Homeಮುಖಪುಟಬೀದರಿನ ಶಾಹೀನ ಶಾಲೆ ಬ್ರಿಟನ್ನಿನ ಗಾರ್ಡಿಯನ್ನೊಳಗ ಬಂದದ್ದಕ್ಕ ನಾಚಗೋಬೇಕು...

ಬೀದರಿನ ಶಾಹೀನ ಶಾಲೆ ಬ್ರಿಟನ್ನಿನ ಗಾರ್ಡಿಯನ್ನೊಳಗ ಬಂದದ್ದಕ್ಕ ನಾಚಗೋಬೇಕು…

ʻದ ಗಾರ್ಡಿಯನ್ʼ, ಬಿಬಿಸಿ, ಅಲ್ ಝಜೀರಾ, ಯುಕೆ ಟೆಲಿಗ್ರಾಫ, ಮುಂತಾದ ಅಂತಾರಾಷ್ಟ್ರೀಯ ಪೇಪರು, ಟೀವಿ, ವೆಬ್ ಸೈಟಿನ್ಯಾಗ ಛೀ, ಥೂ ಅಂತ ರಾಜ್ಯ ಸರಕಾರಕ್ಕ ಉಗುಳಿದರು.

- Advertisement -
- Advertisement -

ಸುದ್ದಿಯೇನೇ ಮನೋಲ್ಲಾಸಿನಿ

ಇಂಗ್ಲಂಡಿನ ಪ್ರಧಾನಿಯವರು ದಿನಾ ಬೆಳಿಗ್ಗೆ ಓದೋ ಪತ್ರಿಕೆ ʻದ ಗಾರ್ಡಿಯನ್ʼದಾಗ ಬೀದರಿನಂಥಾ ಸಣ್ಣ ಊರಿನ ದೊಡ್ಡು ಸುದ್ದಿ ಬಂತು ಅನ್ನೋದು ಇವತ್ತಿನ ಸುದ್ದಿ.

ಕುರುಡು ನಾಯಿ ಸಂತಿಗೆ ಬಂದಂಗ ಇದು ಯಾಕ ಬಂತು? ಬಂದದ್ದು ಎಂಥಾ ಸುದ್ದಿ? ಅನ್ನೋದನ್ನ ನೋಡೋಣ.

ಅದರಾಗ ಬಂದಿದ್ದು ಅಲ್ಲಮಾ ಇಕಬಾಲ್ ಟ್ರಸ್ಟಿನವರು ನಡೆಸೋ ಶಾಹೀನ್ ಶಾಲೆಯೊಳಗ ಹತ್ತು – ಹನ್ನೊಂದು ವರ್ಷದ ಹುಡುಗ-ಹುಡುಗಿಯರು ಆಡಿದ ನಾಟಕಕ್ಕ ಸಂಬಂಧಪಟ್ಟ ಸುದ್ದಿ. ಅದು ಏನಾತು ಅಂದರ ಅದರಾಗ ಒಂದು ಹುಡುಗಿ ಹಣ್ಣ ಹಣ್ಣ ಮುದಕೀ ಪಾತ್ರ ಮಾಡಿದ್ಲು. ನಮ್ಮ ಕಣ್ಣ ಮುಂದ ಬೆಳದ ಹುಡುಗಾ, ಚಹಾ ಮಾರತಿದ್ದ, ಅಂಥವಾ ಈಗ ದೊಡ್ಡ ಮನಿಷಾ ಆಗ್ಯಾನ, ನಮ್ಮ ದಾಖಲೆ ಕೇಳಲಿಕ್ಕೆ ಹತ್ಯಾನ ಅಂತ ಬೈತಾಳ. ನನ್ನೇನರ ಕಾಗದ ತೋರಸು ಅಂತ ಕೇಳಿದರ ಚಪ್ಪಲ ತೊಗೊಂಡು ಹೊಡೀತೇನಿ ಅಂತ ಅಂತಾಳ. ಇದನ್ನ ದೊಡ್ಡದು ಮಾಡಿ ಪೊಲಿಸರು ಆ ಹುಡುಗಿ ಅವ್ವನ್ನ, ಅಕೀ ಟೀಚರನ ಜೈಲಿಗೆ ಹಾಕ್ಯಾರ.

