Homeಕರ್ನಾಟಕಬೀದರ್‌: ಮದರಸಾಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ, ಪೂಜೆ; ಪ್ರಕರಣ ದಾಖಲು

ಬೀದರ್‌: ಮದರಸಾಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ, ಪೂಜೆ; ಪ್ರಕರಣ ದಾಖಲು

- Advertisement -
- Advertisement -

ಕರ್ನಾಟಕದ ಬೀದರ್‌ನಲ್ಲಿ ದಸರಾ ಮೆರವಣಿಗೆಯ ಭಾಗವಾಗಿದ್ದ ಕಿಡಿಗೇಡಿಗಳ ಗುಂಪೊಂದು ಬುಧವಾರ ರಾತ್ರಿ ಪಾರಂಪರಿಕ ಮದರಸಾವೊಂದಕ್ಕೆ ನುಗ್ಗಿ ‘ಜೈಶ್ರೀರಾಮ್‌’ ಘೋಷಣೆಗಳನ್ನು ಕೂಗಿದೆ. ಕೋಮುಗಲಭೆಯನ್ನು ಹುಟ್ಟಿಹಾಕುವ ಉದ್ದೇಶದಿಂದ ಮದರಸಾದ ಮೂಲೆಯಲ್ಲಿ ಪೂಜೆಯನ್ನೂ ಮಾಡಿದೆ ಎಂದು ವರದಿಯಾಗಿದೆ.

ಒಂಬತ್ತು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಸಿದ್ದು, ನಾಲ್ವರನ್ನು ಬಂಧಿಸಲಾಗಿದೆ. ಶುಕ್ರವಾರದೊಳಗೆ ಎಲ್ಲಾ ಕಿಡಿಗೇಡಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಮುಸ್ಲಿಂ ಸಂಘಟನೆಗಳು ಪ್ರತಿಕ್ರಿಯೆ ನೀಡಿವೆ.

1460ರ ಕಾಲಘಟ್ಟದಲ್ಲಿ ಬೀದರ್‌ನಲ್ಲಿ ಕಟ್ಟಲಾದ ಮಹ್ಮದ್ ಗವಾನ್ ಮದರಸಾವು ಭಾರತೀಯ ಪುರಾತತ್ವ ಸಮೀಕ್ಷೆಯ ಅಡಿಯಲ್ಲಿ ಗೊತ್ತುಪಡಿಸಿದ ಪಾರಂಪರಿಕ ತಾಣವಾಗಿದೆ. ಈ ಕಟ್ಟಡವನ್ನು ರಾಷ್ಟ್ರೀಯ ಪ್ರಾಮುಖ್ಯತೆಯ ಸ್ಮಾರಕಗಳ ಪಟ್ಟಿಯಲ್ಲಿ ಗುರುತಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಿಡಿಗೇಡಿಗಳ ಗುಂಪು ಮದರಸಾದ ಬೀಗ ಒಡೆದು ಒಳಗೆ ನುಗ್ಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೂಜೆ ಮಾಡಲು ಒಂದು ಮೂಲೆಗೆ ತೆರಳುವ ಮೊದಲು ಮದರಸಾದ ಮೆಟ್ಟಿಲುಗಳ ಮೇಲೆ ನಿಂತು ‘ಜೈ ಶ್ರೀ ರಾಮ್’ ಮತ್ತು ‘ಹಿಂದೂ ಧರ್ಮ ಜೈ’ ಎಂಬ ಘೋಷಣೆಗಳನ್ನು ಕೂಗಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವೈರಲ್‌ ಆಗಿದ್ದು, ಕಟ್ಟಡದ ಒಳಗೆ ಹೋಗಲು ಪ್ರಯತ್ನಿಸುತ್ತಿರುವ ಕಿಡಿಗೇಡಿಗಳ ಗುಂಪನ್ನು ವಿಡಿಯೊದಲ್ಲಿ ನೋಡಬಹುದು.

ಬೀದರ್‌ನ ಹಲವಾರು ಮುಸ್ಲಿಂ ಸಂಘಟನೆಗಳು ಘಟನೆಯನ್ನು ಖಂಡಿಸಿ ಪ್ರತಿಭಟನೆಗಳನ್ನು ನಡೆಸಿವೆ. ಎಲ್ಲಾ ಆರೋಪಿಗಳನ್ನು ಬಂಧಿಸದಿದ್ದರೆ ಶುಕ್ರವಾರದ ಪ್ರಾರ್ಥನೆಯ ನಂತರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿವೆ.

