Homeಅಂತರಾಷ್ಟ್ರೀಯಬೈಡನ್‌ರ ಎಚ್‌-1ಬಿ ವೀಸಾ, ಗ್ರೀನ್ ಕಾರ್ಡ್ ಯೋಜನೆಗಳು ಸಾವಿರಾರು ಭಾರತೀಯರಿಗೆ ಉಪಯೋಗವಾಗಲಿವೆ..

ಬೈಡನ್‌ರ ಎಚ್‌-1ಬಿ ವೀಸಾ, ಗ್ರೀನ್ ಕಾರ್ಡ್ ಯೋಜನೆಗಳು ಸಾವಿರಾರು ಭಾರತೀಯರಿಗೆ ಉಪಯೋಗವಾಗಲಿವೆ..

ಸೂಕ್ತ ದಾಖಲೆಗಳಿಲ್ಲದೆ ಅಮೆರಿಕದಲ್ಲಿ ನೆಲೆಸಿರುವ ಭಾರತದ 5 ಲಕ್ಷ ಜನರು ಸೇರಿದಂತೆ ಸುಮಾರು 1 ಕೋಟಿ 10 ಲಕ್ಷ ವಲಸಿಗರಿಗೆ ಅಮೆರಿಕದ ಪೌರತ್ವ ನೀಡುವ ಬಗ್ಗೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲು ಬೈಡನ್‌ ಆಲೋಚಿಸಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ಭಾರತೀಯ ಮೂಲದ ಮಹಿಳೆಯೊಬ್ಬರು ಮೊದಲ ಬಾರಿಗೆ ಅಮೆರಿಕಾ ಉಪಾಧ್ಯಕ್ಷರಾಗಿ ಶ್ವೇತಭವನದೊಳಗೆ ಹೆಜ್ಜೆ ಹಾಕಲಿದ್ದಾರೆ ಎಂಬ ಅಂಶದ ಹೊರತಾಗಿಯೂ, ಬೈಡೆನ್-ಹ್ಯಾರಿಸ್ ಗೆಲುವು ಮತ್ತೊಂದು ಕಾರಣಕ್ಕಾಗಿ ಭಾರತೀಯರಿಗೆ, ಭಾರತೀಯ ವೃತ್ತಿಪರರಿಗೆ ಶುಭ ಸುದ್ದಿಯಾಗಿದೆ.

ಹೌದು, ಟ್ರಂಪ್ ನಿರ್ಗಮನದ ನಂತರ ಆರಂಭವಾಗಲಿರುವ ಹೊಸ ಆಡಳಿತವು ಎಚ್ -1ಬಿ ವೀಸಾ ಸೇರಿದಂತೆ, ಕೆಲವು ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಹೊಸ ನಿಯಮದಲ್ಲಿ ವೀಸಾಗಳ ಸಂಖ್ಯೆಯನ್ನು ಹೆಚ್ಚಿಸಲು ಯೋಜಿಸಿದರೆ ಸಾವಿರಾರು ಭಾರತೀಯರಿಗೆ, ಭಾರತೀಯ ವೃತ್ತಿಪರರಿಗೆ ಅನುಕೂಲವಾಗುತ್ತದೆ.

ಇದು ಸಮಗ್ರ ವಲಸೆ ಸುಧಾರಣೆಯ ಒಂದು ಭಾಗವಾಗಿದ್ದು, ಬೈಡೆನ್ ಆಡಳಿತವು ಒಂದೇ ಬಾರಿಗೆ ಅಥವಾ ಪ್ರತ್ಯೇಕವಾಗಿ ಈ ಕೆಲಸ ಮಾಡಲು ಯೋಜಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಸೂಕ್ತ ದಾಖಲೆಗಳಿಲ್ಲದೆ ಅಮೆರಿಕದಲ್ಲಿ ನೆಲೆಸಿರುವ ಭಾರತದ 5 ಲಕ್ಷ ಜನರು ಸೇರಿದಂತೆ ಸುಮಾರು 1 ಕೋಟಿ 10 ಲಕ್ಷ ವಲಸಿಗರಿಗೆ ಅಮೆರಿಕದ ಪೌರತ್ವ ನೀಡುವ ಬಗ್ಗೆ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲು ಬೈಡನ್‌ ಆಲೋಚಿಸಿದ್ದಾರೆ ಎನ್ನಲಾಗಿದೆ.

ಕೊರೊನಾ ಸಾಂಕ್ರಾಮಿಕ ರೋಗದಿಂದ ಉಲ್ಬಣಗೊಂಡಿರುವ ನಿರುದ್ಯೋಗದಿಂದ ಅಮೆರಿಕಾದ ಉದ್ಯೋಗಿಗಳನ್ನು ರಕ್ಷಿಸಲು ಟ್ರಂಪ್ 2020 ರ ಜೂನ್ ಅಂತ್ಯದವರೆಗೆ ಎಚ್ -1 ಬಿ ವೀಸಾಗಳ ಜೊತೆಗೆ ಇತರ ರೀತಿಯ ವಿದೇಶಿ ಕೆಲಸದ ವೀಸಾಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು.