ಅಷ್ಟ ಅಲ್ಲಾ, ಪೊಲೀಸರು ಆ ಹುಡುಗ – ಹುಡುಗಿಯರನ್ನ ಅವರ ಪಾಲಕರು ಅಥವಾ ವಕೀಲರಿಲ್ಲದೇ ವಿಚಾರಣೆ ಮಾಡ್ಯಾರ. ಪ್ರತಿ ಸಲೆ ನಾಲ್ಕೈದು ತಾಸು ಅವರನ್ನು ಕೂಡಿಸಿಕೊಂಡು ವಿಚಾರಣೆ ಮಾಡ್ಯಾರ. ಖಲಿಸ್ತಾನ ಕೇಸು, ಕಸಾಬ ಕೇಸು, ಕಂದಹಾರ ಅಪಹರಣ ಕೇಸು, ಇಂದಿರಾಗಾಂಧಿ, ರಾಜೀವ ಗಾಂಧಿ ಹತ್ಯೆ ಕೇಸಿನ್ಯಾಗನೂ ಇಷ್ಟು ವಿಚಾರಣೆ ಮಾಡಿದ್ದರೋ ಇಲ್ಲೋ.

ಹಿಂಗ ಬರೆ ಒಂದೆರಡಲ್ಲ, ಬರೋಬ್ಬರಿ ಐದು ಸರೆ ಮಾಡ್ಯಾರ. ಹದಿನೆಂಟು ವರ್ಷಕ್ಕಿಂತ ಚಿಕ್ಕ ಮಕ್ಕಳನ್ನ ಪೊಲೀಸರು ವಿಚಾರಣೆ ಮಾಡಬಾರದು. ಮಾಹಿತಿ ಸಂಗ್ರಹ ಮಾಡಬಹುದು. ಮಾಡುವಾಗ ಅವರ ಪಾಲಕರು ಅಥವಾ ವಕೀಲರು ಇರಬೇಕು ಅಂತ ಅನ್ನೋದು ಸತ್ ಸಂಪ್ರದಾಯ. ಭಾರತ ಸರಕಾರ ಸಹಿ ಮಾಡಿದ ಅಂತಾರಾಷ್ಟ್ರೀಯ ಮಕ್ಕಳ ಹಕ್ಕುಗಳ ಒಪ್ಪಂದದ ಪ್ರಕಾರ ಅದು ಶಿಕ್ಷಾರ್ಹ ಅಪರಾಧ. ಆದರ ಇವೆಲ್ಲಾ ಆ ಪೊಲೀಸರಿಗೆ ನೆನಪಾಗಲಿಲ್ಲ. ಅವರು ರಾಜಕಾರಣಿಗಳ ಒತ್ತಡದಲ್ಲಿ ಮುಸ್ಲಿಂ ಸಾಲಿ ಒಳಗ ನಡಿಯೋದೆಲ್ಲಾ ತಪ್ಪು. ಆ ಹುಡುಗರು ಮುಸ್ಲಿಮರು ಇದ್ದದ್ದಕ್ಕ ಅವರು ಮಾಡಿದ್ದೆಲ್ಲಾ ತಪ್ಪ ಇರಬೇಕು ಅಂತ ಇವರು ನಿರ್ಧಾರ ಮಾಡಿದರು. ಆ ಹುಡುಗ- ಹುಡುಗಿಯರಿಗೆ ಜೀವನಪೂರ್ತಿ ಮರಿಯಲಾರದಂಥಾ ಕೆಟ್ಟ ಅನುಭವ ಮೂಡಿಸಿದರು. ಪೊಲೀಸರ ಕಂಡಾಗೆಲ್ಲಾ ಥರಾ ಥರಾ ಹೆದರೋಹಂಗ ಮಾಡಿದರು.

