Homeಕರ್ನಾಟಕಬೀದರ್‌: ಮದರಸಾಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ, ಪೂಜೆ; ಪ್ರಕರಣ ದಾಖಲು

ಬೀದರ್‌: ಮದರಸಾಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ, ಪೂಜೆ; ಪ್ರಕರಣ ದಾಖಲು

- Advertisement -
- Advertisement -

ಕರ್ನಾಟಕದ ಬೀದರ್‌ನಲ್ಲಿ ದಸರಾ ಮೆರವಣಿಗೆಯ ಭಾಗವಾಗಿದ್ದ ಕಿಡಿಗೇಡಿಗಳ ಗುಂಪೊಂದು ಬುಧವಾರ ರಾತ್ರಿ ಪಾರಂಪರಿಕ ಮದರಸಾವೊಂದಕ್ಕೆ ನುಗ್ಗಿ ‘ಜೈಶ್ರೀರಾಮ್‌’ ಘೋಷಣೆಗಳನ್ನು ಕೂಗಿದೆ. ಕೋಮುಗಲಭೆಯನ್ನು ಹುಟ್ಟಿಹಾಕುವ ಉದ್ದೇಶದಿಂದ ಮದರಸಾದ ಮೂಲೆಯಲ್ಲಿ ಪೂಜೆಯನ್ನೂ ಮಾಡಿದೆ ಎಂದು ವರದಿಯಾಗಿದೆ.

ಒಂಬತ್ತು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಸಿದ್ದು, ನಾಲ್ವರನ್ನು ಬಂಧಿಸಲಾಗಿದೆ. ಶುಕ್ರವಾರದೊಳಗೆ ಎಲ್ಲಾ ಕಿಡಿಗೇಡಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಮುಸ್ಲಿಂ ಸಂಘಟನೆಗಳು ಪ್ರತಿಕ್ರಿಯೆ ನೀಡಿವೆ.

1460ರ ಕಾಲಘಟ್ಟದಲ್ಲಿ ಬೀದರ್‌ನಲ್ಲಿ ಕಟ್ಟಲಾದ ಮಹ್ಮದ್ ಗವಾನ್ ಮದರಸಾವು ಭಾರತೀಯ ಪುರಾತತ್ವ ಸಮೀಕ್ಷೆಯ ಅಡಿಯಲ್ಲಿ ಗೊತ್ತುಪಡಿಸಿದ ಪಾರಂಪರಿಕ ತಾಣವಾಗಿದೆ. ಈ ಕಟ್ಟಡವನ್ನು ರಾಷ್ಟ್ರೀಯ ಪ್ರಾಮುಖ್ಯತೆಯ ಸ್ಮಾರಕಗಳ ಪಟ್ಟಿಯಲ್ಲಿ ಗುರುತಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಿಡಿಗೇಡಿಗಳ ಗುಂಪು ಮದರಸಾದ ಬೀಗ ಒಡೆದು ಒಳಗೆ ನುಗ್ಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೂಜೆ ಮಾಡಲು ಒಂದು ಮೂಲೆಗೆ ತೆರಳುವ ಮೊದಲು ಮದರಸಾದ ಮೆಟ್ಟಿಲುಗಳ ಮೇಲೆ ನಿಂತು ‘ಜೈ ಶ್ರೀ ರಾಮ್’ ಮತ್ತು ‘ಹಿಂದೂ ಧರ್ಮ ಜೈ’ ಎಂಬ ಘೋಷಣೆಗಳನ್ನು ಕೂಗಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವೈರಲ್‌ ಆಗಿದ್ದು, ಕಟ್ಟಡದ ಒಳಗೆ ಹೋಗಲು ಪ್ರಯತ್ನಿಸುತ್ತಿರುವ ಕಿಡಿಗೇಡಿಗಳ ಗುಂಪನ್ನು ವಿಡಿಯೊದಲ್ಲಿ ನೋಡಬಹುದು.

ಬೀದರ್‌ನ ಹಲವಾರು ಮುಸ್ಲಿಂ ಸಂಘಟನೆಗಳು ಘಟನೆಯನ್ನು ಖಂಡಿಸಿ ಪ್ರತಿಭಟನೆಗಳನ್ನು ನಡೆಸಿವೆ. ಎಲ್ಲಾ ಆರೋಪಿಗಳನ್ನು ಬಂಧಿಸದಿದ್ದರೆ ಶುಕ್ರವಾರದ ಪ್ರಾರ್ಥನೆಯ ನಂತರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿವೆ.

