Homeಮುಖಪುಟಬೀದರಿನ ಶಾಹೀನ ಶಾಲೆ ಬ್ರಿಟನ್ನಿನ ಗಾರ್ಡಿಯನ್ನೊಳಗ ಬಂದದ್ದಕ್ಕ ನಾಚಗೋಬೇಕು...

ಬೀದರಿನ ಶಾಹೀನ ಶಾಲೆ ಬ್ರಿಟನ್ನಿನ ಗಾರ್ಡಿಯನ್ನೊಳಗ ಬಂದದ್ದಕ್ಕ ನಾಚಗೋಬೇಕು…

ʻದ ಗಾರ್ಡಿಯನ್ʼ, ಬಿಬಿಸಿ, ಅಲ್ ಝಜೀರಾ, ಯುಕೆ ಟೆಲಿಗ್ರಾಫ, ಮುಂತಾದ ಅಂತಾರಾಷ್ಟ್ರೀಯ ಪೇಪರು, ಟೀವಿ, ವೆಬ್ ಸೈಟಿನ್ಯಾಗ ಛೀ, ಥೂ ಅಂತ ರಾಜ್ಯ ಸರಕಾರಕ್ಕ ಉಗುಳಿದರು.

- Advertisement -
- Advertisement -

ಸುದ್ದಿಯೇನೇ ಮನೋಲ್ಲಾಸಿನಿ

ಇಂಗ್ಲಂಡಿನ ಪ್ರಧಾನಿಯವರು ದಿನಾ ಬೆಳಿಗ್ಗೆ ಓದೋ ಪತ್ರಿಕೆ ʻದ ಗಾರ್ಡಿಯನ್ʼದಾಗ ಬೀದರಿನಂಥಾ ಸಣ್ಣ ಊರಿನ ದೊಡ್ಡು ಸುದ್ದಿ ಬಂತು ಅನ್ನೋದು ಇವತ್ತಿನ ಸುದ್ದಿ.

ಕುರುಡು ನಾಯಿ ಸಂತಿಗೆ ಬಂದಂಗ ಇದು ಯಾಕ ಬಂತು? ಬಂದದ್ದು ಎಂಥಾ ಸುದ್ದಿ? ಅನ್ನೋದನ್ನ ನೋಡೋಣ.

ಅದರಾಗ ಬಂದಿದ್ದು ಅಲ್ಲಮಾ ಇಕಬಾಲ್ ಟ್ರಸ್ಟಿನವರು ನಡೆಸೋ ಶಾಹೀನ್ ಶಾಲೆಯೊಳಗ ಹತ್ತು – ಹನ್ನೊಂದು ವರ್ಷದ ಹುಡುಗ-ಹುಡುಗಿಯರು ಆಡಿದ ನಾಟಕಕ್ಕ ಸಂಬಂಧಪಟ್ಟ ಸುದ್ದಿ. ಅದು ಏನಾತು ಅಂದರ ಅದರಾಗ ಒಂದು ಹುಡುಗಿ ಹಣ್ಣ ಹಣ್ಣ ಮುದಕೀ ಪಾತ್ರ ಮಾಡಿದ್ಲು. ನಮ್ಮ ಕಣ್ಣ ಮುಂದ ಬೆಳದ ಹುಡುಗಾ, ಚಹಾ ಮಾರತಿದ್ದ, ಅಂಥವಾ ಈಗ ದೊಡ್ಡ ಮನಿಷಾ ಆಗ್ಯಾನ, ನಮ್ಮ ದಾಖಲೆ ಕೇಳಲಿಕ್ಕೆ ಹತ್ಯಾನ ಅಂತ ಬೈತಾಳ. ನನ್ನೇನರ ಕಾಗದ ತೋರಸು ಅಂತ ಕೇಳಿದರ ಚಪ್ಪಲ ತೊಗೊಂಡು ಹೊಡೀತೇನಿ ಅಂತ ಅಂತಾಳ. ಇದನ್ನ ದೊಡ್ಡದು ಮಾಡಿ ಪೊಲಿಸರು ಆ ಹುಡುಗಿ ಅವ್ವನ್ನ, ಅಕೀ ಟೀಚರನ ಜೈಲಿಗೆ ಹಾಕ್ಯಾರ.