ಇದೆಲ್ಲಾ ನೋಡಿದ ʻದ ಗಾರ್ಡಿಯನ್ʼ, ಬಿಬಿಸಿ, ಅಲ್ ಝಜೀರಾ, ಯುಕೆ ಟೆಲಿಗ್ರಾಫ, ಮುಂತಾದ ಅಂತಾರಾಷ್ಟ್ರೀಯ ಪೇಪರು, ಟೀವಿ, ವೆಬ್ ಸೈಟಿನ್ಯಾಗ ಛೀ, ಥೂ ಅಂತ ರಾಜ್ಯ ಸರಕಾರಕ್ಕ ಉಗುಳಿದರು. ಈ ಸುದ್ದಿ ಭಾರತದ ಎಲ್ಲಾ ಪ್ರಮುಖ ಪೇಪರಿನ್ಯಾಗನೂ ಬಂತು. ಅಷ್ಟಕ್ಕ ದಪ್ಪ ಚರ್ಮದವರಿಗೆ ಒಂಚೂರು ಚುಚ್ಚಿದಂಗ ಆತು. ಅಲ್ಲಿನ ಪೊಲೀಸ ವರಿಷ್ಠಾಧಿಕಾರಿ ಬದಲಾದರು. ಆದರೂ ಇನ್ನೂ ಆ ಸಾಲಿಯವರಿಗೆ ಪೊಲೀಸರ ಕಿರಿಕಿರಿ ಕಡಿಮಿ ಆಗಿಲ್ಲ.

ಅಷ್ಟಕ್ಕೂ ಆ ಹುಡುಗಿ ಮಾಡಿದ್ದು ಮುದುಕಿಯ ಪಾತ್ರ. ಕೋಲಾರದ ಮುದುಕಿಯೊಬ್ಬಾಕಿಗೆ ಯಾರೋ ನಿನ್ನ ಕಾಗದಾ ಕೇಳಿದರ ಏನು ಮಾಡತೀ ಅಂದಾಗ ಮೆಟ್ಟಿನ್ಯಾಗ ಹೊಡೀತೇನಿ ಅಂದದ್ದು ವಾಟ್ಸಪ್ಪಿನ್ಯಾಗ ಬಂದಿತ್ತು. ಅದನ್ನು ನೋಡಿದ ಪಾಲಕರು- ಹುಡುಗರು ಅದರ ನಾಟಕ ಮಾಡಿದರು. ಇದರ ಹಕೀಕತ್ತು ಏನಪಾ ಅಂದರ ಚರ್ಚಾಸ್ಪದ ಮಾತು ಆಡಿದ್ದು ಆ ಪುಟ್ಟ ಹುಡುಗಿಯಲ್ಲ, ಆ ನಾಟಕದ ಮುದುಕಿಯ ಪಾತ್ರ.

ಈಗ ನಮ್ಮ ಪೊಲೀಸರು ಆ ಹತ್ತು- ಹನ್ನೊಂದರ ಹುಡುಗಾ- ಹುಡುಗಿಯರ ವಿಚಾರಣೆ ನಡಸಬಹುದು ಅಂದರ, ಅವರ ಅವ್ವನ್ನ, ಟೀಚರನ ಜೈಲಿಗೆ ಹಾಕಬಹುದು ಅಂದರ ಯರ‍್ಯಾರನ್ನ ವಿಚಾರಣೆ ನಡಸಬಹುದು, ಯರ‍್ಯಾರನ್ನು ಹಿಡೀಬಹುದು ಅನ್ನೂದನ್ನು ನೋಡೋಣ.

ʻʻಕರ್ಮʼʼ ಅನ್ನೋ ಹಿಂದಿ ಚಲನಚಿತ್ರದಾಗ ಅನುಪಮ ಖೇರ ಅವರು ಡಾಕ್ಟರ್ ಡ್ಯಾಂಗ ಅನ್ನೋ ಹೆಸರಿನ ವಿಲನ್ ಪಾತ್ರ ಮಾಡಿದ್ದರು. ಅದರಾಗ ಅವರು ನಾನು ಇಂಡಿಯಾವನ್ನು ಉಡಾಯಿಸಿ ಬಿಡತೇನಿ ಅಂತ ಮಾತಾಡಿದರು, ಮಿಸೈಲು ತಯಾರಿಸಿದರು, ಹೀರೋಗಳನ್ನು ಗೋಳು ಹೊಯಕೊಂಡರು. ಅವರನ್ನು ವಿಚಾರಣೆ ಮಾಡಬೇಕು.

ಅವರ ಅಪ್ಪ ಪುಷ್ಕರನಾಥ ಹಾಗೂ ಅವ್ವ ದುಲಾರಿ ಅವರನ್ನ ಜೈಲಿಗೆ ಹಾಕಬೇಕು.

