳ ಬಂಧನಕ್ಕೆ ಹೈದರಾಬಾದ್ ಪೊಲೀಸರು ತಮ್ಮ ಪ್ರಯತ್ನಗಳನ್ನು ತೀವ್ರಗೊಳಿಸಿದ್ದಾರೆ. ವಿಶೇಷ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದ್ದಾರೆ ಮತ್ತು ಶಂಕಿತರನ್ನು ಬಂಧಿಸಲು ನಾಲ್ಕು ಮೀಸಲು ತಂಡಗಳನ್ನು ನಿಯೋಜಿಸಿದ್ದಾರೆ. “ಆರೋಪಿಗಳು ಶಸ್ತ್ರಸಜ್ಜಿತರು ಮತ್ತು ಅಪಾಯಕಾರಿಗಳಾಗಿದ್ದಾರೆ. ಅವರ ಚಲನವಲನಗಳನ್ನು ಪತ್ತೆಹಚ್ಚುವಾಗ ನಾವು ಸಾರ್ವಜನಿಕ ಸುರಕ್ಷತೆಗೆ ಆದ್ಯತೆ ನೀಡುತ್ತಿದ್ದೇವೆ” ಎಂದು ಡಿಸಿಪಿ ಸ್ವಾಮಿ ಹೇಳಿದರು.

ದರೋಡ ಮತ್ತು ನಂತರದ ಗುಂಡಿನ ಚಕಮಕಿ ಬೀದರ್ ಮತ್ತು ಹೈದರಾಬಾದ್ ಎರಡರಲ್ಲೂ ಜಾಗರೂಕತೆಯನ್ನು ಹೆಚ್ಚಿಸಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆಯನ್ನು ವರದಿ ಮಾಡುವಂತೆ ಅಧಿಕಾರಿಗಳು ನಿವಾಸಿಗಳಲ್ಲಿ ಒತ್ತಾಯಿಸುತ್ತಿದ್ದಾರೆ. ತನಿಖೆಗಳು ನಡೆಯುತ್ತಿವೆ ಮತ್ತು ಹೆಚ್ಚುವರಿ ಸುಳಿವುಗಳಿಗಾಗಿ ಪೊಲೀಸರು ಅಪರಾಧ ಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ಬೀದರ್‌ನಲ್ಲಿ ನಡೆದ ದರೋಡೆಯನ್ನು ಪರಿಶೀಲಿಸಿದ ಗೃಹ ಸಚಿವ ಜಿ. ಪರಮೇಶ್ವರ್, ‘ಪೊಲೀಸರು ಇಬ್ಬರು ಆರೋಪಿಗಳನ್ನು ಗುರುತಿಸಿದ್ದಾರೆ; ಅವರೆಲ್ಲರ ಮೇಲೆ ನಿಗಾ ಇಡುತ್ತಿದ್ದಾರೆ. ಅವರು ಹೈದರಾಬಾದ್‌ಗೆ ಹೋಗಿ ಅಲ್ಲಿಂದ ಬಸ್ ಹತ್ತಲು ಪ್ರಯತ್ನಿಸಿದರು. ಬಹುಶಃ ಒಂದು ಅಥವಾ ಎರಡು ದಿನಗಳಲ್ಲಿ ಅವರನ್ನು ಬಂಧಿಸಬಹುದು” ಎಂದರು.

ಇದನ್ನೂ ಓದಿ; ಬೀದರ್‌| ಗುಂಡು ಹಾರಿಸಿ ₹93 ಲಕ್ಷ ಹಣ ದೋಚಿದ ಬಂದೂಕುದಾರಿಗಳು; ಓರ್ವ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...