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದು ರಾಜ್ಯದ ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಮುಸ್ಲಿಮರನ್ನು ಕೀಳಾಗಿಸುವುದಕ್ಕಾಗಿ ಇಂತಹ ಘಟನೆಗಳು ನಡೆಯುತ್ತಿವೆ” ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರವು ಕೋಮುವಾದಿ ಕೃತ್ಯಗಳಿಗೆ ಬೆಂಬಲ ನೀಡುತ್ತಿರುವ ಆರೋಪಗಳು ಕೇಳಿಬರುತ್ತಿವೆ. ಕೋಮುದ್ವೇಷಿಗಳ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಮ ಜರುಗಿಸದೆ ಇರುವುದು ಟೀಕೆಗೆ ಒಳಗಾಗಿದೆ.

ಆಗಸ್ಟ್‌ನಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಯನ್ನು ಆಚರಿಸಲಾಗಿತ್ತು. ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಕೆಲವರು ಮುಂದಾಗಿದ್ದರು. ಹೈಕೋರ್ಟ್ ಅನುಮತಿಯೂ ಸಿಕ್ಕಿತ್ತು. ಆದರೆ ಸುಪ್ರೀಂ ಕೋರ್ಟ್ ಇದಕ್ಕೆ ತಡೆ ನೀಡಿತ್ತು.

ಬೊಮ್ಮಾಯಿಯವರ ಆಡಳಿತವನ್ನು ನೋಡುತ್ತಿದ್ದರೆ, ಕರ್ನಾಟಕ ರಾಜ್ಯದ ಕಾನೂನು ಸುವ್ಯವಸ್ಥೆ ಹಾಳಾಗಿರುವುದು ಸ್ಪಷ್ಟವಾಗುತ್ತಿದೆ. ಮುಖ್ಯಮಂತ್ರಿಯವರೇ ‘ಉತ್ತರ ಪ್ರದೇಶ’ದ ಮಾದರಿ ಬಗ್ಗೆ ಮಾತನಾಡುತ್ತಿದ್ದಾರೆ.

ಕರಾವಳಿ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮತೀಯ ಗೂಂಡಾಗಿರಿ (ಮಾರಲ್ ಪೊಲೀಸಿಂಗ್) ಹೆಚ್ಚಾಗುತ್ತಿದ್ದಾಗ ರಾಜ್ಯದ ಸಿಎಂ ಅವುಗಳಿಗೆ ಕಡಿವಾಣ ಹಾಕಲು‌ ಯತ್ನಿಸಬೇಕಿತ್ತು.‌ ಆದರೆ ಅವರು ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿ ಆತಂಕ ಮೂಡಿಸಿದರು.‌ ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದಿದ್ದರು.

ಇದರ ನಡುವೆ ಮತಾಂತರ ನಿಷೇಧ ಮಸೂದೆಯನ್ನು ಜಾರಿಗೊಳಿಸಿ, ಶ್ರೇಣೀಕೃತ ಸಮಾಜದ‌ ಯಥಾಸ್ಥಿತಿಗೆ‌ ಸರ್ಕಾರ ಪ್ರಯತ್ನಿಸಿದೆ.‌ ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳನ್ನು‌ ಧರಿಸಬಾರದು, ಏಕರೂಪತೆ ಪಾಲಿಸಬೇಕೆಂದು‌ ಆರಂಭವಾದ ಪ್ರಕರಣ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದು, ಹೈಕೋರ್ಟ್ ಮೆಟ್ಟಿಲೇರಿ ಈಗ ಸುಪ್ರೀಂಕೋರ್ಟ್ ವರೆಗೆ ಹೋಗಿದೆ.‌ ಹಿಜಾಬ್ ಧರಿಸುವುದು ಇಸ್ಲಾಂನಲ್ಲಿ ಕಡ್ಡಾಯ‌‌ ಆಚರಣೆಯಲ್ಲ ಎಂದಿರುವ ಕರ್ನಾಟಕ ಹೈಕೋರ್ಟ್ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ. ತಲೆಯ ಮೇಲೆ ಧರಿಸುವ ಬಟ್ಟೆಯೊಂದನ್ನು ವಿರೋಧಿಸಿ, ಅದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸುತ್ತೇವೆಂದು ಉಡುಪಿಯ ಕಾಲೇಜೊಂದರಲ್ಲಿ ಆರಂಭವಾದ ವಿವಾದ ಇಡೀ ರಾಜ್ಯವನ್ನು ವ್ಯಾಪಿಸಿತು.