ʻನಾಯಕʼ ಚಿತ್ರದಲ್ಲಿ ಅನಿಲಕಪೂರ್ ಅವರು ಮುಖ್ಯಮಂತ್ರಿಯನ್ನು ಹೊಡೆದದ್ದಕ್ಕೆ ಅವರನ್ನು ವಿಚಾರಣೆಗೆ ಒಳಪಡಿಸುವುದಲ್ಲದೇ ಒದ್ದು ಒಳಗೆ ಹಾಕಬೇಕು. ಅವರಪ್ಪ ಸುರಿಂದರ ಕಪೂರ್ ಅವರು ತೀರಿಕೊಂಡಾರ. ರೋಷೋಮನ್ ಚಿತ್ರದಲ್ಲಿ ಮಾಡಿದಂಗ ಅವರ ಆತ್ಮವನ್ನು ಆಹ್ವಾನಿಸಿ ಜೈಲಿಗೆ ಹಾಕಬೇಕು.

ರಾಜೇಂದ್ರ ಕುಮಾರ ಅವರ ʻಶತರಂಜʼ ಚಿತ್ರದಲ್ಲಿ ಮದನ ಪುರಿ ಅವರು ಹಾಗೂ ಅವರ ತಂದೆ ನಿಹಾಲ ಸಿಂಗ್ ಅವರಿಬ್ಬರೂ ಈಗ ಇಲ್ಲ. ಪುರಿ ಅವರು ಭಾರತವನ್ನು ನಾಶಪಡಿಸುವ ಮಾತಾಡಿದ್ದಕ್ಕೆ ಅವರನ್ನು ವಿಚಾರಣೆ ಮಾಡಿ ಅವರ ಅಪ್ಪ ನಿಹಾಲ ಸಿಂಗ್ ಜೊತೆಗೆ ಒಳಗ ಹಾಕಬೇಕು.

ಜಿತೇಂದ್ರ ಅವರ ಫರ್ಜ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿ ದೇಶದ ಮೇಲೆ ಬಾಂಬ ದಾಳಿ ನಡೆಸಿದ ರಾಜನಾಳಾ ಕಾಲೇಶ್ವರ ರಾವು ಅವರು ನಿಧನ ಹೊಂದಿದ್ದಾರೆ. ಅವರ ಆತ್ಮ ಮರಳಿ ಬರಲು ಒಪ್ಪದಿದ್ದರ ಅವರ ಹೆಂಡತಿ – ಮಕ್ಕಳನ್ನ ಜೈಲಿಗೆ ಹಾಕಬೇಕು.

ಮೊನ್ನೆ ಮೊನ್ನೆ ಬಂದ ಆಲಿಯಾ ಭಟ ಅವರ ರಾಝೀ ಸಿನಿಮಾದಾಗ ಪಾಕಿಸ್ತಾನದ ಸೈನ್ಯದ ಕಮಾಂಡರ ಪಾತ್ರ ಮಾಡಿದ್ದ ಅಶ್ವಥ ಭಟ್ ಅವರನ್ನು ಒಳಗ ಹಾಕಬೇಕು.

ಇವೆಲ್ಲಾ ಬರೇ ಉದಾಹರಣೆ ಅಷ್ಟ. ಚೈನಾ, ಪಾಕಿಸ್ತಾನದ ವಿಲನ್‌ಗಳ ಪಾತ್ರ ಮಾಡಿದರ ಜೈಲಿಗೆ ಹಾಕತಾರ ಅಂತ ಗೊತ್ತಾದರ ಸಾಕು, ಧೈರ್ಯವಂತರಿಂದ ತುಂಬಿ ತುಳುಕತಾ ಇರೋ ಹಿಂದಿ ಸಿನಿಮಾ ರಂಗದ ಮಹಾಮಹಿಮರೆಲ್ಲಾ ಅದನ್ನ ಬಿಟ್ಟ ಬಿಡತಾರ. ಬರೇ ನಮ್ಮ ವಜ್ರಮುನಿ, ತೂಗುದೀಪ ಶ್ರೀನಿವಾಸರಂಥಾ ಹಳ್ಳೀ ಗೌಡರ ಪಾತ್ರ ಅಷ್ಟ ಮಾಡತಾರ. ಸಿನಿಮಾರಂಗದ ಭಾರತೀಕರಣ ಆಗತದ.

