Homeಮುಖಪುಟಬೀದರಿನ ಶಾಹೀನ ಶಾಲೆ ಬ್ರಿಟನ್ನಿನ ಗಾರ್ಡಿಯನ್ನೊಳಗ ಬಂದದ್ದಕ್ಕ ನಾಚಗೋಬೇಕು...

ಬೀದರಿನ ಶಾಹೀನ ಶಾಲೆ ಬ್ರಿಟನ್ನಿನ ಗಾರ್ಡಿಯನ್ನೊಳಗ ಬಂದದ್ದಕ್ಕ ನಾಚಗೋಬೇಕು…

ʻದ ಗಾರ್ಡಿಯನ್ʼ, ಬಿಬಿಸಿ, ಅಲ್ ಝಜೀರಾ, ಯುಕೆ ಟೆಲಿಗ್ರಾಫ, ಮುಂತಾದ ಅಂತಾರಾಷ್ಟ್ರೀಯ ಪೇಪರು, ಟೀವಿ, ವೆಬ್ ಸೈಟಿನ್ಯಾಗ ಛೀ, ಥೂ ಅಂತ ರಾಜ್ಯ ಸರಕಾರಕ್ಕ ಉಗುಳಿದರು.

- Advertisement -
- Advertisement -

ಸುದ್ದಿಯೇನೇ ಮನೋಲ್ಲಾಸಿನಿ

ಇಂಗ್ಲಂಡಿನ ಪ್ರಧಾನಿಯವರು ದಿನಾ ಬೆಳಿಗ್ಗೆ ಓದೋ ಪತ್ರಿಕೆ ʻದ ಗಾರ್ಡಿಯನ್ʼದಾಗ ಬೀದರಿನಂಥಾ ಸಣ್ಣ ಊರಿನ ದೊಡ್ಡು ಸುದ್ದಿ ಬಂತು ಅನ್ನೋದು ಇವತ್ತಿನ ಸುದ್ದಿ.

ಕುರುಡು ನಾಯಿ ಸಂತಿಗೆ ಬಂದಂಗ ಇದು ಯಾಕ ಬಂತು? ಬಂದದ್ದು ಎಂಥಾ ಸುದ್ದಿ? ಅನ್ನೋದನ್ನ ನೋಡೋಣ.

ಅದರಾಗ ಬಂದಿದ್ದು ಅಲ್ಲಮಾ ಇಕಬಾಲ್ ಟ್ರಸ್ಟಿನವರು ನಡೆಸೋ ಶಾಹೀನ್ ಶಾಲೆಯೊಳಗ ಹತ್ತು – ಹನ್ನೊಂದು ವರ್ಷದ ಹುಡುಗ-ಹುಡುಗಿಯರು ಆಡಿದ ನಾಟಕಕ್ಕ ಸಂಬಂಧಪಟ್ಟ ಸುದ್ದಿ. ಅದು ಏನಾತು ಅಂದರ ಅದರಾಗ ಒಂದು ಹುಡುಗಿ ಹಣ್ಣ ಹಣ್ಣ ಮುದಕೀ ಪಾತ್ರ ಮಾಡಿದ್ಲು. ನಮ್ಮ ಕಣ್ಣ ಮುಂದ ಬೆಳದ ಹುಡುಗಾ, ಚಹಾ ಮಾರತಿದ್ದ, ಅಂಥವಾ ಈಗ ದೊಡ್ಡ ಮನಿಷಾ ಆಗ್ಯಾನ, ನಮ್ಮ ದಾಖಲೆ ಕೇಳಲಿಕ್ಕೆ ಹತ್ಯಾನ ಅಂತ ಬೈತಾಳ. ನನ್ನೇನರ ಕಾಗದ ತೋರಸು ಅಂತ ಕೇಳಿದರ ಚಪ್ಪಲ ತೊಗೊಂಡು ಹೊಡೀತೇನಿ ಅಂತ ಅಂತಾಳ. ಇದನ್ನ ದೊಡ್ಡದು ಮಾಡಿ ಪೊಲಿಸರು ಆ ಹುಡುಗಿ ಅವ್ವನ್ನ, ಅಕೀ ಟೀಚರನ ಜೈಲಿಗೆ ಹಾಕ್ಯಾರ.

