Homeಅಂತರಾಷ್ಟ್ರೀಯಡಾ. ವಿವೇಕ್ ಮೂರ್ತಿ ನಾಯಕತ್ವದಲ್ಲಿ ’ಕೊರೊನಾ ಟಾಸ್ಕ್‌‌‌ಫೋರ್ಸ್‌’ ಘೋಷಿಸಲಿರುವ ಬೈಡೆನ್!

ಡಾ. ವಿವೇಕ್ ಮೂರ್ತಿ ನಾಯಕತ್ವದಲ್ಲಿ ’ಕೊರೊನಾ ಟಾಸ್ಕ್‌‌‌ಫೋರ್ಸ್‌’ ಘೋಷಿಸಲಿರುವ ಬೈಡೆನ್!

ಬರಾಕ್ ಒಬಾಮಾ ಆಡಳಿತದಲ್ಲಿ ನಾಲ್ಕು ವರ್ಷಗಳ ಕಾಲ ಅಮೆರಿಕದ ಉನ್ನತ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಇವರನ್ನು 2017 ರಲ್ಲಿ ಡೊನಾಲ್ಡ್ ಟ್ರಂಪ್ ವಜಾಗೊಳಿಸಿದ್ದರು.

- Advertisement -
- Advertisement -

ಅಮೆರಿಕದ ಹೊಸ ಅಧ್ಯಕ್ಷರಾಗಿ ಚುನಾಯಿತರಾಗಿರುವ ಜೋ ಬೈಡೆನ್ ಇಂದು ತನ್ನದೇ ಆದ ಕೊರೊನಾ ವೈರಸ್ ತಡೆ ಕಾರ್ಯಪಡೆಯ 12 ವ್ಯಕ್ತಿಗಳ  ಹೆಸರನ್ನು ಘೋಷಿಸಲಿದ್ದಾರೆ ಎಂದು ಬೈಡೆನ್ ಪರವಾಗಿ ಪ್ರಚಾರಾಭಿಯಾನ ಮಾಡಿದ ತಂಡ ಹೇಳಿದೆ.

ಅಮೆರಿಕದ ಮಾಜಿ ಶಸ್ತ್ರಚಿಕಿತ್ಸಕ ಜನರಲ್ ಡಾ. ವಿವೇಕ್ ಮೂರ್ತಿ ಮತ್ತು ಮಾಜಿ ಆಹಾರ ಮತ್ತು ಔಷಧ ಆಡಳಿತ ಆಯುಕ್ತ ಡಾ. ಡೇವಿಡ್ ಕೆಸ್ಲರ್ ಈ ಕಾರ್ಯನಿರತ ಗುಂಪಿನ ಸಹ-ಅಧ್ಯಕ್ಷರಾಗಿರುತ್ತಾರೆ ಎಂದು NBS ವರದಿ ಮಾಡಿದೆ.

“ಬೈಡೆನ್ ತನ್ನ ಚುನಾವಣಾ ಪ್ರಚಾರದ ಭರವಸೆಯನ್ನು ಈಡೇರಿಸುವ ಗುರಿಯನ್ನು ಹೊಂದಿದ್ದು, ಕೊರೊನಾ ವಿರುದ್ಧದ ಹೋರಾಟವನ್ನು ಗೆಲ್ಲುತ್ತಾರೆ” ಎಂದು ಬೈಡೆನ್ ಪರ ಪ್ರಚಾರ ಅಭಿಯಾನ ನಡೆಸಿದ ತಂಡದ ಉಪ ವ್ಯವಸ್ಥಾಪಕ ಕೇಟ್ ಬೆಡಿಂಗ್‌ಫೀಲ್ಡ್ ತಿಳಿಸಿದ್ದಾರೆ.

ಇದನ್ನೂ ಓದಿ: ಅಮೆರಿಕದಲ್ಲಿ ಟ್ರಂಪ್ ಸೋತಂತೆ ಬಿಹಾರದಲ್ಲಿ ಬಿಜೆಪಿ ಸೋಲುತ್ತದೆ: ಶಿವಸೇನೆ

“ಅವರು ನಾಳೆ ಅಧಿಕೃತವಾಗಿ ತಮ್ಮ ಕೆಲಸ ಪ್ರಾರಂಭಿಸಲಿದ್ದು, ಮಾಜಿ ಸರ್ಜನ್ ಜನರಲ್ ವಿವೇಕ್ ಮೂರ್ತಿ ಸೇರಿದಂತೆ ಮೂರು ಸಹ-ಅಧ್ಯಕ್ಷರ ನೇತೃತ್ವದಲ್ಲಿ ಕಾರ್ಯಪಡೆಯೊಂದನ್ನು ಘೋಷಿಸಲಿದ್ದಾರೆ” ಎನ್ನಲಾಗಿದೆ.

