Homeಮುಖಪುಟಬೀದರಿನ ಶಾಹೀನ ಶಾಲೆ ಬ್ರಿಟನ್ನಿನ ಗಾರ್ಡಿಯನ್ನೊಳಗ ಬಂದದ್ದಕ್ಕ ನಾಚಗೋಬೇಕು...

ಬೀದರಿನ ಶಾಹೀನ ಶಾಲೆ ಬ್ರಿಟನ್ನಿನ ಗಾರ್ಡಿಯನ್ನೊಳಗ ಬಂದದ್ದಕ್ಕ ನಾಚಗೋಬೇಕು…

ʻದ ಗಾರ್ಡಿಯನ್ʼ, ಬಿಬಿಸಿ, ಅಲ್ ಝಜೀರಾ, ಯುಕೆ ಟೆಲಿಗ್ರಾಫ, ಮುಂತಾದ ಅಂತಾರಾಷ್ಟ್ರೀಯ ಪೇಪರು, ಟೀವಿ, ವೆಬ್ ಸೈಟಿನ್ಯಾಗ ಛೀ, ಥೂ ಅಂತ ರಾಜ್ಯ ಸರಕಾರಕ್ಕ ಉಗುಳಿದರು.

- Advertisement -
- Advertisement -

ಸುದ್ದಿಯೇನೇ ಮನೋಲ್ಲಾಸಿನಿ

ಇಂಗ್ಲಂಡಿನ ಪ್ರಧಾನಿಯವರು ದಿನಾ ಬೆಳಿಗ್ಗೆ ಓದೋ ಪತ್ರಿಕೆ ʻದ ಗಾರ್ಡಿಯನ್ʼದಾಗ ಬೀದರಿನಂಥಾ ಸಣ್ಣ ಊರಿನ ದೊಡ್ಡು ಸುದ್ದಿ ಬಂತು ಅನ್ನೋದು ಇವತ್ತಿನ ಸುದ್ದಿ.

ಕುರುಡು ನಾಯಿ ಸಂತಿಗೆ ಬಂದಂಗ ಇದು ಯಾಕ ಬಂತು? ಬಂದದ್ದು ಎಂಥಾ ಸುದ್ದಿ? ಅನ್ನೋದನ್ನ ನೋಡೋಣ.

ಅದರಾಗ ಬಂದಿದ್ದು ಅಲ್ಲಮಾ ಇಕಬಾಲ್ ಟ್ರಸ್ಟಿನವರು ನಡೆಸೋ ಶಾಹೀನ್ ಶಾಲೆಯೊಳಗ ಹತ್ತು – ಹನ್ನೊಂದು ವರ್ಷದ ಹುಡುಗ-ಹುಡುಗಿಯರು ಆಡಿದ ನಾಟಕಕ್ಕ ಸಂಬಂಧಪಟ್ಟ ಸುದ್ದಿ. ಅದು ಏನಾತು ಅಂದರ ಅದರಾಗ ಒಂದು ಹುಡುಗಿ ಹಣ್ಣ ಹಣ್ಣ ಮುದಕೀ ಪಾತ್ರ ಮಾಡಿದ್ಲು. ನಮ್ಮ ಕಣ್ಣ ಮುಂದ ಬೆಳದ ಹುಡುಗಾ, ಚಹಾ ಮಾರತಿದ್ದ, ಅಂಥವಾ ಈಗ ದೊಡ್ಡ ಮನಿಷಾ ಆಗ್ಯಾನ, ನಮ್ಮ ದಾಖಲೆ ಕೇಳಲಿಕ್ಕೆ ಹತ್ಯಾನ ಅಂತ ಬೈತಾಳ. ನನ್ನೇನರ ಕಾಗದ ತೋರಸು ಅಂತ ಕೇಳಿದರ ಚಪ್ಪಲ ತೊಗೊಂಡು ಹೊಡೀತೇನಿ ಅಂತ ಅಂತಾಳ. ಇದನ್ನ ದೊಡ್ಡದು ಮಾಡಿ ಪೊಲಿಸರು ಆ ಹುಡುಗಿ ಅವ್ವನ್ನ, ಅಕೀ ಟೀಚರನ ಜೈಲಿಗೆ ಹಾಕ್ಯಾರ.

