Homeಮುಖಪುಟಬೀದರಿನ ಶಾಹೀನ ಶಾಲೆ ಬ್ರಿಟನ್ನಿನ ಗಾರ್ಡಿಯನ್ನೊಳಗ ಬಂದದ್ದಕ್ಕ ನಾಚಗೋಬೇಕು...

ಬೀದರಿನ ಶಾಹೀನ ಶಾಲೆ ಬ್ರಿಟನ್ನಿನ ಗಾರ್ಡಿಯನ್ನೊಳಗ ಬಂದದ್ದಕ್ಕ ನಾಚಗೋಬೇಕು…

ʻದ ಗಾರ್ಡಿಯನ್ʼ, ಬಿಬಿಸಿ, ಅಲ್ ಝಜೀರಾ, ಯುಕೆ ಟೆಲಿಗ್ರಾಫ, ಮುಂತಾದ ಅಂತಾರಾಷ್ಟ್ರೀಯ ಪೇಪರು, ಟೀವಿ, ವೆಬ್ ಸೈಟಿನ್ಯಾಗ ಛೀ, ಥೂ ಅಂತ ರಾಜ್ಯ ಸರಕಾರಕ್ಕ ಉಗುಳಿದರು.

- Advertisement -
- Advertisement -

ಸುದ್ದಿಯೇನೇ ಮನೋಲ್ಲಾಸಿನಿ

ಇಂಗ್ಲಂಡಿನ ಪ್ರಧಾನಿಯವರು ದಿನಾ ಬೆಳಿಗ್ಗೆ ಓದೋ ಪತ್ರಿಕೆ ʻದ ಗಾರ್ಡಿಯನ್ʼದಾಗ ಬೀದರಿನಂಥಾ ಸಣ್ಣ ಊರಿನ ದೊಡ್ಡು ಸುದ್ದಿ ಬಂತು ಅನ್ನೋದು ಇವತ್ತಿನ ಸುದ್ದಿ.

ಕುರುಡು ನಾಯಿ ಸಂತಿಗೆ ಬಂದಂಗ ಇದು ಯಾಕ ಬಂತು? ಬಂದದ್ದು ಎಂಥಾ ಸುದ್ದಿ? ಅನ್ನೋದನ್ನ ನೋಡೋಣ.

ಅದರಾಗ ಬಂದಿದ್ದು ಅಲ್ಲಮಾ ಇಕಬಾಲ್ ಟ್ರಸ್ಟಿನವರು ನಡೆಸೋ ಶಾಹೀನ್ ಶಾಲೆಯೊಳಗ ಹತ್ತು – ಹನ್ನೊಂದು ವರ್ಷದ ಹುಡುಗ-ಹುಡುಗಿಯರು ಆಡಿದ ನಾಟಕಕ್ಕ ಸಂಬಂಧಪಟ್ಟ ಸುದ್ದಿ. ಅದು ಏನಾತು ಅಂದರ ಅದರಾಗ ಒಂದು ಹುಡುಗಿ ಹಣ್ಣ ಹಣ್ಣ ಮುದಕೀ ಪಾತ್ರ ಮಾಡಿದ್ಲು. ನಮ್ಮ ಕಣ್ಣ ಮುಂದ ಬೆಳದ ಹುಡುಗಾ, ಚಹಾ ಮಾರತಿದ್ದ, ಅಂಥವಾ ಈಗ ದೊಡ್ಡ ಮನಿಷಾ ಆಗ್ಯಾನ, ನಮ್ಮ ದಾಖಲೆ ಕೇಳಲಿಕ್ಕೆ ಹತ್ಯಾನ ಅಂತ ಬೈತಾಳ. ನನ್ನೇನರ ಕಾಗದ ತೋರಸು ಅಂತ ಕೇಳಿದರ ಚಪ್ಪಲ ತೊಗೊಂಡು ಹೊಡೀತೇನಿ ಅಂತ ಅಂತಾಳ. ಇದನ್ನ ದೊಡ್ಡದು ಮಾಡಿ ಪೊಲಿಸರು ಆ ಹುಡುಗಿ ಅವ್ವನ್ನ, ಅಕೀ ಟೀಚರನ ಜೈಲಿಗೆ ಹಾಕ್ಯಾರ.

