Homeಅಂತರಾಷ್ಟ್ರೀಯಗಾಝಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು: ಜೋ ಬೈಡನ್

ಗಾಝಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು: ಜೋ ಬೈಡನ್

- Advertisement -
- Advertisement -

ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು ಇಸ್ರೇಲ್ ಸೇನೆ ಸುತ್ತುವರಿದ ಬಗ್ಗೆ ಪ್ರತಿಕ್ರಿಯಿಸಿದ ಅಮೆರಿಕದ ಅಧ್ಯಕ್ಷ ಜೋ ಬೈಡನ್‌, ಗಾಜಾ ಪಟ್ಟಿಯಲ್ಲಿರುವ ಆಸ್ಪತ್ರೆಗಳನ್ನು ರಕ್ಷಿಸಬೇಕು ಎಂದು ಹೇಳಿದ್ದಾರೆ.

ಇಸ್ರೇಲ್‌ ಯುದ್ಧ ಟ್ಯಾಂಕ್‌ಗಳು ಗಾಝಾ ನಗರದ ಮುಖ್ಯ ವೈದ್ಯಕೀಯ ಕೇಂದ್ರವಾದ ಅಲ್ ಶಿಫಾ ಆಸ್ಪತ್ರೆಯ ಹೊರಗೆ ನಿಂತಿವೆ. ಆಸ್ಪತ್ರೆಯಿಂದ ಗಾಯಾಳುಗಳನ್ನು ಸ್ಥಳಾಂತರಿಸುವ ಕಾರ್ಯಕ್ಕೆ ಅಡ್ಡಿಯಾಗಿದೆ.

ಅಲ್-ಶಿಫಾ ಆಸ್ಪತ್ರೆಯನ್ನು ಇಸ್ರೇಲ್ ಸೇನೆ ಸುತ್ತುವರಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಆಶ್ರಯ ಪಡೆದಿದ್ದ ಸುಮಾರು 2,500 ನಾಗರಿಕರು, 650 ರೋಗಿಗಳು, 500 ಆರೋಗ್ಯಸೇವೆ ಕಾರ್ಯಕರ್ತರು ಆಸ್ಪತ್ರೆಯಿಂದ ತೆರಳಿದ್ದಾರೆ ಎಂದು ವಿಶ್ವಸಂಸ್ಥೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಮಾಸ್‌ ಸಶಸ್ತ್ರ ಗುಂಪು ಅ.7 ರಂದು ದಕ್ಷಿಣ ಇಸ್ರೇಲ್‌ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 1,200 ಜನರು ಮೃತಪಟ್ಟಿದ್ದು, 240 ಜನರನ್ನು ಒತ್ತೆಯಾಳುಗಳಾಗಿ ಇರಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ ಇಸ್ರೇಲ್‌ ಯುದ್ಧ ಘೋಷಿಸಿ ನಡೆಸಿದ ದಾಳಿಯಲ್ಲಿ 11,100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಗಾಝಾ ವೈದ್ಯಕೀಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಮೃತರಲ್ಲಿ 40% ಮಕ್ಕಳಿದ್ದಾರೆ ಎಂದು ಪ್ಯಾಲೆಸ್ತೀನ್‌ ಸಚಿವಾಲಯವು ತಿಳಿಸಿದೆ.

ಗಾಝಾದಲ್ಲಿ ಮೂರನೇ ಎರಡರಷ್ಟು ಜನರು ಇಸ್ರೇಲ್‌ನ ಮಿಲಿಟರಿ ದಾಳಿಯಿಂದ ನಿರಾಶ್ರಿತರಾಗಿದ್ದಾರೆ. ಗಾಝಾದ ಪ್ರಜೆಗಳಿಗೆ ದಕ್ಷಿಣಕ್ಕೆ ತೆರಳಲು ಈ ಮೊದಲು ಇಸ್ರೇಲ್‌ ಪಡೆ ಸೂಚಿಸಿತ್ತು. ಇದರಿಂದಾಗಿ ಲಕ್ಷಾಂತರ ಮಂದಿ ವಲಸೆ ಹೋಗಿದ್ದಾರೆ.

ಗಾಝಾ ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕಿದ್ರಾ ಮಾತನಾಡುತ್ತಾ, ಉತ್ತರ ಗಾಝಾದಲ್ಲಿ ಆಸ್ಪತ್ರೆಯ ಮೇಲೆ ಇಸ್ರೇಲ್‌ ಪಡೆಗಳು ದಾಳಿ ನಡೆಸುತ್ತಿದೆ. ವಿದ್ಯುತ್ ಕೊರತೆಯಿಂದಾಗಿ 3 ನವಜಾತ ಶಿಶುಗಳು ಸೇರಿದಂತೆ ಹಿಂದಿನ 3 ದಿನಗಳಲ್ಲಿ 32 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಹೇಳಿದರು.