ಅಷ್ಟ ಅಲ್ಲಾ, ಪೊಲೀಸರು ಆ ಹುಡುಗ – ಹುಡುಗಿಯರನ್ನ ಅವರ ಪಾಲಕರು ಅಥವಾ ವಕೀಲರಿಲ್ಲದೇ ವಿಚಾರಣೆ ಮಾಡ್ಯಾರ. ಪ್ರತಿ ಸಲೆ ನಾಲ್ಕೈದು ತಾಸು ಅವರನ್ನು ಕೂಡಿಸಿಕೊಂಡು ವಿಚಾರಣೆ ಮಾಡ್ಯಾರ. ಖಲಿಸ್ತಾನ ಕೇಸು, ಕಸಾಬ ಕೇಸು, ಕಂದಹಾರ ಅಪಹರಣ ಕೇಸು, ಇಂದಿರಾಗಾಂಧಿ, ರಾಜೀವ ಗಾಂಧಿ ಹತ್ಯೆ ಕೇಸಿನ್ಯಾಗನೂ ಇಷ್ಟು ವಿಚಾರಣೆ ಮಾಡಿದ್ದರೋ ಇಲ್ಲೋ.

ಹಿಂಗ ಬರೆ ಒಂದೆರಡಲ್ಲ, ಬರೋಬ್ಬರಿ ಐದು ಸರೆ ಮಾಡ್ಯಾರ. ಹದಿನೆಂಟು ವರ್ಷಕ್ಕಿಂತ ಚಿಕ್ಕ ಮಕ್ಕಳನ್ನ ಪೊಲೀಸರು ವಿಚಾರಣೆ ಮಾಡಬಾರದು. ಮಾಹಿತಿ ಸಂಗ್ರಹ ಮಾಡಬಹುದು. ಮಾಡುವಾಗ ಅವರ ಪಾಲಕರು ಅಥವಾ ವಕೀಲರು ಇರಬೇಕು ಅಂತ ಅನ್ನೋದು ಸತ್ ಸಂಪ್ರದಾಯ. ಭಾರತ ಸರಕಾರ ಸಹಿ ಮಾಡಿದ ಅಂತಾರಾಷ್ಟ್ರೀಯ ಮಕ್ಕಳ ಹಕ್ಕುಗಳ ಒಪ್ಪಂದದ ಪ್ರಕಾರ ಅದು ಶಿಕ್ಷಾರ್ಹ ಅಪರಾಧ. ಆದರ ಇವೆಲ್ಲಾ ಆ ಪೊಲೀಸರಿಗೆ ನೆನಪಾಗಲಿಲ್ಲ. ಅವರು ರಾಜಕಾರಣಿಗಳ ಒತ್ತಡದಲ್ಲಿ ಮುಸ್ಲಿಂ ಸಾಲಿ ಒಳಗ ನಡಿಯೋದೆಲ್ಲಾ ತಪ್ಪು. ಆ ಹುಡುಗರು ಮುಸ್ಲಿಮರು ಇದ್ದದ್ದಕ್ಕ ಅವರು ಮಾಡಿದ್ದೆಲ್ಲಾ ತಪ್ಪ ಇರಬೇಕು ಅಂತ ಇವರು ನಿರ್ಧಾರ ಮಾಡಿದರು. ಆ ಹುಡುಗ- ಹುಡುಗಿಯರಿಗೆ ಜೀವನಪೂರ್ತಿ ಮರಿಯಲಾರದಂಥಾ ಕೆಟ್ಟ ಅನುಭವ ಮೂಡಿಸಿದರು. ಪೊಲೀಸರ ಕಂಡಾಗೆಲ್ಲಾ ಥರಾ ಥರಾ ಹೆದರೋಹಂಗ ಮಾಡಿದರು.