ಅಂದಂಗ ಶಾಹೀನ ಅಂದರ ಪರ್ಶಿಯನ್- ಉರ್ದು ದಾಗ ಗರುಡ. ಶಾಹೀನ ಅನ್ನೋದರ ಬಗ್ಗೆ ಈ ಯುಗದ ಕವಿ ಅಲ್ಲಮಾ (ಜ್ಞಾನಿ) ಇಕಬಾಲ್ ಏನು ಹೇಳ್ಯಾರ ಅಂತ ನೋಡೋಣ

ʻನೋಡಪಾ ತಮ್ಮಾ ನೀ

ಮಹಾರಾಜರ ಅರಮನಿ ಮ್ಯಾಲೆ

ಅಲ್ಲೆ – ಇಲ್ಲೆ

ಎಲ್ಲಾ ಕಡೆ

ಗೂಡು ಕಟಿಗೋತ ಕೂಡಬ್ಯಾಡʼ

ʻನೀ ಗರುಡ ಅದೀ

ದೊಡ್ ದೊಡ್ಡ ಪರ್ವತದ ನೆತ್ತಿ ಮ್ಯಾಲೆ

ಇರಬೇಕಾದವ ನೀ

ಅಲ್ಲೇ ಇರಂತೀ ಹಾರಿಕೋತ ಹೋಗ್ ಈಗʼ

ʻನೋಡಪಾ ತಮ್ಮಾ,

ನೀ ಗರುಡ ಅದೀ

ಬ್ಯಾರೆ ಏನೇನೂ ಅಲ್ಲ

ಹಾರಿಕೋತ ಇರೋದ ನಿನ್ನ ಕೆಲಸ

ನಿನ್ನೆದುರಿಗೆ ಇರೋದು

ಬರೇ ಒಂದ ಆಕಾಶ ಅಲ್ಲ

ತಿಳಕೋʼ

ಬೀದರಿನ ಶಾಹೀನ ಸಾಲಿಗೂ ದೆಹಲಿಯ ಶಾಹೀನ ಬಾಗಿಗೂ ಏನೂ ಸಂಬಂಧ ಇಲ್ಲ. ಹೆಸರು ಮಾತ್ರ ಒಂದ. ಕನ್ನಡ ಸಿನಿಮಾದಾಗ ಅಪರಾಧ ಆದಮ್ಯಾಲೆ ಬರೋ ಪೊಲಿಸರಿಗೆ ಅದು ಕನ್‌ಫ್ಯೂಸ್ ಆಗಿರಬೇಕು. ಅದಕ್ಕ ಈ ಬಂಧನ- ವಿಚಾರಣೆ ಆಗಿರಬೇಕು, ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಒಟ್ಟಾರೆಯಾಗಿ ಕರ್ನಾಟಕದ ಮಾನ ಮರ್ಯಾದೆಯನ್ನು ನಮ್ಮ ಪೊಲೀಸರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕಿದ್ದಾರೆ. ಇನ್ನಾದರೂ ಇವರು ಬುದ್ದಿ ಕಲಿಯುತ್ತಾರಾ?

  2. ಮಕ್ಕಳ ಭವಿಷ್ಯದ ಬಗ್ಗೆ ಚೂರು ಯೋಚನೆ ಮಾಡದೆ ಕಾನೂನಿನ ವಿರುದ್ಧ ಮಕ್ಕಳಿಗೆ ತೊಂದರೆ ಕೊಟ್ಟು ಮಾಡಬಾರದ ಕೆಲಸ ಮಾಡಿದ, ಈ ವಿಷಯಕ್ಕೆ ಸಂಬಂಧಪಟ್ಟ ಎಲ್ಲಾ ಪೋಲೀಸರನ್ನು ಸಸ್ಪೆಂಡ್ ಮಾಡಬೇಕು ಮತ್ತು ಶಿಕ್ಷೆಗೊಳಪಡಿಸಬೇಕು ಹಾಗಾದರೆ ಮಾತ್ರ ಯಾರೂ ಇಂಥ ಬೇಜವಾಬ್ದಾರಿ ಕೆಲಸ ಮಾಡುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...