Homeಕರ್ನಾಟಕಬೀದರ್‌: ಕೇಂದ್ರ ಸಚಿವ ಖೂಬಾರನ್ನು ಪ್ರಶ್ನಿಸಿದ ಶಿಕ್ಷಕ ಅಮಾನತು

ಬೀದರ್‌: ಕೇಂದ್ರ ಸಚಿವ ಖೂಬಾರನ್ನು ಪ್ರಶ್ನಿಸಿದ ಶಿಕ್ಷಕ ಅಮಾನತು

- Advertisement -
- Advertisement -

ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಪ್ರಶ್ನಿಸಿದ್ದ ಕರ್ನಾಟಕದ ಶಿಕ್ಷಕರೊಬ್ಬರನ್ನು ಇತ್ತೀಚೆಗೆ ಅಮಾನತುಗೊಳಿಸಲಾಗಿದ್ದು, ಸಚಿವರೊಂದಿಗೆ ಶಿಕ್ಷಕ ಮಾತನಾಡಿರುವ ಆಡಿಯೋ ಕ್ಲಿಪ್ ವೈರಲ್ ಆಗಿದೆ.

ಬೀದರ್ ಜಿಲ್ಲೆಯ ಹೇಡಗಾಪುರ ಗ್ರಾಮದ ನಿವಾಸಿ, ಶಿಕ್ಷಕ ಕುಶಾಲ್ ಪಾಟೀಲ್ ಅವರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.

‘ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ದೂರವಾಣಿ ಕರೆ ಮಾಡಿ ವಾಗ್ವಾದ ನಡೆಸಿದ ಆರೋಪದ ಮೇಲೆ ಬೀದರ್‌ನ ಜೀರ್ಗಾ (ಕೆ) ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಕುಶಾಲ್ ಪಾಟೀಲ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್.ನಗನೂರ ತಿಳಿಸಿದ್ದಾರೆ.

‘ಸಚಿವರ ಜೊತೆ ಅನುಚಿತವಾಗಿ ವರ್ತಿಸಿದ್ದು ಅಲ್ಲದೇ, ಅವರೊಂದಿಗಿನ ಸಂಭಾಷಣೆಯನ್ನು ರೆಕಾರ್ಡ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಾರಣ ಶಿಕ್ಷಕನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ’ ಎಂದು ಅವರು ಹೇಳಿದ್ದಾರೆ.

ಹೆಡಗಾಪುರ ಗ್ರಾಮದ ಕುಶಾಲ ಪಾಟೀಲ, ಭಗವಂತ ಖೂಬಾ ಅವರಿಗೆ ಕರೆ ಮಾಡಿ, ‘ಊರಿನಲ್ಲಿ ಗೊಬ್ಬರ ಸಿಗುತ್ತಿಲ್ಲ. ರೈತರು ತೊಂದರೆಯಲ್ಲಿದ್ದಾರೆ. ಇದರಿಂದ ನಿಮ್ಮ ಹೆಸರು ಕೆಡುತ್ತಿದೆ. ಹೀಗಾದರೆ ಮುಂದಿನ ಚುನಾವಣೆಯಲ್ಲಿ ನಿಮಗೆ ಸಮಸ್ಯೆಯಾಗಲಿದೆ’ ಎಂದು ಹೇಳಿದ್ದರು.

ಇದಕ್ಕೆ ಸಚಿವರು ಖಾರವಾಗಿ ಪ್ರತಿಕ್ರಿಯಿಸಿ, ‘ನಾನು ಕೇಂದ್ರ ಸಚಿವ, ಮನೆ ಮನೆಗೆ ಗೊಬ್ಬರ ಪೂರೈಸಲು ಆಗುವುದೇ’ ಎಂದು ಪ್ರಶ್ನಿಸಿದ್ದರು. ನಂತರ ರೈತ ಸಂಘಟನೆಗಳ ಪದಾಧಿಕಾರಿಗಳು ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಪಾಟೀಲ್‌ ಅವರ ಕರೆ ಸ್ವೀಕರಿಸಿ ಮಾತನಾಡಿದ್ದ ಖೂಬಾ, “ಇದಕ್ಕೆ ಏನು ಮಾಡಲಾಗದು. ಈಗಾಗಲೇ ರಾಜ್ಯಗಳಿಗೆ ರಸಗೊಬ್ಬರ ಕಳುಹಿಸಿದ್ದು, ಸ್ಥಳೀಯ ಶಾಸಕರನ್ನು ಸಂಪರ್ಕಿಸಿ” ಎಂದು ಸೂಚಿಸಿದ್ದರು.

