Homeಅಂತರಾಷ್ಟ್ರೀಯಗಾಝಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು: ಜೋ ಬೈಡನ್

ಗಾಝಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು: ಜೋ ಬೈಡನ್

- Advertisement -
- Advertisement -

ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು ಇಸ್ರೇಲ್ ಸೇನೆ ಸುತ್ತುವರಿದ ಬಗ್ಗೆ ಪ್ರತಿಕ್ರಿಯಿಸಿದ ಅಮೆರಿಕದ ಅಧ್ಯಕ್ಷ ಜೋ ಬೈಡನ್‌, ಗಾಜಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು ಎಂದು ಹೇಳಿದ್ದಾರೆ.

ಇಸ್ರೇಲ್‌ ಯುದ್ಧ ಟ್ಯಾಂಕ್‌ಗಳು ಗಾಝಾ ನಗರದ ಮುಖ್ಯ ವೈದ್ಯಕೀಯ ಕೇಂದ್ರವಾದ ಅಲ್ ಶಿಫಾ ಆಸ್ಪತ್ರೆಯ ಹೊರಗೆ ನಿಂತಿವೆ. ಆಸ್ಪತ್ರೆಯಿಂದ ಗಾಯಾಳುಗಳನ್ನು ಸ್ಥಳಾಂತರಿಸುವ ಕಾರ್ಯಕ್ಕೆ ಅಡ್ಡಿಯಾಗಿದೆ.

ಅಲ್-ಶಿಫಾ ಆಸ್ಪತ್ರೆಯನ್ನು ಇಸ್ರೇಲ್ ಸೇನೆ ಸುತ್ತುವರಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಆಶ್ರಯ ಪಡೆದಿದ್ದ ಸುಮಾರು 2,500 ನಾಗರಿಕರು, 650 ರೋಗಿಗಳು, 500 ಆರೋಗ್ಯಸೇವೆ ಕಾರ್ಯಕರ್ತರು ಆಸ್ಪತ್ರೆಯಿಂದ ತೆರಳಿದ್ದಾರೆ ಎಂದು ವಿಶ್ವಸಂಸ್ಥೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಮಾಸ್‌ ಸಶಸ್ತ್ರ ಗುಂಪು ಅ.7 ರಂದು ದಕ್ಷಿಣ ಇಸ್ರೇಲ್‌ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 1,200 ಜನರು ಮೃತಪಟ್ಟಿದ್ದು, 240 ಜನರನ್ನು ಒತ್ತೆಯಾಳುಗಳಾಗಿ ಇರಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ ಇಸ್ರೇಲ್‌ ಯುದ್ಧ ಘೋಷಿಸಿ ನಡೆಸಿದ ದಾಳಿಯಲ್ಲಿ 11,100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಗಾಝಾ ವೈದ್ಯಕೀಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಮೃತರಲ್ಲಿ 40% ಮಕ್ಕಳಿದ್ದಾರೆ ಎಂದು ಪ್ಯಾಲೆಸ್ತೀನ್‌ ಸಚಿವಾಲಯವು ತಿಳಿಸಿದೆ.

ಗಾಝಾದಲ್ಲಿ ಮೂರನೇ ಎರಡರಷ್ಟು ಜನರು ಇಸ್ರೇಲ್‌ನ ಮಿಲಿಟರಿ ದಾಳಿಯಿಂದ ನಿರಾಶ್ರಿತರಾಗಿದ್ದಾರೆ. ಗಾಝಾದ ಪ್ರಜೆಗಳಿಗೆ ದಕ್ಷಿಣಕ್ಕೆ ತೆರಳಲು ಈ ಮೊದಲು ಇಸ್ರೇಲ್‌ ಪಡೆ ಸೂಚಿಸಿತ್ತು. ಇದರಿಂದಾಗಿ ಲಕ್ಷಾಂತರ ಮಂದಿ ವಲಸೆ ಹೋಗಿದ್ದಾರೆ.

ಗಾಝಾ ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕಿದ್ರಾ ಮಾತನಾಡುತ್ತಾ, ಉತ್ತರ ಗಾಝಾದಲ್ಲಿ ಆಸ್ಪತ್ರೆಯ ಮೇಲೆ ಇಸ್ರೇಲ್‌ ಪಡೆಗಳು ದಾಳಿ ನಡೆಸುತ್ತಿದೆ. ವಿದ್ಯುತ್ ಕೊರತೆಯಿಂದಾಗಿ 3 ನವಜಾತ ಶಿಶುಗಳು ಸೇರಿದಂತೆ ಹಿಂದಿನ 3 ದಿನಗಳಲ್ಲಿ 32 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಹೇಳಿದರು.