ಅಷ್ಟ ಅಲ್ಲಾ, ಪೊಲೀಸರು ಆ ಹುಡುಗ – ಹುಡುಗಿಯರನ್ನ ಅವರ ಪಾಲಕರು ಅಥವಾ ವಕೀಲರಿಲ್ಲದೇ ವಿಚಾರಣೆ ಮಾಡ್ಯಾರ. ಪ್ರತಿ ಸಲೆ ನಾಲ್ಕೈದು ತಾಸು ಅವರನ್ನು ಕೂಡಿಸಿಕೊಂಡು ವಿಚಾರಣೆ ಮಾಡ್ಯಾರ. ಖಲಿಸ್ತಾನ ಕೇಸು, ಕಸಾಬ ಕೇಸು, ಕಂದಹಾರ ಅಪಹರಣ ಕೇಸು, ಇಂದಿರಾಗಾಂಧಿ, ರಾಜೀವ ಗಾಂಧಿ ಹತ್ಯೆ ಕೇಸಿನ್ಯಾಗನೂ ಇಷ್ಟು ವಿಚಾರಣೆ ಮಾಡಿದ್ದರೋ ಇಲ್ಲೋ.

ಹಿಂಗ ಬರೆ ಒಂದೆರಡಲ್ಲ, ಬರೋಬ್ಬರಿ ಐದು ಸರೆ ಮಾಡ್ಯಾರ. ಹದಿನೆಂಟು ವರ್ಷಕ್ಕಿಂತ ಚಿಕ್ಕ ಮಕ್ಕಳನ್ನ ಪೊಲೀಸರು ವಿಚಾರಣೆ ಮಾಡಬಾರದು. ಮಾಹಿತಿ ಸಂಗ್ರಹ ಮಾಡಬಹುದು. ಮಾಡುವಾಗ ಅವರ ಪಾಲಕರು ಅಥವಾ ವಕೀಲರು ಇರಬೇಕು ಅಂತ ಅನ್ನೋದು ಸತ್ ಸಂಪ್ರದಾಯ. ಭಾರತ ಸರಕಾರ ಸಹಿ ಮಾಡಿದ ಅಂತಾರಾಷ್ಟ್ರೀಯ ಮಕ್ಕಳ ಹಕ್ಕುಗಳ ಒಪ್ಪಂದದ ಪ್ರಕಾರ ಅದು ಶಿಕ್ಷಾರ್ಹ ಅಪರಾಧ. ಆದರ ಇವೆಲ್ಲಾ ಆ ಪೊಲೀಸರಿಗೆ ನೆನಪಾಗಲಿಲ್ಲ. ಅವರು ರಾಜಕಾರಣಿಗಳ ಒತ್ತಡದಲ್ಲಿ ಮುಸ್ಲಿಂ ಸಾಲಿ ಒಳಗ ನಡಿಯೋದೆಲ್ಲಾ ತಪ್ಪು. ಆ ಹುಡುಗರು ಮುಸ್ಲಿಮರು ಇದ್ದದ್ದಕ್ಕ ಅವರು ಮಾಡಿದ್ದೆಲ್ಲಾ ತಪ್ಪ ಇರಬೇಕು ಅಂತ ಇವರು ನಿರ್ಧಾರ ಮಾಡಿದರು. ಆ ಹುಡುಗ- ಹುಡುಗಿಯರಿಗೆ ಜೀವನಪೂರ್ತಿ ಮರಿಯಲಾರದಂಥಾ ಕೆಟ್ಟ ಅನುಭವ ಮೂಡಿಸಿದರು. ಪೊಲೀಸರ ಕಂಡಾಗೆಲ್ಲಾ ಥರಾ ಥರಾ ಹೆದರೋಹಂಗ ಮಾಡಿದರು.

