Homeಕರ್ನಾಟಕಬೀದರ್ | ಆಸ್ತಿಗಾಗಿ ನಡೆದ ಕೊಲೆಗೆ ಕೋಮು ಬಣ್ಣ ಬಳಿದ ಮಾಧ್ಯಮಗಳು

ಬೀದರ್ | ಆಸ್ತಿಗಾಗಿ ನಡೆದ ಕೊಲೆಗೆ ಕೋಮು ಬಣ್ಣ ಬಳಿದ ಮಾಧ್ಯಮಗಳು

- Advertisement -
- Advertisement -

ಬೀದರ್‌ ಜಿಲ್ಲೆಯಲ್ಲಿ ಆಸ್ತಿಗಾಗಿ ನಡೆದಿದ್ದ ಕೊಲೆಯೊಂದನ್ನು ‘ಕ್ರೈಸ್ತ ಧರ್ಮಕ್ಕೆ ಮತಾಂತರವಾಗಲು ಒಪ್ಪದಿದ್ದಕ್ಕೆ ನಡೆದ ಕೊಲೆ’ ಎಂದು ರಾಜ್ಯದ ಕೆಲ ಮಾಧ್ಯಮಗಳು ಸುಳ್ಳು ಸುದ್ದಿ ಹಬ್ಬಿರುವುದು ಬಯಲಾಗಿದೆ.

ನವೆಂಬರ್ 8ರಂದು ಬೀದರ್ ತಾಲೂಕಿನ ಮನ್ನಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಾತೋಳಿ ಗ್ರಾಮದಲ್ಲಿ ಆಸ್ತಿ ವಿಚಾರಕ್ಕೆ ಕಿವುಡ ಹಾಗೂ ಮೂಗ ವ್ಯಕ್ತಿ ಬಸವರಾಜ್ ನರಸಪ್ಪ ಶೇರಿಕಾರ್ (52) ಎಂಬವರನ್ನು, ಅವರ ಪತ್ನಿ ಮತ್ತು ಮೂವರು ಮಕ್ಕಳು ಸೇರಿ ಮನೆಯಲ್ಲಿ ಕೈಕಾಲು ಕಟ್ಟಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದರು.

ಈ ಘಟನೆಗೆ ಕೋಮು ಬಣ್ಣ ಬಳಿದಿದ್ದ ಕೆಲ ಮಾಧ್ಯಮಗಳು, “ಕ್ರೈಸ್ತ ಧರ್ಮಕ್ಕೆ ಮತಾಂತರವಾಗಲು ಒಪ್ಪದಿದ್ದಕ್ಕೆ ಮೂಗ ವ್ಯಕ್ತಿಯನ್ನು ಹೊಡೆದು ಕೊಂದ ಹೆಂಡತಿ-ಮಕ್ಕಳು” ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿತ್ತು.

ನವೆಂಬರ್ 8ರಂದು ಬೆಳಿಗ್ಗೆ ಬಸವರಾಜ್ ನರಸಪ್ಪ ಮನೆಗೆ ಹೋಗಿದ್ದಾಗ ಮನೆಯವರ ಮಾತು ಕೇಳದ್ದಕ್ಕೆ ಪತ್ನಿ ಅಡೇಮಾ (45), ಪುತ್ರರಾದ ಪ್ರಭಾಕರ್ (25), ಹಣಮಂತ್ (22) ಹಾಗೂ ಪುತ್ರಿ ರತ್ನಮ್ಮಾ (28) ಮನೆಯ ಕೋಣೆಯಲ್ಲಿ ಆತನ ಕೈಕಾಲು ಕಟ್ಟಿಹಾಕಿ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೃತ ವ್ಯಕ್ತಿಯ ಸಹೋದರ ಮಲ್ಲಿಕಾರ್ಜುನ ನರಸಪ್ಪ ಅವರು ಮನ್ನಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

“ಬಸವರಾಜ್ ನರಸಪ್ಪ ಅವರನ್ನು ಆಸ್ತಿ ವಿಚಾರಕ್ಕೆ ಹೆಂಡತಿ ಮಕ್ಕಳು ಕೊಲೆ ಮಾಡಿದ್ದಾರೆ. ಅಲ್ಲದೆ, ಈ ಪ್ರಕರಣದಲ್ಲಿ ಯಾವುದೇ ಮತಾಂತರದ ವಿಚಾರ ಇಲ್ಲ. ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ” ಎಂದು ಘಟನೆ ನಡೆದ ಸಾತೋಳಿ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಈದಿನ.ಕಾಂ ವರದಿ ಮಾಡಿದೆ.

ಈದಿನ.ಕಾಂ ವಿಡಿಯೋ ವರದಿಯಲ್ಲಿ ಕೊಲೆಯಾದ ಬಸವರಾಜ್ ಅವರ ಸಹೋದರ ಮಲ್ಲಿಕಾರ್ಜುನ್ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳು ‘ಪ್ರಕರಣದ ಹಿಂದೆ ಯಾವುದೇ ಮತಾಂತರದ ವಿಷಯ ಇಲ್ಲ’ ಎಂದು ಸ್ಪಷ್ಟವಾಗಿ ಹೇಳುವುದನ್ನು ನೋಡಬಹುದು.

ಇದನ್ನೂ ಓದಿ : ಧಾರ್ಮಿಕ ಕಾರ್ಯಕ್ರಮದಲ್ಲಿ ವಕ್ಫ್ ವಿಚಾರ ಪ್ರಸ್ತಾಪಕ್ಕೆ ಜನರ ವಿರೋಧ; ವೇದಿಕೆ ತೊರೆದ ಯತ್ನಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...