Homeಅಂತರಾಷ್ಟ್ರೀಯಗಾಝಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು: ಜೋ ಬೈಡನ್

ಗಾಝಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು: ಜೋ ಬೈಡನ್

- Advertisement -
- Advertisement -

ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು ಇಸ್ರೇಲ್ ಸೇನೆ ಸುತ್ತುವರಿದ ಬಗ್ಗೆ ಪ್ರತಿಕ್ರಿಯಿಸಿದ ಅಮೆರಿಕದ ಅಧ್ಯಕ್ಷ ಜೋ ಬೈಡನ್‌, ಗಾಜಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು ಎಂದು ಹೇಳಿದ್ದಾರೆ.

ಇಸ್ರೇಲ್‌ ಯುದ್ಧ ಟ್ಯಾಂಕ್‌ಗಳು ಗಾಝಾ ನಗರದ ಮುಖ್ಯ ವೈದ್ಯಕೀಯ ಕೇಂದ್ರವಾದ ಅಲ್ ಶಿಫಾ ಆಸ್ಪತ್ರೆಯ ಹೊರಗೆ ನಿಂತಿವೆ. ಆಸ್ಪತ್ರೆಯಿಂದ ಗಾಯಾಳುಗಳನ್ನು ಸ್ಥಳಾಂತರಿಸುವ ಕಾರ್ಯಕ್ಕೆ ಅಡ್ಡಿಯಾಗಿದೆ.

ಅಲ್-ಶಿಫಾ ಆಸ್ಪತ್ರೆಯನ್ನು ಇಸ್ರೇಲ್ ಸೇನೆ ಸುತ್ತುವರಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಆಶ್ರಯ ಪಡೆದಿದ್ದ ಸುಮಾರು 2,500 ನಾಗರಿಕರು, 650 ರೋಗಿಗಳು, 500 ಆರೋಗ್ಯಸೇವೆ ಕಾರ್ಯಕರ್ತರು ಆಸ್ಪತ್ರೆಯಿಂದ ತೆರಳಿದ್ದಾರೆ ಎಂದು ವಿಶ್ವಸಂಸ್ಥೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಮಾಸ್‌ ಸಶಸ್ತ್ರ ಗುಂಪು ಅ.7 ರಂದು ದಕ್ಷಿಣ ಇಸ್ರೇಲ್‌ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 1,200 ಜನರು ಮೃತಪಟ್ಟಿದ್ದು, 240 ಜನರನ್ನು ಒತ್ತೆಯಾಳುಗಳಾಗಿ ಇರಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ ಇಸ್ರೇಲ್‌ ಯುದ್ಧ ಘೋಷಿಸಿ ನಡೆಸಿದ ದಾಳಿಯಲ್ಲಿ 11,100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಗಾಝಾ ವೈದ್ಯಕೀಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಮೃತರಲ್ಲಿ 40% ಮಕ್ಕಳಿದ್ದಾರೆ ಎಂದು ಪ್ಯಾಲೆಸ್ತೀನ್‌ ಸಚಿವಾಲಯವು ತಿಳಿಸಿದೆ.

ಗಾಝಾದಲ್ಲಿ ಮೂರನೇ ಎರಡರಷ್ಟು ಜನರು ಇಸ್ರೇಲ್‌ನ ಮಿಲಿಟರಿ ದಾಳಿಯಿಂದ ನಿರಾಶ್ರಿತರಾಗಿದ್ದಾರೆ. ಗಾಝಾದ ಪ್ರಜೆಗಳಿಗೆ ದಕ್ಷಿಣಕ್ಕೆ ತೆರಳಲು ಈ ಮೊದಲು ಇಸ್ರೇಲ್‌ ಪಡೆ ಸೂಚಿಸಿತ್ತು. ಇದರಿಂದಾಗಿ ಲಕ್ಷಾಂತರ ಮಂದಿ ವಲಸೆ ಹೋಗಿದ್ದಾರೆ.

ಗಾಝಾ ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕಿದ್ರಾ ಮಾತನಾಡುತ್ತಾ, ಉತ್ತರ ಗಾಝಾದಲ್ಲಿ ಆಸ್ಪತ್ರೆಯ ಮೇಲೆ ಇಸ್ರೇಲ್‌ ಪಡೆಗಳು ದಾಳಿ ನಡೆಸುತ್ತಿದೆ. ವಿದ್ಯುತ್ ಕೊರತೆಯಿಂದಾಗಿ 3 ನವಜಾತ ಶಿಶುಗಳು ಸೇರಿದಂತೆ ಹಿಂದಿನ 3 ದಿನಗಳಲ್ಲಿ 32 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಹೇಳಿದರು.

