Homeಅಂತರಾಷ್ಟ್ರೀಯಬೈಡನ್‌ರ ಎಚ್‌-1ಬಿ ವೀಸಾ, ಗ್ರೀನ್ ಕಾರ್ಡ್ ಯೋಜನೆಗಳು ಸಾವಿರಾರು ಭಾರತೀಯರಿಗೆ ಉಪಯೋಗವಾಗಲಿವೆ..

ಬೈಡನ್‌ರ ಎಚ್‌-1ಬಿ ವೀಸಾ, ಗ್ರೀನ್ ಕಾರ್ಡ್ ಯೋಜನೆಗಳು ಸಾವಿರಾರು ಭಾರತೀಯರಿಗೆ ಉಪಯೋಗವಾಗಲಿವೆ..

ಸೂಕ್ತ ದಾಖಲೆಗಳಿಲ್ಲದೆ ಅಮೆರಿಕದಲ್ಲಿ ನೆಲೆಸಿರುವ ಭಾರತದ 5 ಲಕ್ಷ ಜನರು ಸೇರಿದಂತೆ ಸುಮಾರು 1 ಕೋಟಿ 10 ಲಕ್ಷ ವಲಸಿಗರಿಗೆ ಅಮೆರಿಕದ ಪೌರತ್ವ ನೀಡುವ ಬಗ್ಗೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲು ಬೈಡನ್‌ ಆಲೋಚಿಸಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ಭಾರತೀಯ ಮೂಲದ ಮಹಿಳೆಯೊಬ್ಬರು ಮೊದಲ ಬಾರಿಗೆ ಅಮೆರಿಕಾ ಉಪಾಧ್ಯಕ್ಷರಾಗಿ ಶ್ವೇತಭವನದೊಳಗೆ ಹೆಜ್ಜೆ ಹಾಕಲಿದ್ದಾರೆ ಎಂಬ ಅಂಶದ ಹೊರತಾಗಿಯೂ, ಬೈಡೆನ್-ಹ್ಯಾರಿಸ್ ಗೆಲುವು ಮತ್ತೊಂದು ಕಾರಣಕ್ಕಾಗಿ ಭಾರತೀಯರಿಗೆ, ಭಾರತೀಯ ವೃತ್ತಿಪರರಿಗೆ ಶುಭ ಸುದ್ದಿಯಾಗಿದೆ.

ಹೌದು, ಟ್ರಂಪ್ ನಿರ್ಗಮನದ ನಂತರ ಆರಂಭವಾಗಲಿರುವ ಹೊಸ ಆಡಳಿತವು ಎಚ್ -1ಬಿ ವೀಸಾ ಸೇರಿದಂತೆ, ಕೆಲವು ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಹೊಸ ನಿಯಮದಲ್ಲಿ ವೀಸಾಗಳ ಸಂಖ್ಯೆಯನ್ನು ಹೆಚ್ಚಿಸಲು ಯೋಜಿಸಿದರೆ ಸಾವಿರಾರು ಭಾರತೀಯರಿಗೆ, ಭಾರತೀಯ ವೃತ್ತಿಪರರಿಗೆ ಅನುಕೂಲವಾಗುತ್ತದೆ.

ಇದು ಸಮಗ್ರ ವಲಸೆ ಸುಧಾರಣೆಯ ಒಂದು ಭಾಗವಾಗಿದ್ದು, ಬೈಡೆನ್ ಆಡಳಿತವು ಒಂದೇ ಬಾರಿಗೆ ಅಥವಾ ಪ್ರತ್ಯೇಕವಾಗಿ ಈ ಕೆಲಸ ಮಾಡಲು ಯೋಜಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಸೂಕ್ತ ದಾಖಲೆಗಳಿಲ್ಲದೆ ಅಮೆರಿಕದಲ್ಲಿ ನೆಲೆಸಿರುವ ಭಾರತದ 5 ಲಕ್ಷ ಜನರು ಸೇರಿದಂತೆ ಸುಮಾರು 1 ಕೋಟಿ 10 ಲಕ್ಷ ವಲಸಿಗರಿಗೆ ಅಮೆರಿಕದ ಪೌರತ್ವ ನೀಡುವ ಬಗ್ಗೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲು ಬೈಡನ್‌ ಆಲೋಚಿಸಿದ್ದಾರೆ ಎನ್ನಲಾಗಿದೆ.

ಕೊರೊನಾ ಸಾಂಕ್ರಾಮಿಕ ರೋಗದಿಂದ ಉಲ್ಬಣಗೊಂಡಿರುವ ನಿರುದ್ಯೋಗದಿಂದ ಅಮೆರಿಕಾದ ಉದ್ಯೋಗಿಗಳನ್ನು ರಕ್ಷಿಸಲು ಟ್ರಂಪ್ 2020 ರ ಜೂನ್ ಅಂತ್ಯದವರೆಗೆ ಎಚ್ -1 ಬಿ ವೀಸಾಗಳ ಜೊತೆಗೆ ಇತರ ರೀತಿಯ ವಿದೇಶಿ ಕೆಲಸದ ವೀಸಾಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು.