ಅಷ್ಟ ಅಲ್ಲಾ, ಪೊಲೀಸರು ಆ ಹುಡುಗ – ಹುಡುಗಿಯರನ್ನ ಅವರ ಪಾಲಕರು ಅಥವಾ ವಕೀಲರಿಲ್ಲದೇ ವಿಚಾರಣೆ ಮಾಡ್ಯಾರ. ಪ್ರತಿ ಸಲೆ ನಾಲ್ಕೈದು ತಾಸು ಅವರನ್ನು ಕೂಡಿಸಿಕೊಂಡು ವಿಚಾರಣೆ ಮಾಡ್ಯಾರ. ಖಲಿಸ್ತಾನ ಕೇಸು, ಕಸಾಬ ಕೇಸು, ಕಂದಹಾರ ಅಪಹರಣ ಕೇಸು, ಇಂದಿರಾಗಾಂಧಿ, ರಾಜೀವ ಗಾಂಧಿ ಹತ್ಯೆ ಕೇಸಿನ್ಯಾಗನೂ ಇಷ್ಟು ವಿಚಾರಣೆ ಮಾಡಿದ್ದರೋ ಇಲ್ಲೋ.

ಹಿಂಗ ಬರೆ ಒಂದೆರಡಲ್ಲ, ಬರೋಬ್ಬರಿ ಐದು ಸರೆ ಮಾಡ್ಯಾರ. ಹದಿನೆಂಟು ವರ್ಷಕ್ಕಿಂತ ಚಿಕ್ಕ ಮಕ್ಕಳನ್ನ ಪೊಲೀಸರು ವಿಚಾರಣೆ ಮಾಡಬಾರದು. ಮಾಹಿತಿ ಸಂಗ್ರಹ ಮಾಡಬಹುದು. ಮಾಡುವಾಗ ಅವರ ಪಾಲಕರು ಅಥವಾ ವಕೀಲರು ಇರಬೇಕು ಅಂತ ಅನ್ನೋದು ಸತ್ ಸಂಪ್ರದಾಯ. ಭಾರತ ಸರಕಾರ ಸಹಿ ಮಾಡಿದ ಅಂತಾರಾಷ್ಟ್ರೀಯ ಮಕ್ಕಳ ಹಕ್ಕುಗಳ ಒಪ್ಪಂದದ ಪ್ರಕಾರ ಅದು ಶಿಕ್ಷಾರ್ಹ ಅಪರಾಧ. ಆದರ ಇವೆಲ್ಲಾ ಆ ಪೊಲೀಸರಿಗೆ ನೆನಪಾಗಲಿಲ್ಲ. ಅವರು ರಾಜಕಾರಣಿಗಳ ಒತ್ತಡದಲ್ಲಿ ಮುಸ್ಲಿಂ ಸಾಲಿ ಒಳಗ ನಡಿಯೋದೆಲ್ಲಾ ತಪ್ಪು. ಆ ಹುಡುಗರು ಮುಸ್ಲಿಮರು ಇದ್ದದ್ದಕ್ಕ ಅವರು ಮಾಡಿದ್ದೆಲ್ಲಾ ತಪ್ಪ ಇರಬೇಕು ಅಂತ ಇವರು ನಿರ್ಧಾರ ಮಾಡಿದರು. ಆ ಹುಡುಗ- ಹುಡುಗಿಯರಿಗೆ ಜೀವನಪೂರ್ತಿ ಮರಿಯಲಾರದಂಥಾ ಕೆಟ್ಟ ಅನುಭವ ಮೂಡಿಸಿದರು. ಪೊಲೀಸರ ಕಂಡಾಗೆಲ್ಲಾ ಥರಾ ಥರಾ ಹೆದರೋಹಂಗ ಮಾಡಿದರು.