ಅಷ್ಟ ಅಲ್ಲಾ, ಪೊಲೀಸರು ಆ ಹುಡುಗ – ಹುಡುಗಿಯರನ್ನ ಅವರ ಪಾಲಕರು ಅಥವಾ ವಕೀಲರಿಲ್ಲದೇ ವಿಚಾರಣೆ ಮಾಡ್ಯಾರ. ಪ್ರತಿ ಸಲೆ ನಾಲ್ಕೈದು ತಾಸು ಅವರನ್ನು ಕೂಡಿಸಿಕೊಂಡು ವಿಚಾರಣೆ ಮಾಡ್ಯಾರ. ಖಲಿಸ್ತಾನ ಕೇಸು, ಕಸಾಬ ಕೇಸು, ಕಂದಹಾರ ಅಪಹರಣ ಕೇಸು, ಇಂದಿರಾಗಾಂಧಿ, ರಾಜೀವ ಗಾಂಧಿ ಹತ್ಯೆ ಕೇಸಿನ್ಯಾಗನೂ ಇಷ್ಟು ವಿಚಾರಣೆ ಮಾಡಿದ್ದರೋ ಇಲ್ಲೋ.

ಹಿಂಗ ಬರೆ ಒಂದೆರಡಲ್ಲ, ಬರೋಬ್ಬರಿ ಐದು ಸರೆ ಮಾಡ್ಯಾರ. ಹದಿನೆಂಟು ವರ್ಷಕ್ಕಿಂತ ಚಿಕ್ಕ ಮಕ್ಕಳನ್ನ ಪೊಲೀಸರು ವಿಚಾರಣೆ ಮಾಡಬಾರದು. ಮಾಹಿತಿ ಸಂಗ್ರಹ ಮಾಡಬಹುದು. ಮಾಡುವಾಗ ಅವರ ಪಾಲಕರು ಅಥವಾ ವಕೀಲರು ಇರಬೇಕು ಅಂತ ಅನ್ನೋದು ಸತ್ ಸಂಪ್ರದಾಯ. ಭಾರತ ಸರಕಾರ ಸಹಿ ಮಾಡಿದ ಅಂತಾರಾಷ್ಟ್ರೀಯ ಮಕ್ಕಳ ಹಕ್ಕುಗಳ ಒಪ್ಪಂದದ ಪ್ರಕಾರ ಅದು ಶಿಕ್ಷಾರ್ಹ ಅಪರಾಧ. ಆದರ ಇವೆಲ್ಲಾ ಆ ಪೊಲೀಸರಿಗೆ ನೆನಪಾಗಲಿಲ್ಲ. ಅವರು ರಾಜಕಾರಣಿಗಳ ಒತ್ತಡದಲ್ಲಿ ಮುಸ್ಲಿಂ ಸಾಲಿ ಒಳಗ ನಡಿಯೋದೆಲ್ಲಾ ತಪ್ಪು. ಆ ಹುಡುಗರು ಮುಸ್ಲಿಮರು ಇದ್ದದ್ದಕ್ಕ ಅವರು ಮಾಡಿದ್ದೆಲ್ಲಾ ತಪ್ಪ ಇರಬೇಕು ಅಂತ ಇವರು ನಿರ್ಧಾರ ಮಾಡಿದರು. ಆ ಹುಡುಗ- ಹುಡುಗಿಯರಿಗೆ ಜೀವನಪೂರ್ತಿ ಮರಿಯಲಾರದಂಥಾ ಕೆಟ್ಟ ಅನುಭವ ಮೂಡಿಸಿದರು. ಪೊಲೀಸರ ಕಂಡಾಗೆಲ್ಲಾ ಥರಾ ಥರಾ ಹೆದರೋಹಂಗ ಮಾಡಿದರು.