ಇದನ್ನೂ ಓದಿ: ಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ಎಚ್ -1 ಬಿ ವಲಸೆರಹಿತ ವೀಸಾ ಕಾರ್ಯಕ್ರಮದ ಮೇಲೆ ಟ್ರಂಪ್ ಆಡಳಿತವು ಅಕ್ಟೋಬರ್‌ನಲ್ಲಿ ಹೊಸ ನಿರ್ಬಂಧಗಳನ್ನು ಘೋಷಿಸಿತ್ತು. ಈ ನಿರ್ಬಂಧಗಳು ಈಗಾಗಲೇ ಅಮೆರಿಕಾದಲ್ಲಿರುವವರಿಗೆ ಅನ್ವಯಿಸುವುದಿಲ್ಲ, ಆದರೆ ಅಮೆರಿಕಾಗೆ ಹೋಗುವ ಹೊಸ ವೀಸಾ ಹೊಂದಿರುವವರಿಗೆ ಮಾತ್ರ ಅನ್ವಯಿಸುತ್ತಿತ್ತು.

ನಗರಗಳು ಮತ್ತು ಜಿಲ್ಲಾ ಪ್ರದೇಶಗಳ ಬೆಳವಣಿಗೆಯನ್ನು ಬೈಡನ್ ಆಡಳಿತ ಬೆಂಬಲಿಸುವ ಕಾರಣ, ವಲಸಿಗರಿಗೆ ಅರ್ಜಿ ಸಲ್ಲಿಸಲು ಆಡಳಿತವು ಹೊಸ ವೀಸಾ ವರ್ಗವನ್ನು ರಚಿಸಲು ಯೋಜಿಸಿದೆ ಎಂದು ತಿಳಿದು ಬಂದಿದೆ.  ಅಲ್ಲದೆ ಪ್ರತಿ ವರ್ಷ ಕನಿಷ್ಠ 95 ಸಾವಿರ ವಲಸಿಗರು ಅಮೆರಿಕದಲ್ಲಿ ಪ್ರವೇಶ ಪಡೆಯುವ ಬಗ್ಗೆಯೂ ಕಾರ್ಯಕ್ರಮ ರೂಪಿಸಲಿದ್ದಾರೆ ಎಂದು ಬೈಡನ್‌ ಪ್ರಚಾರ ಕಾರ್ಯ ತಂಡವು ಬಿಡುಗಡೆ ಮಾಡಿರುವ ನೀತಿ ನಿರೂಪಣಾ ದಾಖಲೆಗಳಲ್ಲಿ ಹೇಳಲಾಗಿದೆ.

ತಂತ್ರಜ್ಞಾನ ಆಧಾರಿತ ಕಂಪನಿಗಳು ಎಚ್ -1 ಬಿ ವೀಸಾಗಳನ್ನು ಅವಲಂಬಿಸಿವೆ. ಇದು ಭಾರತೀಯರಿಗೆ ಮತ್ತು ಚೀನಾದಂತಹ ದೇಶಗಳಿಂದ ಪ್ರತಿವರ್ಷ ಸಾವಿರಾರು ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಗ್ರೀನ್ ಕಾರ್ಡ್‌ಗಳು ಎಂದೂ ಕರೆಯಲ್ಪಡುವ ಉದ್ಯೋಗ ಆಧಾರಿತ ವೀಸಾಗಳು, ನುರಿತ ಕೆಲಸದಲ್ಲಿ ತೊಡಗಿಸಿಕೊಳ್ಳಲು ವಲಸಿಗರಿಗೆ ಅಮೆರಿಕಾದನಲ್ಲಿ ಕಾನೂನುಬದ್ಧವಾಗಿ ಶಾಶ್ವತ ನೆಲೆಯೂರಲು ಅವಕಾಶ ನೀಡುತ್ತದೆ.

ಕುಟುಂಬ ಆಧಾರಿತ ವಲಸೆಗೆ ಬೈಡನ್‌ ಆಡಳಿತ ಬೆಂಬಲ ನೀಡಲಿದೆ. ಅವಿಭಕ್ತ ಕುಟುಂಬದ ಹಿತಾಸಕ್ತಿ ಕಾಪಾಡುವುದು ಅಮೆರಿಕದ ಪ್ರಮುಖ ನೀತಿ ಆಗಿರಲಿದೆ’ ಎಂದು ದಾಖಲೆ ಹೇಳಿದೆ. ಪ್ರಸ್ತುತ, ಉದ್ಯೋಗ ಆಧಾರಿತ ವೀಸಾಗಳ ಸಂಖ್ಯೆಯನ್ನು ಪ್ರತಿವರ್ಷ 1,40,000 ಎಂದು ಗುರುತಿಸಲಾಗಿದೆ.


ಇದನ್ನೂ ಓದಿ: ಅಮೆರಿಕಾ ಚುನಾವಣೆ: ಜೋ ಬೈಡನ್‌ಗೆ ಗೆಲುವು; ಟ್ರಂಪ್‌ಗೆ ಮುಖಭಂಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...