Homeಅಂತರಾಷ್ಟ್ರೀಯ'ತೈವಾನ್‌' ಸ್ವಾತಂತ್ರ್ಯವನ್ನು 'ಅಮೆರಿಕ' ಬೆಂಬಲಿಸುವುದಿಲ್ಲ!

‘ತೈವಾನ್‌’ ಸ್ವಾತಂತ್ರ್ಯವನ್ನು ‘ಅಮೆರಿಕ’ ಬೆಂಬಲಿಸುವುದಿಲ್ಲ!

- Advertisement -
- Advertisement -

ತೈವಾನ್ ನೂತನ ಅಧ್ಯಕ್ಷರಾಗಿ ಡೆಮಾಕ್ರಟಿಕ್ ಪ್ರೋಗ್ರೆಸ್ಸೀವ್ ಪಕ್ಷದ ಲಾಯ್ ಚಿಂಗ್ ಟೆ ನಿನ್ನೆ ಆಯ್ಕೆಯಾಗಿದ್ದಾರೆ. ಚೀನಾದ ತೀವ್ರ ವಿರೋಧ, ಬೆದರಿಕೆ ಮಧ್ಯೆ ತೈವಾನ್ ಪ್ರಜಾಪ್ರಭುತ್ವದಲ್ಲಿ ಲಾಯ್ ಚಿಂಗ್ ಟೆ ಹೊಸ ಅಧ್ಯಾಯ ಬರೆದಿದ್ದಾರೆ. ಮತದಾನಕ್ಕೆ ಮುನ್ನ ಲಾಯ್ ಅವರನ್ನು ಸೋಲಿಸುವಂತೆ ತೈವಾನ್ ಜನರಿಗೆ ‘ಚೀನಾ’ ಕೇಳಿಕೊಂಡಿತ್ತು. ಆದರೆ ತೈವಾನ್‌ನ ಮತದಾರರು ಚೀನಾದ ಬೇಡಿಕೆಯನ್ನು ತಿರಸ್ಕರಿಸಿ ಆಡಳಿತ ಪಕ್ಷಕ್ಕೆ 3ನೇ ಬಾರಿಗೆ ಗೆಲುವನ್ನು ನೀಡಿದ್ದಾರೆ. ತೈವಾನ್‌ನ ಮತದಾರರು ಚೀನಾ ವಿರೋಧಿ ಸರ್ಕಾರವನ್ನು ಆಯ್ಕೆ ಮಾಡಿರುವುದು ‘ಯುಎಸ್‌’ನ ಗೆಲುವು ಎಂದು ಹೇಳಲಾಗುತ್ತಿದ್ದರೂ, ತೈವಾನ್‌ನ ಸ್ವಾತಂತ್ರ್ಯವನ್ನು ಯುಎಸ್ ಬೆಂಬಲಿಸುವುದಿಲ್ಲ ಎಂದು ಬಿಡೆನ್ ಹೇಳಿದ್ದಾರೆ.

ಚೀನಾದೊಂದಿಗೆ ವ್ಯಾಪಾರ ಮತ್ತು ರಾಜತಾಂತ್ರಿಕತೆಯನ್ನು ವಿಸ್ತರಿಸಲು ಪ್ರತಿಜ್ಞೆ ಮಾಡಿದ್ದ ತೈವಾನ್‌ನ ವಿರೋಧ ಪಕ್ಷವಾದ  ನ್ಯಾಶನಲಿಸ್ಟ್ ಪಾರ್ಟಿಯ ಹೌ ಯು-ಇಹ್ ಅವರು ಸೋತಿದ್ದಾರೆ. ಯುಎಸ್‌ನೊಂದಿಗೆ ನಿಕಟ ಸಂಬಂಧವನ್ನು ಇಟ್ಟುಕೊಂಡಿರುವ ಲಾಯ್ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಿದ್ದಾರೆ.