ಇದೆಲ್ಲಾ ನೋಡಿದ ʻದ ಗಾರ್ಡಿಯನ್ʼ, ಬಿಬಿಸಿ, ಅಲ್ ಝಜೀರಾ, ಯುಕೆ ಟೆಲಿಗ್ರಾಫ, ಮುಂತಾದ ಅಂತಾರಾಷ್ಟ್ರೀಯ ಪೇಪರು, ಟೀವಿ, ವೆಬ್ ಸೈಟಿನ್ಯಾಗ ಛೀ, ಥೂ ಅಂತ ರಾಜ್ಯ ಸರಕಾರಕ್ಕ ಉಗುಳಿದರು. ಈ ಸುದ್ದಿ ಭಾರತದ ಎಲ್ಲಾ ಪ್ರಮುಖ ಪೇಪರಿನ್ಯಾಗನೂ ಬಂತು. ಅಷ್ಟಕ್ಕ ದಪ್ಪ ಚರ್ಮದವರಿಗೆ ಒಂಚೂರು ಚುಚ್ಚಿದಂಗ ಆತು. ಅಲ್ಲಿನ ಪೊಲೀಸ ವರಿಷ್ಠಾಧಿಕಾರಿ ಬದಲಾದರು. ಆದರೂ ಇನ್ನೂ ಆ ಸಾಲಿಯವರಿಗೆ ಪೊಲೀಸರ ಕಿರಿಕಿರಿ ಕಡಿಮಿ ಆಗಿಲ್ಲ.

ಅಷ್ಟಕ್ಕೂ ಆ ಹುಡುಗಿ ಮಾಡಿದ್ದು ಮುದುಕಿಯ ಪಾತ್ರ. ಕೋಲಾರದ ಮುದುಕಿಯೊಬ್ಬಾಕಿಗೆ ಯಾರೋ ನಿನ್ನ ಕಾಗದಾ ಕೇಳಿದರ ಏನು ಮಾಡತೀ ಅಂದಾಗ ಮೆಟ್ಟಿನ್ಯಾಗ ಹೊಡೀತೇನಿ ಅಂದದ್ದು ವಾಟ್ಸಪ್ಪಿನ್ಯಾಗ ಬಂದಿತ್ತು. ಅದನ್ನು ನೋಡಿದ ಪಾಲಕರು- ಹುಡುಗರು ಅದರ ನಾಟಕ ಮಾಡಿದರು. ಇದರ ಹಕೀಕತ್ತು ಏನಪಾ ಅಂದರ ಚರ್ಚಾಸ್ಪದ ಮಾತು ಆಡಿದ್ದು ಆ ಪುಟ್ಟ ಹುಡುಗಿಯಲ್ಲ, ಆ ನಾಟಕದ ಮುದುಕಿಯ ಪಾತ್ರ.

ಈಗ ನಮ್ಮ ಪೊಲೀಸರು ಆ ಹತ್ತು- ಹನ್ನೊಂದರ ಹುಡುಗಾ- ಹುಡುಗಿಯರ ವಿಚಾರಣೆ ನಡಸಬಹುದು ಅಂದರ, ಅವರ ಅವ್ವನ್ನ, ಟೀಚರನ ಜೈಲಿಗೆ ಹಾಕಬಹುದು ಅಂದರ ಯರ‍್ಯಾರನ್ನ ವಿಚಾರಣೆ ನಡಸಬಹುದು, ಯರ‍್ಯಾರನ್ನು ಹಿಡೀಬಹುದು ಅನ್ನೂದನ್ನು ನೋಡೋಣ.

ʻʻಕರ್ಮʼʼ ಅನ್ನೋ ಹಿಂದಿ ಚಲನಚಿತ್ರದಾಗ ಅನುಪಮ ಖೇರ ಅವರು ಡಾಕ್ಟರ್ ಡ್ಯಾಂಗ ಅನ್ನೋ ಹೆಸರಿನ ವಿಲನ್ ಪಾತ್ರ ಮಾಡಿದ್ದರು. ಅದರಾಗ ಅವರು ನಾನು ಇಂಡಿಯಾವನ್ನು ಉಡಾಯಿಸಿ ಬಿಡತೇನಿ ಅಂತ ಮಾತಾಡಿದರು, ಮಿಸೈಲು ತಯಾರಿಸಿದರು, ಹೀರೋಗಳನ್ನು ಗೋಳು ಹೊಯಕೊಂಡರು. ಅವರನ್ನು ವಿಚಾರಣೆ ಮಾಡಬೇಕು.

ಅವರ ಅಪ್ಪ ಪುಷ್ಕರನಾಥ ಹಾಗೂ ಅವ್ವ ದುಲಾರಿ ಅವರನ್ನ ಜೈಲಿಗೆ ಹಾಕಬೇಕು.