ವಿವೇಕ್ ಮೂರ್ತಿ 2015 ರಲ್ಲಿ ಬರಾಕ್ ಒಬಾಮಾ ಆಡಳಿತದಲ್ಲಿ ನಾಲ್ಕು ವರ್ಷಗಳ ಕಾಲ ಅಮೆರಿಕದ ಉನ್ನತ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ಆದರೆ 2017 ರಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಹುದ್ದೆಯಿಂದ ವಜಾಗೊಳಿಸಿದ್ದರು. ವಿವೇಕ್ ಮೂರ್ತಿ 19 ನೇ ಸರ್ಜನ್ ಜನರಲ್ ಆಗಿದ್ದು, ಈ ಸ್ಥಾನವನ್ನು ಅಲಂಕರಿಸಿದ ಮೊದಲ ಭಾರತೀಯ ಮೂಲದ ವ್ಯಕ್ತಿಯಾಗಿದ್ದಾರೆ.

ಇಬ್ಬರು ಅಧಿಕಾರಿಗಳನ್ನು ಉಲ್ಲೇಖಿಸಿರುವ CNN, ತಂಡಲ್ಲಿ ವಿವೇಕ್ ಮೂರ್ತಿ ಮತ್ತು ಡೇವಿಡ್ ಕೆಸ್ಲರ್ ಅವರ ಜೊತೆಗೆ ಯೇಲ್ ವಿಶ್ವವಿದ್ಯಾಲಯದ ಮಾರ್ಸೆಲ್ಲಾ ನುನೆಜ್-ಸ್ಮಿತ್ ಕೂಡಾ ಇರಲಿದ್ದಾರೆ ಎಂದು ವರದಿ ಮಾಡಿದೆ.

ಟ್ರಂಪ್ ಕೊರೊನಾ ಬಿಕ್ಕಟ್ಟು ನಿಭಾಯಿಸಿರುವುದು ಸೇರಿದಂತೆ, ಮಾಸ್ಕ್ ಧರಿಸಲು ನಿರಾಕರಿಸಿರುವುದು ಹಾಗೂ ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ಸಂಕಷ್ಟವನ್ನು ಕಡಿಮೆಗೊಳಿಸದೇ ಇರುವುದನ್ನು ಟೀಕಿಸಿದ್ದ ಬೈಡೆನ್, ಕೊರೊನಾವನ್ನು ನಿಭಾಯಿಸುವುದು ತಮ್ಮ ಮೊದಲ ಆದ್ಯತೆಯಾಗಿದೆ ಎಂದು ವಿಜಯೋತ್ಸವ ಭಾಷಣದಲ್ಲಿ ಹೇಳಿದ್ದರು. “ನಮ್ಮ ಕೆಲಸವು ಕೊರೊನಾವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದರೊಂದಿಗೆ ಪ್ರಾರಂಭವಾಗುತ್ತದೆ” ಎಂದಿದ್ದರು.

ಇದನ್ನೂ ಓದಿ: ಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ವಿಶ್ವದಲ್ಲೇ ಅತೀ ಹೆಚ್ಚು ಕೊರೊನಾ ಪ್ರಕರಣ ವರದಿಯಾಗಿರುವ ಅಮೆರಿಕದಲ್ಲಿ 1.2 ಕೋಟಿ ಕೊರೊನಾ ಪ್ರಕರಣಗಳು ದಾಖಲಾಗಿದವೆ. ಇದುವರೆಗೂ ಅಲ್ಲಿ 2.4 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಈ ಮಧ್ಯೆ, ವಿಶ್ವ ಆರೋಗ್ಯ ಸಂಸ್ಥೆ(WHO)ಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಗೆಬ್ರೆಯೆಸಸ್ , ಬಿಡೆನ್ ಮತ್ತು ಕಮಲಾ ಹ್ಯಾರಿಸ್ ಅವರನ್ನು ಅಭಿನಂದಿಸಿದ್ದು, ಅವರೊಂದಿಗೆ ಕೆಲಸ ಮಾಡಲು WHO ಎದುರು ನೋಡುತ್ತಿದೆ ಎಂದು ಹೇಳಿದ್ದಾರೆ.

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ, ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಸಂಬಂಧ ಹೊಂದಲು ನಿರಾಕರಿಸಿದ್ದ ಟ್ರಂಟ್ ಆರೋಗ್ಯ ಸಂಸ್ಥೆಯೂ ಚೀನಾದ ಗುಲಾಮನಾಗಿದೆ ಎಂದು ಆರೋಪಿಸಿದ್ದರು. ಆದರೆ ಜೋ ಬೈಡೆನ್ ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಅಮೆರಿಕದ ಸದಸ್ಯತ್ವವನ್ನು ಮರುಸ್ಥಾಪಿಸುವುದಾಗಿ ಹೇಳಿದ್ದಾರೆಂದು ಅಮೆರಿಕ ಮಾಧ್ಯಮಗಳು ವರದಿ ಮಾಡಿದೆ.


ಇದನ್ನೂ ಓದಿ: ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...