ಇದೆಲ್ಲಾ ನೋಡಿದ ʻದ ಗಾರ್ಡಿಯನ್ʼ, ಬಿಬಿಸಿ, ಅಲ್ ಝಜೀರಾ, ಯುಕೆ ಟೆಲಿಗ್ರಾಫ, ಮುಂತಾದ ಅಂತಾರಾಷ್ಟ್ರೀಯ ಪೇಪರು, ಟೀವಿ, ವೆಬ್ ಸೈಟಿನ್ಯಾಗ ಛೀ, ಥೂ ಅಂತ ರಾಜ್ಯ ಸರಕಾರಕ್ಕ ಉಗುಳಿದರು. ಈ ಸುದ್ದಿ ಭಾರತದ ಎಲ್ಲಾ ಪ್ರಮುಖ ಪೇಪರಿನ್ಯಾಗನೂ ಬಂತು. ಅಷ್ಟಕ್ಕ ದಪ್ಪ ಚರ್ಮದವರಿಗೆ ಒಂಚೂರು ಚುಚ್ಚಿದಂಗ ಆತು. ಅಲ್ಲಿನ ಪೊಲೀಸ ವರಿಷ್ಠಾಧಿಕಾರಿ ಬದಲಾದರು. ಆದರೂ ಇನ್ನೂ ಆ ಸಾಲಿಯವರಿಗೆ ಪೊಲೀಸರ ಕಿರಿಕಿರಿ ಕಡಿಮಿ ಆಗಿಲ್ಲ.

ಅಷ್ಟಕ್ಕೂ ಆ ಹುಡುಗಿ ಮಾಡಿದ್ದು ಮುದುಕಿಯ ಪಾತ್ರ. ಕೋಲಾರದ ಮುದುಕಿಯೊಬ್ಬಾಕಿಗೆ ಯಾರೋ ನಿನ್ನ ಕಾಗದಾ ಕೇಳಿದರ ಏನು ಮಾಡತೀ ಅಂದಾಗ ಮೆಟ್ಟಿನ್ಯಾಗ ಹೊಡೀತೇನಿ ಅಂದದ್ದು ವಾಟ್ಸಪ್ಪಿನ್ಯಾಗ ಬಂದಿತ್ತು. ಅದನ್ನು ನೋಡಿದ ಪಾಲಕರು- ಹುಡುಗರು ಅದರ ನಾಟಕ ಮಾಡಿದರು. ಇದರ ಹಕೀಕತ್ತು ಏನಪಾ ಅಂದರ ಚರ್ಚಾಸ್ಪದ ಮಾತು ಆಡಿದ್ದು ಆ ಪುಟ್ಟ ಹುಡುಗಿಯಲ್ಲ, ಆ ನಾಟಕದ ಮುದುಕಿಯ ಪಾತ್ರ.

ಈಗ ನಮ್ಮ ಪೊಲೀಸರು ಆ ಹತ್ತು- ಹನ್ನೊಂದರ ಹುಡುಗಾ- ಹುಡುಗಿಯರ ವಿಚಾರಣೆ ನಡಸಬಹುದು ಅಂದರ, ಅವರ ಅವ್ವನ್ನ, ಟೀಚರನ ಜೈಲಿಗೆ ಹಾಕಬಹುದು ಅಂದರ ಯರ‍್ಯಾರನ್ನ ವಿಚಾರಣೆ ನಡಸಬಹುದು, ಯರ‍್ಯಾರನ್ನು ಹಿಡೀಬಹುದು ಅನ್ನೂದನ್ನು ನೋಡೋಣ.

ʻʻಕರ್ಮʼʼ ಅನ್ನೋ ಹಿಂದಿ ಚಲನಚಿತ್ರದಾಗ ಅನುಪಮ ಖೇರ ಅವರು ಡಾಕ್ಟರ್ ಡ್ಯಾಂಗ ಅನ್ನೋ ಹೆಸರಿನ ವಿಲನ್ ಪಾತ್ರ ಮಾಡಿದ್ದರು. ಅದರಾಗ ಅವರು ನಾನು ಇಂಡಿಯಾವನ್ನು ಉಡಾಯಿಸಿ ಬಿಡತೇನಿ ಅಂತ ಮಾತಾಡಿದರು, ಮಿಸೈಲು ತಯಾರಿಸಿದರು, ಹೀರೋಗಳನ್ನು ಗೋಳು ಹೊಯಕೊಂಡರು. ಅವರನ್ನು ವಿಚಾರಣೆ ಮಾಡಬೇಕು.

ಅವರ ಅಪ್ಪ ಪುಷ್ಕರನಾಥ ಹಾಗೂ ಅವ್ವ ದುಲಾರಿ ಅವರನ್ನ ಜೈಲಿಗೆ ಹಾಕಬೇಕು.

