Homeಮುಖಪುಟಬೀದರಿನ ಶಾಹೀನ ಶಾಲೆ ಬ್ರಿಟನ್ನಿನ ಗಾರ್ಡಿಯನ್ನೊಳಗ ಬಂದದ್ದಕ್ಕ ನಾಚಗೋಬೇಕು...

ಬೀದರಿನ ಶಾಹೀನ ಶಾಲೆ ಬ್ರಿಟನ್ನಿನ ಗಾರ್ಡಿಯನ್ನೊಳಗ ಬಂದದ್ದಕ್ಕ ನಾಚಗೋಬೇಕು…

ʻದ ಗಾರ್ಡಿಯನ್ʼ, ಬಿಬಿಸಿ, ಅಲ್ ಝಜೀರಾ, ಯುಕೆ ಟೆಲಿಗ್ರಾಫ, ಮುಂತಾದ ಅಂತಾರಾಷ್ಟ್ರೀಯ ಪೇಪರು, ಟೀವಿ, ವೆಬ್ ಸೈಟಿನ್ಯಾಗ ಛೀ, ಥೂ ಅಂತ ರಾಜ್ಯ ಸರಕಾರಕ್ಕ ಉಗುಳಿದರು.

- Advertisement -
- Advertisement -

ಸುದ್ದಿಯೇನೇ ಮನೋಲ್ಲಾಸಿನಿ

ಇಂಗ್ಲಂಡಿನ ಪ್ರಧಾನಿಯವರು ದಿನಾ ಬೆಳಿಗ್ಗೆ ಓದೋ ಪತ್ರಿಕೆ ʻದ ಗಾರ್ಡಿಯನ್ʼದಾಗ ಬೀದರಿನಂಥಾ ಸಣ್ಣ ಊರಿನ ದೊಡ್ಡು ಸುದ್ದಿ ಬಂತು ಅನ್ನೋದು ಇವತ್ತಿನ ಸುದ್ದಿ.

ಕುರುಡು ನಾಯಿ ಸಂತಿಗೆ ಬಂದಂಗ ಇದು ಯಾಕ ಬಂತು? ಬಂದದ್ದು ಎಂಥಾ ಸುದ್ದಿ? ಅನ್ನೋದನ್ನ ನೋಡೋಣ.

ಅದರಾಗ ಬಂದಿದ್ದು ಅಲ್ಲಮಾ ಇಕಬಾಲ್ ಟ್ರಸ್ಟಿನವರು ನಡೆಸೋ ಶಾಹೀನ್ ಶಾಲೆಯೊಳಗ ಹತ್ತು – ಹನ್ನೊಂದು ವರ್ಷದ ಹುಡುಗ-ಹುಡುಗಿಯರು ಆಡಿದ ನಾಟಕಕ್ಕ ಸಂಬಂಧಪಟ್ಟ ಸುದ್ದಿ. ಅದು ಏನಾತು ಅಂದರ ಅದರಾಗ ಒಂದು ಹುಡುಗಿ ಹಣ್ಣ ಹಣ್ಣ ಮುದಕೀ ಪಾತ್ರ ಮಾಡಿದ್ಲು. ನಮ್ಮ ಕಣ್ಣ ಮುಂದ ಬೆಳದ ಹುಡುಗಾ, ಚಹಾ ಮಾರತಿದ್ದ, ಅಂಥವಾ ಈಗ ದೊಡ್ಡ ಮನಿಷಾ ಆಗ್ಯಾನ, ನಮ್ಮ ದಾಖಲೆ ಕೇಳಲಿಕ್ಕೆ ಹತ್ಯಾನ ಅಂತ ಬೈತಾಳ. ನನ್ನೇನರ ಕಾಗದ ತೋರಸು ಅಂತ ಕೇಳಿದರ ಚಪ್ಪಲ ತೊಗೊಂಡು ಹೊಡೀತೇನಿ ಅಂತ ಅಂತಾಳ. ಇದನ್ನ ದೊಡ್ಡದು ಮಾಡಿ ಪೊಲಿಸರು ಆ ಹುಡುಗಿ ಅವ್ವನ್ನ, ಅಕೀ ಟೀಚರನ ಜೈಲಿಗೆ ಹಾಕ್ಯಾರ.