ʻನಾಯಕʼ ಚಿತ್ರದಲ್ಲಿ ಅನಿಲಕಪೂರ್ ಅವರು ಮುಖ್ಯಮಂತ್ರಿಯನ್ನು ಹೊಡೆದದ್ದಕ್ಕೆ ಅವರನ್ನು ವಿಚಾರಣೆಗೆ ಒಳಪಡಿಸುವುದಲ್ಲದೇ ಒದ್ದು ಒಳಗೆ ಹಾಕಬೇಕು. ಅವರಪ್ಪ ಸುರಿಂದರ ಕಪೂರ್ ಅವರು ತೀರಿಕೊಂಡಾರ. ರೋಷೋಮನ್ ಚಿತ್ರದಲ್ಲಿ ಮಾಡಿದಂಗ ಅವರ ಆತ್ಮವನ್ನು ಆಹ್ವಾನಿಸಿ ಜೈಲಿಗೆ ಹಾಕಬೇಕು.

ರಾಜೇಂದ್ರ ಕುಮಾರ ಅವರ ʻಶತರಂಜʼ ಚಿತ್ರದಲ್ಲಿ ಮದನ ಪುರಿ ಅವರು ಹಾಗೂ ಅವರ ತಂದೆ ನಿಹಾಲ ಸಿಂಗ್ ಅವರಿಬ್ಬರೂ ಈಗ ಇಲ್ಲ. ಪುರಿ ಅವರು ಭಾರತವನ್ನು ನಾಶಪಡಿಸುವ ಮಾತಾಡಿದ್ದಕ್ಕೆ ಅವರನ್ನು ವಿಚಾರಣೆ ಮಾಡಿ ಅವರ ಅಪ್ಪ ನಿಹಾಲ ಸಿಂಗ್ ಜೊತೆಗೆ ಒಳಗ ಹಾಕಬೇಕು.

ಜಿತೇಂದ್ರ ಅವರ ಫರ್ಜ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿ ದೇಶದ ಮೇಲೆ ಬಾಂಬ ದಾಳಿ ನಡೆಸಿದ ರಾಜನಾಳಾ ಕಾಲೇಶ್ವರ ರಾವು ಅವರು ನಿಧನ ಹೊಂದಿದ್ದಾರೆ. ಅವರ ಆತ್ಮ ಮರಳಿ ಬರಲು ಒಪ್ಪದಿದ್ದರ ಅವರ ಹೆಂಡತಿ – ಮಕ್ಕಳನ್ನ ಜೈಲಿಗೆ ಹಾಕಬೇಕು.

ಮೊನ್ನೆ ಮೊನ್ನೆ ಬಂದ ಆಲಿಯಾ ಭಟ ಅವರ ರಾಝೀ ಸಿನಿಮಾದಾಗ ಪಾಕಿಸ್ತಾನದ ಸೈನ್ಯದ ಕಮಾಂಡರ ಪಾತ್ರ ಮಾಡಿದ್ದ ಅಶ್ವಥ ಭಟ್ ಅವರನ್ನು ಒಳಗ ಹಾಕಬೇಕು.

ಇವೆಲ್ಲಾ ಬರೇ ಉದಾಹರಣೆ ಅಷ್ಟ. ಚೈನಾ, ಪಾಕಿಸ್ತಾನದ ವಿಲನ್‌ಗಳ ಪಾತ್ರ ಮಾಡಿದರ ಜೈಲಿಗೆ ಹಾಕತಾರ ಅಂತ ಗೊತ್ತಾದರ ಸಾಕು, ಧೈರ್ಯವಂತರಿಂದ ತುಂಬಿ ತುಳುಕತಾ ಇರೋ ಹಿಂದಿ ಸಿನಿಮಾ ರಂಗದ ಮಹಾಮಹಿಮರೆಲ್ಲಾ ಅದನ್ನ ಬಿಟ್ಟ ಬಿಡತಾರ. ಬರೇ ನಮ್ಮ ವಜ್ರಮುನಿ, ತೂಗುದೀಪ ಶ್ರೀನಿವಾಸರಂಥಾ ಹಳ್ಳೀ ಗೌಡರ ಪಾತ್ರ ಅಷ್ಟ ಮಾಡತಾರ. ಸಿನಿಮಾರಂಗದ ಭಾರತೀಕರಣ ಆಗತದ.