ಇಸ್ರೇಲ್‌ ಮಿಲಿಟರಿ ಮಂಗಳವಾರ ಮುಂಜಾನೆ ಇಸ್ರೇಲ್‌ನಿಂದ ಅಲ್ ಶಿಫಾಗೆ ಇನ್‌ಕ್ಯುಬೇಟರ್‌ಗಳ ವರ್ಗಾವಣೆಗೆ ಮನವೀಯ ಪ್ರಯತ್ನವನ್ನು ಮಾಡುವುದಾಗಿ ಹೇಳಿದೆ.

ಅಲ್ ಶಿಫಾ ಆಸ್ಪತ್ರೆಯಲ್ಲಿ ಕನಿಷ್ಠ 650 ರೋಗಿಗಳು ಇನ್ನೂ ಇದ್ದಾರೆ. ಆಸ್ಪತ್ರೆಗಳಲ್ಲಿನ ಸಾವಿನ ಬಗ್ಗೆ ವರದಿ ಬಳಿಕ ಆಸ್ಪತ್ರೆಯನ್ನು ರಕ್ಷಿಸಬೇಕು ಎಂದು ಅಮೆರಿಕ ಅಧ್ಯಕ್ಷ ಬಿಡೆನ್ ಹೇಳಿದ್ದಾರೆ. ಆಸ್ಪತ್ರೆಗಳಿಗೆ ಸಂಬಂಧಿಸಿದಂತೆ ಮೃದು ನಿಲುವು ಹೊಂದಬೇಕು ಮತ್ತು ನಾವು ಇಸ್ರೇಲ್‌ನೊಂದಿಗೆ ಸಂಪರ್ಕದಲ್ಲಿರುತ್ತೇವೆ ಎಂಬುದು ನನ್ನ ಭರವಸೆ ಮತ್ತು ನಿರೀಕ್ಷೆಯಾಗಿದೆ ಎಂದು ಬಿಡೆನ್ ಸೋಮವಾರ ಶ್ವೇತಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಕದನ ವಿರಾಮ ಮತ್ತು ಕೈದಿಗಳ ಬಿಡುಗಡೆಗೆ ಮಾತುಕತೆ ಪ್ರಯತ್ನವು ನಡೆಯುತ್ತಿದೆ. ಆದ್ದರಿಂದ ನಾನು ಸ್ವಲ್ಪ ಭರವಸೆಯಲ್ಲಿದ್ದೇನೆ. ಆಸ್ಪತ್ರೆಗಳನ್ನು ರಕ್ಷಿಸಬೇಕು ಎಂದು ಹೇಳಿದ್ದಾರೆ.

ಹಮಾಸ್ ಆಸ್ಪತ್ರೆಗಳನ್ನು ಮಿಲಿಟರಿ ಉದ್ದೇಶಗಳಿಗಾಗಿ ಬಳಸುತ್ತದೆ ಎಂದು ಇಸ್ರೇಲ್ ಹೇಳಿದೆ ಮತ್ತು ಇಸ್ರೇಲ್‌ನ ಮಿಲಿಟರಿ ಪಡೆ ಸೋಮವಾರ ವೀಡಿಯೊ ಮತ್ತು ಫೋಟೋಗಳನ್ನು ಬಿಡುಗಡೆ ಮಾಡಿದ್ದು, ಕ್ಯಾನ್ಸರ್ ಚಿಕಿತ್ಸೆಯ  ಆಸ್ಪತ್ರೆಯಾದ ರಾಂಟಿಸ್ಸಿ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಡಲಾಗಿದೆ ಎಂದು ಆರೋಪಿಸಿದೆ.

ಹಮಾಸ್‌ನ ಸಶಸ್ತ್ರ ವಿಭಾಗವಾದ ಅಲ್-ಕಸ್ಸಾಮ್ ಬ್ರಿಗೇಡ್ಸ್ ತನ್ನ ಟೆಲಿಗ್ರಾಮ್ ಚಾನೆಲ್‌ನಲ್ಲಿ ಆಡಿಯೋ ಪೋಸ್ಟ್ ಮಾಡಿದ್ದು, 5 ದಿನಗಳ ಕದನ ವಿರಾಮಕ್ಕೆ ಪ್ರತಿಯಾಗಿ 70 ಮಹಿಳೆಯರು ಮತ್ತು ಮಕ್ಕಳ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್‌ ಸಿದ್ಧವಾಗಿದೆ ಎಂದು ಹೇಳಿದೆ. ಈ ಪ್ರಸ್ತಾಪವನ್ನು ಇಸ್ರೇಲ್ ಸ್ವೀಕರಿಸುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನು ಓದಿ: ಆರ್ಥಿಕ ಅಪರಾಧಿಗಳಿಗೆ ಕೈಕೋಳ ತೊಡಿಸಬಾರದು: ಸಂಸದೀಯ ಸಮಿತಿ ಶಿಫಾರಸು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Joe Biden is the hero of genocide, he is telling this.americ is the father of terrorist son Is isreal daughter is UK nephew are European country 40percent Arabic country are cousin. They don have right to say anything. They are real reason this war

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...