ಅಷ್ಟ ಅಲ್ಲಾ, ಪೊಲೀಸರು ಆ ಹುಡುಗ – ಹುಡುಗಿಯರನ್ನ ಅವರ ಪಾಲಕರು ಅಥವಾ ವಕೀಲರಿಲ್ಲದೇ ವಿಚಾರಣೆ ಮಾಡ್ಯಾರ. ಪ್ರತಿ ಸಲೆ ನಾಲ್ಕೈದು ತಾಸು ಅವರನ್ನು ಕೂಡಿಸಿಕೊಂಡು ವಿಚಾರಣೆ ಮಾಡ್ಯಾರ. ಖಲಿಸ್ತಾನ ಕೇಸು, ಕಸಾಬ ಕೇಸು, ಕಂದಹಾರ ಅಪಹರಣ ಕೇಸು, ಇಂದಿರಾಗಾಂಧಿ, ರಾಜೀವ ಗಾಂಧಿ ಹತ್ಯೆ ಕೇಸಿನ್ಯಾಗನೂ ಇಷ್ಟು ವಿಚಾರಣೆ ಮಾಡಿದ್ದರೋ ಇಲ್ಲೋ.

ಹಿಂಗ ಬರೆ ಒಂದೆರಡಲ್ಲ, ಬರೋಬ್ಬರಿ ಐದು ಸರೆ ಮಾಡ್ಯಾರ. ಹದಿನೆಂಟು ವರ್ಷಕ್ಕಿಂತ ಚಿಕ್ಕ ಮಕ್ಕಳನ್ನ ಪೊಲೀಸರು ವಿಚಾರಣೆ ಮಾಡಬಾರದು. ಮಾಹಿತಿ ಸಂಗ್ರಹ ಮಾಡಬಹುದು. ಮಾಡುವಾಗ ಅವರ ಪಾಲಕರು ಅಥವಾ ವಕೀಲರು ಇರಬೇಕು ಅಂತ ಅನ್ನೋದು ಸತ್ ಸಂಪ್ರದಾಯ. ಭಾರತ ಸರಕಾರ ಸಹಿ ಮಾಡಿದ ಅಂತಾರಾಷ್ಟ್ರೀಯ ಮಕ್ಕಳ ಹಕ್ಕುಗಳ ಒಪ್ಪಂದದ ಪ್ರಕಾರ ಅದು ಶಿಕ್ಷಾರ್ಹ ಅಪರಾಧ. ಆದರ ಇವೆಲ್ಲಾ ಆ ಪೊಲೀಸರಿಗೆ ನೆನಪಾಗಲಿಲ್ಲ. ಅವರು ರಾಜಕಾರಣಿಗಳ ಒತ್ತಡದಲ್ಲಿ ಮುಸ್ಲಿಂ ಸಾಲಿ ಒಳಗ ನಡಿಯೋದೆಲ್ಲಾ ತಪ್ಪು. ಆ ಹುಡುಗರು ಮುಸ್ಲಿಮರು ಇದ್ದದ್ದಕ್ಕ ಅವರು ಮಾಡಿದ್ದೆಲ್ಲಾ ತಪ್ಪ ಇರಬೇಕು ಅಂತ ಇವರು ನಿರ್ಧಾರ ಮಾಡಿದರು. ಆ ಹುಡುಗ- ಹುಡುಗಿಯರಿಗೆ ಜೀವನಪೂರ್ತಿ ಮರಿಯಲಾರದಂಥಾ ಕೆಟ್ಟ ಅನುಭವ ಮೂಡಿಸಿದರು. ಪೊಲೀಸರ ಕಂಡಾಗೆಲ್ಲಾ ಥರಾ ಥರಾ ಹೆದರೋಹಂಗ ಮಾಡಿದರು.