ಅಂದಂಗ ಶಾಹೀನ ಅಂದರ ಪರ್ಶಿಯನ್- ಉರ್ದು ದಾಗ ಗರುಡ. ಶಾಹೀನ ಅನ್ನೋದರ ಬಗ್ಗೆ ಈ ಯುಗದ ಕವಿ ಅಲ್ಲಮಾ (ಜ್ಞಾನಿ) ಇಕಬಾಲ್ ಏನು ಹೇಳ್ಯಾರ ಅಂತ ನೋಡೋಣ

ʻನೋಡಪಾ ತಮ್ಮಾ ನೀ

ಮಹಾರಾಜರ ಅರಮನಿ ಮ್ಯಾಲೆ

ಅಲ್ಲೆ – ಇಲ್ಲೆ

ಎಲ್ಲಾ ಕಡೆ

ಗೂಡು ಕಟಿಗೋತ ಕೂಡಬ್ಯಾಡʼ

ʻನೀ ಗರುಡ ಅದೀ

ದೊಡ್ ದೊಡ್ಡ ಪರ್ವತದ ನೆತ್ತಿ ಮ್ಯಾಲೆ

ಇರಬೇಕಾದವ ನೀ

ಅಲ್ಲೇ ಇರಂತೀ ಹಾರಿಕೋತ ಹೋಗ್ ಈಗʼ

ʻನೋಡಪಾ ತಮ್ಮಾ,

ನೀ ಗರುಡ ಅದೀ

ಬ್ಯಾರೆ ಏನೇನೂ ಅಲ್ಲ

ಹಾರಿಕೋತ ಇರೋದ ನಿನ್ನ ಕೆಲಸ

ನಿನ್ನೆದುರಿಗೆ ಇರೋದು

ಬರೇ ಒಂದ ಆಕಾಶ ಅಲ್ಲ

ತಿಳಕೋʼ

ಬೀದರಿನ ಶಾಹೀನ ಸಾಲಿಗೂ ದೆಹಲಿಯ ಶಾಹೀನ ಬಾಗಿಗೂ ಏನೂ ಸಂಬಂಧ ಇಲ್ಲ. ಹೆಸರು ಮಾತ್ರ ಒಂದ. ಕನ್ನಡ ಸಿನಿಮಾದಾಗ ಅಪರಾಧ ಆದಮ್ಯಾಲೆ ಬರೋ ಪೊಲಿಸರಿಗೆ ಅದು ಕನ್‌ಫ್ಯೂಸ್ ಆಗಿರಬೇಕು. ಅದಕ್ಕ ಈ ಬಂಧನ- ವಿಚಾರಣೆ ಆಗಿರಬೇಕು, ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಒಟ್ಟಾರೆಯಾಗಿ ಕರ್ನಾಟಕದ ಮಾನ ಮರ್ಯಾದೆಯನ್ನು ನಮ್ಮ ಪೊಲೀಸರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕಿದ್ದಾರೆ. ಇನ್ನಾದರೂ ಇವರು ಬುದ್ದಿ ಕಲಿಯುತ್ತಾರಾ?

  2. ಮಕ್ಕಳ ಭವಿಷ್ಯದ ಬಗ್ಗೆ ಚೂರು ಯೋಚನೆ ಮಾಡದೆ ಕಾನೂನಿನ ವಿರುದ್ಧ ಮಕ್ಕಳಿಗೆ ತೊಂದರೆ ಕೊಟ್ಟು ಮಾಡಬಾರದ ಕೆಲಸ ಮಾಡಿದ, ಈ ವಿಷಯಕ್ಕೆ ಸಂಬಂಧಪಟ್ಟ ಎಲ್ಲಾ ಪೋಲೀಸರನ್ನು ಸಸ್ಪೆಂಡ್ ಮಾಡಬೇಕು ಮತ್ತು ಶಿಕ್ಷೆಗೊಳಪಡಿಸಬೇಕು ಹಾಗಾದರೆ ಮಾತ್ರ ಯಾರೂ ಇಂಥ ಬೇಜವಾಬ್ದಾರಿ ಕೆಲಸ ಮಾಡುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...