ʻನಾಯಕʼ ಚಿತ್ರದಲ್ಲಿ ಅನಿಲಕಪೂರ್ ಅವರು ಮುಖ್ಯಮಂತ್ರಿಯನ್ನು ಹೊಡೆದದ್ದಕ್ಕೆ ಅವರನ್ನು ವಿಚಾರಣೆಗೆ ಒಳಪಡಿಸುವುದಲ್ಲದೇ ಒದ್ದು ಒಳಗೆ ಹಾಕಬೇಕು. ಅವರಪ್ಪ ಸುರಿಂದರ ಕಪೂರ್ ಅವರು ತೀರಿಕೊಂಡಾರ. ರೋಷೋಮನ್ ಚಿತ್ರದಲ್ಲಿ ಮಾಡಿದಂಗ ಅವರ ಆತ್ಮವನ್ನು ಆಹ್ವಾನಿಸಿ ಜೈಲಿಗೆ ಹಾಕಬೇಕು.

ರಾಜೇಂದ್ರ ಕುಮಾರ ಅವರ ʻಶತರಂಜʼ ಚಿತ್ರದಲ್ಲಿ ಮದನ ಪುರಿ ಅವರು ಹಾಗೂ ಅವರ ತಂದೆ ನಿಹಾಲ ಸಿಂಗ್ ಅವರಿಬ್ಬರೂ ಈಗ ಇಲ್ಲ. ಪುರಿ ಅವರು ಭಾರತವನ್ನು ನಾಶಪಡಿಸುವ ಮಾತಾಡಿದ್ದಕ್ಕೆ ಅವರನ್ನು ವಿಚಾರಣೆ ಮಾಡಿ ಅವರ ಅಪ್ಪ ನಿಹಾಲ ಸಿಂಗ್ ಜೊತೆಗೆ ಒಳಗ ಹಾಕಬೇಕು.

ಜಿತೇಂದ್ರ ಅವರ ಫರ್ಜ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿ ದೇಶದ ಮೇಲೆ ಬಾಂಬ ದಾಳಿ ನಡೆಸಿದ ರಾಜನಾಳಾ ಕಾಲೇಶ್ವರ ರಾವು ಅವರು ನಿಧನ ಹೊಂದಿದ್ದಾರೆ. ಅವರ ಆತ್ಮ ಮರಳಿ ಬರಲು ಒಪ್ಪದಿದ್ದರ ಅವರ ಹೆಂಡತಿ – ಮಕ್ಕಳನ್ನ ಜೈಲಿಗೆ ಹಾಕಬೇಕು.

ಮೊನ್ನೆ ಮೊನ್ನೆ ಬಂದ ಆಲಿಯಾ ಭಟ ಅವರ ರಾಝೀ ಸಿನಿಮಾದಾಗ ಪಾಕಿಸ್ತಾನದ ಸೈನ್ಯದ ಕಮಾಂಡರ ಪಾತ್ರ ಮಾಡಿದ್ದ ಅಶ್ವಥ ಭಟ್ ಅವರನ್ನು ಒಳಗ ಹಾಕಬೇಕು.

ಇವೆಲ್ಲಾ ಬರೇ ಉದಾಹರಣೆ ಅಷ್ಟ. ಚೈನಾ, ಪಾಕಿಸ್ತಾನದ ವಿಲನ್‌ಗಳ ಪಾತ್ರ ಮಾಡಿದರ ಜೈಲಿಗೆ ಹಾಕತಾರ ಅಂತ ಗೊತ್ತಾದರ ಸಾಕು, ಧೈರ್ಯವಂತರಿಂದ ತುಂಬಿ ತುಳುಕತಾ ಇರೋ ಹಿಂದಿ ಸಿನಿಮಾ ರಂಗದ ಮಹಾಮಹಿಮರೆಲ್ಲಾ ಅದನ್ನ ಬಿಟ್ಟ ಬಿಡತಾರ. ಬರೇ ನಮ್ಮ ವಜ್ರಮುನಿ, ತೂಗುದೀಪ ಶ್ರೀನಿವಾಸರಂಥಾ ಹಳ್ಳೀ ಗೌಡರ ಪಾತ್ರ ಅಷ್ಟ ಮಾಡತಾರ. ಸಿನಿಮಾರಂಗದ ಭಾರತೀಕರಣ ಆಗತದ.

