Homeಅಂತರಾಷ್ಟ್ರೀಯಡಾ. ವಿವೇಕ್ ಮೂರ್ತಿ ನಾಯಕತ್ವದಲ್ಲಿ ’ಕೊರೊನಾ ಟಾಸ್ಕ್‌‌‌ಫೋರ್ಸ್‌’ ಘೋಷಿಸಲಿರುವ ಬೈಡೆನ್!

ಡಾ. ವಿವೇಕ್ ಮೂರ್ತಿ ನಾಯಕತ್ವದಲ್ಲಿ ’ಕೊರೊನಾ ಟಾಸ್ಕ್‌‌‌ಫೋರ್ಸ್‌’ ಘೋಷಿಸಲಿರುವ ಬೈಡೆನ್!

ಬರಾಕ್ ಒಬಾಮಾ ಆಡಳಿತದಲ್ಲಿ ನಾಲ್ಕು ವರ್ಷಗಳ ಕಾಲ ಅಮೆರಿಕದ ಉನ್ನತ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಇವರನ್ನು 2017 ರಲ್ಲಿ ಡೊನಾಲ್ಡ್ ಟ್ರಂಪ್ ವಜಾಗೊಳಿಸಿದ್ದರು.

- Advertisement -
- Advertisement -

ಅಮೆರಿಕದ ಹೊಸ ಅಧ್ಯಕ್ಷರಾಗಿ ಚುನಾಯಿತರಾಗಿರುವ ಜೋ ಬೈಡೆನ್ ಇಂದು ತನ್ನದೇ ಆದ ಕೊರೊನಾ ವೈರಸ್ ತಡೆ ಕಾರ್ಯಪಡೆಯ 12 ವ್ಯಕ್ತಿಗಳ  ಹೆಸರನ್ನು ಘೋಷಿಸಲಿದ್ದಾರೆ ಎಂದು ಬೈಡೆನ್ ಪರವಾಗಿ ಪ್ರಚಾರಾಭಿಯಾನ ಮಾಡಿದ ತಂಡ ಹೇಳಿದೆ.

ಅಮೆರಿಕದ ಮಾಜಿ ಶಸ್ತ್ರಚಿಕಿತ್ಸಕ ಜನರಲ್ ಡಾ. ವಿವೇಕ್ ಮೂರ್ತಿ ಮತ್ತು ಮಾಜಿ ಆಹಾರ ಮತ್ತು ಔಷಧ ಆಡಳಿತ ಆಯುಕ್ತ ಡಾ. ಡೇವಿಡ್ ಕೆಸ್ಲರ್ ಈ ಕಾರ್ಯನಿರತ ಗುಂಪಿನ ಸಹ-ಅಧ್ಯಕ್ಷರಾಗಿರುತ್ತಾರೆ ಎಂದು NBS ವರದಿ ಮಾಡಿದೆ.

“ಬೈಡೆನ್ ತನ್ನ ಚುನಾವಣಾ ಪ್ರಚಾರದ ಭರವಸೆಯನ್ನು ಈಡೇರಿಸುವ ಗುರಿಯನ್ನು ಹೊಂದಿದ್ದು, ಕೊರೊನಾ ವಿರುದ್ಧದ ಹೋರಾಟವನ್ನು ಗೆಲ್ಲುತ್ತಾರೆ” ಎಂದು ಬೈಡೆನ್ ಪರ ಪ್ರಚಾರ ಅಭಿಯಾನ ನಡೆಸಿದ ತಂಡದ ಉಪ ವ್ಯವಸ್ಥಾಪಕ ಕೇಟ್ ಬೆಡಿಂಗ್‌ಫೀಲ್ಡ್ ತಿಳಿಸಿದ್ದಾರೆ.

ಇದನ್ನೂ ಓದಿ: ಅಮೆರಿಕದಲ್ಲಿ ಟ್ರಂಪ್ ಸೋತಂತೆ ಬಿಹಾರದಲ್ಲಿ ಬಿಜೆಪಿ ಸೋಲುತ್ತದೆ: ಶಿವಸೇನೆ

“ಅವರು ನಾಳೆ ಅಧಿಕೃತವಾಗಿ ತಮ್ಮ ಕೆಲಸ ಪ್ರಾರಂಭಿಸಲಿದ್ದು, ಮಾಜಿ ಸರ್ಜನ್ ಜನರಲ್ ವಿವೇಕ್ ಮೂರ್ತಿ ಸೇರಿದಂತೆ ಮೂರು ಸಹ-ಅಧ್ಯಕ್ಷರ ನೇತೃತ್ವದಲ್ಲಿ ಕಾರ್ಯಪಡೆಯೊಂದನ್ನು ಘೋಷಿಸಲಿದ್ದಾರೆ” ಎನ್ನಲಾಗಿದೆ.