ಇದನ್ನೂ ಓದಿ: ಭಾರತ ಮೂಲದ ಕಮಲಾ ಹ್ಯಾರಿಸ್; ಅಮೆರಿಕಾದ ಮೊದಲ ಮಹಿಳಾ ಉಪಾಧ್ಯಕ್ಷೆಯಾದ ಕಥೆ!

ಎಚ್ -1 ಬಿ ವಲಸೆರಹಿತ ವೀಸಾ ಕಾರ್ಯಕ್ರಮದ ಮೇಲೆ ಟ್ರಂಪ್ ಆಡಳಿತವು ಅಕ್ಟೋಬರ್‌ನಲ್ಲಿ ಹೊಸ ನಿರ್ಬಂಧಗಳನ್ನು ಘೋಷಿಸಿತ್ತು. ಈ ನಿರ್ಬಂಧಗಳು ಈಗಾಗಲೇ ಅಮೆರಿಕಾದಲ್ಲಿರುವವರಿಗೆ ಅನ್ವಯಿಸುವುದಿಲ್ಲ, ಆದರೆ ಅಮೆರಿಕಾಗೆ ಹೋಗುವ ಹೊಸ ವೀಸಾ ಹೊಂದಿರುವವರಿಗೆ ಮಾತ್ರ ಅನ್ವಯಿಸುತ್ತಿತ್ತು.

ನಗರಗಳು ಮತ್ತು ಜಿಲ್ಲಾ ಪ್ರದೇಶಗಳ ಬೆಳವಣಿಗೆಯನ್ನು ಬೈಡನ್ ಆಡಳಿತ ಬೆಂಬಲಿಸುವ ಕಾರಣ, ವಲಸಿಗರಿಗೆ ಅರ್ಜಿ ಸಲ್ಲಿಸಲು ಆಡಳಿತವು ಹೊಸ ವೀಸಾ ವರ್ಗವನ್ನು ರಚಿಸಲು ಯೋಜಿಸಿದೆ ಎಂದು ತಿಳಿದು ಬಂದಿದೆ.  ಅಲ್ಲದೆ ಪ್ರತಿ ವರ್ಷ ಕನಿಷ್ಠ 95 ಸಾವಿರ ವಲಸಿಗರು ಅಮೆರಿಕದಲ್ಲಿ ಪ್ರವೇಶ ಪಡೆಯುವ ಬಗ್ಗೆಯೂ ಕಾರ್ಯಕ್ರಮ ರೂಪಿಸಲಿದ್ದಾರೆ ಎಂದು ಬೈಡನ್‌ ಪ್ರಚಾರ ಕಾರ್ಯ ತಂಡವು ಬಿಡುಗಡೆ ಮಾಡಿರುವ ನೀತಿ ನಿರೂಪಣಾ ದಾಖಲೆಗಳಲ್ಲಿ ಹೇಳಲಾಗಿದೆ.

ತಂತ್ರಜ್ಞಾನ ಆಧಾರಿತ ಕಂಪನಿಗಳು ಎಚ್ -1 ಬಿ ವೀಸಾಗಳನ್ನು ಅವಲಂಬಿಸಿವೆ. ಇದು ಭಾರತೀಯರಿಗೆ ಮತ್ತು ಚೀನಾದಂತಹ ದೇಶಗಳಿಂದ ಪ್ರತಿವರ್ಷ ಸಾವಿರಾರು ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ. ಗ್ರೀನ್ ಕಾರ್ಡ್‌ಗಳು ಎಂದೂ ಕರೆಯಲ್ಪಡುವ ಉದ್ಯೋಗ ಆಧಾರಿತ ವೀಸಾಗಳು, ನುರಿತ ಕೆಲಸದಲ್ಲಿ ತೊಡಗಿಸಿಕೊಳ್ಳಲು ವಲಸಿಗರಿಗೆ ಅಮೆರಿಕಾದನಲ್ಲಿ ಕಾನೂನುಬದ್ಧವಾಗಿ ಶಾಶ್ವತ ನೆಲೆಯೂರಲು ಅವಕಾಶ ನೀಡುತ್ತದೆ.

ಕುಟುಂಬ ಆಧಾರಿತ ವಲಸೆಗೆ ಬೈಡನ್‌ ಆಡಳಿತ ಬೆಂಬಲ ನೀಡಲಿದೆ. ಅವಿಭಕ್ತ ಕುಟುಂಬದ ಹಿತಾಸಕ್ತಿ ಕಾಪಾಡುವುದು ಅಮೆರಿಕದ ಪ್ರಮುಖ ನೀತಿ ಆಗಿರಲಿದೆ’ ಎಂದು ದಾಖಲೆ ಹೇಳಿದೆ. ಪ್ರಸ್ತುತ, ಉದ್ಯೋಗ ಆಧಾರಿತ ವೀಸಾಗಳ ಸಂಖ್ಯೆಯನ್ನು ಪ್ರತಿವರ್ಷ 1,40,000 ಎಂದು ಗುರುತಿಸಲಾಗಿದೆ.


ಇದನ್ನೂ ಓದಿ: ಅಮೆರಿಕಾ ಚುನಾವಣೆ: ಜೋ ಬೈಡನ್‌ಗೆ ಗೆಲುವು; ಟ್ರಂಪ್‌ಗೆ ಮುಖಭಂಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...