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೆಲವು ಮುಸ್ಲಿಂ ಯುವಕರಿಂದ ಕೊಲೆಯಾದ ಬಳಿಕ ಹೆಣದ ರಾಜಕಾರಣಕ್ಕೆ ರಾಜ್ಯ ಸಾಕ್ಷಿಯಾಯಿತು.‌ ಕೊಲೆಗೆ ಕಾರಣ ಬಹಿರಂಗವಾಗುವ ಮುನ್ನವೇ ಹೆಣವನ್ನು ಇಟ್ಟುಕೊಂಡು ಮಾಡಿದ ರಾಜಕಾರಣವನ್ನು ಮಾತ್ರ ಮರೆಯಲಾಗದು.‌ ಕೋಮುಸೂಕ್ಷ್ಮತೆ ಬಲ್ಲವರು ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿದರು.

ಹಿಜಾಬ್ ನಿಷೇಧ ವಿರೋಧಿಸಿ ಮುಸ್ಲಿಂ ವರ್ತಕರು ಪ್ರತಿಭಟನೆ ಮಾಡಿದರೆಂಬ ಒಂದೇ ಕಾರಣಕ್ಕೆ ಹಿಂದೂಗಳ ಜಾತ್ರೆ, ಉತ್ಸವಗಳಲ್ಲಿ ಮುಸ್ಲಿಂ ವರ್ತಕರು ಭಾಗವಹಿಸುವಂತಿಲ್ಲ‌ ಎಂದು ನಿರ್ಬಂಧ ಹೇರುವ ಪ್ರವೃತ್ತಿಗಳು ಕಂಡು ಬಂದವು. ಇದನ್ನೂ ಬಿಜೆಪಿ ಸರ್ಕಾರ ಸಮರ್ಥನೆ ಮಾಡಿಕೊಂಡಿತು.

ಇದನ್ನೂ ಓದಿರಿ: ಬೊಮ್ಮಾಯಿ ಆಡಳಿತದ ಒಂದು ವರ್ಷದಲ್ಲಿ ರಾಜ್ಯ ಕಂಡ ಕೋಮುದ್ವೇಷ ಪ್ರಕರಣಗಳಿವು

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪವನ್ನು ಎದುರಿಸುತ್ತಿರುವ, ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗಳಿಗೆ ಹೆಸರಾದ ರೋಹಿತ್‌ ಚಕ್ರತೀರ್ಥ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನು ರಚಿಸಿತು. ಆದರೆ ಯಾವುದೇ ಆದೇಶವಿಲ್ಲದೆ ಈ ಸಮಿತಿಯು ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿತ್ತು. ಬಹುತೇಕ ಒಂದೇ ಸಮುದಾಯದ ಜನರಿದ್ದ ಈ ಸಮಿತಿಯು ಒಂದರಿಂದ ಹತ್ತನೇ ತರಗತಿವರೆಗಿನ ಪಠ್ಯಪುಸ್ತಕಗಳಲ್ಲಿ ಮಾಡಿದ್ದ ಪರಿಷ್ಕರಣೆಗಳು ಆತಂಕಕಾರಿಯಾಗಿದ್ದವು. ಯಾವುದೇ ಆದೇಶವಿಲ್ಲದೆ ಆಗಿದ್ದ ಪರಿಷ್ಕರಣೆಯನ್ನು ಘಟನೋತ್ತರ ಆದೇಶದ ಮೂಲಕ ಸರ್ಕಾರ ಒಪ್ಪಿಕೊಂಡಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಇತ್ತೀಚೆಗೆ ಮಸೂದ್ ಎಂಬ ಮುಸ್ಲಿಂ ಯುವಕನನ್ನು ಕೊಲೆ ಮಾಡಲಾಯಿತು. ಕ್ಷುಲ್ಲಕ ಕಾರಣಕ್ಕೆ ಮಸೂದ್ (18) ಮೇಲೆ ಕೆಲವರು ಹಲ್ಲೆ ನಡೆಸಿ ಕೊಂದಿದ್ದರು. ನಂತರದಲ್ಲಿ ಅದೇ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಎಂಬ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದರು. ಇಷ್ಟಕ್ಕೆ ನಿಲ್ಲದೆ ಒಂದು ದಿನದ ನಂತರದಲ್ಲಿ ಮಂಗಳೂರಿನ ಸುರತ್ಕಲ್‌ನಲ್ಲಿ ಫಾಝಿಲ್‌ ಎಂಬ ಅಮಾಯಕನನ್ನು ಕೊಲ್ಲಲಾಯಿತು. ಆದರೆ ಪರಿಹಾರ ನೀಡುವಾಗ ಸರ್ಕಾರ ತಾರತಮ್ಯ ನೀತಿ ಅನುಸರಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....