ವಿವೇಕ್ ಮೂರ್ತಿ 2015 ರಲ್ಲಿ ಬರಾಕ್ ಒಬಾಮಾ ಆಡಳಿತದಲ್ಲಿ ನಾಲ್ಕು ವರ್ಷಗಳ ಕಾಲ ಅಮೆರಿಕದ ಉನ್ನತ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ಆದರೆ 2017 ರಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಹುದ್ದೆಯಿಂದ ವಜಾಗೊಳಿಸಿದ್ದರು. ವಿವೇಕ್ ಮೂರ್ತಿ 19 ನೇ ಸರ್ಜನ್ ಜನರಲ್ ಆಗಿದ್ದು, ಈ ಸ್ಥಾನವನ್ನು ಅಲಂಕರಿಸಿದ ಮೊದಲ ಭಾರತೀಯ ಮೂಲದ ವ್ಯಕ್ತಿಯಾಗಿದ್ದಾರೆ.

ಇಬ್ಬರು ಅಧಿಕಾರಿಗಳನ್ನು ಉಲ್ಲೇಖಿಸಿರುವ CNN, ತಂಡಲ್ಲಿ ವಿವೇಕ್ ಮೂರ್ತಿ ಮತ್ತು ಡೇವಿಡ್ ಕೆಸ್ಲರ್ ಅವರ ಜೊತೆಗೆ ಯೇಲ್ ವಿಶ್ವವಿದ್ಯಾಲಯದ ಮಾರ್ಸೆಲ್ಲಾ ನುನೆಜ್-ಸ್ಮಿತ್ ಕೂಡಾ ಇರಲಿದ್ದಾರೆ ಎಂದು ವರದಿ ಮಾಡಿದೆ.

ಟ್ರಂಪ್ ಕೊರೊನಾ ಬಿಕ್ಕಟ್ಟು ನಿಭಾಯಿಸಿರುವುದು ಸೇರಿದಂತೆ, ಮಾಸ್ಕ್ ಧರಿಸಲು ನಿರಾಕರಿಸಿರುವುದು ಹಾಗೂ ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ಸಂಕಷ್ಟವನ್ನು ಕಡಿಮೆಗೊಳಿಸದೇ ಇರುವುದನ್ನು ಟೀಕಿಸಿದ್ದ ಬೈಡೆನ್, ಕೊರೊನಾವನ್ನು ನಿಭಾಯಿಸುವುದು ತಮ್ಮ ಮೊದಲ ಆದ್ಯತೆಯಾಗಿದೆ ಎಂದು ವಿಜಯೋತ್ಸವ ಭಾಷಣದಲ್ಲಿ ಹೇಳಿದ್ದರು. “ನಮ್ಮ ಕೆಲಸವು ಕೊರೊನಾವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದರೊಂದಿಗೆ ಪ್ರಾರಂಭವಾಗುತ್ತದೆ” ಎಂದಿದ್ದರು.

ಇದನ್ನೂ ಓದಿ: ಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ವಿಶ್ವದಲ್ಲೇ ಅತೀ ಹೆಚ್ಚು ಕೊರೊನಾ ಪ್ರಕರಣ ವರದಿಯಾಗಿರುವ ಅಮೆರಿಕದಲ್ಲಿ 1.2 ಕೋಟಿ ಕೊರೊನಾ ಪ್ರಕರಣಗಳು ದಾಖಲಾಗಿದವೆ. ಇದುವರೆಗೂ ಅಲ್ಲಿ 2.4 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಈ ಮಧ್ಯೆ, ವಿಶ್ವ ಆರೋಗ್ಯ ಸಂಸ್ಥೆ(WHO)ಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಗೆಬ್ರೆಯೆಸಸ್ , ಬಿಡೆನ್ ಮತ್ತು ಕಮಲಾ ಹ್ಯಾರಿಸ್ ಅವರನ್ನು ಅಭಿನಂದಿಸಿದ್ದು, ಅವರೊಂದಿಗೆ ಕೆಲಸ ಮಾಡಲು WHO ಎದುರು ನೋಡುತ್ತಿದೆ ಎಂದು ಹೇಳಿದ್ದಾರೆ.

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ, ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಸಂಬಂಧ ಹೊಂದಲು ನಿರಾಕರಿಸಿದ್ದ ಟ್ರಂಟ್ ಆರೋಗ್ಯ ಸಂಸ್ಥೆಯೂ ಚೀನಾದ ಗುಲಾಮನಾಗಿದೆ ಎಂದು ಆರೋಪಿಸಿದ್ದರು. ಆದರೆ ಜೋ ಬೈಡೆನ್ ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಅಮೆರಿಕದ ಸದಸ್ಯತ್ವವನ್ನು ಮರುಸ್ಥಾಪಿಸುವುದಾಗಿ ಹೇಳಿದ್ದಾರೆಂದು ಅಮೆರಿಕ ಮಾಧ್ಯಮಗಳು ವರದಿ ಮಾಡಿದೆ.


ಇದನ್ನೂ ಓದಿ: ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...