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದು ರಾಜ್ಯದ ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಮುಸ್ಲಿಮರನ್ನು ಕೀಳಾಗಿಸುವುದಕ್ಕಾಗಿ ಇಂತಹ ಘಟನೆಗಳು ನಡೆಯುತ್ತಿವೆ” ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರವು ಕೋಮುವಾದಿ ಕೃತ್ಯಗಳಿಗೆ ಬೆಂಬಲ ನೀಡುತ್ತಿರುವ ಆರೋಪಗಳು ಕೇಳಿಬರುತ್ತಿವೆ. ಕೋಮುದ್ವೇಷಿಗಳ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಮ ಜರುಗಿಸದೆ ಇರುವುದು ಟೀಕೆಗೆ ಒಳಗಾಗಿದೆ.

ಆಗಸ್ಟ್‌ನಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಯನ್ನು ಆಚರಿಸಲಾಗಿತ್ತು. ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಕೆಲವರು ಮುಂದಾಗಿದ್ದರು. ಹೈಕೋರ್ಟ್ ಅನುಮತಿಯೂ ಸಿಕ್ಕಿತ್ತು. ಆದರೆ ಸುಪ್ರೀಂ ಕೋರ್ಟ್ ಇದಕ್ಕೆ ತಡೆ ನೀಡಿತ್ತು.

ಬೊಮ್ಮಾಯಿಯವರ ಆಡಳಿತವನ್ನು ನೋಡುತ್ತಿದ್ದರೆ, ಕರ್ನಾಟಕ ರಾಜ್ಯದ ಕಾನೂನು ಸುವ್ಯವಸ್ಥೆ ಹಾಳಾಗಿರುವುದು ಸ್ಪಷ್ಟವಾಗುತ್ತಿದೆ. ಮುಖ್ಯಮಂತ್ರಿಯವರೇ ‘ಉತ್ತರ ಪ್ರದೇಶ’ದ ಮಾದರಿ ಬಗ್ಗೆ ಮಾತನಾಡುತ್ತಿದ್ದಾರೆ.

ಕರಾವಳಿ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮತೀಯ ಗೂಂಡಾಗಿರಿ (ಮಾರಲ್ ಪೊಲೀಸಿಂಗ್) ಹೆಚ್ಚಾಗುತ್ತಿದ್ದಾಗ ರಾಜ್ಯದ ಸಿಎಂ ಅವುಗಳಿಗೆ ಕಡಿವಾಣ ಹಾಕಲು‌ ಯತ್ನಿಸಬೇಕಿತ್ತು.‌ ಆದರೆ ಅವರು ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿ ಆತಂಕ ಮೂಡಿಸಿದರು.‌ ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದಿದ್ದರು.

ಇದರ ನಡುವೆ ಮತಾಂತರ ನಿಷೇಧ ಮಸೂದೆಯನ್ನು ಜಾರಿಗೊಳಿಸಿ, ಶ್ರೇಣೀಕೃತ ಸಮಾಜದ‌ ಯಥಾಸ್ಥಿತಿಗೆ‌ ಸರ್ಕಾರ ಪ್ರಯತ್ನಿಸಿದೆ.‌ ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳನ್ನು‌ ಧರಿಸಬಾರದು, ಏಕರೂಪತೆ ಪಾಲಿಸಬೇಕೆಂದು‌ ಆರಂಭವಾದ ಪ್ರಕರಣ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದು, ಹೈಕೋರ್ಟ್ ಮೆಟ್ಟಿಲೇರಿ ಈಗ ಸುಪ್ರೀಂಕೋರ್ಟ್ ವರೆಗೆ ಹೋಗಿದೆ.‌ ಹಿಜಾಬ್ ಧರಿಸುವುದು ಇಸ್ಲಾಂನಲ್ಲಿ ಕಡ್ಡಾಯ‌‌ ಆಚರಣೆಯಲ್ಲ ಎಂದಿರುವ ಕರ್ನಾಟಕ ಹೈಕೋರ್ಟ್ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ. ತಲೆಯ ಮೇಲೆ ಧರಿಸುವ ಬಟ್ಟೆಯೊಂದನ್ನು ವಿರೋಧಿಸಿ, ಅದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸುತ್ತೇವೆಂದು ಉಡುಪಿಯ ಕಾಲೇಜೊಂದರಲ್ಲಿ ಆರಂಭವಾದ ವಿವಾದ ಇಡೀ ರಾಜ್ಯವನ್ನು ವ್ಯಾಪಿಸಿತು.