ಇದೆಲ್ಲಾ ನೋಡಿದ ʻದ ಗಾರ್ಡಿಯನ್ʼ, ಬಿಬಿಸಿ, ಅಲ್ ಝಜೀರಾ, ಯುಕೆ ಟೆಲಿಗ್ರಾಫ, ಮುಂತಾದ ಅಂತಾರಾಷ್ಟ್ರೀಯ ಪೇಪರು, ಟೀವಿ, ವೆಬ್ ಸೈಟಿನ್ಯಾಗ ಛೀ, ಥೂ ಅಂತ ರಾಜ್ಯ ಸರಕಾರಕ್ಕ ಉಗುಳಿದರು. ಈ ಸುದ್ದಿ ಭಾರತದ ಎಲ್ಲಾ ಪ್ರಮುಖ ಪೇಪರಿನ್ಯಾಗನೂ ಬಂತು. ಅಷ್ಟಕ್ಕ ದಪ್ಪ ಚರ್ಮದವರಿಗೆ ಒಂಚೂರು ಚುಚ್ಚಿದಂಗ ಆತು. ಅಲ್ಲಿನ ಪೊಲೀಸ ವರಿಷ್ಠಾಧಿಕಾರಿ ಬದಲಾದರು. ಆದರೂ ಇನ್ನೂ ಆ ಸಾಲಿಯವರಿಗೆ ಪೊಲೀಸರ ಕಿರಿಕಿರಿ ಕಡಿಮಿ ಆಗಿಲ್ಲ.

ಅಷ್ಟಕ್ಕೂ ಆ ಹುಡುಗಿ ಮಾಡಿದ್ದು ಮುದುಕಿಯ ಪಾತ್ರ. ಕೋಲಾರದ ಮುದುಕಿಯೊಬ್ಬಾಕಿಗೆ ಯಾರೋ ನಿನ್ನ ಕಾಗದಾ ಕೇಳಿದರ ಏನು ಮಾಡತೀ ಅಂದಾಗ ಮೆಟ್ಟಿನ್ಯಾಗ ಹೊಡೀತೇನಿ ಅಂದದ್ದು ವಾಟ್ಸಪ್ಪಿನ್ಯಾಗ ಬಂದಿತ್ತು. ಅದನ್ನು ನೋಡಿದ ಪಾಲಕರು- ಹುಡುಗರು ಅದರ ನಾಟಕ ಮಾಡಿದರು. ಇದರ ಹಕೀಕತ್ತು ಏನಪಾ ಅಂದರ ಚರ್ಚಾಸ್ಪದ ಮಾತು ಆಡಿದ್ದು ಆ ಪುಟ್ಟ ಹುಡುಗಿಯಲ್ಲ, ಆ ನಾಟಕದ ಮುದುಕಿಯ ಪಾತ್ರ.

ಈಗ ನಮ್ಮ ಪೊಲೀಸರು ಆ ಹತ್ತು- ಹನ್ನೊಂದರ ಹುಡುಗಾ- ಹುಡುಗಿಯರ ವಿಚಾರಣೆ ನಡಸಬಹುದು ಅಂದರ, ಅವರ ಅವ್ವನ್ನ, ಟೀಚರನ ಜೈಲಿಗೆ ಹಾಕಬಹುದು ಅಂದರ ಯರ‍್ಯಾರನ್ನ ವಿಚಾರಣೆ ನಡಸಬಹುದು, ಯರ‍್ಯಾರನ್ನು ಹಿಡೀಬಹುದು ಅನ್ನೂದನ್ನು ನೋಡೋಣ.

ʻʻಕರ್ಮʼʼ ಅನ್ನೋ ಹಿಂದಿ ಚಲನಚಿತ್ರದಾಗ ಅನುಪಮ ಖೇರ ಅವರು ಡಾಕ್ಟರ್ ಡ್ಯಾಂಗ ಅನ್ನೋ ಹೆಸರಿನ ವಿಲನ್ ಪಾತ್ರ ಮಾಡಿದ್ದರು. ಅದರಾಗ ಅವರು ನಾನು ಇಂಡಿಯಾವನ್ನು ಉಡಾಯಿಸಿ ಬಿಡತೇನಿ ಅಂತ ಮಾತಾಡಿದರು, ಮಿಸೈಲು ತಯಾರಿಸಿದರು, ಹೀರೋಗಳನ್ನು ಗೋಳು ಹೊಯಕೊಂಡರು. ಅವರನ್ನು ವಿಚಾರಣೆ ಮಾಡಬೇಕು.

ಅವರ ಅಪ್ಪ ಪುಷ್ಕರನಾಥ ಹಾಗೂ ಅವ್ವ ದುಲಾರಿ ಅವರನ್ನ ಜೈಲಿಗೆ ಹಾಕಬೇಕು.