ಇದೆಲ್ಲಾ ನೋಡಿದ ʻದ ಗಾರ್ಡಿಯನ್ʼ, ಬಿಬಿಸಿ, ಅಲ್ ಝಜೀರಾ, ಯುಕೆ ಟೆಲಿಗ್ರಾಫ, ಮುಂತಾದ ಅಂತಾರಾಷ್ಟ್ರೀಯ ಪೇಪರು, ಟೀವಿ, ವೆಬ್ ಸೈಟಿನ್ಯಾಗ ಛೀ, ಥೂ ಅಂತ ರಾಜ್ಯ ಸರಕಾರಕ್ಕ ಉಗುಳಿದರು. ಈ ಸುದ್ದಿ ಭಾರತದ ಎಲ್ಲಾ ಪ್ರಮುಖ ಪೇಪರಿನ್ಯಾಗನೂ ಬಂತು. ಅಷ್ಟಕ್ಕ ದಪ್ಪ ಚರ್ಮದವರಿಗೆ ಒಂಚೂರು ಚುಚ್ಚಿದಂಗ ಆತು. ಅಲ್ಲಿನ ಪೊಲೀಸ ವರಿಷ್ಠಾಧಿಕಾರಿ ಬದಲಾದರು. ಆದರೂ ಇನ್ನೂ ಆ ಸಾಲಿಯವರಿಗೆ ಪೊಲೀಸರ ಕಿರಿಕಿರಿ ಕಡಿಮಿ ಆಗಿಲ್ಲ.

ಅಷ್ಟಕ್ಕೂ ಆ ಹುಡುಗಿ ಮಾಡಿದ್ದು ಮುದುಕಿಯ ಪಾತ್ರ. ಕೋಲಾರದ ಮುದುಕಿಯೊಬ್ಬಾಕಿಗೆ ಯಾರೋ ನಿನ್ನ ಕಾಗದಾ ಕೇಳಿದರ ಏನು ಮಾಡತೀ ಅಂದಾಗ ಮೆಟ್ಟಿನ್ಯಾಗ ಹೊಡೀತೇನಿ ಅಂದದ್ದು ವಾಟ್ಸಪ್ಪಿನ್ಯಾಗ ಬಂದಿತ್ತು. ಅದನ್ನು ನೋಡಿದ ಪಾಲಕರು- ಹುಡುಗರು ಅದರ ನಾಟಕ ಮಾಡಿದರು. ಇದರ ಹಕೀಕತ್ತು ಏನಪಾ ಅಂದರ ಚರ್ಚಾಸ್ಪದ ಮಾತು ಆಡಿದ್ದು ಆ ಪುಟ್ಟ ಹುಡುಗಿಯಲ್ಲ, ಆ ನಾಟಕದ ಮುದುಕಿಯ ಪಾತ್ರ.

ಈಗ ನಮ್ಮ ಪೊಲೀಸರು ಆ ಹತ್ತು- ಹನ್ನೊಂದರ ಹುಡುಗಾ- ಹುಡುಗಿಯರ ವಿಚಾರಣೆ ನಡಸಬಹುದು ಅಂದರ, ಅವರ ಅವ್ವನ್ನ, ಟೀಚರನ ಜೈಲಿಗೆ ಹಾಕಬಹುದು ಅಂದರ ಯರ‍್ಯಾರನ್ನ ವಿಚಾರಣೆ ನಡಸಬಹುದು, ಯರ‍್ಯಾರನ್ನು ಹಿಡೀಬಹುದು ಅನ್ನೂದನ್ನು ನೋಡೋಣ.

ʻʻಕರ್ಮʼʼ ಅನ್ನೋ ಹಿಂದಿ ಚಲನಚಿತ್ರದಾಗ ಅನುಪಮ ಖೇರ ಅವರು ಡಾಕ್ಟರ್ ಡ್ಯಾಂಗ ಅನ್ನೋ ಹೆಸರಿನ ವಿಲನ್ ಪಾತ್ರ ಮಾಡಿದ್ದರು. ಅದರಾಗ ಅವರು ನಾನು ಇಂಡಿಯಾವನ್ನು ಉಡಾಯಿಸಿ ಬಿಡತೇನಿ ಅಂತ ಮಾತಾಡಿದರು, ಮಿಸೈಲು ತಯಾರಿಸಿದರು, ಹೀರೋಗಳನ್ನು ಗೋಳು ಹೊಯಕೊಂಡರು. ಅವರನ್ನು ವಿಚಾರಣೆ ಮಾಡಬೇಕು.

ಅವರ ಅಪ್ಪ ಪುಷ್ಕರನಾಥ ಹಾಗೂ ಅವ್ವ ದುಲಾರಿ ಅವರನ್ನ ಜೈಲಿಗೆ ಹಾಕಬೇಕು.