ತೈವಾನ್ ದ್ವೀಪವು ತನ್ನ ಭೂಪ್ರದೇಶ ಎಂದು ಚೀನಾ ದೀರ್ಘಕಾಲ ಹೇಳಿಕೊಂಡಿದೆ ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಏಕೀಕರಣಕ್ಕಾಗಿ ಪ್ರತಿಪಾದಿಸಿದ್ದರು ಮತ್ತು ಮಿಲಿಟರಿ ಹಸ್ತಕ್ಷೇಪವನ್ನು ತಳ್ಳಿಹಾಕಲು ನಿರಾಕರಿಸಿದ್ದರು. 1949ರಲ್ಲಿ ಚೀನಾದಿಂದ ಬೇರ್ಪಟ್ಟ ತೈವಾನ್‌ ಬಳಿಕ ಚೀನಾವನ್ನು ಸೇರಿಕೊಂಡೇ ಇಲ್ಲ. ಆದರೆ ತೈವಾನ್ ಯಾವತ್ತಿದ್ದರೂ ತನ್ನ ಭಾಗವೇ ಎಂದು ಚೀನಾ ಹೇಳುತ್ತಿದೆ. ಯಾವುದೇ ರಾಷ್ಟ್ರ ತೈವಾನ್‌ನೊಂದಿಗೆ ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳುವುದನ್ನು ತಾನು ಒಪ್ಪುವುದಿಲ್ಲ ಎಂದು ಚೀನಾ ಹೇಳಿಕೊಂಡಿತ್ತು.

ಯುಎಸ್ 1970 ರಿಂದ ‘ಒನ್ ಚೀನಾ ನೀತಿ’ಯನ್ನು ನಿರ್ವಹಿಸುತ್ತಿದೆ ಮತ್ತು ತೈವಾನ್‌ನ್ನು ಚೀನಾದ ಭಾಗವಾಗಿ ಗುರುತಿಸಿದೆ. ಆದರೆ ಅದೇ ಸಮಯದಲ್ಲಿ ಅವರು ತೈವಾನ್ ಜೊತೆಗೆ ಅನಧಿಕೃತ ಸಂಬಂಧವನ್ನು ಸಹ ಇಟ್ಟುಕೊಂಡಿದೆ. ಈ ಬೆಳವಣಿಗೆಯ ಉದ್ದೇಶ ಅಸ್ಪಷ್ಟವಾಗಿದೆ ಎಂದು ಹೇಳಲಾಗಿದೆ. ಚೀನಾ ತೈವಾನ್ ಮೇಲೆ ಆಕ್ರಮಣ ಮಾಡಿದರೆ ಯುಎಸ್ ಮಿಲಿಟರಿ ಮಧ್ಯಪ್ರವೇಶಿಸುತ್ತದೆ ಎಂಬ ಬಿಡೆನ್ ಅವರ ಹೇಳಿಕೆಗಳು ಯುಎಸ್ ಮತ್ತು ಬೀಜಿಂಗ್ ನಡುವಿನ ಸಂಬಂಧವನ್ನು ಹದಗೆಡಿಸಿವೆ. ತೈವಾನ್‌ ಮೇಲೆ ಯುಎಸ್‌ಗೆ ಇರುವ ಕಾಳಜಿಯನ್ನು ಬಹಿರಂಗಪಡಿಸುತ್ತದೆ.

ಈ ಚುನಾವಣೆಯು ತೈವಾನ್‌ನ ದೃಢವಾದ ಪ್ರಜಾಪ್ರಭುತ್ವ ವ್ಯವಸ್ಥೆಯ ಶಕ್ತಿಯನ್ನು ತೋರಿಸುತ್ತದೆ ಎಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಹೇಳಿದರು. ಯುಎಸ್ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಮತ್ತು ಬಲಾತ್ಕಾರ ಮತ್ತು ಒತ್ತಡದಿಂದ ಮುಕ್ತವಾಗಿ ಭಿನ್ನಾಭಿಪ್ರಾಯಗಳ ಬಗ್ಗೆ ಶಾಂತಿಯುತ ಪರಿಹಾರವನ್ನು ಕಾಪಾಡಿಕೊಳ್ಳಲು ಬದ್ಧವಾಗಿದೆ ಎಂದು ಪುನರುಚ್ಚರಿಸಿದರು. ಯುಎಸ್ ನ ಒನ್‌-ಚೀನಾ ನೀತಿಗೆ ಅನುಗುಣವಾಗಿ ನಮ್ಮ ದೀರ್ಘಕಾಲದ ಸಂಬಂಧವನ್ನು ಹೆಚ್ಚಿಸಲು ಲೈ ಮತ್ತು ತೈವಾನ್‌ನ ಎಲ್ಲಾ ಪಕ್ಷದ ನಾಯಕರೊಂದಿಗೆ ಯುಎಸ್ ಕೆಲಸ ಮಾಡುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತೈವಾನ್ ದ್ವೀಪ:

ಚೀನಾದ ಆಗ್ನೇಯ ಕರಾವಳಿಯಿಂದ ಸುಮಾರು 160 ಕಿಮೀ ದೂರದಲ್ಲಿ ತೈವಾನ್ ದ್ವೀಪವಿದೆ, ಅದರ ಮುಂದೆ ಚೀನಾದ ಫುಝೌ, ಕ್ವಾಝೌ ಮತ್ತು ಕ್ಸಿಯಾಮೆನ್ ನಗರಗಳಿವೆ. ಇಲ್ಲಿ ಮೊದಲು ರಾಜವಂಶದ ಸಾಮ್ರಾಜ್ಯವಿತ್ತು, ಆದರೆ 1895ರಲ್ಲಿ ಅದು ಜಪಾನ್‌ನ ಆಕ್ರಮಣಕ್ಕೆ ಒಳಗಾಯಿತು. ಎರಡನೆಯ ಮಹಾಯುದ್ಧದಲ್ಲಿ ಚೀನಾ ಜಪಾನ್‌ನ್ನು ಸೋಲಿಸಿದ ನಂತರ ಈ ದ್ವೀಪದ ನಿಯಂತ್ರಣವು ಚೀನಾದ ಕೈಗೆ ಬಂದಿತ್ತು. ಇದರ ನಂತರ ಕಮ್ಯುನಿಸ್ಟ್ ನಾಯಕ ಮಾವೋ ಝೆಡಾಂಗ್ ಚೀನಾದ ಮೇನ್‌ಲ್ಯಾಂಡ್‌ನಲ್ಲಿ ಅಂತರ್ಯುದ್ಧವನ್ನು ಗೆದ್ದರು, ಈ ಸಮಯದಲ್ಲಿ ನ್ಯಾಶನಲಿಸ್ಟ್ ಕೌಮಿಂಟಾಂಗ್ ಪಕ್ಷದ ನಾಯಕ ಚಿಯಾಂಗ್ ಕೈ-ಶೆಕ್ 1949ರಲ್ಲಿ ತೈವಾನ್‌ಗೆ ಪಲಾಯನಗೈದಿದ್ದರು.

ಚಿಯಾಂಗ್ ಕೈ-ಶೇಕ್ ಈ ದ್ವೀಪದಲ್ಲಿ ಚೀನಾ ಗಣರಾಜ್ಯದ ಸರ್ಕಾರವನ್ನು ಸ್ಥಾಪಿಸಿದರು ಮತ್ತು 1975ರವರೆಗೆ ಅದರ ಅಧ್ಯಕ್ಷರಾಗಿದ್ದರು. ಬೀಜಿಂಗ್ ತೈವಾನ್‌ನ್ನು ಸ್ವತಂತ್ರ ದೇಶವೆಂದು ಎಂದಿಗೂ ಒಪ್ಪಿಕೊಂಡಿಲ್ಲ ಮತ್ತು ಅದನ್ನು ಯಾವಾಗಲೂ ಚೀನಾದ ಅವಿಭಾಜ್ಯ ಅಂಗವೆಂದೇ ಹೇಳಿಕೊಂಡು ಬಂದಿದೆ. ಮತ್ತೊಂದೆಡೆ ತೈವಾನ್ ಆಧುನಿಕ ಚೀನೀ ರಾಜ್ಯವು 1911ರ ಕ್ರಾಂತಿಯ ನಂತರ ಅಸ್ತಿತ್ವಕ್ಕೆ ಬಂದಿತು. ತೈವಾನ್ ಕಮ್ಯುನಿಸ್ಟ್ ಕ್ರಾಂತಿಯ ನಂತರ ಸ್ಥಾಪಿತವಾದ ರಾಜ್ಯ, ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಭಾಗವಾಗಿರಲಿಲ್ಲ ಎಂದು ವಾದಿಸುತ್ತದೆ. ಅಂದಿನಿಂದ ಈ ರಾಜಕೀಯ ಉದ್ವಿಗ್ನತೆ ಮುಂದುವರಿದಿದೆ, ಚೀನಾ ಮತ್ತು ತೈವಾನ್ ನಡುವೆ ಆರ್ಥಿಕ ಸಂಬಂಧಗಳು ಸಹ ಇದ್ದವು. ಅನೇಕ ತೈವಾನ್‌  ವಲಸಿಗರು ಚೀನಾದಲ್ಲಿ ಕೆಲಸ ಮಾಡುತ್ತಾರೆ ಮತ್ತು ಚೀನಾ ಕೂಡ ತೈವಾನ್‌ನಲ್ಲಿ ಹೂಡಿಕೆ ಮಾಡಿದೆ.