ಇದೆಲ್ಲಾ ನೋಡಿದ ʻದ ಗಾರ್ಡಿಯನ್ʼ, ಬಿಬಿಸಿ, ಅಲ್ ಝಜೀರಾ, ಯುಕೆ ಟೆಲಿಗ್ರಾಫ, ಮುಂತಾದ ಅಂತಾರಾಷ್ಟ್ರೀಯ ಪೇಪರು, ಟೀವಿ, ವೆಬ್ ಸೈಟಿನ್ಯಾಗ ಛೀ, ಥೂ ಅಂತ ರಾಜ್ಯ ಸರಕಾರಕ್ಕ ಉಗುಳಿದರು. ಈ ಸುದ್ದಿ ಭಾರತದ ಎಲ್ಲಾ ಪ್ರಮುಖ ಪೇಪರಿನ್ಯಾಗನೂ ಬಂತು. ಅಷ್ಟಕ್ಕ ದಪ್ಪ ಚರ್ಮದವರಿಗೆ ಒಂಚೂರು ಚುಚ್ಚಿದಂಗ ಆತು. ಅಲ್ಲಿನ ಪೊಲೀಸ ವರಿಷ್ಠಾಧಿಕಾರಿ ಬದಲಾದರು. ಆದರೂ ಇನ್ನೂ ಆ ಸಾಲಿಯವರಿಗೆ ಪೊಲೀಸರ ಕಿರಿಕಿರಿ ಕಡಿಮಿ ಆಗಿಲ್ಲ.

ಅಷ್ಟಕ್ಕೂ ಆ ಹುಡುಗಿ ಮಾಡಿದ್ದು ಮುದುಕಿಯ ಪಾತ್ರ. ಕೋಲಾರದ ಮುದುಕಿಯೊಬ್ಬಾಕಿಗೆ ಯಾರೋ ನಿನ್ನ ಕಾಗದಾ ಕೇಳಿದರ ಏನು ಮಾಡತೀ ಅಂದಾಗ ಮೆಟ್ಟಿನ್ಯಾಗ ಹೊಡೀತೇನಿ ಅಂದದ್ದು ವಾಟ್ಸಪ್ಪಿನ್ಯಾಗ ಬಂದಿತ್ತು. ಅದನ್ನು ನೋಡಿದ ಪಾಲಕರು- ಹುಡುಗರು ಅದರ ನಾಟಕ ಮಾಡಿದರು. ಇದರ ಹಕೀಕತ್ತು ಏನಪಾ ಅಂದರ ಚರ್ಚಾಸ್ಪದ ಮಾತು ಆಡಿದ್ದು ಆ ಪುಟ್ಟ ಹುಡುಗಿಯಲ್ಲ, ಆ ನಾಟಕದ ಮುದುಕಿಯ ಪಾತ್ರ.

ಈಗ ನಮ್ಮ ಪೊಲೀಸರು ಆ ಹತ್ತು- ಹನ್ನೊಂದರ ಹುಡುಗಾ- ಹುಡುಗಿಯರ ವಿಚಾರಣೆ ನಡಸಬಹುದು ಅಂದರ, ಅವರ ಅವ್ವನ್ನ, ಟೀಚರನ ಜೈಲಿಗೆ ಹಾಕಬಹುದು ಅಂದರ ಯರ‍್ಯಾರನ್ನ ವಿಚಾರಣೆ ನಡಸಬಹುದು, ಯರ‍್ಯಾರನ್ನು ಹಿಡೀಬಹುದು ಅನ್ನೂದನ್ನು ನೋಡೋಣ.

ʻʻಕರ್ಮʼʼ ಅನ್ನೋ ಹಿಂದಿ ಚಲನಚಿತ್ರದಾಗ ಅನುಪಮ ಖೇರ ಅವರು ಡಾಕ್ಟರ್ ಡ್ಯಾಂಗ ಅನ್ನೋ ಹೆಸರಿನ ವಿಲನ್ ಪಾತ್ರ ಮಾಡಿದ್ದರು. ಅದರಾಗ ಅವರು ನಾನು ಇಂಡಿಯಾವನ್ನು ಉಡಾಯಿಸಿ ಬಿಡತೇನಿ ಅಂತ ಮಾತಾಡಿದರು, ಮಿಸೈಲು ತಯಾರಿಸಿದರು, ಹೀರೋಗಳನ್ನು ಗೋಳು ಹೊಯಕೊಂಡರು. ಅವರನ್ನು ವಿಚಾರಣೆ ಮಾಡಬೇಕು.

ಅವರ ಅಪ್ಪ ಪುಷ್ಕರನಾಥ ಹಾಗೂ ಅವ್ವ ದುಲಾರಿ ಅವರನ್ನ ಜೈಲಿಗೆ ಹಾಕಬೇಕು.