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೆಲವು ಮುಸ್ಲಿಂ ಯುವಕರಿಂದ ಕೊಲೆಯಾದ ಬಳಿಕ ಹೆಣದ ರಾಜಕಾರಣಕ್ಕೆ ರಾಜ್ಯ ಸಾಕ್ಷಿಯಾಯಿತು.‌ ಕೊಲೆಗೆ ಕಾರಣ ಬಹಿರಂಗವಾಗುವ ಮುನ್ನವೇ ಹೆಣವನ್ನು ಇಟ್ಟುಕೊಂಡು ಮಾಡಿದ ರಾಜಕಾರಣವನ್ನು ಮಾತ್ರ ಮರೆಯಲಾಗದು.‌ ಕೋಮುಸೂಕ್ಷ್ಮತೆ ಬಲ್ಲವರು ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿದರು.

ಹಿಜಾಬ್ ನಿಷೇಧ ವಿರೋಧಿಸಿ ಮುಸ್ಲಿಂ ವರ್ತಕರು ಪ್ರತಿಭಟನೆ ಮಾಡಿದರೆಂಬ ಒಂದೇ ಕಾರಣಕ್ಕೆ ಹಿಂದೂಗಳ ಜಾತ್ರೆ, ಉತ್ಸವಗಳಲ್ಲಿ ಮುಸ್ಲಿಂ ವರ್ತಕರು ಭಾಗವಹಿಸುವಂತಿಲ್ಲ‌ ಎಂದು ನಿರ್ಬಂಧ ಹೇರುವ ಪ್ರವೃತ್ತಿಗಳು ಕಂಡು ಬಂದವು. ಇದನ್ನೂ ಬಿಜೆಪಿ ಸರ್ಕಾರ ಸಮರ್ಥನೆ ಮಾಡಿಕೊಂಡಿತು.

ಇದನ್ನೂ ಓದಿರಿ: ಬೊಮ್ಮಾಯಿ ಆಡಳಿತದ ಒಂದು ವರ್ಷದಲ್ಲಿ ರಾಜ್ಯ ಕಂಡ ಕೋಮುದ್ವೇಷ ಪ್ರಕರಣಗಳಿವು

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪವನ್ನು ಎದುರಿಸುತ್ತಿರುವ, ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗಳಿಗೆ ಹೆಸರಾದ ರೋಹಿತ್‌ ಚಕ್ರತೀರ್ಥ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನು ರಚಿಸಿತು. ಆದರೆ ಯಾವುದೇ ಆದೇಶವಿಲ್ಲದೆ ಈ ಸಮಿತಿಯು ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿತ್ತು. ಬಹುತೇಕ ಒಂದೇ ಸಮುದಾಯದ ಜನರಿದ್ದ ಈ ಸಮಿತಿಯು ಒಂದರಿಂದ ಹತ್ತನೇ ತರಗತಿವರೆಗಿನ ಪಠ್ಯಪುಸ್ತಕಗಳಲ್ಲಿ ಮಾಡಿದ್ದ ಪರಿಷ್ಕರಣೆಗಳು ಆತಂಕಕಾರಿಯಾಗಿದ್ದವು. ಯಾವುದೇ ಆದೇಶವಿಲ್ಲದೆ ಆಗಿದ್ದ ಪರಿಷ್ಕರಣೆಯನ್ನು ಘಟನೋತ್ತರ ಆದೇಶದ ಮೂಲಕ ಸರ್ಕಾರ ಒಪ್ಪಿಕೊಂಡಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಇತ್ತೀಚೆಗೆ ಮಸೂದ್ ಎಂಬ ಮುಸ್ಲಿಂ ಯುವಕನನ್ನು ಕೊಲೆ ಮಾಡಲಾಯಿತು. ಕ್ಷುಲ್ಲಕ ಕಾರಣಕ್ಕೆ ಮಸೂದ್ (18) ಮೇಲೆ ಕೆಲವರು ಹಲ್ಲೆ ನಡೆಸಿ ಕೊಂದಿದ್ದರು. ನಂತರದಲ್ಲಿ ಅದೇ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಎಂಬ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದರು. ಇಷ್ಟಕ್ಕೆ ನಿಲ್ಲದೆ ಒಂದು ದಿನದ ನಂತರದಲ್ಲಿ ಮಂಗಳೂರಿನ ಸುರತ್ಕಲ್‌ನಲ್ಲಿ ಫಾಝಿಲ್‌ ಎಂಬ ಅಮಾಯಕನನ್ನು ಕೊಲ್ಲಲಾಯಿತು. ಆದರೆ ಪರಿಹಾರ ನೀಡುವಾಗ ಸರ್ಕಾರ ತಾರತಮ್ಯ ನೀತಿ ಅನುಸರಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...