ʻನಾಯಕʼ ಚಿತ್ರದಲ್ಲಿ ಅನಿಲಕಪೂರ್ ಅವರು ಮುಖ್ಯಮಂತ್ರಿಯನ್ನು ಹೊಡೆದದ್ದಕ್ಕೆ ಅವರನ್ನು ವಿಚಾರಣೆಗೆ ಒಳಪಡಿಸುವುದಲ್ಲದೇ ಒದ್ದು ಒಳಗೆ ಹಾಕಬೇಕು. ಅವರಪ್ಪ ಸುರಿಂದರ ಕಪೂರ್ ಅವರು ತೀರಿಕೊಂಡಾರ. ರೋಷೋಮನ್ ಚಿತ್ರದಲ್ಲಿ ಮಾಡಿದಂಗ ಅವರ ಆತ್ಮವನ್ನು ಆಹ್ವಾನಿಸಿ ಜೈಲಿಗೆ ಹಾಕಬೇಕು.

ರಾಜೇಂದ್ರ ಕುಮಾರ ಅವರ ʻಶತರಂಜʼ ಚಿತ್ರದಲ್ಲಿ ಮದನ ಪುರಿ ಅವರು ಹಾಗೂ ಅವರ ತಂದೆ ನಿಹಾಲ ಸಿಂಗ್ ಅವರಿಬ್ಬರೂ ಈಗ ಇಲ್ಲ. ಪುರಿ ಅವರು ಭಾರತವನ್ನು ನಾಶಪಡಿಸುವ ಮಾತಾಡಿದ್ದಕ್ಕೆ ಅವರನ್ನು ವಿಚಾರಣೆ ಮಾಡಿ ಅವರ ಅಪ್ಪ ನಿಹಾಲ ಸಿಂಗ್ ಜೊತೆಗೆ ಒಳಗ ಹಾಕಬೇಕು.

ಜಿತೇಂದ್ರ ಅವರ ಫರ್ಜ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿ ದೇಶದ ಮೇಲೆ ಬಾಂಬ ದಾಳಿ ನಡೆಸಿದ ರಾಜನಾಳಾ ಕಾಲೇಶ್ವರ ರಾವು ಅವರು ನಿಧನ ಹೊಂದಿದ್ದಾರೆ. ಅವರ ಆತ್ಮ ಮರಳಿ ಬರಲು ಒಪ್ಪದಿದ್ದರ ಅವರ ಹೆಂಡತಿ – ಮಕ್ಕಳನ್ನ ಜೈಲಿಗೆ ಹಾಕಬೇಕು.

ಮೊನ್ನೆ ಮೊನ್ನೆ ಬಂದ ಆಲಿಯಾ ಭಟ ಅವರ ರಾಝೀ ಸಿನಿಮಾದಾಗ ಪಾಕಿಸ್ತಾನದ ಸೈನ್ಯದ ಕಮಾಂಡರ ಪಾತ್ರ ಮಾಡಿದ್ದ ಅಶ್ವಥ ಭಟ್ ಅವರನ್ನು ಒಳಗ ಹಾಕಬೇಕು.

ಇವೆಲ್ಲಾ ಬರೇ ಉದಾಹರಣೆ ಅಷ್ಟ. ಚೈನಾ, ಪಾಕಿಸ್ತಾನದ ವಿಲನ್‌ಗಳ ಪಾತ್ರ ಮಾಡಿದರ ಜೈಲಿಗೆ ಹಾಕತಾರ ಅಂತ ಗೊತ್ತಾದರ ಸಾಕು, ಧೈರ್ಯವಂತರಿಂದ ತುಂಬಿ ತುಳುಕತಾ ಇರೋ ಹಿಂದಿ ಸಿನಿಮಾ ರಂಗದ ಮಹಾಮಹಿಮರೆಲ್ಲಾ ಅದನ್ನ ಬಿಟ್ಟ ಬಿಡತಾರ. ಬರೇ ನಮ್ಮ ವಜ್ರಮುನಿ, ತೂಗುದೀಪ ಶ್ರೀನಿವಾಸರಂಥಾ ಹಳ್ಳೀ ಗೌಡರ ಪಾತ್ರ ಅಷ್ಟ ಮಾಡತಾರ. ಸಿನಿಮಾರಂಗದ ಭಾರತೀಕರಣ ಆಗತದ.