ʻನಾಯಕʼ ಚಿತ್ರದಲ್ಲಿ ಅನಿಲಕಪೂರ್ ಅವರು ಮುಖ್ಯಮಂತ್ರಿಯನ್ನು ಹೊಡೆದದ್ದಕ್ಕೆ ಅವರನ್ನು ವಿಚಾರಣೆಗೆ ಒಳಪಡಿಸುವುದಲ್ಲದೇ ಒದ್ದು ಒಳಗೆ ಹಾಕಬೇಕು. ಅವರಪ್ಪ ಸುರಿಂದರ ಕಪೂರ್ ಅವರು ತೀರಿಕೊಂಡಾರ. ರೋಷೋಮನ್ ಚಿತ್ರದಲ್ಲಿ ಮಾಡಿದಂಗ ಅವರ ಆತ್ಮವನ್ನು ಆಹ್ವಾನಿಸಿ ಜೈಲಿಗೆ ಹಾಕಬೇಕು.

ರಾಜೇಂದ್ರ ಕುಮಾರ ಅವರ ʻಶತರಂಜʼ ಚಿತ್ರದಲ್ಲಿ ಮದನ ಪುರಿ ಅವರು ಹಾಗೂ ಅವರ ತಂದೆ ನಿಹಾಲ ಸಿಂಗ್ ಅವರಿಬ್ಬರೂ ಈಗ ಇಲ್ಲ. ಪುರಿ ಅವರು ಭಾರತವನ್ನು ನಾಶಪಡಿಸುವ ಮಾತಾಡಿದ್ದಕ್ಕೆ ಅವರನ್ನು ವಿಚಾರಣೆ ಮಾಡಿ ಅವರ ಅಪ್ಪ ನಿಹಾಲ ಸಿಂಗ್ ಜೊತೆಗೆ ಒಳಗ ಹಾಕಬೇಕು.

ಜಿತೇಂದ್ರ ಅವರ ಫರ್ಜ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿ ದೇಶದ ಮೇಲೆ ಬಾಂಬ ದಾಳಿ ನಡೆಸಿದ ರಾಜನಾಳಾ ಕಾಲೇಶ್ವರ ರಾವು ಅವರು ನಿಧನ ಹೊಂದಿದ್ದಾರೆ. ಅವರ ಆತ್ಮ ಮರಳಿ ಬರಲು ಒಪ್ಪದಿದ್ದರ ಅವರ ಹೆಂಡತಿ – ಮಕ್ಕಳನ್ನ ಜೈಲಿಗೆ ಹಾಕಬೇಕು.

ಮೊನ್ನೆ ಮೊನ್ನೆ ಬಂದ ಆಲಿಯಾ ಭಟ ಅವರ ರಾಝೀ ಸಿನಿಮಾದಾಗ ಪಾಕಿಸ್ತಾನದ ಸೈನ್ಯದ ಕಮಾಂಡರ ಪಾತ್ರ ಮಾಡಿದ್ದ ಅಶ್ವಥ ಭಟ್ ಅವರನ್ನು ಒಳಗ ಹಾಕಬೇಕು.

ಇವೆಲ್ಲಾ ಬರೇ ಉದಾಹರಣೆ ಅಷ್ಟ. ಚೈನಾ, ಪಾಕಿಸ್ತಾನದ ವಿಲನ್‌ಗಳ ಪಾತ್ರ ಮಾಡಿದರ ಜೈಲಿಗೆ ಹಾಕತಾರ ಅಂತ ಗೊತ್ತಾದರ ಸಾಕು, ಧೈರ್ಯವಂತರಿಂದ ತುಂಬಿ ತುಳುಕತಾ ಇರೋ ಹಿಂದಿ ಸಿನಿಮಾ ರಂಗದ ಮಹಾಮಹಿಮರೆಲ್ಲಾ ಅದನ್ನ ಬಿಟ್ಟ ಬಿಡತಾರ. ಬರೇ ನಮ್ಮ ವಜ್ರಮುನಿ, ತೂಗುದೀಪ ಶ್ರೀನಿವಾಸರಂಥಾ ಹಳ್ಳೀ ಗೌಡರ ಪಾತ್ರ ಅಷ್ಟ ಮಾಡತಾರ. ಸಿನಿಮಾರಂಗದ ಭಾರತೀಕರಣ ಆಗತದ.

