Homeಕರ್ನಾಟಕಬೀದರ್‌: ಕೇಂದ್ರ ಸಚಿವ ಖೂಬಾರನ್ನು ಪ್ರಶ್ನಿಸಿದ ಶಿಕ್ಷಕ ಅಮಾನತು

ಬೀದರ್‌: ಕೇಂದ್ರ ಸಚಿವ ಖೂಬಾರನ್ನು ಪ್ರಶ್ನಿಸಿದ ಶಿಕ್ಷಕ ಅಮಾನತು

- Advertisement -
- Advertisement -

ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಪ್ರಶ್ನಿಸಿದ್ದ ಕರ್ನಾಟಕದ ಶಿಕ್ಷಕರೊಬ್ಬರನ್ನು ಇತ್ತೀಚೆಗೆ ಅಮಾನತುಗೊಳಿಸಲಾಗಿದ್ದು, ಸಚಿವರೊಂದಿಗೆ ಶಿಕ್ಷಕ ಮಾತನಾಡಿರುವ ಆಡಿಯೋ ಕ್ಲಿಪ್ ವೈರಲ್ ಆಗಿದೆ.

ಬೀದರ್ ಜಿಲ್ಲೆಯ ಹೇಡಗಾಪುರ ಗ್ರಾಮದ ನಿವಾಸಿ, ಶಿಕ್ಷಕ ಕುಶಾಲ್ ಪಾಟೀಲ್ ಅವರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.

‘ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ದೂರವಾಣಿ ಕರೆ ಮಾಡಿ ವಾಗ್ವಾದ ನಡೆಸಿದ ಆರೋಪದ ಮೇಲೆ ಬೀದರ್‌ನ ಜೀರ್ಗಾ (ಕೆ) ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಕುಶಾಲ್ ಪಾಟೀಲ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್.ನಗನೂರ ತಿಳಿಸಿದ್ದಾರೆ.

‘ಸಚಿವರ ಜೊತೆ ಅನುಚಿತವಾಗಿ ವರ್ತಿಸಿದ್ದು ಅಲ್ಲದೇ, ಅವರೊಂದಿಗಿನ ಸಂಭಾಷಣೆಯನ್ನು ರೆಕಾರ್ಡ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಾರಣ ಶಿಕ್ಷಕನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ’ ಎಂದು ಅವರು ಹೇಳಿದ್ದಾರೆ.

ಹೆಡಗಾಪುರ ಗ್ರಾಮದ ಕುಶಾಲ ಪಾಟೀಲ, ಭಗವಂತ ಖೂಬಾ ಅವರಿಗೆ ಕರೆ ಮಾಡಿ, ‘ಊರಿನಲ್ಲಿ ಗೊಬ್ಬರ ಸಿಗುತ್ತಿಲ್ಲ. ರೈತರು ತೊಂದರೆಯಲ್ಲಿದ್ದಾರೆ. ಇದರಿಂದ ನಿಮ್ಮ ಹೆಸರು ಕೆಡುತ್ತಿದೆ. ಹೀಗಾದರೆ ಮುಂದಿನ ಚುನಾವಣೆಯಲ್ಲಿ ನಿಮಗೆ ಸಮಸ್ಯೆಯಾಗಲಿದೆ’ ಎಂದು ಹೇಳಿದ್ದರು.

ಇದಕ್ಕೆ ಸಚಿವರು ಖಾರವಾಗಿ ಪ್ರತಿಕ್ರಿಯಿಸಿ, ‘ನಾನು ಕೇಂದ್ರ ಸಚಿವ, ಮನೆ ಮನೆಗೆ ಗೊಬ್ಬರ ಪೂರೈಸಲು ಆಗುವುದೇ’ ಎಂದು ಪ್ರಶ್ನಿಸಿದ್ದರು. ನಂತರ ರೈತ ಸಂಘಟನೆಗಳ ಪದಾಧಿಕಾರಿಗಳು ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಪಾಟೀಲ್‌ ಅವರ ಕರೆ ಸ್ವೀಕರಿಸಿ ಮಾತನಾಡಿದ್ದ ಖೂಬಾ, “ಇದಕ್ಕೆ ಏನು ಮಾಡಲಾಗದು. ಈಗಾಗಲೇ ರಾಜ್ಯಗಳಿಗೆ ರಸಗೊಬ್ಬರ ಕಳುಹಿಸಿದ್ದು, ಸ್ಥಳೀಯ ಶಾಸಕರನ್ನು ಸಂಪರ್ಕಿಸಿ” ಎಂದು ಸೂಚಿಸಿದ್ದರು.