ಅಂದಂಗ ಶಾಹೀನ ಅಂದರ ಪರ್ಶಿಯನ್- ಉರ್ದು ದಾಗ ಗರುಡ. ಶಾಹೀನ ಅನ್ನೋದರ ಬಗ್ಗೆ ಈ ಯುಗದ ಕವಿ ಅಲ್ಲಮಾ (ಜ್ಞಾನಿ) ಇಕಬಾಲ್ ಏನು ಹೇಳ್ಯಾರ ಅಂತ ನೋಡೋಣ

ʻನೋಡಪಾ ತಮ್ಮಾ ನೀ

ಮಹಾರಾಜರ ಅರಮನಿ ಮ್ಯಾಲೆ

ಅಲ್ಲೆ – ಇಲ್ಲೆ

ಎಲ್ಲಾ ಕಡೆ

ಗೂಡು ಕಟಿಗೋತ ಕೂಡಬ್ಯಾಡʼ

ʻನೀ ಗರುಡ ಅದೀ

ದೊಡ್ ದೊಡ್ಡ ಪರ್ವತದ ನೆತ್ತಿ ಮ್ಯಾಲೆ

ಇರಬೇಕಾದವ ನೀ

ಅಲ್ಲೇ ಇರಂತೀ ಹಾರಿಕೋತ ಹೋಗ್ ಈಗʼ

ʻನೋಡಪಾ ತಮ್ಮಾ,

ನೀ ಗರುಡ ಅದೀ

ಬ್ಯಾರೆ ಏನೇನೂ ಅಲ್ಲ

ಹಾರಿಕೋತ ಇರೋದ ನಿನ್ನ ಕೆಲಸ

ನಿನ್ನೆದುರಿಗೆ ಇರೋದು

ಬರೇ ಒಂದ ಆಕಾಶ ಅಲ್ಲ

ತಿಳಕೋʼ

ಬೀದರಿನ ಶಾಹೀನ ಸಾಲಿಗೂ ದೆಹಲಿಯ ಶಾಹೀನ ಬಾಗಿಗೂ ಏನೂ ಸಂಬಂಧ ಇಲ್ಲ. ಹೆಸರು ಮಾತ್ರ ಒಂದ. ಕನ್ನಡ ಸಿನಿಮಾದಾಗ ಅಪರಾಧ ಆದಮ್ಯಾಲೆ ಬರೋ ಪೊಲಿಸರಿಗೆ ಅದು ಕನ್‌ಫ್ಯೂಸ್ ಆಗಿರಬೇಕು. ಅದಕ್ಕ ಈ ಬಂಧನ- ವಿಚಾರಣೆ ಆಗಿರಬೇಕು, ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಒಟ್ಟಾರೆಯಾಗಿ ಕರ್ನಾಟಕದ ಮಾನ ಮರ್ಯಾದೆಯನ್ನು ನಮ್ಮ ಪೊಲೀಸರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕಿದ್ದಾರೆ. ಇನ್ನಾದರೂ ಇವರು ಬುದ್ದಿ ಕಲಿಯುತ್ತಾರಾ?

  2. ಮಕ್ಕಳ ಭವಿಷ್ಯದ ಬಗ್ಗೆ ಚೂರು ಯೋಚನೆ ಮಾಡದೆ ಕಾನೂನಿನ ವಿರುದ್ಧ ಮಕ್ಕಳಿಗೆ ತೊಂದರೆ ಕೊಟ್ಟು ಮಾಡಬಾರದ ಕೆಲಸ ಮಾಡಿದ, ಈ ವಿಷಯಕ್ಕೆ ಸಂಬಂಧಪಟ್ಟ ಎಲ್ಲಾ ಪೋಲೀಸರನ್ನು ಸಸ್ಪೆಂಡ್ ಮಾಡಬೇಕು ಮತ್ತು ಶಿಕ್ಷೆಗೊಳಪಡಿಸಬೇಕು ಹಾಗಾದರೆ ಮಾತ್ರ ಯಾರೂ ಇಂಥ ಬೇಜವಾಬ್ದಾರಿ ಕೆಲಸ ಮಾಡುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...