ಅಂದಂಗ ಶಾಹೀನ ಅಂದರ ಪರ್ಶಿಯನ್- ಉರ್ದು ದಾಗ ಗರುಡ. ಶಾಹೀನ ಅನ್ನೋದರ ಬಗ್ಗೆ ಈ ಯುಗದ ಕವಿ ಅಲ್ಲಮಾ (ಜ್ಞಾನಿ) ಇಕಬಾಲ್ ಏನು ಹೇಳ್ಯಾರ ಅಂತ ನೋಡೋಣ

ʻನೋಡಪಾ ತಮ್ಮಾ ನೀ

ಮಹಾರಾಜರ ಅರಮನಿ ಮ್ಯಾಲೆ

ಅಲ್ಲೆ – ಇಲ್ಲೆ

ಎಲ್ಲಾ ಕಡೆ

ಗೂಡು ಕಟಿಗೋತ ಕೂಡಬ್ಯಾಡʼ

ʻನೀ ಗರುಡ ಅದೀ

ದೊಡ್ ದೊಡ್ಡ ಪರ್ವತದ ನೆತ್ತಿ ಮ್ಯಾಲೆ

ಇರಬೇಕಾದವ ನೀ

ಅಲ್ಲೇ ಇರಂತೀ ಹಾರಿಕೋತ ಹೋಗ್ ಈಗʼ

ʻನೋಡಪಾ ತಮ್ಮಾ,

ನೀ ಗರುಡ ಅದೀ

ಬ್ಯಾರೆ ಏನೇನೂ ಅಲ್ಲ

ಹಾರಿಕೋತ ಇರೋದ ನಿನ್ನ ಕೆಲಸ

ನಿನ್ನೆದುರಿಗೆ ಇರೋದು

ಬರೇ ಒಂದ ಆಕಾಶ ಅಲ್ಲ

ತಿಳಕೋʼ

ಬೀದರಿನ ಶಾಹೀನ ಸಾಲಿಗೂ ದೆಹಲಿಯ ಶಾಹೀನ ಬಾಗಿಗೂ ಏನೂ ಸಂಬಂಧ ಇಲ್ಲ. ಹೆಸರು ಮಾತ್ರ ಒಂದ. ಕನ್ನಡ ಸಿನಿಮಾದಾಗ ಅಪರಾಧ ಆದಮ್ಯಾಲೆ ಬರೋ ಪೊಲಿಸರಿಗೆ ಅದು ಕನ್‌ಫ್ಯೂಸ್ ಆಗಿರಬೇಕು. ಅದಕ್ಕ ಈ ಬಂಧನ- ವಿಚಾರಣೆ ಆಗಿರಬೇಕು, ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಒಟ್ಟಾರೆಯಾಗಿ ಕರ್ನಾಟಕದ ಮಾನ ಮರ್ಯಾದೆಯನ್ನು ನಮ್ಮ ಪೊಲೀಸರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕಿದ್ದಾರೆ. ಇನ್ನಾದರೂ ಇವರು ಬುದ್ದಿ ಕಲಿಯುತ್ತಾರಾ?

  2. ಮಕ್ಕಳ ಭವಿಷ್ಯದ ಬಗ್ಗೆ ಚೂರು ಯೋಚನೆ ಮಾಡದೆ ಕಾನೂನಿನ ವಿರುದ್ಧ ಮಕ್ಕಳಿಗೆ ತೊಂದರೆ ಕೊಟ್ಟು ಮಾಡಬಾರದ ಕೆಲಸ ಮಾಡಿದ, ಈ ವಿಷಯಕ್ಕೆ ಸಂಬಂಧಪಟ್ಟ ಎಲ್ಲಾ ಪೋಲೀಸರನ್ನು ಸಸ್ಪೆಂಡ್ ಮಾಡಬೇಕು ಮತ್ತು ಶಿಕ್ಷೆಗೊಳಪಡಿಸಬೇಕು ಹಾಗಾದರೆ ಮಾತ್ರ ಯಾರೂ ಇಂಥ ಬೇಜವಾಬ್ದಾರಿ ಕೆಲಸ ಮಾಡುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...