Homeಅಂತರಾಷ್ಟ್ರೀಯಡಾ. ವಿವೇಕ್ ಮೂರ್ತಿ ನಾಯಕತ್ವದಲ್ಲಿ ’ಕೊರೊನಾ ಟಾಸ್ಕ್‌‌‌ಫೋರ್ಸ್‌’ ಘೋಷಿಸಲಿರುವ ಬೈಡೆನ್!

ಡಾ. ವಿವೇಕ್ ಮೂರ್ತಿ ನಾಯಕತ್ವದಲ್ಲಿ ’ಕೊರೊನಾ ಟಾಸ್ಕ್‌‌‌ಫೋರ್ಸ್‌’ ಘೋಷಿಸಲಿರುವ ಬೈಡೆನ್!

ಬರಾಕ್ ಒಬಾಮಾ ಆಡಳಿತದಲ್ಲಿ ನಾಲ್ಕು ವರ್ಷಗಳ ಕಾಲ ಅಮೆರಿಕದ ಉನ್ನತ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಇವರನ್ನು 2017 ರಲ್ಲಿ ಡೊನಾಲ್ಡ್ ಟ್ರಂಪ್ ವಜಾಗೊಳಿಸಿದ್ದರು.

- Advertisement -
- Advertisement -

ಅಮೆರಿಕದ ಹೊಸ ಅಧ್ಯಕ್ಷರಾಗಿ ಚುನಾಯಿತರಾಗಿರುವ ಜೋ ಬೈಡೆನ್ ಇಂದು ತನ್ನದೇ ಆದ ಕೊರೊನಾ ವೈರಸ್ ತಡೆ ಕಾರ್ಯಪಡೆಯ 12 ವ್ಯಕ್ತಿಗಳ  ಹೆಸರನ್ನು ಘೋಷಿಸಲಿದ್ದಾರೆ ಎಂದು ಬೈಡೆನ್ ಪರವಾಗಿ ಪ್ರಚಾರಾಭಿಯಾನ ಮಾಡಿದ ತಂಡ ಹೇಳಿದೆ.

ಅಮೆರಿಕದ ಮಾಜಿ ಶಸ್ತ್ರಚಿಕಿತ್ಸಕ ಜನರಲ್ ಡಾ. ವಿವೇಕ್ ಮೂರ್ತಿ ಮತ್ತು ಮಾಜಿ ಆಹಾರ ಮತ್ತು ಔಷಧ ಆಡಳಿತ ಆಯುಕ್ತ ಡಾ. ಡೇವಿಡ್ ಕೆಸ್ಲರ್ ಈ ಕಾರ್ಯನಿರತ ಗುಂಪಿನ ಸಹ-ಅಧ್ಯಕ್ಷರಾಗಿರುತ್ತಾರೆ ಎಂದು NBS ವರದಿ ಮಾಡಿದೆ.

“ಬೈಡೆನ್ ತನ್ನ ಚುನಾವಣಾ ಪ್ರಚಾರದ ಭರವಸೆಯನ್ನು ಈಡೇರಿಸುವ ಗುರಿಯನ್ನು ಹೊಂದಿದ್ದು, ಕೊರೊನಾ ವಿರುದ್ಧದ ಹೋರಾಟವನ್ನು ಗೆಲ್ಲುತ್ತಾರೆ” ಎಂದು ಬೈಡೆನ್ ಪರ ಪ್ರಚಾರ ಅಭಿಯಾನ ನಡೆಸಿದ ತಂಡದ ಉಪ ವ್ಯವಸ್ಥಾಪಕ ಕೇಟ್ ಬೆಡಿಂಗ್‌ಫೀಲ್ಡ್ ತಿಳಿಸಿದ್ದಾರೆ.

ಇದನ್ನೂ ಓದಿ: ಅಮೆರಿಕದಲ್ಲಿ ಟ್ರಂಪ್ ಸೋತಂತೆ ಬಿಹಾರದಲ್ಲಿ ಬಿಜೆಪಿ ಸೋಲುತ್ತದೆ: ಶಿವಸೇನೆ

“ಅವರು ನಾಳೆ ಅಧಿಕೃತವಾಗಿ ತಮ್ಮ ಕೆಲಸ ಪ್ರಾರಂಭಿಸಲಿದ್ದು, ಮಾಜಿ ಸರ್ಜನ್ ಜನರಲ್ ವಿವೇಕ್ ಮೂರ್ತಿ ಸೇರಿದಂತೆ ಮೂರು ಸಹ-ಅಧ್ಯಕ್ಷರ ನೇತೃತ್ವದಲ್ಲಿ ಕಾರ್ಯಪಡೆಯೊಂದನ್ನು ಘೋಷಿಸಲಿದ್ದಾರೆ” ಎನ್ನಲಾಗಿದೆ.