ಅಂದಂಗ ಶಾಹೀನ ಅಂದರ ಪರ್ಶಿಯನ್- ಉರ್ದು ದಾಗ ಗರುಡ. ಶಾಹೀನ ಅನ್ನೋದರ ಬಗ್ಗೆ ಈ ಯುಗದ ಕವಿ ಅಲ್ಲಮಾ (ಜ್ಞಾನಿ) ಇಕಬಾಲ್ ಏನು ಹೇಳ್ಯಾರ ಅಂತ ನೋಡೋಣ

ʻನೋಡಪಾ ತಮ್ಮಾ ನೀ

ಮಹಾರಾಜರ ಅರಮನಿ ಮ್ಯಾಲೆ

ಅಲ್ಲೆ – ಇಲ್ಲೆ

ಎಲ್ಲಾ ಕಡೆ

ಗೂಡು ಕಟಿಗೋತ ಕೂಡಬ್ಯಾಡʼ

ʻನೀ ಗರುಡ ಅದೀ

ದೊಡ್ ದೊಡ್ಡ ಪರ್ವತದ ನೆತ್ತಿ ಮ್ಯಾಲೆ

ಇರಬೇಕಾದವ ನೀ

ಅಲ್ಲೇ ಇರಂತೀ ಹಾರಿಕೋತ ಹೋಗ್ ಈಗʼ

ʻನೋಡಪಾ ತಮ್ಮಾ,

ನೀ ಗರುಡ ಅದೀ

ಬ್ಯಾರೆ ಏನೇನೂ ಅಲ್ಲ

ಹಾರಿಕೋತ ಇರೋದ ನಿನ್ನ ಕೆಲಸ

ನಿನ್ನೆದುರಿಗೆ ಇರೋದು

ಬರೇ ಒಂದ ಆಕಾಶ ಅಲ್ಲ

ತಿಳಕೋʼ

ಬೀದರಿನ ಶಾಹೀನ ಸಾಲಿಗೂ ದೆಹಲಿಯ ಶಾಹೀನ ಬಾಗಿಗೂ ಏನೂ ಸಂಬಂಧ ಇಲ್ಲ. ಹೆಸರು ಮಾತ್ರ ಒಂದ. ಕನ್ನಡ ಸಿನಿಮಾದಾಗ ಅಪರಾಧ ಆದಮ್ಯಾಲೆ ಬರೋ ಪೊಲಿಸರಿಗೆ ಅದು ಕನ್‌ಫ್ಯೂಸ್ ಆಗಿರಬೇಕು. ಅದಕ್ಕ ಈ ಬಂಧನ- ವಿಚಾರಣೆ ಆಗಿರಬೇಕು, ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಒಟ್ಟಾರೆಯಾಗಿ ಕರ್ನಾಟಕದ ಮಾನ ಮರ್ಯಾದೆಯನ್ನು ನಮ್ಮ ಪೊಲೀಸರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕಿದ್ದಾರೆ. ಇನ್ನಾದರೂ ಇವರು ಬುದ್ದಿ ಕಲಿಯುತ್ತಾರಾ?

  2. ಮಕ್ಕಳ ಭವಿಷ್ಯದ ಬಗ್ಗೆ ಚೂರು ಯೋಚನೆ ಮಾಡದೆ ಕಾನೂನಿನ ವಿರುದ್ಧ ಮಕ್ಕಳಿಗೆ ತೊಂದರೆ ಕೊಟ್ಟು ಮಾಡಬಾರದ ಕೆಲಸ ಮಾಡಿದ, ಈ ವಿಷಯಕ್ಕೆ ಸಂಬಂಧಪಟ್ಟ ಎಲ್ಲಾ ಪೋಲೀಸರನ್ನು ಸಸ್ಪೆಂಡ್ ಮಾಡಬೇಕು ಮತ್ತು ಶಿಕ್ಷೆಗೊಳಪಡಿಸಬೇಕು ಹಾಗಾದರೆ ಮಾತ್ರ ಯಾರೂ ಇಂಥ ಬೇಜವಾಬ್ದಾರಿ ಕೆಲಸ ಮಾಡುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...