ಯುಎಸ್-ತೈವಾನ್:

ಯುಎಸ್ ತೈವಾನ್ ಅನ್ನು ಪ್ರತ್ಯೇಕ ದೇಶವೆಂದು ಗುರುತಿಸುವುದಿಲ್ಲ. ವಿಶ್ವದ ಕೇವಲ 13 ದೇಶಗಳು ತೈವಾನ್ ಅನ್ನು ಒಂದು ದೇಶವೆಂದು ಗುರುತಿಸುತ್ತಿವೆ. ಇದರಲ್ಲಿ ಮುಖ್ಯವಾಗಿ ದಕ್ಷಿಣ ಅಮೇರಿಕಾ, ಕೆರಿಬಿಯನ್, ಓಷಿಯಾನಿಯಾ ಮತ್ತು ವ್ಯಾಟಿಕನ್ ದೇಶಗಳು ಸೇರಿವೆ. ಈ ವಿಷಯದಲ್ಲಿ ಅಮೆರಿಕ ಯಾವಾಗಲೂ ತನ್ನ ಕಾರ್ಯತಂತ್ರವನ್ನು ಅಸ್ಪಷ್ಟವಾಗಿ ಇರಿಸಿದೆ. ಜೂನ್‌ನಲ್ಲಿ ಅಧ್ಯಕ್ಷ ಬೈಡೆನ್ ಅವರು ತೈವಾನ್‌ನ ಮೇಲೆ ದಾಳಿಯಾದರೆ ಅದನ್ನು ಯುಎಸ್ ರಕ್ಷಿಸುತ್ತದೆ ಎಂದು ಹೇಳಿದ್ದರು. ಆದರೆ ತೈವಾನ್‌ನ ಸ್ವಾತಂತ್ರ್ಯವನ್ನು ಯುಎಸ್ ಬೆಂಬಲಿಸುವುದಿಲ್ಲ ಎಂದು ಹೇಳಿದ್ದರು. ತೈವಾನ್ ಜೊತೆ US ಯಾವುದೇ ಔಪಚಾರಿಕ ಸಂಬಂಧವನ್ನು ಹೊಂದಿಲ್ಲ. ಯುಎಸ್‌ ಅಂತಾರಾಷ್ಟ್ರೀಯವಾಗಿ ತೈವಾನ್‌ಗೆ  ಬೆಂಬಲಿಸುತ್ತದೆ ಮತ್ತು ಶಸ್ತ್ರಾಸ್ತ್ರಗಳ ಪೂರೈಕೆಯನ್ನು ಮಾಡುತ್ತದೆ.

ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಈ ಹಿಂದೆ ತೈವಾನ್‌ಗೆ ತೆರಳಿದ್ದರು. ತೈವಾನ್‌ನಲ್ಲಿ ಅಮೆರಿಕದ ಹಿರಿಯ ವ್ಯಕ್ತಿಯ ಉಪಸ್ಥಿತಿಯು ಯುಎಸ್ ತನ್ನ ಸ್ವಾತಂತ್ರ್ಯಕ್ಕಾಗಿ ತೈವಾನ್‌ನ್ನು ಬೆಂಬಲಿಸುತ್ತದೆ ಎಂದು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ಚೀನಾ ಭಾವಿಸಿತ್ತು.

ಇದನ್ನು ಓದಿ: ‘ಒಬಿಸಿ’ ಸಮುದಾಯವನ್ನು ಅವಮಾನಿಸಿದ ಬಾಬಾ ರಾಮ್‌ದೇವ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...