ವಿವೇಕ್ ಮೂರ್ತಿ 2015 ರಲ್ಲಿ ಬರಾಕ್ ಒಬಾಮಾ ಆಡಳಿತದಲ್ಲಿ ನಾಲ್ಕು ವರ್ಷಗಳ ಕಾಲ ಅಮೆರಿಕದ ಉನ್ನತ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ಆದರೆ 2017 ರಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಹುದ್ದೆಯಿಂದ ವಜಾಗೊಳಿಸಿದ್ದರು. ವಿವೇಕ್ ಮೂರ್ತಿ 19 ನೇ ಸರ್ಜನ್ ಜನರಲ್ ಆಗಿದ್ದು, ಈ ಸ್ಥಾನವನ್ನು ಅಲಂಕರಿಸಿದ ಮೊದಲ ಭಾರತೀಯ ಮೂಲದ ವ್ಯಕ್ತಿಯಾಗಿದ್ದಾರೆ.

ಇಬ್ಬರು ಅಧಿಕಾರಿಗಳನ್ನು ಉಲ್ಲೇಖಿಸಿರುವ CNN, ತಂಡಲ್ಲಿ ವಿವೇಕ್ ಮೂರ್ತಿ ಮತ್ತು ಡೇವಿಡ್ ಕೆಸ್ಲರ್ ಅವರ ಜೊತೆಗೆ ಯೇಲ್ ವಿಶ್ವವಿದ್ಯಾಲಯದ ಮಾರ್ಸೆಲ್ಲಾ ನುನೆಜ್-ಸ್ಮಿತ್ ಕೂಡಾ ಇರಲಿದ್ದಾರೆ ಎಂದು ವರದಿ ಮಾಡಿದೆ.

ಟ್ರಂಪ್ ಕೊರೊನಾ ಬಿಕ್ಕಟ್ಟು ನಿಭಾಯಿಸಿರುವುದು ಸೇರಿದಂತೆ, ಮಾಸ್ಕ್ ಧರಿಸಲು ನಿರಾಕರಿಸಿರುವುದು ಹಾಗೂ ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ಸಂಕಷ್ಟವನ್ನು ಕಡಿಮೆಗೊಳಿಸದೇ ಇರುವುದನ್ನು ಟೀಕಿಸಿದ್ದ ಬೈಡೆನ್, ಕೊರೊನಾವನ್ನು ನಿಭಾಯಿಸುವುದು ತಮ್ಮ ಮೊದಲ ಆದ್ಯತೆಯಾಗಿದೆ ಎಂದು ವಿಜಯೋತ್ಸವ ಭಾಷಣದಲ್ಲಿ ಹೇಳಿದ್ದರು. “ನಮ್ಮ ಕೆಲಸವು ಕೊರೊನಾವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದರೊಂದಿಗೆ ಪ್ರಾರಂಭವಾಗುತ್ತದೆ” ಎಂದಿದ್ದರು.

ಇದನ್ನೂ ಓದಿ: ಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ವಿಶ್ವದಲ್ಲೇ ಅತೀ ಹೆಚ್ಚು ಕೊರೊನಾ ಪ್ರಕರಣ ವರದಿಯಾಗಿರುವ ಅಮೆರಿಕದಲ್ಲಿ 1.2 ಕೋಟಿ ಕೊರೊನಾ ಪ್ರಕರಣಗಳು ದಾಖಲಾಗಿದವೆ. ಇದುವರೆಗೂ ಅಲ್ಲಿ 2.4 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಈ ಮಧ್ಯೆ, ವಿಶ್ವ ಆರೋಗ್ಯ ಸಂಸ್ಥೆ(WHO)ಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಗೆಬ್ರೆಯೆಸಸ್ , ಬಿಡೆನ್ ಮತ್ತು ಕಮಲಾ ಹ್ಯಾರಿಸ್ ಅವರನ್ನು ಅಭಿನಂದಿಸಿದ್ದು, ಅವರೊಂದಿಗೆ ಕೆಲಸ ಮಾಡಲು WHO ಎದುರು ನೋಡುತ್ತಿದೆ ಎಂದು ಹೇಳಿದ್ದಾರೆ.

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ, ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಸಂಬಂಧ ಹೊಂದಲು ನಿರಾಕರಿಸಿದ್ದ ಟ್ರಂಟ್ ಆರೋಗ್ಯ ಸಂಸ್ಥೆಯೂ ಚೀನಾದ ಗುಲಾಮನಾಗಿದೆ ಎಂದು ಆರೋಪಿಸಿದ್ದರು. ಆದರೆ ಜೋ ಬೈಡೆನ್ ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಅಮೆರಿಕದ ಸದಸ್ಯತ್ವವನ್ನು ಮರುಸ್ಥಾಪಿಸುವುದಾಗಿ ಹೇಳಿದ್ದಾರೆಂದು ಅಮೆರಿಕ ಮಾಧ್ಯಮಗಳು ವರದಿ ಮಾಡಿದೆ.


ಇದನ್ನೂ ಓದಿ: ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...