ʻನಾಯಕʼ ಚಿತ್ರದಲ್ಲಿ ಅನಿಲಕಪೂರ್ ಅವರು ಮುಖ್ಯಮಂತ್ರಿಯನ್ನು ಹೊಡೆದದ್ದಕ್ಕೆ ಅವರನ್ನು ವಿಚಾರಣೆಗೆ ಒಳಪಡಿಸುವುದಲ್ಲದೇ ಒದ್ದು ಒಳಗೆ ಹಾಕಬೇಕು. ಅವರಪ್ಪ ಸುರಿಂದರ ಕಪೂರ್ ಅವರು ತೀರಿಕೊಂಡಾರ. ರೋಷೋಮನ್ ಚಿತ್ರದಲ್ಲಿ ಮಾಡಿದಂಗ ಅವರ ಆತ್ಮವನ್ನು ಆಹ್ವಾನಿಸಿ ಜೈಲಿಗೆ ಹಾಕಬೇಕು.

ರಾಜೇಂದ್ರ ಕುಮಾರ ಅವರ ʻಶತರಂಜʼ ಚಿತ್ರದಲ್ಲಿ ಮದನ ಪುರಿ ಅವರು ಹಾಗೂ ಅವರ ತಂದೆ ನಿಹಾಲ ಸಿಂಗ್ ಅವರಿಬ್ಬರೂ ಈಗ ಇಲ್ಲ. ಪುರಿ ಅವರು ಭಾರತವನ್ನು ನಾಶಪಡಿಸುವ ಮಾತಾಡಿದ್ದಕ್ಕೆ ಅವರನ್ನು ವಿಚಾರಣೆ ಮಾಡಿ ಅವರ ಅಪ್ಪ ನಿಹಾಲ ಸಿಂಗ್ ಜೊತೆಗೆ ಒಳಗ ಹಾಕಬೇಕು.

ಜಿತೇಂದ್ರ ಅವರ ಫರ್ಜ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿ ದೇಶದ ಮೇಲೆ ಬಾಂಬ ದಾಳಿ ನಡೆಸಿದ ರಾಜನಾಳಾ ಕಾಲೇಶ್ವರ ರಾವು ಅವರು ನಿಧನ ಹೊಂದಿದ್ದಾರೆ. ಅವರ ಆತ್ಮ ಮರಳಿ ಬರಲು ಒಪ್ಪದಿದ್ದರ ಅವರ ಹೆಂಡತಿ – ಮಕ್ಕಳನ್ನ ಜೈಲಿಗೆ ಹಾಕಬೇಕು.

ಮೊನ್ನೆ ಮೊನ್ನೆ ಬಂದ ಆಲಿಯಾ ಭಟ ಅವರ ರಾಝೀ ಸಿನಿಮಾದಾಗ ಪಾಕಿಸ್ತಾನದ ಸೈನ್ಯದ ಕಮಾಂಡರ ಪಾತ್ರ ಮಾಡಿದ್ದ ಅಶ್ವಥ ಭಟ್ ಅವರನ್ನು ಒಳಗ ಹಾಕಬೇಕು.

ಇವೆಲ್ಲಾ ಬರೇ ಉದಾಹರಣೆ ಅಷ್ಟ. ಚೈನಾ, ಪಾಕಿಸ್ತಾನದ ವಿಲನ್‌ಗಳ ಪಾತ್ರ ಮಾಡಿದರ ಜೈಲಿಗೆ ಹಾಕತಾರ ಅಂತ ಗೊತ್ತಾದರ ಸಾಕು, ಧೈರ್ಯವಂತರಿಂದ ತುಂಬಿ ತುಳುಕತಾ ಇರೋ ಹಿಂದಿ ಸಿನಿಮಾ ರಂಗದ ಮಹಾಮಹಿಮರೆಲ್ಲಾ ಅದನ್ನ ಬಿಟ್ಟ ಬಿಡತಾರ. ಬರೇ ನಮ್ಮ ವಜ್ರಮುನಿ, ತೂಗುದೀಪ ಶ್ರೀನಿವಾಸರಂಥಾ ಹಳ್ಳೀ ಗೌಡರ ಪಾತ್ರ ಅಷ್ಟ ಮಾಡತಾರ. ಸಿನಿಮಾರಂಗದ ಭಾರತೀಕರಣ ಆಗತದ.