ಪಾಟೀಲ್ ಅವರು, “ನಮ್ಮ ಗ್ರಾಮದಲ್ಲಿ ನೀವು ಮತ ಕೇಳಲು ಸಾಧ್ಯವಾಗುವುದಿಲ್ಲ. ಬೀದರ್ ಲೋಕಸಭಾ ಕ್ಷೇತ್ರದಿಂದ ಮತ್ತೆ ಆಯ್ಕೆಯಾಗುವುದಿಲ್ಲ” ಎಂದು ಹೇಳುತ್ತಿದ್ದಂತೆ ಸಚಿವರು ಸಿಟ್ಟಿಗೆದ್ದರು.

“ನಾನು ಭಾರತ ಸರ್ಕಾರದ ಮಂತ್ರಿಯಾಗಿದ್ದೇನೆ. ಹಲವು ರಾಜ್ಯಗಳನ್ನು ನೋಡಿಕೊಳ್ಳುತ್ತಿದ್ದೇನೆ. ನೀವು ನಿಮ್ಮ ಶಾಸಕರು ಮತ್ತು ಅಧಿಕಾರಿಗಳ ಬಳಿಗೆ ಹೋಗಬೇಕು” ಎಂದು ಸಚಿವರು ಹೇಳಿರುವುದಾಗಿ ವರದಿಯಾಗಿದೆ.

ಆಡಿಯೋ ಕ್ಲಿಪ್ ವೈರಲ್ ಆಗುತ್ತಿದ್ದಂತೆ ಸ್ಥಳೀಯ ಬ್ಲಾಕ್ ಶಿಕ್ಷಣಾಧಿಕಾರಿಯಿಂದ ತನಿಖೆ ಆರಂಭಿಸಿ ಪ್ರಾಥಮಿಕ ವರದಿ ಸಲ್ಲಿಸಲಾಗಿದೆ. ಇದರ ಆಧಾರದ ಮೇಲೆ ಕರ್ತವ್ಯಲೋಪ, ಬೇಜವಾಬ್ದಾರಿತನ ಮತ್ತು ದುರ್ನಡತೆಯ ಆರೋಪದ ಮೇಲೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಅಮಾನತು ಆದೇಶ ಹೊರಡಿಸಿದ್ದಾರೆ. ಉದ್ದೇಶಪೂರ್ವಕವಾಗಿ ದೂರವಾಣಿ ಸಂಭಾಷಣೆಯನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ ಎಂದು ದೂರಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕುಶಾಲ ಪಾಟೀಲ್, “ನಾನು ಕೃಷಿಕ ಕುಟುಂಬದಿಂದ ಬಂದವನು. ಕಳೆದ ಕೆಲವು ಹಂಗಾಮಿನಿಂದ ರಸಗೊಬ್ಬರ ಸಿಗದೆ ರೈತರು ಪರದಾಡುತ್ತಿದ್ದಾರೆ. ಜನರು ಭಗವಂತ ಖೂಬಾ ಅವರನ್ನು ಅಧಿಕಾರಕ್ಕೆ ತಂದಿದ್ದಾರೆ. ತಮ್ಮ ಸಮಸ್ಯೆಗಳ ಬಗ್ಗೆ ಅವರನ್ನು ಸಂಪರ್ಕಿಸುವ ಮತ್ತು ಪ್ರಶ್ನಿಸುವ ಹಕ್ಕು ಜನರಿಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...