ಇಸ್ರೇಲ್‌ ಮಿಲಿಟರಿ ಮಂಗಳವಾರ ಮುಂಜಾನೆ ಇಸ್ರೇಲ್‌ನಿಂದ ಅಲ್ ಶಿಫಾಗೆ ಇನ್‌ಕ್ಯುಬೇಟರ್‌ಗಳ ವರ್ಗಾವಣೆಗೆ ಮನವೀಯ ಪ್ರಯತ್ನವನ್ನು ಮಾಡುವುದಾಗಿ ಹೇಳಿದೆ.

ಅಲ್ ಶಿಫಾ ಆಸ್ಪತ್ರೆಯಲ್ಲಿ ಕನಿಷ್ಠ 650 ರೋಗಿಗಳು ಇನ್ನೂ ಇದ್ದಾರೆ. ಆಸ್ಪತ್ರೆಗಳಲ್ಲಿನ ಸಾವಿನ ಬಗ್ಗೆ ವರದಿ ಬಳಿಕ ಆಸ್ಪತ್ರೆಯನ್ನು ರಕ್ಷಿಸಬೇಕು ಎಂದು ಅಮೆರಿಕ ಅಧ್ಯಕ್ಷ ಬಿಡೆನ್ ಹೇಳಿದ್ದಾರೆ. ಆಸ್ಪತ್ರೆಗಳಿಗೆ ಸಂಬಂಧಿಸಿದಂತೆ ಮೃದು ನಿಲುವು ಹೊಂದಬೇಕು ಮತ್ತು ನಾವು ಇಸ್ರೇಲ್‌ನೊಂದಿಗೆ ಸಂಪರ್ಕದಲ್ಲಿರುತ್ತೇವೆ ಎಂಬುದು ನನ್ನ ಭರವಸೆ ಮತ್ತು ನಿರೀಕ್ಷೆಯಾಗಿದೆ ಎಂದು ಬಿಡೆನ್ ಸೋಮವಾರ ಶ್ವೇತಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಕದನ ವಿರಾಮ ಮತ್ತು ಕೈದಿಗಳ ಬಿಡುಗಡೆಗೆ ಮಾತುಕತೆ ಪ್ರಯತ್ನವು ನಡೆಯುತ್ತಿದೆ. ಆದ್ದರಿಂದ ನಾನು ಸ್ವಲ್ಪ ಭರವಸೆಯಲ್ಲಿದ್ದೇನೆ. ಆಸ್ಪತ್ರೆಗಳನ್ನು ರಕ್ಷಿಸಬೇಕು ಎಂದು ಹೇಳಿದ್ದಾರೆ.

ಹಮಾಸ್ ಆಸ್ಪತ್ರೆಗಳನ್ನು ಮಿಲಿಟರಿ ಉದ್ದೇಶಗಳಿಗಾಗಿ ಬಳಸುತ್ತದೆ ಎಂದು ಇಸ್ರೇಲ್ ಹೇಳಿದೆ ಮತ್ತು ಇಸ್ರೇಲ್‌ನ ಮಿಲಿಟರಿ ಪಡೆ ಸೋಮವಾರ ವೀಡಿಯೊ ಮತ್ತು ಫೋಟೋಗಳನ್ನು ಬಿಡುಗಡೆ ಮಾಡಿದ್ದು, ಕ್ಯಾನ್ಸರ್ ಚಿಕಿತ್ಸೆಯ  ಆಸ್ಪತ್ರೆಯಾದ ರಾಂಟಿಸ್ಸಿ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಡಲಾಗಿದೆ ಎಂದು ಆರೋಪಿಸಿದೆ.

ಹಮಾಸ್‌ನ ಸಶಸ್ತ್ರ ವಿಭಾಗವಾದ ಅಲ್-ಕಸ್ಸಾಮ್ ಬ್ರಿಗೇಡ್ಸ್ ತನ್ನ ಟೆಲಿಗ್ರಾಮ್ ಚಾನೆಲ್‌ನಲ್ಲಿ ಆಡಿಯೋ ಪೋಸ್ಟ್ ಮಾಡಿದ್ದು, 5 ದಿನಗಳ ಕದನ ವಿರಾಮಕ್ಕೆ ಪ್ರತಿಯಾಗಿ 70 ಮಹಿಳೆಯರು ಮತ್ತು ಮಕ್ಕಳ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್‌ ಸಿದ್ಧವಾಗಿದೆ ಎಂದು ಹೇಳಿದೆ. ಈ ಪ್ರಸ್ತಾಪವನ್ನು ಇಸ್ರೇಲ್ ಸ್ವೀಕರಿಸುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನು ಓದಿ: ಆರ್ಥಿಕ ಅಪರಾಧಿಗಳಿಗೆ ಕೈಕೋಳ ತೊಡಿಸಬಾರದು: ಸಂಸದೀಯ ಸಮಿತಿ ಶಿಫಾರಸು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Joe Biden is the hero of genocide, he is telling this.americ is the father of terrorist son Is isreal daughter is UK nephew are European country 40percent Arabic country are cousin. They don have right to say anything. They are real reason this war

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...