ಅಂದಂಗ ಶಾಹೀನ ಅಂದರ ಪರ್ಶಿಯನ್- ಉರ್ದು ದಾಗ ಗರುಡ. ಶಾಹೀನ ಅನ್ನೋದರ ಬಗ್ಗೆ ಈ ಯುಗದ ಕವಿ ಅಲ್ಲಮಾ (ಜ್ಞಾನಿ) ಇಕಬಾಲ್ ಏನು ಹೇಳ್ಯಾರ ಅಂತ ನೋಡೋಣ

ʻನೋಡಪಾ ತಮ್ಮಾ ನೀ

ಮಹಾರಾಜರ ಅರಮನಿ ಮ್ಯಾಲೆ

ಅಲ್ಲೆ – ಇಲ್ಲೆ

ಎಲ್ಲಾ ಕಡೆ

ಗೂಡು ಕಟಿಗೋತ ಕೂಡಬ್ಯಾಡʼ

ʻನೀ ಗರುಡ ಅದೀ

ದೊಡ್ ದೊಡ್ಡ ಪರ್ವತದ ನೆತ್ತಿ ಮ್ಯಾಲೆ

ಇರಬೇಕಾದವ ನೀ

ಅಲ್ಲೇ ಇರಂತೀ ಹಾರಿಕೋತ ಹೋಗ್ ಈಗʼ

ʻನೋಡಪಾ ತಮ್ಮಾ,

ನೀ ಗರುಡ ಅದೀ

ಬ್ಯಾರೆ ಏನೇನೂ ಅಲ್ಲ

ಹಾರಿಕೋತ ಇರೋದ ನಿನ್ನ ಕೆಲಸ

ನಿನ್ನೆದುರಿಗೆ ಇರೋದು

ಬರೇ ಒಂದ ಆಕಾಶ ಅಲ್ಲ

ತಿಳಕೋʼ

ಬೀದರಿನ ಶಾಹೀನ ಸಾಲಿಗೂ ದೆಹಲಿಯ ಶಾಹೀನ ಬಾಗಿಗೂ ಏನೂ ಸಂಬಂಧ ಇಲ್ಲ. ಹೆಸರು ಮಾತ್ರ ಒಂದ. ಕನ್ನಡ ಸಿನಿಮಾದಾಗ ಅಪರಾಧ ಆದಮ್ಯಾಲೆ ಬರೋ ಪೊಲಿಸರಿಗೆ ಅದು ಕನ್‌ಫ್ಯೂಸ್ ಆಗಿರಬೇಕು. ಅದಕ್ಕ ಈ ಬಂಧನ- ವಿಚಾರಣೆ ಆಗಿರಬೇಕು, ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಒಟ್ಟಾರೆಯಾಗಿ ಕರ್ನಾಟಕದ ಮಾನ ಮರ್ಯಾದೆಯನ್ನು ನಮ್ಮ ಪೊಲೀಸರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕಿದ್ದಾರೆ. ಇನ್ನಾದರೂ ಇವರು ಬುದ್ದಿ ಕಲಿಯುತ್ತಾರಾ?

  2. ಮಕ್ಕಳ ಭವಿಷ್ಯದ ಬಗ್ಗೆ ಚೂರು ಯೋಚನೆ ಮಾಡದೆ ಕಾನೂನಿನ ವಿರುದ್ಧ ಮಕ್ಕಳಿಗೆ ತೊಂದರೆ ಕೊಟ್ಟು ಮಾಡಬಾರದ ಕೆಲಸ ಮಾಡಿದ, ಈ ವಿಷಯಕ್ಕೆ ಸಂಬಂಧಪಟ್ಟ ಎಲ್ಲಾ ಪೋಲೀಸರನ್ನು ಸಸ್ಪೆಂಡ್ ಮಾಡಬೇಕು ಮತ್ತು ಶಿಕ್ಷೆಗೊಳಪಡಿಸಬೇಕು ಹಾಗಾದರೆ ಮಾತ್ರ ಯಾರೂ ಇಂಥ ಬೇಜವಾಬ್ದಾರಿ ಕೆಲಸ ಮಾಡುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...