ಪಾಟೀಲ್ ಅವರು, “ನಮ್ಮ ಗ್ರಾಮದಲ್ಲಿ ನೀವು ಮತ ಕೇಳಲು ಸಾಧ್ಯವಾಗುವುದಿಲ್ಲ. ಬೀದರ್ ಲೋಕಸಭಾ ಕ್ಷೇತ್ರದಿಂದ ಮತ್ತೆ ಆಯ್ಕೆಯಾಗುವುದಿಲ್ಲ” ಎಂದು ಹೇಳುತ್ತಿದ್ದಂತೆ ಸಚಿವರು ಸಿಟ್ಟಿಗೆದ್ದರು.

“ನಾನು ಭಾರತ ಸರ್ಕಾರದ ಮಂತ್ರಿಯಾಗಿದ್ದೇನೆ. ಹಲವು ರಾಜ್ಯಗಳನ್ನು ನೋಡಿಕೊಳ್ಳುತ್ತಿದ್ದೇನೆ. ನೀವು ನಿಮ್ಮ ಶಾಸಕರು ಮತ್ತು ಅಧಿಕಾರಿಗಳ ಬಳಿಗೆ ಹೋಗಬೇಕು” ಎಂದು ಸಚಿವರು ಹೇಳಿರುವುದಾಗಿ ವರದಿಯಾಗಿದೆ.

ಆಡಿಯೋ ಕ್ಲಿಪ್ ವೈರಲ್ ಆಗುತ್ತಿದ್ದಂತೆ ಸ್ಥಳೀಯ ಬ್ಲಾಕ್ ಶಿಕ್ಷಣಾಧಿಕಾರಿಯಿಂದ ತನಿಖೆ ಆರಂಭಿಸಿ ಪ್ರಾಥಮಿಕ ವರದಿ ಸಲ್ಲಿಸಲಾಗಿದೆ. ಇದರ ಆಧಾರದ ಮೇಲೆ ಕರ್ತವ್ಯಲೋಪ, ಬೇಜವಾಬ್ದಾರಿತನ ಮತ್ತು ದುರ್ನಡತೆಯ ಆರೋಪದ ಮೇಲೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಅಮಾನತು ಆದೇಶ ಹೊರಡಿಸಿದ್ದಾರೆ. ಉದ್ದೇಶಪೂರ್ವಕವಾಗಿ ದೂರವಾಣಿ ಸಂಭಾಷಣೆಯನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ ಎಂದು ದೂರಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕುಶಾಲ ಪಾಟೀಲ್, “ನಾನು ಕೃಷಿಕ ಕುಟುಂಬದಿಂದ ಬಂದವನು. ಕಳೆದ ಕೆಲವು ಹಂಗಾಮಿನಿಂದ ರಸಗೊಬ್ಬರ ಸಿಗದೆ ರೈತರು ಪರದಾಡುತ್ತಿದ್ದಾರೆ. ಜನರು ಭಗವಂತ ಖೂಬಾ ಅವರನ್ನು ಅಧಿಕಾರಕ್ಕೆ ತಂದಿದ್ದಾರೆ. ತಮ್ಮ ಸಮಸ್ಯೆಗಳ ಬಗ್ಗೆ ಅವರನ್ನು ಸಂಪರ್ಕಿಸುವ ಮತ್ತು ಪ್ರಶ್ನಿಸುವ ಹಕ್ಕು ಜನರಿಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...