ಇಸ್ರೇಲ್‌ ಮಿಲಿಟರಿ ಮಂಗಳವಾರ ಮುಂಜಾನೆ ಇಸ್ರೇಲ್‌ನಿಂದ ಅಲ್ ಶಿಫಾಗೆ ಇನ್‌ಕ್ಯುಬೇಟರ್‌ಗಳ ವರ್ಗಾವಣೆಗೆ ಮನವೀಯ ಪ್ರಯತ್ನವನ್ನು ಮಾಡುವುದಾಗಿ ಹೇಳಿದೆ.

ಅಲ್ ಶಿಫಾ ಆಸ್ಪತ್ರೆಯಲ್ಲಿ ಕನಿಷ್ಠ 650 ರೋಗಿಗಳು ಇನ್ನೂ ಇದ್ದಾರೆ. ಆಸ್ಪತ್ರೆಗಳಲ್ಲಿನ ಸಾವಿನ ಬಗ್ಗೆ ವರದಿ ಬಳಿಕ ಆಸ್ಪತ್ರೆಯನ್ನು ರಕ್ಷಿಸಬೇಕು ಎಂದು ಅಮೆರಿಕ ಅಧ್ಯಕ್ಷ ಬಿಡೆನ್ ಹೇಳಿದ್ದಾರೆ. ಆಸ್ಪತ್ರೆಗಳಿಗೆ ಸಂಬಂಧಿಸಿದಂತೆ ಮೃದು ನಿಲುವು ಹೊಂದಬೇಕು ಮತ್ತು ನಾವು ಇಸ್ರೇಲ್‌ನೊಂದಿಗೆ ಸಂಪರ್ಕದಲ್ಲಿರುತ್ತೇವೆ ಎಂಬುದು ನನ್ನ ಭರವಸೆ ಮತ್ತು ನಿರೀಕ್ಷೆಯಾಗಿದೆ ಎಂದು ಬಿಡೆನ್ ಸೋಮವಾರ ಶ್ವೇತಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಕದನ ವಿರಾಮ ಮತ್ತು ಕೈದಿಗಳ ಬಿಡುಗಡೆಗೆ ಮಾತುಕತೆ ಪ್ರಯತ್ನವು ನಡೆಯುತ್ತಿದೆ. ಆದ್ದರಿಂದ ನಾನು ಸ್ವಲ್ಪ ಭರವಸೆಯಲ್ಲಿದ್ದೇನೆ. ಆಸ್ಪತ್ರೆಗಳನ್ನು ರಕ್ಷಿಸಬೇಕು ಎಂದು ಹೇಳಿದ್ದಾರೆ.

ಹಮಾಸ್ ಆಸ್ಪತ್ರೆಗಳನ್ನು ಮಿಲಿಟರಿ ಉದ್ದೇಶಗಳಿಗಾಗಿ ಬಳಸುತ್ತದೆ ಎಂದು ಇಸ್ರೇಲ್ ಹೇಳಿದೆ ಮತ್ತು ಇಸ್ರೇಲ್‌ನ ಮಿಲಿಟರಿ ಪಡೆ ಸೋಮವಾರ ವೀಡಿಯೊ ಮತ್ತು ಫೋಟೋಗಳನ್ನು ಬಿಡುಗಡೆ ಮಾಡಿದ್ದು, ಕ್ಯಾನ್ಸರ್ ಚಿಕಿತ್ಸೆಯ  ಆಸ್ಪತ್ರೆಯಾದ ರಾಂಟಿಸ್ಸಿ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಡಲಾಗಿದೆ ಎಂದು ಆರೋಪಿಸಿದೆ.

ಹಮಾಸ್‌ನ ಸಶಸ್ತ್ರ ವಿಭಾಗವಾದ ಅಲ್-ಕಸ್ಸಾಮ್ ಬ್ರಿಗೇಡ್ಸ್ ತನ್ನ ಟೆಲಿಗ್ರಾಮ್ ಚಾನೆಲ್‌ನಲ್ಲಿ ಆಡಿಯೋ ಪೋಸ್ಟ್ ಮಾಡಿದ್ದು, 5 ದಿನಗಳ ಕದನ ವಿರಾಮಕ್ಕೆ ಪ್ರತಿಯಾಗಿ 70 ಮಹಿಳೆಯರು ಮತ್ತು ಮಕ್ಕಳ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್‌ ಸಿದ್ಧವಾಗಿದೆ ಎಂದು ಹೇಳಿದೆ. ಈ ಪ್ರಸ್ತಾಪವನ್ನು ಇಸ್ರೇಲ್ ಸ್ವೀಕರಿಸುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನು ಓದಿ: ಆರ್ಥಿಕ ಅಪರಾಧಿಗಳಿಗೆ ಕೈಕೋಳ ತೊಡಿಸಬಾರದು: ಸಂಸದೀಯ ಸಮಿತಿ ಶಿಫಾರಸು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Joe Biden is the hero of genocide, he is telling this.americ is the father of terrorist son Is isreal daughter is UK nephew are European country 40percent Arabic country are cousin. They don have right to say anything. They are real reason this war

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...